ಪುತ್ತೂರು

ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟುಕೊಂಡು,ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನ ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಬೇಡಿಕೆಗಳುಳ್ಳ ಮನವಿಯನ್ನು ಶಾಸಕರಿಗೆ ನೀಡಲಾಯ್ತು. ಹಂತ ಹಂತವಾಗಿ ಶಾಲಾ ಅಗತ್ಯತೆಗಳನ್ನು ಪೂರೈಸುವುದಾಗಿ ಶಾಸಕರು ಭರವಸೆ ನೀಡಿದರು. ಶಾಸಕರಿಗೆ ಶಾಲೆಯ ಪರವಾಗಿ ಶಾಲು ಹೊದಿಸಿ, ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯ್ತು. ಮಾಜಿ […]

ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ Read More »

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕ ಕಶೆಕೋಡಿ ಸೀತಾರಾಮ ನೂರಿತ್ತಾಯ ನಿಧನ

ಮಾಣಿ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕ ಕಶೆಕೋಡಿ ನಿವಾಸಿ ಸೀತಾರಾಮ ನೂರಿತ್ತಾಯ (86) ಬುಧವಾರ ನಿಧನರಾದರು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ 55 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಪೌರೋಹಿತ್ಯ ಪೂರೈಸಿರುವ ಅವರು ಕೃಷಿಕರಾಗಿದ್ದರು. ಪೌರೋಹಿತ್ಯ ಸೇವೆಯಲ್ಲಿ ಸತ್ಯ, ನಿಷ್ಠೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದರು. ಮಾಣಿ ಗ್ರಾಮದಲ್ಲಿ ಹಿಂದಿನ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ, ದೈವಗಳ ನೇಮೋತ್ಸವಗಳಲ್ಲಿ ಸಕ್ರಿಯರಾಗಿ ಪೂಜಾ ಕೈಂಕರ್ಯಗಳೊಂದಿಗೆ ಕ್ಷೇತ್ರದ ಅಭಿವೃದ್ಧಿ ಬಗ್ಗೆಯೂ ಚಿಂತನೆ ಮಾಡಿಕೊಂಡು

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕ ಕಶೆಕೋಡಿ ಸೀತಾರಾಮ ನೂರಿತ್ತಾಯ ನಿಧನ Read More »

ತಾನು ಕುಳಿತ ತರಗತಿ ನೋಡಿ ಬಾವುಕರಾದ ಶಾಸಕ ಅಶೋಕ್ ರೈ

ಪುತ್ತೂರು: ಹಳೆಯ ನೆನಪುಗಳೆಂದರೆ ಹಾಗೆ ನಮ್ಮನ್ನು ಒಮ್ಮೆಲೆ ಯಾವುದೋ ಲೋಕಕ್ಕೆ ಕೊಂಡೊಯ್ಯುತ್ತದೆ. ನಾವು ಕಲಿತ ಶಾಲೆ,ನಾವು ಕುಳಿತ ತರಗತಿ ಇವುಗಳನ್ನು ಕಂಡಾಗ ನಮ್ಮ ಕಣ್ಣುಗಳು ಒದ್ದೆಯಾಗುವುದು ಸಹಜ ಇದಕ್ಕೆ ಕಾರಣ ನಮ್ಮ ಮಕ್ಕಳಾಟ ಮತ್ತೆ ನೆನಪಾಗುತ್ತದೆ. ಪುತ್ತೂರಿನ ಕೊಂಬೆಟ್ಟು ಬೋರ್ಡು ಹೈಸ್ಕೂಲ್ ಗೆ ಜೂ.28 ರಂದು ಭೇಟಿ ನೀಡಿದ ಶಾಸಕ ಅಶೋಕ್ ರೈ ಗೆ ಆಗಿದ್ದು ಇದೇ ಸ್ಥಿತಿ. ಇಂದು ಕಾರ್ಯಕ್ರಮದ ನಿಮಿತ್ತ ಶಾಲೆಗೆ ಭೇಟಿ ನೀಡಿದ ಅವರು ಕಾರ್ಯಕ್ರಮ ಕ್ಕೆ ಮೊದಲು ತಾನು ಕುಳಿತ ಎರಡು

ತಾನು ಕುಳಿತ ತರಗತಿ ನೋಡಿ ಬಾವುಕರಾದ ಶಾಸಕ ಅಶೋಕ್ ರೈ Read More »

ವಿಟ್ಲ ಜೋಗಿಮಠದಲ್ಲಿ ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: ವಿವಾಹಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೋಗಿಮಠದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೈರಂಗಳ ಗ್ರಾಮದ ಮೋಟುಗೋಳಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರಿ ಅನಿಶಾ (34) ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಮೃತರ ಸಹೋದರ ಮುನೀರ್ ಅಹಮ್ಮದ್, ತನ್ನ ಅಕ್ಕನ ಸಾವಿನಲ್ಲಿ ಯಾವುದೇ ಸಂಶಯವಿಲ್ಲ. ನಾಲ್ಕನೇ ಹೆರಿಗೆಯಾದ ಬಳಿಕ ಮಾನಸಿಕವಾಗಿ ನೊಂದಿದ್ದಳು ಎಂದು ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ ಜೋಗಿಮಠದಲ್ಲಿ ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

