ಪುತ್ತೂರು

ಬಲ್ನಾಡು ಯುವಕ ಹೃದಯಾಘಾತದಿಂದ ನಿಧನ

ಪುತ್ತೂರು: ಯುವನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಲ್ನಾಡಿನಲ್ಲಿ ನಡೆದಿದೆ. ಬಲ್ನಾಡು ನಿವಾಸಿ ಕಿಶನ್ (27) ಮೃತಪಟ್ಟ ಯುವಕ. ಕಿಶನ್ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು. ಮೃತರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಬಲ್ನಾಡು ಯುವಕ ಹೃದಯಾಘಾತದಿಂದ ನಿಧನ Read More »

42ನೇ ಮಾನ್ಸೂನ್ ಚೆಸ್ ಟೂರ್ನಮೆಂಟ್ | ಸಂತ ಅಲೋಶಿಯಸ್ ಕಾಲೇಜಿನ ಲಾರೆನ್ಸ್ ಪಿಂಟೋ ಪ್ರಥಮ

ಪುತ್ತೂರು: ಚದುರಂಗ ಆಟವು ಒಂದು ಚತುರತೆಯ ಆಟ. ಇದು ಬುದ್ದಿಗೆ ಕೆಲಸ ನೀಡುವ ಆಟವಾಗಿದ್ದು ನಿರಂತರವಾಗಿ ಅಭ್ಯಾಸಿಸಿದರೆ ಮಾತ್ರ ಉತ್ತಮ ಪರಿಣಾಮ ಕಾಣಬಹುದು. ಹಾಗಾಗಿ ವಿದ್ಯಾರ್ಥಿಗಳು ಚುರುಕುತನ ಪಡೆಯಲು ಚೆಸ್ ಉತ್ತಮ ಕ್ರೀಡೆ ಎಂದು ದ.ಕ-ಜಿಲ್ಲೆ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜು ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಹಾಗೂ ದೈಹಿಕ ಶಿಕ್ಷಣ ವಿಭಾಗ ಮತ್ತು  ಐಕ್ಯೂಎಸಿ ಸಹಯೋಗದಲ್ಲಿ ಅಂತರ್ ಕಾಲೇಜು ಹಾಗೂ ಅಂತರ್ ಜಿಲ್ಲಾ ಮಟ್ಟದ

42ನೇ ಮಾನ್ಸೂನ್ ಚೆಸ್ ಟೂರ್ನಮೆಂಟ್ | ಸಂತ ಅಲೋಶಿಯಸ್ ಕಾಲೇಜಿನ ಲಾರೆನ್ಸ್ ಪಿಂಟೋ ಪ್ರಥಮ Read More »

ನಿಧನರಾದ ಗಂಗಾಧರ ಪೂಜಾರಿ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ | ಕುಟುಂಬಕ್ಕೆ ಧನಸಹಾಯ ಹಸ್ತಾಂತರ

ಪುತ್ತೂರು: ಪರ್ಪುಂಜ ಬಂಡಿವಾಳ ಗಂಗಾಧರ ಪೂಜಾರಿಯವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಮೃತರ ಪತ್ನಿ ಕುಸುಮರಿಗೆ ಪುತ್ತಿಲ ಪರಿವಾರದ ವತಿಯಿಂದ ಧನಸಹಾಯ ಹಸ್ತಾಂತರಿಸಲಾಯಿತು. ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಕಾರ್ಯದರ್ಶಿ ಸುದೀರ್ ರೈ ಕಂಪ, ಒಳಮೊಗ್ರು ಅಧ್ಯಕ್ಷ ರಿತೇಶ್, ಕಾರ್ಯಾಧ್ಯಕ್ಷ ಶರತ್, ಶನ್ಮಿತ್, ಜಯಂತ್ ಬರಮೇಲು, ಮೋಹನ್ ರೈ,

ನಿಧನರಾದ ಗಂಗಾಧರ ಪೂಜಾರಿ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ | ಕುಟುಂಬಕ್ಕೆ ಧನಸಹಾಯ ಹಸ್ತಾಂತರ Read More »

ಜೈನ ಮುನಿಗಳ ಹತ್ಯೆ | ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು : ಜೀವಂಧರ್ ಜೈನ್

