ಪುತ್ತೂರು

ಮಣಿಪುರ ಪ್ರಕರಣ : ಮಾಯಿದೆ ದೇವುಸ್ ಚರ್ಚ್‌ನ ಕಥೋಲಿಕ್ ಸಭಾದಿಂದ ಮೌನ ಪ್ರತಿಭಟನೆ

ಪುತ್ತೂರು : ಮಣಿಪುರದಲ್ಲಿ ನಡೆಯುತ್ತಿರುವ ದಾರುಣ ಘಟನೆಗೆ ಸಬಂಧಿಸಿದಂತೆ ಪುತ್ತೂರಿನ ಮಾಯಿದೆ ದೇವುಸ್ ಚರ್ಚ್‌ನ ಕಥೋಲಿಕ್ ಸಭಾದ ವತಿಯಿಂದ ಮೌನ ಪ್ರತಿಭಟನೆ ಭಾನುವಾರ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ 124 ಚರ್ಚ್ ಗಳ ಪರಿಸರದಲ್ಲಿ ಫಲಕಗಳನ್ನು ಹಿಡಿದು ಹತ್ತು ನಿಮಿಷಗಳ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳುವಂತೆ ಮಂಗಳೂರಿನ ಬಿಷಪ್ ಹೌಸಿನಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷರಾದ ಆಲ್ವಿನ್ ಡಿ’ಸೋಜರವರು ಆಯಾ ಚರ್ಚ್ ವ್ಯಾಪ್ತಿಯ ಕಥೋಲಿಕ್ ಸಭಾ ಸಂಘಟನೆಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಮೌನ ಪ್ರತಿಭಟನೆ ನಡೆಯಿತು. […]

ಮಣಿಪುರ ಪ್ರಕರಣ : ಮಾಯಿದೆ ದೇವುಸ್ ಚರ್ಚ್‌ನ ಕಥೋಲಿಕ್ ಸಭಾದಿಂದ ಮೌನ ಪ್ರತಿಭಟನೆ Read More »

ಎಸ್‌ಡಿಪಿಐಯಿಂದ ಅರ್ಹ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಪುತ್ತೂರು : ಎಸ್‌ಡಿಪಿಐ ಬನ್ನೂರು ವಾರ್ಡ್ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಾಣಗೊಂಡ ಮನೆಯನ್ನ ಹಸ್ತಾಂತರ ಕಾರ್ಯಕ್ರಮ ಭಾನುವಾರ ಬನ್ನೂರಿನಲ್ಲಿ ನಡೆಯಿತು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯನಾದವನಿಗೆ ತಿನ್ನೋಕೆ ಅನ್ನ, ಹಾಕಿಕೊಳ್ಳಲು ಬಟ್ಟೆ ಹಾಗೆಯೇ ಸುಂದರವಾದ ಮನೆ ಇವೆಲ್ಲವೂ ಅತ್ಯಗತ್ಯ. ಹೀಗಿರುವಾಗ ಅದೆಷ್ಟೋ ಜನ ನಮ್ಮ ದೇಶದಲ್ಲಿ ತಿನ್ನಲು ಅನ್ನವಿಲ್ಲದೆ,  ಉಳಿದುಕೊಳ್ಳಲು ಮನೆಯಿಲ್ಲದೆ ಕಂಗಾಲಾಗಿದ್ದಾರೆ. ಇದನ್ನು ಗಮನಿಸಿ ಬನ್ನೂರಿನಲ್ಲಿ ಜಮೀಲ ಎಂಬವರು ಕಡು ಬಡತನದಿಂದ ಕೂಡಿದ್ದು, ಅವರನ್ನ ಗುರುತಿಸಿ ಎಸ್‌ಡಿಪಿಐ

ಎಸ್‌ಡಿಪಿಐಯಿಂದ ಅರ್ಹ ಬಡ ಕುಟುಂಬಕ್ಕೆ ಮನೆ ಹಸ್ತಾಂತರ Read More »

