ಪುತ್ತೂರು

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಕೊಪ್ಪದ ಗಂಡಿ ಸೇತುವೆ ಮುಳುಗಡೆ

ಬೆಳ್ತಂಗಡಿ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನಾದ್ಯಂತ ನದಿ, ಕೊಳ್ಳಗಳು ತುಂಬಿ ಹರಿಯುತ್ತಿದೆ. ಮಿತ್ತಬಾಗಿಲು-ಬಂಗಾಡಿ ಸಂಪರ್ಕ ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆಯಾಗಿದೆ. ನೇತ್ರಾವತಿ ನದಿಗಳಲ್ಲೂ ನೀರಿನ ಪ್ರಮಾಣ ಹೆಚ್ಚಳವಾಗಿದೆ.

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಕೊಪ್ಪದ ಗಂಡಿ ಸೇತುವೆ ಮುಳುಗಡೆ Read More »

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ  ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ  ಸ್ನಾನಘಟ್ಟ ಸಂಪೂರ್ಣ  ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ Read More »

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ

ವಿಟ್ಲ : ವಿಟ್ಲ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಹಾಗೂ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ ಸಮಿತಿ ವತಿಯಿಂದ ಈ ಬಾರಿ  25ನೇ ವರ್ಷದ  ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದ್ದು, ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸೆ.19 ರಿಂದ 22 ರ ತನಕ ಚಂದಳಿಕೆ ಮಂಗಳ ಮಂಟಪದಲ್ಲಿ ಶ್ರೀ ಗಣೇಶೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿಹಬ್ಬ ಸಮಿತಿಯ ಗೌರವಾಧ್ಯಕ್ಷ ಶಂಕರ

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಶೈಕ್ಷಣಿಕ ಸಹಮಿಲನ ಉದ್ಘಾಟನೆ | ಭಗವದ್ಗೀತೆ ಭಾರತ ದೇಶದ ಮಣ್ಣಿನ ಸತ್ವ ಮತ್ತು ತತ್ವ : ಡಾ. ಪ್ರಭಾಕರ್ ಭಟ್

ಪುತ್ತೂರು: ಶಾಲೆಯೆಂದರೆ ಅದು ಕಟ್ಟಡವಲ್ಲ, ಆ ಕಟ್ಟಡಕ್ಕೆ ಜೀವಧಾರೆ ತರುವವರು ಶಿಕ್ಷಕರು. ಶಿಕ್ಷಕರೆಂದರೆ ಶಾಲೆಯ ಆತ್ಮ, ಆ ಆತ್ಮದಿಂದ ಮಾತ್ರ ಶಾಲೆಯನ್ನು ಉನ್ನತಿಗೆ ತೆಗೆದುಕೊಂಡು ಹೋಗಲು ಸಾಧ್ಯ. ಶಿಕ್ಷಕರು ಪಾಠದ ಜೊತೆಗೆ ಪಠ್ಯೇತರ ವಿಷಯಗಳನ್ನು ಮಂಡಿಸುವುದರಿಂದ ವಿದ್ಯಾರ್ಥಿಗಳ ವಿಕಾಸದ ಬೆಳವಣಿಗೆಗೆ ಕಾರಣವಾಗುವುದು  ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಮುಳಿಯ ಜುವೆಲ್ಲರ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಶೈಕ್ಷಣಿಕ ಸಹಮಿಲನ ಉದ್ಘಾಟನೆ | ಭಗವದ್ಗೀತೆ ಭಾರತ ದೇಶದ ಮಣ್ಣಿನ ಸತ್ವ ಮತ್ತು ತತ್ವ : ಡಾ. ಪ್ರಭಾಕರ್ ಭಟ್ Read More »

