ಪುತ್ತೂರು

ಬಡ ಕುಟುಂಬದ ಮಹಿಳೆಯೊಬ್ಬರ ಅಂತ್ಯಸಂಸ್ಕಾರಕ್ಕೆ ನೆರವಾದ ಪುತ್ತಿಲ ಪರಿವಾರ

ಕಡಬ : ಕಡಬ ತಾಲೂಕಿನ ಕಡು ಬಡತನದ ಮಹಿಳೆಯೊಬ್ಬರು ಶುಕ್ರವಾರ ಪುತ್ತೂರು ಸರಕಾರಿ ಆಸ್ಪತ್ರೆ ನಿಧನರಾಗಿದ್ದು, ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರಲ್ಲಿ ಹಣಕಾಸಿನ ವ್ಯವಸ್ಥೆ ತೊಂದರೆ ಪಡುವಂತಾಯಿತು. ಇದನ್ನು ತಕ್ಷಣ ಮನಗಂಡ ಪುತ್ತಿಲ ಪರಿವಾರದ ಕಡೆಯಿಂದ ಅಂಬುಲೆನ್ಸ್ ಮತ್ತು  ಅಂತ್ಯಕ್ರಿಯೆಯನ್ನು ನಡೆಸಲು ಬೇಕಾದ ವ್ಯವಸ್ಥೆಯನ್ನು  ಮಾಡಿ, ಕುಟುಂಬದ ದುಃಖದಲ್ಲಿ ಪುತ್ತಿಲ ಪರಿವಾರ ಭಾಗಿಯಾಯಿತು, ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ನಗರ ಸಮಿತಿಯ ಅಧ್ಯಕ್ಷ ಅನಿಲ್ ತೆಂಕಿಲ , ಕಿಶೋರ್ ಕುಮಾರ್  , ಗೀತೇಶ ಹಾಗೂ ಪುತ್ತಿಲ ಪರಿವಾರದ […]

ಬಡ ಕುಟುಂಬದ ಮಹಿಳೆಯೊಬ್ಬರ ಅಂತ್ಯಸಂಸ್ಕಾರಕ್ಕೆ ನೆರವಾದ ಪುತ್ತಿಲ ಪರಿವಾರ Read More »

ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ

ಪುತ್ತೂರು: ಸರ್ವೆ ಗ್ರಾಮದ ದಿ.ಅಚ್ಚುತ ಪೂಜಾರಿ ಸೊರಕೆಯವರ ಪತ್ನಿ ಸುನೀತಿ (92) ಶನಿವಾರ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದಿದ್ದ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ Read More »

ಕುದ್ಮಾರು ರಾಮಚಂದ್ರ ಬನಾರಿ ನಿಧನ

ಕುದ್ಮಾರು: ಕಡಬ ತಾಲೂಕಿನ ಕುದ್ಮಾರು ನಿವಾಸಿ ರಾಮಚಂದ್ರ ಬನಾರಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ವೃತ್ತಿಯಲ್ಲಿ ಟೈಲರ್ ಆಗಿದ್ದ  ಅವರು ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ನಳಿನಾಕ್ಷಿ, ಪುತ್ರ ಸ್ವಸ್ತಿಕ್, ಪುತ್ರಿ ಚೈತನ್ಯ ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ.

ಕುದ್ಮಾರು ರಾಮಚಂದ್ರ ಬನಾರಿ ನಿಧನ Read More »

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ | ಪುತ್ತೂರಿಗೆ ಮಹೇಶ್ಚಂದ್ರ ನೇಮಕ

ಪುತ್ತೂರು : ಪುತ್ತೂರು ಸಹಾಯ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ. ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಅವರ ವರ್ಗಾವಣೆಯಿಂದ ತೆರವಾದ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ | ಪುತ್ತೂರಿಗೆ ಮಹೇಶ್ಚಂದ್ರ ನೇಮಕ Read More »

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು,  ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ ಚರ್ಚಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು Read More »

