ಪುತ್ತೂರು

ಒಕ್ಕೆತ್ತೂರು ಕೊಡಂಗೆಯಲ್ಲಿ ಜರಿಯುವ ಹಂತದಲ್ಲಿರುವ ಗುಡ್ಡ | ಕುಟುಂಬ ಸ್ಥಳಾಂತರ| ಪುತ್ತಿಲ ಪರವಾರ ಭೇಟಿ

ಪುತ್ತೂರು: ಬಾರಿ ಮಳೆಗೆ ಒಕ್ಕೆತ್ತೂರು ಕೊಡಂಗೆ ಸುರೇಶ್ ಎಂಬವರ ಮನೆ ಹಿಂಬದಿಯ ಗುಡ್ಡೆ ಜರಿಯುವ ಹಂತದಲ್ಲಿದ್ದು, ಅವರ ಕುಟುಂಬವನ್ನು ಸ್ಥಳಾಂತರಿಸಲಾಯಿತು. ಈ ಕುರಿತು ಪುತ್ತಿಲ ಪರಿವಾರದವರು ಭೇಟಿ ನೀಡಿ ಸರ್ಕಾರ ತಕ್ಷಣ ಈ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳ ಜೊತೆ ಮಾತನಾಡಿ ಅವರ ಕುಟುಂಬವನ್ನು ವಿಟ್ಲದ ಪ್ರವಾಸಿ ಬಂಗಲೆಗೆ ಸ್ಥಳಾಂತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ವತಿಯಿಂದ ಆ ಕುಟುಂಬಕ್ಕೆ ಧನಸಹಾಯ ನೀಡಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ವಿಟ್ಲದ ಪ್ರಮುಖರಾದ ರಘುರಾಮ ರೈ, […]

ಒಕ್ಕೆತ್ತೂರು ಕೊಡಂಗೆಯಲ್ಲಿ ಜರಿಯುವ ಹಂತದಲ್ಲಿರುವ ಗುಡ್ಡ | ಕುಟುಂಬ ಸ್ಥಳಾಂತರ| ಪುತ್ತಿಲ ಪರವಾರ ಭೇಟಿ Read More »

ಜು.13 : ಡಾ.ಶ್ರೀಧರ ಎಚ್‍.ಜಿ. ಅವರ ““ನಾಥಪಂಥ” ಕೃತಿ ಲೋಕಾರ್ಪಣೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ, ಕನ್ನಡ ಸಂಘ, ವಿವೇಕಾನಂದ ಸಂಶೋಧನ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಭರವಸೆ ಘಟಕದ ಸಹಯೋಗದಲ್ಲಿ ಡಾ.ಶ್ರೀಧರ ಎಚ್‍.ಜಿ. ಅವರ “ನಾಥಪಂಥ” ಕೃತಿ ಲೋಕಾರ್ಪಣೆ ಜು.13 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ವಿ.ವಸಂತ ಕುಮಾರ್ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸುವರು.

ಜು.13 : ಡಾ.ಶ್ರೀಧರ ಎಚ್‍.ಜಿ. ಅವರ ““ನಾಥಪಂಥ” ಕೃತಿ ಲೋಕಾರ್ಪಣೆ Read More »

ಜೈನಮುನಿಗಳ ಹತ್ಯೆ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಶಾಸಕ ಅಶೋಕ್ ರೈ

ಪುತ್ತೂರು: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಅಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿಗಳನ್ನು ಹತ್ಯೆ ಮಾಡಿದ ಕೃತ್ಯ ಅತ್ಯಂತ ಖಂಡನೀಯ ಮತ್ತು ಅಮಾನವೀಯತೆಯಿಂದ ಕೂಡಿದ್ದು, ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸರಕಾರಕ್ಕೆ ಮನವಿ ಮಾಡಿದ್ದಾರೆ. ಸರಕಾರ ಈಗಾಗಲೇ ಈ ಕೊಲೆ ಕೃತ್ಯದ ತನಿಖೆಗೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸದಾ ಶಾಂತಿಯನ್ನೇ ಬಯಸುವ ಮತ್ತು ಸಮಾಜದಲ್ಲಿ ಸೋಧರತೆಯ , ಸೌಹಾರ್ಧತೆಯ ಪ್ರತಿಬಿಂಬವಾಗಿರುವ

ಜೈನಮುನಿಗಳ ಹತ್ಯೆ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಶಾಸಕ ಅಶೋಕ್ ರೈ Read More »

ಪಿಕಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಓರ್ವ ಮೃತ್ಯು, ಮಹಿಳೆ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಪಿಕಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಓರ್ವ ಮೃತ್ಯು, ಮಹಿಳೆ ಗಂಭೀರ Read More »

ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಪತ್ತೆ

ಸುಳ್ಯ: ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಭಾನವಾರ ಪತ್ತೆಯಾಗಿದೆ. ನಾಲ್ಕು ದಿನಗಳ ಹಿಂದೆ ಕೂಲಿಕಾರ್ಮಿಕ ನಾರಾಯಣನ್ ಎಂಬವರು ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿದ್ದ ಸಂದರ್ಭ ಕಾಲು ಜಾರಿ ಹರಿಯುತ್ತಿದ್ದ ನೀರಿಗೆ ಬಿದ್ದು ಕಣ್ಮರೆಯಾಗಿದ್ದರು. ತಕ್ಷಣದಿಂದಲೇ ಸುಳ್ಯ ಅಗ್ನಿಶಾಮಕ ದಳ ಹಾಗೂ ಎಸ್‍ ಡಿಆರ್ ಎಫ್, ಪೊಲೀಸ್ ಇಲಾಖೆ ಪತ್ತೆಗಾಗಿ ಕಾರ್ಯಾಚರಣೆಗೆ ಇಳಿದಿತ್ತು. ಅಲ್ಲದೆ ಕಲ್ಲುಗುಂಡಿಯ ವಿಖಾಯ ತಂಡ, ಪೈಚಾರಿನ ಮುಳುಗು ತಜ್ಞರು ಶೋಧ ಕಾರ್ಯದಲ್ಲಿ ತೊಡಗಿದ್ದರು.  ಇದೀಗ ಆಲೆಟ್ಟಿಯ ಕನ್ನಿಗುಂಡಿ ಬಳಿಯ ಪಯಸ್ವಿನಿ ಹೊಳೆ

ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಪತ್ತೆ Read More »

ಓಮ್ನಿ-ಸಿಫ್ಟ್ ಕಾರು ಡಿಕ್ಕಿ | ಪ್ರಯಾಣಿಕರಿಗೆ ಗಾಯ

ಬಂಟ್ವಾಳ : ಓಮ್ನಿಯೊಂದಕ್ಕೆ ಹಿಂದಿನಿಂದ ಬಂದ ಶಿಪ್ಟ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಪಲ್ಟಿಯಾಗಿ ಪ್ರಯಾಣಿಕರು ಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಬಿ.ಸಿ.ರೋಡು-ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ಪರ್ಲ ಚರ್ಚ್ ಬಳಿ ಕಾರು ಚಾಲಕ ರಾಯಿಸನ್ ಹಾಗೂ ಮಕ್ಕಳು ಸಹಿತ ಮೂವರು ಜನ ಹಾಗೂ ಸಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಓಮ್ನಿ ಕಾರನ್ನು ಸ್ವಲ್ಪ ದೂರದ ವರೆಗೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದ ಕಾರಿನೊಳಗೆ ಸಿಲುಕಿದ್ದವರನ್ನು ಗಾಜು ಒಡೆದು ಹೊರಕ್ಕೆ

ಓಮ್ನಿ-ಸಿಫ್ಟ್ ಕಾರು ಡಿಕ್ಕಿ | ಪ್ರಯಾಣಿಕರಿಗೆ ಗಾಯ Read More »

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ “ವಧು-ವರಾನ್ವೇಷಣೆ-2023” |  ವಧು-ವರ ಅನ್ವೇಷಣೆಯಲ್ಲಿ ತೊಡಗಿಕೊಂಡವರಿಗೆ ಸೂಕ್ತ ವೇದಿಕೆಯಾದ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ “ಬಿಲ್ಲವ ವಧು-ವರಾನ್ವೇಷಣೆ-2023” ಭಾನುವಾರ ಬೆಳಗ್ಗೆ ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಿತು. ವಧು-ವರಾನ್ವೇಷಣೆಯಲ್ಲಿ ತೊಡಗಿಕೊಂಡ ಸುಮಾರು 180 ಕ್ಕೂ ಅಧಿಕ ಮಂದಿ ನೋಂದಾವಣೆ ಮಾಡಿಕೊಂಡಿದ್ದು, ಕಾರ್ಯಕ್ರಮದಲ್ಲಿ ನೋಂದಾವಣೆಯಾದವರ ಸಂಪೂರ್ಣ ಮಾಹಿತಿಯನ್ನು ಎಲ್‍ಇಡಿ ಸ್ಕ್ರೀನ್‍ ನಲ್ಲಿ ಡಿಸ್ ಪ್ಲೇ ಮಾಡಲಾಯಿತು. ಈ ಸಂದರ್ಭದಲ್ಲಿ ವಧು ಅನ್ವೇಷಣೆ ಹಾಗೂ ವರ ಅನ್ವೇಣೆಯಲ್ಲಿ ತೊಡಗಿಕೊಂಡವರಿಗೆ ನಂಬರ್ ನೀಡಲಾಗಿದ್ದು, ನಂಬರ್ ಪಡೆದುಕೊಂಡವರಿಗೆ, ತಮ್ಮ ವಧು ಅಥವಾ ವರ ಆಯ್ಕೆಯಾದವರಿಗೆ