ಚಿಕಿತ್ಸಾ ವೆಚ್ಚಕ್ಕಾಗಿ ಸಹೃದಯಿಗಳು ಸಹಾಯ ಹಸ್ತ ಮಾಡುವಂತೆ ಮನವಿ

ಪುತ್ತೂರು: ಬೈಕ್-ಲಾರಿ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪುತ್ತೂರು ತಾಲೂಕಿನ ಬೆಳ್ಳಿಪಾಡಿ ಗ್ರಾಮದ ಕೂಟೇಲು ನಿವಾಸಿ ಮನೋಹರ (24) ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯ ಹಸ್ತಕ್ಕಾಗಿ ಕೈಚಾಚಿದ್ದಾರೆ. ಕೂಟೇಲು ನೀಲಪ್ಪ ಗೌಡ ಮತ್ತು ಯಮುನಾ ದಂಪತಿ ಪುತ್ರನಾದ ಮನೋಹರ ಅವರಿಗೆ ಅಪಘಾತದಿಂದ ಮುಖ, ಕಾಲು, ಹೊಟ್ಟೆಗೆ ದೊಡ್ಡ ಮಟ್ಟದ ಗಾಯವಾಗಿದ್ದು, ಈಗಾಗಲೇ ಕಾಲು ಸರ್ಜರಿ ಮಾಡಲಾಗಿದ್ದು, ಎಂಟು ಲಕ್ಷಕ್ಕೂ ಅಧಿಕ ಖರ್ಚಾಗಿದೆ. ಹೊಟ್ಟೆ ಭಾಗ ಸರ್ಜರಿ ಮಾಡಲು ಇನ್ನೂ 7 ಲಕ್ಷ ರೂಪಾಯಿಯ ಅಗತ್ಯವಿದ್ದು, ಬಡ ಕುಟುಂಬ ಆಗಿರುವುದರಿಂದ

ಚಿಕಿತ್ಸಾ ವೆಚ್ಚಕ್ಕಾಗಿ ಸಹೃದಯಿಗಳು ಸಹಾಯ ಹಸ್ತ ಮಾಡುವಂತೆ ಮನವಿ Read More »

ವಿದ್ಯಾರಶ್ಮಿಯಲ್ಲಿ ಸಿಇಟಿ/ಜೆಇಇ/ನೀಟ್ ಕೋಚಿಂಗ್ ತರಗತಿಗೆ ಚಾಲನೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಇಂಟೆಗ್ರೇಟೆಡ್ ಸಿಇಟಿ/ಜೆಇಇ/ನೀಟ್ ಕೋಚಿಂಗ್ ತರಗತಿಗೆ ಶನಿವಾರ ಚಾಲನೆ ನೀಡಲಾಯಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ತರಗತಿ ಉದ್ಘಾಟಿಸಿ ಮಾತನಾಡಿ,  ಬದಲಾಗುತ್ತಿರುವ ಜಗತ್ತಿನೊಡನೆ ನಾವೂ ಬದಲಾಗಬೇಕಿದೆ. ಹೆಚ್ಚು ಹೆಚ್ಚು ಸ್ಪರ್ಧಾತ್ಮಕವಾಗಿರುವ ಇಂದಿನ ದಿನಮಾನದಲ್ಲಿ ನಾವು ಉತ್ತಮ ಸ್ಥಾನ ಗಿಟ್ಟಿಸಬೇಕಾದರೆ ಇಂತಹ ತರಬೇತಿಗಳನ್ನು ಅಗತ್ಯವಾಗಿ ಪಡೆಯಲೇ ಬೇಕು ಎಂದರು. ಇಷ್ಟು ದಿನ ಹಳ್ಳಿಯ ಕಾಲೇಜಾದ ನಮ್ಮಲ್ಲಿ ಇಂತಹ ತರಬೇತಿಯ ಸೌಲಭ್ಯ ಇಲ್ಲ ಎಂಬ ಕೊರಗು ಇತ್ತು. ಇಂದಿನ ದಿನ ಅಂತಹ ಕೊರಗು ಮುಕ್ತಾಯವಾಗಿದೆ. ನಮ್ಮ

ವಿದ್ಯಾರಶ್ಮಿಯಲ್ಲಿ ಸಿಇಟಿ/ಜೆಇಇ/ನೀಟ್ ಕೋಚಿಂಗ್ ತರಗತಿಗೆ ಚಾಲನೆ Read More »

ಜಪಾನ್ ಮೂಲದ ವ್ಯಕ್ತಿ ಪತ್ತೆ

ಪುತ್ತೂರು: ತಾಲೂಕಿನ ಗಡಿಯಾರ ಸಮೀಪ ಜಪಾನ್ ಮೂಲಕ ವ್ಯಕ್ತಿಯೋರ್ವ ಪತ್ತೆಯಾಗಿದ್ದಾನೆ. ಜಪಾನ್‍ನ ಸುಯೋಷಿ ಪತ್ತೆಯಾದ ವ್ಯಕ್ತಿ. ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಬಳಿಕ ವಶಕ್ಕೆ ಪಡೆದಿದ್ದಾರೆ. ಆತ ಇಲ್ಲಿಗೆ ಹೇಗೆ ಬಂದ ಎಂಬ ಕುರಿತು ತನಿಖೆಯ ನಂತರವೇ ಮಾಹಿತಿ ತಿಳಿದು ಬರಬೇಕಿದೆ.