ಪುತ್ತೂರು: ಬೆಳಗಾವಿ ಚಿಕ್ಕೋಡಿಯ ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಯನ್ನು ಪುತ್ತೂರು ನಗರ ಸಭೆ ನಿಕಟ ಪೂರ್ವ ಅಧ್ಯಕ್ಷ ಜೀವಂಧರ್ ಜೈನ್ ಖಂಡಿಸಿದ್ದಾರೆ. ಭಾರತದ ಸಂತ ಪರಂಪರೆಗೆ ಬಹು ದೊಡ್ಡ ಕೊಡುಗೆ ನೀಡಿದ ಜೈನ ಮುನಿಗಳ ಮೇಲೆ ಇಂತಹ ಅಮಾನುಷವಾಗಿ ಹತ್ಯೆಗೈದಿರುವುದು ಒಂದು ಜೀವಿಗೂ ನೋವಾಗದಂತೆ ಸಮಾಜದಲ್ಲಿ ಬದುಕುವ ಜೈನ ಸಮುದಾಯಕ್ಕೆ ತುಂಬಾ ನೋವಾಗಿದೆ. ತಪ್ಪಿತಸ್ಥರಿಗೆ ಮರಣ ದಂಡನೆಯಂತ ಉಗ್ರ ಶಿಕ್ಷೆ ನೀಡಬೇಕು ಹಾಗೂ ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕೆಂದು ಅವರು

ಜೈನ ಮುನಿಗಳ ಹತ್ಯೆ | ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು : ಜೀವಂಧರ್ ಜೈನ್ Read More »

ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟರ ಪರ್ಬ-2023” : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಪುತ್ತೂರು ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜು.23 ಭಾನುವಾರ ಯುವ ಬಂಟರ ದಿನಾಚರಣೆ ಅಂಗವಾಗಿ ನಡೆಯುವ “ತುಳುನಾಡ ಬಂಟರ ಪರ್ಬ-2023” ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಸಂಜೆ ಬಂಟರ ಭವನದಲ್ಲಿ ನಡೆಯಿತು. ಬಂಟರ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ, ಪುತ್ತೂರು ಬಂಟರ ಸಂಘ, ಮಹಿಳಾ ಬಂಟರ ಸಂಘ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದ್ದು, ಬಂಟರ ಸಂಘದ ಕರುಣಾಕರ ರೈ ದೇರ್ಲಗುತ್ತು

ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟರ ಪರ್ಬ-2023” : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನಕಲಿ ದಾಖಲೆ ಸೃಷ್ಟಿಸಿ ಕಾರ್ಯಾಚರಿಸುತ್ತಿದ್ದ ಕಚೇರಿಯೊಂದಕ್ಕೆ ಅಧಿಕಾರಿಗಳಿಂದ ದಾಳಿ | ಗ್ರಾಪಂ, ನಗರಸಭೆ ಇಲಾಖೆ ಮೊಹರು ಒಳಗೊಂಡ ಸೀಲ್ ವಶಕ್ಕೆ

ಪುತ್ತೂರು: ಭೂದಾಖಲೆ ಸಹಿತ ಹಲವು ವಿಷಯಗಳಿಗೆ ಸಂಬಂಧಿಸಿ ನಿರಾಪೇಕ್ಷಣಾ ಪತ್ರದ ನಕಲಿ ದಾಖಲೆ ಸೃಷ್ಟಿಸಿ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪಡೀಲ್‍ನಲ್ಲಿರುವ ಕಚೇರಿಯೊಂದಕ್ಕೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ವಿಶ್ವನಾಥ್ ಎಂಬವರಿಗೆ ಸೇರಿದ ಇಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಗ್ ವರ್ಕ್‍ ಕಚೇರಿಗೆ ದಾಳಿ ನಡೆಸಿದ್ದು, ಪುತ್ತೂರು ಹಾಗೂ ಕಡಬದ ಎಲ್ಲಾ ಗ್ರಾಪಂ ಮೊಹರು, ಬಂಟ್ವಾಳ ತಾಲೂಕಿನ ಮೂರು ಗ್ರಾಪಂಗಳ ಪಿಡಿಒ ಸೀಲ್, ನಗರಸಭೆ ಅಧಿಕಾರಿಗಳ ಮೊಹರು ಎಲ್ಲವನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ನೇತೃತ್ವದ ತಂಡ

ನಕಲಿ ದಾಖಲೆ ಸೃಷ್ಟಿಸಿ ಕಾರ್ಯಾಚರಿಸುತ್ತಿದ್ದ ಕಚೇರಿಯೊಂದಕ್ಕೆ ಅಧಿಕಾರಿಗಳಿಂದ ದಾಳಿ | ಗ್ರಾಪಂ, ನಗರಸಭೆ ಇಲಾಖೆ ಮೊಹರು ಒಳಗೊಂಡ ಸೀಲ್ ವಶಕ್ಕೆ Read More »

ಪಡ್ನೂರು ದೇವಿನಗರದಲ್ಲಿ ಧರೆ ಕುಸಿದು ಮನೆ ಅಪಾಯದಲ್ಲಿ | ಕಾಂಗ್ರೆಸ್ ಬೂತ್ ಸಮಿತಿಯಿಂದ ಬನ್ನೂರು ಪಿಡಿಒಗೆ ಮನವಿ

