ಪುತ್ತೂರು

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಜ್ಯುವೆಲ್ಲರ್ಸ್‍ನಲ್ಲಿ ಇಂದಿನಿಂದ ಕಿವಿಯೋಲೆ ಮತ್ತು ಉಂಗುರಗಳ ಹಬ್ಬ

ಪುತ್ತೂರು: ಖ್ಯಾತ ಚಿನ್ನಾಭರಣಗಳ ಮಳಿಗೆ, ಸ್ವರ್ಣೋದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಜಿ.ಎಲ್.ಜ್ಯುವೆಲ್ಲರ್ಸ್ ನ ಪುತ್ತೂರು ಮಳಿಗೆಯಲ್ಲಿ ಇಂದಿನಿಂದ (ಜೂ.26) ಕಿವಿಯೋಲೆ ಮತ್ತು ಉಂಗುರಗಳ ಹಬ್ಬ ಆಯೋಜಿಸಲಾಗಿದೆ. ಕಳೆದ 66 ವರ್ಷಗಳಿಂದ ಜನಮಾನಸದಲ್ಲಿ ವಿಶ್ವಾಸ ಗಳಿಸಿರುವ ಜಿ.ಎಲ್.ಜ್ಯುವೆಲ್ಲರ್ಸ್ ಕರಾವಳಿ ಹಾಗೂ ಮಲೆನಾಡುಗಳಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದು, ಇಂದಿನಿಂದ ಸೀಮಿತ ಅವಧಿ ವರೆಗೆ ಈ ಹಬ್ಬವನ್ನು ಆಯೋಜಿಸಿದೆ. ಈ ವಿಶೇಷ ಮಾರಾಟ ಹಬ್ಬದಲ್ಲಿ ಆಕರ್ಷಕ ವಿನ್ಯಾಸದ ಉಂಗುಗಳು, ಕಿವಿಯೋಲೆಗಳು ಕನಿಷ್ಠ ಮೇಕಿಂಗ್ ದರದಲ್ಲಿ ಲಭ್ಯವಿದ್ದು, ಎಲ್ಲಾ ವಯೋಮಾನದ ಮಹಿಳೆಯರ, […]

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಜ್ಯುವೆಲ್ಲರ್ಸ್‍ನಲ್ಲಿ ಇಂದಿನಿಂದ ಕಿವಿಯೋಲೆ ಮತ್ತು ಉಂಗುರಗಳ ಹಬ್ಬ Read More »

ಕಸಾಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -6 | ಸಂಭ್ರಮಿಸಿದ  ನೂರಾರು ಪುಟಾಣಿ ಕವಿಗಳು

ಪುತ್ತೂರು : ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಾಲೇಜುಗಳಲ್ಲಿ ಅನೇಕ ಉದಯೋನ್ಮುಖ ಬರಹಗಾರರು ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧಕರಿದ್ದು ಅವರನ್ನು ಗುರುತಿಸಿ ಸಾಹಿತ್ಯ ವೇದಿಕೆ ನೀಡುವ ನಿಟ್ಟಿನಲ್ಲಿ ಗ್ರಾಮ ಗ್ರಾಮದಲ್ಲೂ  ಸಾಹಿತ್ಯ ಸಂಭ್ರಮವನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯುವ ಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ಉದ್ದೇಶ ಇದಾಗಿದೆ ಎಂದು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶ್ರೀ  ಷಣ್ಮುಖದೇವ ಪ್ರೌಢಶಾಲೆಯಲ್ಲಿ ಕ. ಸಾ. ಪ ಪುತ್ತೂರು, ಶಿಕ್ಷಣ

ಕಸಾಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -6 | ಸಂಭ್ರಮಿಸಿದ  ನೂರಾರು ಪುಟಾಣಿ ಕವಿಗಳು Read More »

ಶ್ರದ್ಧಾಕೇಂದ್ರಗಳಿಂದ ಗ್ರಾಮದ ಅಭಿವೃದ್ಧಿ : ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ | ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆಯು ಜೂ.25 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಶ್ರೀಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಶ್ರದ್ಧಾ ಕೇಂದ್ರಗಳನ್ನು ಭಕ್ತಿ ಶ್ರದ್ಧೆಯಿಂದ ಬೆಳೆಸಬೇಕು.ಇದರಿಂದ ಗ್ರಾಮದಲ್ಲಿ ಶಾಂತಿ,ಸೌಹಾರ್ದತೆ  ನೆಲೆಸಲು ಸಾಧ್ಯ.ಬ್ರಹ್ಮರಥದ ನಿರ್ಮಾಣ ಕೆಲಸ ನಡೆಯುತ್ತಿದ್ದು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. ಕ್ಷೇತ್ರದ ಶಿಲ್ಪಿಗಳಾದ ಮಹೇಶ ಮುನಿಯಂಗಳ ಅವರು ರಥ ನಿರ್ಮಾಣದ ರೂಪುರೇಷೆಗಳ