ಖಾವಂದರು ಧರ್ಮಸ್ಥಳ ಯೋಜನೆಯ ಮೂಲಕ ಜನರ ಬದುಕನ್ನು ಸಮೃದ್ಧಿಯೆಡೆಗೆ ಕೊಂಡೊಯ್ದಿದ್ದಾರೆ  : ಮಾಜಿ ಶಾಸಕ ಸಂಜೀವ ಮಠಂದೂರು | ನವಜೀವನ ಸದಸ್ಯರ ಸಮಾವೇಶ

ಪುತ್ತೂರು: ಕಳೆದ 40 ವರ್ಷಗಳಿಂದ ಹಲವಾರು ಯೋಜನೆಗಳನ್ನು ರೂಪಿಸಿಕೊಂಡು ಜನರ ಬದುಕನ್ನು ಸಮೃದ್ಧಿಯ ಕಡೆಗೆ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಧರ್ಮಸ್ಥಳದ ಖಾವಂದರು. ಸರ್ಕಾರ ಮಾಡದ ಕೆಲಸವನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಜನೆಯ ಮೂಲಕ ಮಾಡಿ ತೋರಿಸಿದ್ದಾರೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ಮತ್ತು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಪುತ್ತೂರು ಇವುಗಳ ಸಹಯೋಗದಲ್ಲಿ

ಖಾವಂದರು ಧರ್ಮಸ್ಥಳ ಯೋಜನೆಯ ಮೂಲಕ ಜನರ ಬದುಕನ್ನು ಸಮೃದ್ಧಿಯೆಡೆಗೆ ಕೊಂಡೊಯ್ದಿದ್ದಾರೆ  : ಮಾಜಿ ಶಾಸಕ ಸಂಜೀವ ಮಠಂದೂರು | ನವಜೀವನ ಸದಸ್ಯರ ಸಮಾವೇಶ Read More »

ನೀರಿನ ಟ್ಯಾಂಕಿಗೆ ಹಾರಿ ಮಹಿಳೆ ಆತ್ಮಹತ್ಯೆ

ವಿಟ್ಲ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ನೀರಿನ‌ ಟ್ಯಾಂಕಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಶಾಂತಲಾ (41) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಅವರು, ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ನೀರಿನ ಟ್ಯಾಂಕಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ | ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈಧ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ. ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು, ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರು ಹೆಸರಿಗೆ ರಜೆ ಮೆಲೆ ತೆರಳಿದ ಕಾರಣ ಹೆರಿಗೆ ಮಾಡಿಸಲು ವೈಧ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ | ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ Read More »

ಮನೆ ಮೇಲೆ ಜರಿದು ಬಿದ್ದ ಗುಡ್ಡ : ಮಹಿಳೆ ಮೃತ್ಯು , ಓರ್ವ ಮಹಿಳೆಯ ರಕ್ಷಣೆ

ಬಂಟ್ವಾಳ: ಇಂದು ಮಂಜಾನೆ ನಡೆದ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಇಬ್ಬರು ಸಿಲುಕಿಕೊಂಡಿ, ಓರ್ವ ಮಹಿಳೆಯ ರಕ್ಷಣೆ ಮಾಡಿದರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಝರೀನಾ (49) ಮೃತಪಟ್ಟವರು.  ಸಫಾ ಅವರನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು

ಮನೆ ಮೇಲೆ ಜರಿದು ಬಿದ್ದ ಗುಡ್ಡ : ಮಹಿಳೆ ಮೃತ್ಯು , ಓರ್ವ ಮಹಿಳೆಯ ರಕ್ಷಣೆ Read More »

ನಾಳೆಯೂ (ಜು.7) ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ

ಮಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಜು.7 ಶುಕ್ರವಾರವೂ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಜೆ ಘೊಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ.

ನಾಳೆಯೂ (ಜು.7) ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ Read More »

error: Content is protected !!
Scroll to Top