ಬೈಕ್-ಪಿಕಪ್ ಡಿಕ್ಕಿ | ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕ್ ಹಾಗೂ ಪಿಕಅಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ  ನಾಗರಾಜ (53) ಮೃತಪಟ್ಟವರು. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬೈಕ್-ಪಿಕಪ್ ಡಿಕ್ಕಿ | ಬೈಕ್ ಸವಾರ ಮೃತ್ಯು Read More »

ಜೂ.30 : ಇರ್ದೆ-ಉಪ್ಪಳಿಗೆ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ, ಸನ್ಮಾನ

ಪುತ್ತೂರು: ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.30 ರಂದು ಶಾಲಾ ಉತ್ತುಂಗ ಸಭಾಭವನದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಸಂಚಾಲಕ, ನ್ಯಾಯವಾದಿ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾರಾಯಣ ಅವರು 2014 ರಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದು, ನಂತರದ ದಿನಗಳಲ್ಲಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ತನ್ನನ್ನು ತೊಡಗಿಸಿಕೊಂಡು ಶಾಲಾ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ.

ಜೂ.30 : ಇರ್ದೆ-ಉಪ್ಪಳಿಗೆ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ, ಸನ್ಮಾನ Read More »

ಜಯಂತ ಶೆಟ್ಟಿ ಕೇರ್ಪಳ ನಿಧನ

ಸುಳ್ಯ : ಹಳೆಗೇಟು ಪ್ರಶಾಂತ್ ಬಾರ್ & ರೆಸ್ಟೋರೆಂಟ್ ಮಾಲಕ ಜಯಂತ್ ಶೆಟ್ಟಿ ಕೇರ್ಪಳ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಜಯಂತ್ ಶೆಟ್ಟಿಯವರು ಗೃಹರಕ್ಷಕದಳದ ಘಟಕಾಧಿಕಾರಿಯಾಗಿ, ಲಯುನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಜಯಂತ ಶೆಟ್ಟಿ ಕೇರ್ಪಳ ನಿಧನ Read More »

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ | ಕಾರ್ಡ್ ವಿತರಣೆಗೆ ನೂತನ ಪೋರ್ಟಲ್ ಕಾರ್ಯಾರಂಭ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾವಾಗಿದ್ದು, ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸರಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅರ್ಜಿ ಸಲ್ಲಿಸಲೆಂದೇ ಹೊಸದಾದ ಪೋರ್ಟಲ್ ಶೀಘ್ರದಲ್ಲಿ ಆರಂಭ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಸರಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‍ಗಳ

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ | ಕಾರ್ಡ್ ವಿತರಣೆಗೆ ನೂತನ ಪೋರ್ಟಲ್ ಕಾರ್ಯಾರಂಭ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗುವಂತೆ ಧ್ವನಿವರ್ಧಕದ ಮೂಲಕ ಘೋಷಣೆ | ಜೂ.30 ರೊಳಗೆ ಶರಣಾಗದಿದ್ದಲ್ಲಿ ಆಸ್ತಿ ಜಪ್ತಿ

ಪುತ್ತೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಫಿಗಳು ಜೂ.30 ರೊಳಗೆ ಶರಣಾಗತಿ ಆಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದು ಎಂಬ ಧ್ವನಿವರ್ಧಕ ಘೋಷಣೆ ಸುಳ್ಯ ನಗರದಲ್ಲಿ ಮಾಡಲಾಗುತ್ತಿದೆ. ಎನ್‍ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಗಳು ಈ ಘೋಷಣೆಯನ್ನು ಮಾಡುತ್ತಿದ್ದು, ಆರೋಪಿಗಳ ಸುಳಿವು ನೀಡಿದಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗುವಂತೆ ಧ್ವನಿವರ್ಧಕದ ಮೂಲಕ ಘೋಷಣೆ | ಜೂ.30 ರೊಳಗೆ ಶರಣಾಗದಿದ್ದಲ್ಲಿ ಆಸ್ತಿ ಜಪ್ತಿ Read More »

ಜು.6 : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆ ಉದ್ಘಾಟನೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆಯ ಉದ್ಘಾಟನಾ ಸಮಾರಂಭ ಜು.6 ಗುರುವಾರ ಸುಳ್ಯ ತಾಲೂಕಿನ ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಘ 2002 ರಲ್ಲಿ ಇಡ್ಯಡ್ಕ ಮೋಹನ ಗೌಡರ ನೇತೃತ್ವದಲ್ಲಿ 20 ಸಮಾನ ಮನಸ್ಕರ ತಂಡ ಪ್ರವರ್ತಕರಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದ ಕಟ್ಟಡದಲ್ಲಿ ಆರಂಭಗೊಳಿಸಿದ್ದರು. .

ಜು.6 : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆ ಉದ್ಘಾಟನೆ Read More »

error: Content is protected !!
Scroll to Top