ಶ್ರದ್ಧಾಕೇಂದ್ರಗಳಿಂದ ಗ್ರಾಮದ ಅಭಿವೃದ್ಧಿ : ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ | ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆ Read More »

ಜೂ.3 ರಿಂದ ಸೆ.25 : ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆ | ಕಲ್ಲಾರೆ ಮಠದಲ್ಲಿ ಹೊರೆಕಾಣಿಕೆ ಸಮರ್ಪಣೆ ಕುರಿತು  ಪೂರ್ವಭಾವಿ ಸಭೆ

 ಪುತ್ತೂರು : ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚಾತುರ್ಮಾಸ ವೃತಾಚರಣೆಯ ಕುರಿತು ಪುತ್ತೂರು ವಲಯ ಸಮಿತಿ ವತಿಯಿಂದ ಸಭೆಯನ್ನು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಆಯೋಜಿಸಲಾಯಿತು. ವಲಯ ಸಮಿತಿ ಅಧ್ಯಕ್ಷ ಡಾ.ಭಾಸ್ಕರ ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆಗೆ ಪುತ್ತೂರಿನಿಂದ ಬೃಹತ್ ಹೊರೆಕಾಣಿಕೆ ಸಮರ್ಪಣೆಯಾಗಲಿದ್ದು, ಈ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಜು.3 ರಿಂದ ಸೆ.25ರ ವರೆಗೆ ಚಾತುರ್ಮಾಸ ನಡೆಯಲಿದ್ದು, ಜು.೧೦ ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ.

ಜೂ.3 ರಿಂದ ಸೆ.25 : ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆ | ಕಲ್ಲಾರೆ ಮಠದಲ್ಲಿ ಹೊರೆಕಾಣಿಕೆ ಸಮರ್ಪಣೆ ಕುರಿತು  ಪೂರ್ವಭಾವಿ ಸಭೆ Read More »

ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ

ಪುತ್ತೂರು: ಪುತ್ತೂರು ಕ್ಷೇತ್ರದ ಜನತೆಗಾಗಿ ಮತ್ತು ಮಳೆ,ಬೆಳೆ ಗಾಗಿ ಪುತ್ತೂರು ಶಾಸಕ ಅಶೋಕ್ ರೈಯವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು.‌ ಮಳೆಗಾಲ ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದೆ ಆದರೆ ಇನ್ನೂ ಸಮೃದ್ದವಾಗಿ ಮಳೆ ಬಂದಿಲ್ಲ. ಕೇತ್ರದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಬೆಳೆ ಬಂದು ಜನರಿಗೆ ನೆಮ್ಮದಿಯನ್ನು ಕರುಣಿಸುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ , ದೇವಸ್ಥಾನದ

ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಯ 50 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ | ಶಾಸಕರ ನೇತೃತ್ವದಲ್ಲಿ ಸಭೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮುಂದಿನ ನಡೆಯ ಕುರಿತು ಸಭೆ ಭಾನುವಾರ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಯೋಜನೆಗಳಾದ ದೇವಸ್ಥಾನದ ಎದುರಿನ ರಥಬೀದಿ ಕೊನೆಯಲ್ಲಿ ಮಹಾದ್ವಾರ ಧಾರ್ಮಿಕ ಶಿಕ್ಷಣ ಕೇಂದ್ರ, ವೇದಪಾಠ ಶಾಲೆ ಕಟ್ಟಡ, ಯಾತ್ರಿ ನಿವಾಸ್, ರಥ ಮಂದಿರ ಹೀಗೆ ಸುಮಾರು 45 ಪ್ರಾಜೆಕ್ಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಯ 50 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ | ಶಾಸಕರ ನೇತೃತ್ವದಲ್ಲಿ ಸಭೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳದ ಮೂರು ವರ್ಷಗಳ ಹಿಂದೆ ಆರಂಭಿಸಿದ ಹಡಿಲು ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸುಮಾರು ಎರಡು ಎಕ್ರೆ ಜಾಗದಲ್ಲಿ ಏಣೇಲು ಬೇಸಾಯಕ್ಕೆ ಶಾಸಕ ಅಶೋಕ್ ಕುಮಾರ್ ರೈ ಬೀಜ ಬಿತ್ತುವ ಮೂಲಕ ಚಾಲನೆ ನೀಡಿದರು. 2021 ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಯೋಜನೆಯಂತೆ ತಾಲೂಕಿನಲ್ಲಿ ಹಲವು ದೇವಸ್ಥಾನಗಳ ಗದ್ದೆ ಸೇರಿದಂತೆ ಇನ್ನಿತರ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಈ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ Read More »