ಜಪಾನ್ ಮೂಲದ ವ್ಯಕ್ತಿ ಪತ್ತೆ Read More »

ಅಖಿಲ ಭಾರತ ಕರಕುಶಲ ಸ್ಪರ್ಧೆ : ಶ್ರೇಯ ಕೆ ಹೆಚ್‌ ಗೆ ಪ್ರಥಮ ಸ್ಥಾನ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ ಎಸ್ಸಿ ತರಗತಿಯಲ್ಲಿ ಅಧ್ಯಯನ ನಡೆಸುತ್ತಿರುವ ಶ್ರೇಯ ಕೆ ಹೆಚ್‌ ಗೆ ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ, ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ ‘ಶಿಲ್ಪ್ ಆಕಾರ್‌ʼ ನಲ್ಲಿ ಪ್ರಥಮ ಸ್ಥಾನ ದೊರೆತಿದೆ. “ಶಿಲ್ಪ್ ಆಕಾರ್” ಕಲೆ ಮತ್ತು ಕರಕುಶಲತೆಗೆ ಸಂಬಂಧಿಸಿದ ರಾಷ್ಟ್ರ ಮಟ್ಟದ ಸ್ಪರ್ಧೆಯಾಗಿದೆ. ಇದರಲ್ಲಿ ಭಾಗವಹಿಸುವವರು ತಮ್ಮ ಸೃಜನಶೀಲತೆ  ಮತ್ತು ಕಲಾತ್ಮಕ ಕೌಶಲ್ಯಗಳನ್ನು ವಿವಿಧ ಸಾಂಪ್ರದಾಯಿಕ ಅಥವಾ

ಅಖಿಲ ಭಾರತ ಕರಕುಶಲ ಸ್ಪರ್ಧೆ : ಶ್ರೇಯ ಕೆ ಹೆಚ್‌ ಗೆ ಪ್ರಥಮ ಸ್ಥಾನ Read More »

ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಕಾನೂನು ಹೋರಾಟದ ಎಚ್ಚರಿಕೆ

ಪುತ್ತೂರು: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ಪ್ರಾಮಾಣಿಕ ದಲಿತ ವರ್ಗವರು ಯಾರೂ  ಇದಕ್ಕೆ ಕಿವಿಗೊಡಬಾರದು ಎಂದು ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ವಿಟ್ಲ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ರೀತಿಯ ಅಪಪ್ರಚಾರದ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಉತ್ತಮ ಕೆಲಸ ಮಾಡುವವರ ವಿರುದ್ಧ ಇಂತಹ ಇಲ್ಲಸಲ್ಲದ ಅಪಪ್ರಚಾರಗಳು ನಡೆಯುತ್ತಿರುತ್ತವೆ. ಇದಕ್ಕೆ

ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಕಾನೂನು ಹೋರಾಟದ ಎಚ್ಚರಿಕೆ Read More »

ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ

ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೇಡಿಂಗ್ ಮತ್ತು ಪುತ್ತೂರಿನಲ್ಲಿರುವ ಅಝರ್ ಟ್ರಾನ್ಸ್ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್‌ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ. ಇದಕ್ಕೆ ಸಂಬಂಧಿಸಿ ಲಾರಿ ನಿರ್ವಾಹಕ ನಾಪತ್ತೆಯಾಗಿದ್ದಾನೆ. ಲಾರಿಯ ಮೂಲಕ ಪುತ್ತೂರಿನಿಂದ ಪೂಣೆಗೆ ಅಡಿಕೆ ಸಾಗಾಟ ಮಾಡಿಸಿ ಜು.18ರಂದು ಲಾರಿ ಹಿಂದಿರುಗುವಾಗ ಪೂಣೆಯ ಅಝರ್ ಟ್ರೇಡಿಂಗ್ ಸಂಸ್ಥೆಯ

ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ Read More »

error: Content is protected !!
Scroll to Top