ಶಾಂತಿಯುತವಾಗಿ ನಡೆದ ನಿಡಳ್ಳಿ, ಆರ್ಯಾಪು ಗ್ರಾ.ಪಂ. ಉಪಚುನಾವಣೆ

ಪುತ್ತೂರು : ಪುತ್ತೂರು ತಾಲೂಕಿನ ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಪಂಗಳಲ್ಲಿ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಸದಸ್ಯರ ಆಯ್ಕೆಗೆ ಮತದಾನ ಪ್ರಕ್ರಿಯೆ ಭಾನುವಾರ ಶಾಂತಿಯುತವಾಗಿ ನಡೆಯಿತು. ಎರಡು ಪಂಚಾಯಿತಿಗಳಿಗೆ ತಲಾ ಒಂದು ಸ್ಥಾನಗಳಿಗೆ ಶಾಂತಿಯುತ ಮತದಾನ ನಡೆಯಿತು. ಚುನಾವಣೆ ಅಂತಿಮ ಹಂತದಲ್ಲಿ ಆರ್ಯಾಪು ಗ್ರಾ.ಪಂ. ನಲ್ಲಿ 85.79 ಶೇ. ಹಾಗೂ ನಿಡ್ಪಳ್ಳಿ ಗ್ರಾ.ಪಂ.ನಲ್ಲಿ 87.14 ಶೇ. ಮತ ಚಲಾವಣೆಯಾಗಿದೆ.  ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳು ಎರಡೂ ಕಡೆ ಸ್ಪರ್ಧಿಸುತ್ತಿದ್ದು, ತ್ರಿಕೋನ

ಶಾಂತಿಯುತವಾಗಿ ನಡೆದ ನಿಡಳ್ಳಿ, ಆರ್ಯಾಪು ಗ್ರಾ.ಪಂ. ಉಪಚುನಾವಣೆ Read More »

ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಪ್ರಶಸ್ತಿ ಪ್ರದಾನ, ವಾರ್ಷಿಕ ಮಹಾಸಭೆ, ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರು: ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ ಸಮಾರಂಭ, ವಿದ್ಯಾರ್ಥಿ ವೇತನ ಹಾಗೂ ವಾರ್ಷಿಕ ಮಹಾಸಭೆ ಭಾನುವಾರ ನಗರದ ಪುರಭವನದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ, ನಿವೃತ್ತ ಡೆಪ್ಯೂಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕುಲಾಲ ಸಂಘ ನಂಬಿಕೆ, ವಿಶ್ವಾಸ ದ್ರೋಹ, ದಬ್ಬಾಳಿಕೆ ಮಾಡದ ಸಮಾಜವಾಗಿದ್ದು, ಮುಂದಿನ ಪೀಳಿಗೆ ಹಿರಿಯರು ಸಮಾಜಕ್ಕೆ ಸಲ್ಲಿಸಿದ ಸೇವೆ, ಅಭಿವೃದ್ಧಿ ಕಾರ್ಯಗಳಿಂದ ಪ್ರೇರಣೆಗೊಂಡು ಮತ್ತಷ್ಟು

ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಪ್ರಶಸ್ತಿ ಪ್ರದಾನ, ವಾರ್ಷಿಕ ಮಹಾಸಭೆ, ವಿದ್ಯಾರ್ಥಿ ವೇತನ ವಿತರಣೆ Read More »

ಕೋಡಿಂಬಾಡಿಯಲ್ಲಿ ಭಾರೀ ಮಳೆಗೆ ಆವರಣ ಗೋಡೆ ಕುಸಿತ

ಪುತ್ತೂರು: ಕೋಡಿಂಬಾಡಿ-ಉಪ್ಪಿನಂಗಡಿ ಮೋರಿಯೊಂದು ಭಾರೀ ಮಳೆಗೆ ಬ್ಲಾಕ್ ಆಗಿ ಸ್ಥಳೀಯ ಖಾಸಗಿ ವ್ಯಕ್ತಿಯೊಬ್ಬರ ಜಮೀನಿನ ಆವರಣ ಗೋಡೆ ಕುಸಿದಿದೆ. ಮೋರಿ ಬ್ಲಾಕ್ ಆಗಿರುವ ಕುರಿತು ಲೋಕೋಪಯೋಗಿ ಇಲಾಖೆಗೆ ದೂರು ನೀಡಿ ವಾರ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಮಳೆ ನೀರು ನಿಂತು ಜಮೀನು ಆವರಣಗೋಡೆ ಕುಸಿದಿದೆ ಎಂದು ರಮೇಶ್ ಎಂಬವರು ತಿಳಿಸಿದ್ದಾರೆ. ಮೋರಿ ಬ್ಲಾಕ್ ಆಗಿದ್ದರಿಂದ ಚರಂಡಿಯಲ್ಲಿ ನೀರು ತುಂಬಿ ದೊಡ್ಡ ಕೊಳವಾಗಿದೆ. ರಸ್ತೆಯಲ್ಲಿ ಸಾವಿರಾರು ವಾಹನಗಳು ಚಲಿಸುತ್ತಿದ್ದು ಇಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ.