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ “ವಧು-ವರಾನ್ವೇಷಣೆ-2023” |  ವಧು-ವರ ಅನ್ವೇಷಣೆಯಲ್ಲಿ ತೊಡಗಿಕೊಂಡವರಿಗೆ ಸೂಕ್ತ ವೇದಿಕೆಯಾದ ಕಾರ್ಯಕ್ರಮ Read More »

ಜು.11 : ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷರ ಪದಗ್ರಹಣ ಸಮಾರಂಭ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷರಾಗಿ ಆಯ್ಕೆಯಾದ ರೊ.ಡಾ.ರಾಜೇಶ್ ಬೆಜ್ಜಂಗಳ ಅವರ ಪದಗ್ರಹಣ ಸಮಾರಂಭ ಜು.11 ಮಂಗಳವಾರ ಬೈಪಾಸ್ ರಸ್ತೆಯಲ್ಲಿರುವ ಅಶ್ವಿನಿ ಕಂಫಾರ್ಟ್ಸ್ ನಲ್ಲಿ ಸಂಜೆ 6.30 ಕ್ಕೆ ನಡೆಯಲಿದೆ. ರೋಟರಿ ಜಿಲ್ಲೆ3181 ರ ಪೂರ್ವ ಜಿಲ್ಲಾ ಗವರ್ನರ್ ರೊ.ಡಾ.ಆರ್.ಎಸ್.ನಾರಾರ್ಜುನ ಪದಗ್ರಹಣ ಸಮಾರಂಭ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ಮಿತ್ರಂಪಾಡಿ, ರೊ.ನವೀನ್ ಚಂದ್ರ ನಾಯ್ಕ್, ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ರೊ.ಸುಂದರ್ ಬೈಕಾಡಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ

ಜು.11 : ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷರ ಪದಗ್ರಹಣ ಸಮಾರಂಭ Read More »

ಕಾರು ಅಪಘಾತದಲ್ಲಿ ಮೃತಪಟ್ಟ ಹನಾ ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಎರಡು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೃತಪಟ್ಟ ಹನಾ ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ಶನಿವಾರ ಭೇಡಿ ನೀಡಿದರು. ಹನಾ ಅವರ ಕುಟುಂಬದೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ನ ಪ್ರಸನ್ನ ರೈ, ಮೃತ ಹನಾ ಅವರ ತಂದೆ ಮಜೀದ್, ಮನೆಯವರು ಉಪಸ್ಥಿತರಿದ್ದರು.

ಕಾರು ಅಪಘಾತದಲ್ಲಿ ಮೃತಪಟ್ಟ ಹನಾ ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ Read More »

ಸಿದ್ಧರಾಮಯ್ಯ ಸರಕಾರದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ : ಪಿ.ಸಿ.ಜಯರಾಮ

ಸುಳ್ಯ : ಸುಳ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಶ್ಲಾಘಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ರಾಜ್ಯದಲ್ಲಿ ಇರುವುದು ನುಡಿದಂತೆ ನಡೆಯುವ ಸರಕಾರ. ಚುನಾವಣೆ ಸಂದರ್ಭದಲ್ಲಿ ಜನರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸುವತ್ತ ದಿಟ್ಟ ಹೆಜ್ಜೆ ಇರಿಸಿದೆ‌.ಗ್ಯಾರಂಟಿಗಳಅನುಷ್ಠಾನಕ್ಕೆ 52 ಸಾವಿರ ಕೋಟಿಗಳನ್ನು ಮೀಸಲಿರಿಸಿದೆ.ಶಕ್ತಿ ಯೋಜನೆ, ಅನ್ನ ಭಾಗ್ಯ,ಗೃಹಜ್ಯೋತಿ, ಈಗಾಗಲೇ ಜಾರಿ ಮಾಡಿದೆ.ಉಳಿದ ಎರಡು ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನ ಮಾಡಲಿದೆ. ಬಜೆಟ್ ಶೇ.90 ಜನರಿಗೆ ನೇರವಾಗಿ

ಸಿದ್ಧರಾಮಯ್ಯ ಸರಕಾರದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ : ಪಿ.ಸಿ.ಜಯರಾಮ Read More »

error: Content is protected !!
Scroll to Top