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವೇದವೃತ ಭಂಡಾರಿಗೆ ಎರಡು ಬೆಳ್ಳಿ ಪದಕ

ಪುತ್ತೂರು : ಬೆಂಗಳೂರಿನಲ್ಲಿ ನಡದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ವೇದವೃತ ಭಂಡಾರಿ ಚಿಲ್ಮೆತ್ತಾರು ಎರಡು ಬೆಳ್ಳಿ ಪದಕ ಪಡೆದುಕೊಂಡಿದ್ದಾನೆ. 4X50m ಮಿಡ್ಲೆ ರಿಲೇ ಹಾಗೂ 4x25m Manikan curry  ವಿಭಾಗಗಳಲ್ಲಿ ಸ್ಪರ್ಧಿಸಿ ಎರಡು ಬೆಳ್ಳಿ  ಪದಕಗಳನ್ನು ಪಡೆದುಕೊಂಡಿರುತ್ತಾನೆ. ಬಾಲವನ ಈಜು ಕೊಳದಲ್ಲಿ ಈಜು ತರಬೇತಿಯನ್ನು ರೋಹಿತ್.ಪಿ ಮತ್ತು ದೀಕ್ಷಿತ್ ಅವರಿಂದ ಪಡೆದಿರುತ್ತಾನೆ. ಈತ ಚಿಲ್ಮೆತ್ತಾರು ಸಂತೋಷ್ ಭಂಡಾರಿ ಮತ್ತು ಮೀನಾಕ್ಷಿ ಎಸ್.ಭಂಡಾರಿ ದಂಪತಿ ಪುತ್ರ

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವೇದವೃತ ಭಂಡಾರಿಗೆ ಎರಡು ಬೆಳ್ಳಿ ಪದಕ Read More »

ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ

ಪುತ್ತೂರು : ಯುವಕ ಸಮುದಾಯ ಸಮಾಜ ಕಟ್ಟುವವಲ್ಲಿ ನಿರತರಾಗಬೇಕೇ ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಶನಿವಾರ ಸಂಜೆ ಇಲ್ಲಿನ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೆ‘ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ ಸಮಾಜ

ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ Read More »

ಅಬುದಾಬಿ ಲಾಟರಿಯಲ್ಲಿ 45 ಕೋಟಿ ಗೆದ್ದ  ಸುಳ್ಯದ ಯುವಕ

 ಸುಳ್ಯ  ಅಬುದಾಬಿಯಲ್ಲಿ ನೆಲೆಸಿರುವ ಸುಳ್ಯ ಗಾಂಧಿ ನಗರ ನಿವಾಸಿಯೊಬ್ಬರು ಲಾಟರಿಯ ಯಲ್ಲಿ 45 ಕೋಟಿ ಗೆದ್ದಿದ್ದಾರೆ. ಗಾಂಧಿನಗರ ಶಾಲಾ ಹಿಂಬದಿ ನಿವಾಸಿ ಇರ್ಫಾನ್ (ಇರ್ಪೂ)  ಬಿಗ್ ಟಿಕೆಟ್ ಡ್ರಾದಲ್ಲಿ 20 ಮಿಲಿಯ ಅಂದರೆ 45 ಕೋಟಿ ಗೆದ್ದಿದ್ದಾರೆ ಇವರು ಗಾಂಧಿ ನಗರ ಹೈಸ್ಕೂಲ್ ನಲ್ಲಿ SSLC ಪಡೆದು ಅಬುದಾಬಿಯ ಪ್ರತಿಷ್ಠಿತ ಮೊಬೈಲ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಅಬುದಾಬಿ ಲಾಟರಿಯಲ್ಲಿ 45 ಕೋಟಿ ಗೆದ್ದ  ಸುಳ್ಯದ ಯುವಕ Read More »

error: Content is protected !!
Scroll to Top