ಕೋಡಿಂಬಾಡಿಯಲ್ಲಿ ಭಾರೀ ಮಳೆಗೆ ಆವರಣ ಗೋಡೆ ಕುಸಿತ Read More »

ಬಿಲ್ಲವ ಸಮಾಜಕ್ಕೆ ಮುಖ್ಯಮಂತ್ರಿ ಸಹಿತ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪುತ್ತೂರು: ನಾನು ಕೂಡಾ ಬಿಲ್ಲವ. ನಮ್ಮ ಬಿಲ್ಲವ, ಈಡಿಗ, ನಾಮದಾರಿ ಸಮಾಜಕ್ಕೆ ಯಾವುದೇ ತರದ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರಾಗಲಿ, ಕಾಂಗ್ರೆಸ್ ಆಗಲಿ ಮಾಡಿಲ್ಲ. ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ಕಾಂಗ್ರೆಸ್ ನೂರಕ್ಕೆ ನೂರು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪುತ್ತೂರು ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳುವ ಮುಂದೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಮಾತನಾಡಿದರು. ಕಾಂಗ್ರೆಸ್ ಹಿರಿಯ ನಾಯಕ

ಬಿಲ್ಲವ ಸಮಾಜಕ್ಕೆ ಮುಖ್ಯಮಂತ್ರಿ ಸಹಿತ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ | ಶಿಕ್ಷಣ ಸಚಿವ ಮಧು ಬಂಗಾರಪ್ಪ Read More »

ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆ

ಬಂಟ್ವಾಳ : ಭಾರೀ ಮಳೆಯಿಂದಾಗಿ ಬಂಟ್ವಾಳ ನೇತ್ರಾವತಿ ನೀರಿನ ಮಟ್ಟ ಏರಿಕೆ  ಇಂದು 6.7 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಬಂಟ್ವಾಳ ನೇತ್ರಾವತಿ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಮಳೆಯ ಪ್ರಮಾಣ ಜಾಸ್ತಿಯಾದಲ್ಲಿ ಅಪಾಯದ ಮಟ್ಟವನ್ನು ತಲುಪುವ ಸಾಧ್ಯತೆಯಿದೆ.

ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆ Read More »

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಕೊಪ್ಪದ ಗಂಡಿ ಸೇತುವೆ ಮುಳುಗಡೆ

ಬೆಳ್ತಂಗಡಿ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನಾದ್ಯಂತ ನದಿ, ಕೊಳ್ಳಗಳು ತುಂಬಿ ಹರಿಯುತ್ತಿದೆ. ಮಿತ್ತಬಾಗಿಲು-ಬಂಗಾಡಿ ಸಂಪರ್ಕ ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆಯಾಗಿದೆ. ನೇತ್ರಾವತಿ ನದಿಗಳಲ್ಲೂ ನೀರಿನ ಪ್ರಮಾಣ ಹೆಚ್ಚಳವಾಗಿದೆ.

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಕೊಪ್ಪದ ಗಂಡಿ ಸೇತುವೆ ಮುಳುಗಡೆ Read More »

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ  ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ  ಸ್ನಾನಘಟ್ಟ ಸಂಪೂರ್ಣ  ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ Read More »

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ

ವಿಟ್ಲ : ವಿಟ್ಲ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಹಾಗೂ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ ಸಮಿತಿ ವತಿಯಿಂದ ಈ ಬಾರಿ  25ನೇ ವರ್ಷದ  ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದ್ದು, ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸೆ.19 ರಿಂದ 22 ರ ತನಕ ಚಂದಳಿಕೆ ಮಂಗಳ ಮಂಟಪದಲ್ಲಿ ಶ್ರೀ ಗಣೇಶೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿಹಬ್ಬ ಸಮಿತಿಯ ಗೌರವಾಧ್ಯಕ್ಷ ಶಂಕರ

ವಿಟ್ಲ ಕಾರ್ತಿಕ್ ಫ್ರೆಂಡ್ಸ್ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಈ ಬಾರಿ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬ Read More »

error: Content is protected !!
Scroll to Top