ಪುತ್ತೂರು: ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಪಡ್ನೂರು ದೇವಿನಗರ ಎಂಬಲ್ಲಿರುವ ರತ್ನಾವ ತಿ ಎಂಬವರ ಮನೆ ಬರೆ ಕುಸಿದ ಕಾರಣ ಜರಿದು ಬೀಳುವ ಹಂತದ್ದಲ್ಲಿದ್ದು ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬನ್ನೂರು ಗ್ರಾಮ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಗ್ರಾಪಂ ಪಿಡಿಒರವರಿಗೆ ಮನವಿ ಸಲ್ಲಿಸಲಾಯಿತು. ದೇವಿನಗರ ಸರ್ವೆ ನಂ 1ರಲ್ಲಿ ಎರಡು ಸೆಂಟ್ಸ್ ಸ್ಥಳದಲ್ಲಿ ರತ್ನಾವತಿಯವರ ಮನೆ ಇದ್ದು ಅದರ ಪಕ್ಕದಲ್ಲಿರುವ ಧರೆ ಮಳೆಗೆ ಕುಸಿಯುವ ಹಂತದಲ್ಲಿದ್ದು ಧರೆ ಜರಿದರೆ ಮನೆ ಬೀಳುವ ಅಪಾಯದಲ್ಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸೇಡಿಯಾಪು-

ಪಡ್ನೂರು ದೇವಿನಗರದಲ್ಲಿ ಧರೆ ಕುಸಿದು ಮನೆ ಅಪಾಯದಲ್ಲಿ | ಕಾಂಗ್ರೆಸ್ ಬೂತ್ ಸಮಿತಿಯಿಂದ ಬನ್ನೂರು ಪಿಡಿಒಗೆ ಮನವಿ Read More »

76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಈಜು ಚಾಂಪಿಯನ್ ಶಿಪ್‍ನಲ್ಲಿ ವೈಷ್ಣವ್ ಹೆಗ್ಡೆಗೆ ಬೆಳ್ಳಿ ಪದಕ

ಪುತ್ತೂರು: ಜುಲೈ 6ರಂದು ಹೈದರಾಬಾದ್ ನ ಗಚಿಬೌಲಿಯಲ್ಲಿ ನಡೆದ 76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ಸ್ ಅಕ್ವಾಟಿಕ್ ಚಾಂಪಿಯನ್ ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿರುವ ಭಾರತೀಯ ನೌಕಾಪಡೆಯ ಈಜುಗಾರ ವೈಷ್ಣವ್ ಹೆಗ್ಡೆಯವರು 50 ಮೀಟರ್ ಬ್ರೆಸ್ಟ್ ಸ್ಟೋಕ್‌ನಲ್ಲಿ 28.8 ಸೆಕೆಂಡುಗಳಲ್ಲಿ ತಮ್ಮ ವೈಯಕ್ತಿಕ ಅತ್ಯುತ್ತಮ ಸಮಯದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವೈಷ್ಣವ್ ಈ ವರ್ಷದ ಹಿರಿಯ ಸೀನಿಯರ್ಸ್ ರಾಷ್ಟ್ರೀಯ ಪದಕವನ್ನು ಗೆದ್ದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಈಜುಗಾರರೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯುವ ರಾಷ್ಟ್ರೀಯ

76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಈಜು ಚಾಂಪಿಯನ್ ಶಿಪ್‍ನಲ್ಲಿ ವೈಷ್ಣವ್ ಹೆಗ್ಡೆಗೆ ಬೆಳ್ಳಿ ಪದಕ Read More »

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ನಾಮಪತ್ರ ಸಲ್ಲಿಕೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯಿತಿ ಉಪ ಚುನಾವಣೆಗೆ ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಹಿಂದಿನ ಅಭ್ಯರ್ಥಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಆರ್ಯಾಪು ಗ್ರಾಮ ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ,  ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ,  ಪ್ರಮುಖರಾದ ವಾಣಿಶ್ರೀ, ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ್

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ನಾಮಪತ್ರ ಸಲ್ಲಿಕೆ Read More »

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಚಂದ್ರಶೇಖರ ಪ್ರಭು ನಾಮಪತ್ರ ಸಲ್ಲಿಕೆ

ಪುತ್ತೂರು: ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಿಡ್ಲಳ್ಳಿ ಗ್ರಾಮ ಪಂಚಾಯಿತಿಯಿಂದ ನಾಮಪತ್ರ ಸಲ್ಲಿಸಿದರು.  ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ನಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ಉಪಚುನಾವಣೆ ನಡೆಯಲಿದೆ. ನಿಡ್ನಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ತೆರವಾದ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಸಾಜ

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಚಂದ್ರಶೇಖರ ಪ್ರಭು ನಾಮಪತ್ರ ಸಲ್ಲಿಕೆ Read More »

error: Content is protected !!
Scroll to Top