ಪುತ್ತೂರು

ಬಂಟ್ವಾಳ ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ಸಭೆ | ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ : ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿಯ ಸಭೆ ಹಾಗೂ ಬಂಟ್ವಾಳ ತಾಲೂಕು ಸಮಿತಿಯ ರಚನೆ ಪಾಣೆಮಂಗಳೂರು ಸಭಾಂಗಣದ ಸಜೀಪ ವೆಂಕಪ್ಪ ಆಚಾರ್ಯ ವೇದಿಕೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಬಂಟ್ವಾಳ ತಾಲೂಕು  ಅಧ್ಯಕ್ಷರಾಗಿ  ರವೀಂದ್ರ ಆಚಾರ್ಯ ಕಾವಲುಕಟ್ಟೆ, ಉಪಾಧ್ಯಕ್ಷರಾಗಿ ಯಶೋಧರ ಆಚಾರ್ಯ ಮಾಣಿ , ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಆಚಾರ್ಯ ಬಂಟ್ವಾಳ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಆಚಾರ್ಯ ಕಲ್ಲಡ್ಕ , ಕೋಶಾಧಿಕಾರಿಯಾಗಿ ಜಯಕರ ಆಚಾರ್ಯ ಮಾಣಿ, […]

ಬಂಟ್ವಾಳ ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ಸಭೆ | ಪದಾಧಿಕಾರಿಗಳ ಆಯ್ಕೆ Read More »

ನೆಹರುನಗರ ನಿವಾಸಿ ವಸಂತ ಪ್ರಭು ಆತ್ಮಹತ್ಯೆ

ಪುತ್ತೂರು: ನೆಹರೂನಗರ ನಿವಾಸಿ ವಸಂತ ಪ್ರಭು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮೃತರಿಗೆ ಪತ್ನಿ ಇದ್ದಾರೆ.

ನೆಹರುನಗರ ನಿವಾಸಿ ವಸಂತ ಪ್ರಭು ಆತ್ಮಹತ್ಯೆ Read More »

ಉಪ್ಪಿನಂಗಡಿ ವಲಯ ಶೌರ್ಯ ವಿಪತ್ತು ತಂಡದಿಂದ ವಾರ್ಷಿಕೋತ್ಸವ | ಔಷಧೀಯ ಗಿಡಗಳ ನಾಟಿ ಮೂಲಕ ಆಚರಣೆ

ಉಪ್ಪಿನಂಗಡಿ : ಉಪ್ಪಿನಂಗಡಿ ವಲಯ ಶೌರ್ಯ ವಿಪತ್ತು ತಂಡದಿಂದ ವಾರ್ಷಿಕೋತ್ಸವದ ಸವಿನೆನಪಿಗಾಗಿ ಮುದ್ಯ ದೇವಸ್ಥಾನ ವಠಾರದಲ್ಲಿ ಔಷಧಿ ಗಿಡಗಳ ನಾಟಿ ಮಾಡುವುದರ ಮೂಲಕ ವಾರ್ಷಿಕ ದಿನಾಚರಣೆ ಆಚರಿಸಲಾಯಿತು. ವಲಯ ಮೇಲ್ವಿಚಾರಕ ಶಿವಪ್ಪ.ಎಂ. ಕೆ ಮಾಹಿತಿ,  ಮಾರ್ಗದರ್ಶನ ನೀಡಿದರು. ಔಷಧಿ ಗಿಡಗಳನ್ನು ಗ್ರಾಮ ವಿಕಾಸ ಯೋಜನೆ ಶ್ರೀರಾಮ ಶಾಲೆ ಉಪ್ಪಿನಂಗಡಿ ನೀಡಿ ಸಹಕರಿಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಸೋಮಸುಂದರ ಕೊಡಿಪಾನ, ವಲಯ ಅಧ್ಯಕ್ಷ ನಾರಾಯಣ ಕೆಳಗಿನಮನೆ, ಶ್ರೀರಾಮ ಶಾಲೆ ಆಡಳಿತ ಮಂಡಳಿ ಸದಸ್ಯ ಗಣೇಶ್ ಕುಲಾಲ್, ಒಕ್ಕೂಟದ ಮಾಜಿ

ಉಪ್ಪಿನಂಗಡಿ ವಲಯ ಶೌರ್ಯ ವಿಪತ್ತು ತಂಡದಿಂದ ವಾರ್ಷಿಕೋತ್ಸವ | ಔಷಧೀಯ ಗಿಡಗಳ ನಾಟಿ ಮೂಲಕ ಆಚರಣೆ Read More »

ಎಡನೀರು ಶ್ರೀಗಳ ತೃತೀಯ ಚಾತುರ್ಮಾಸ್ಯ ವೃತಾಚರಣೆ | ಜೂ.25 ರಂದು ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವೃತಾಚರಣೆ ಜು.3 ರಿಂದ 29 ರ ತನಕ ಶ್ರೀ ಎಡನೀರು ಮಠದಲ್ಲಿ ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಕಲ್ಲಾರೆ ಶ್ರೀ ರಾಘವೇಂದ್ರ ಮಠದಲ್ಲಿ ಜೂ.25 ರಂದು ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಎಡನೀರು ಮಠದ ಅಭಿಮಾನಿಗಳಿಂದ ಸಭೆ ನಡೆಯಲಿದೆ. ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳಿಗ್ಗೆ ಸಭೆ ನಡೆದ ಬಳಿಕ ಮಧ್ಯಾಹ್ನ ಶ್ರೀಗಳ ಪಟ್ಟದ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಭಿಕ್ಷಾವಂದನೆ

ಎಡನೀರು ಶ್ರೀಗಳ ತೃತೀಯ ಚಾತುರ್ಮಾಸ್ಯ ವೃತಾಚರಣೆ | ಜೂ.25 ರಂದು ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಪೂರ್ವಭಾವಿ ಸಭೆ Read More »

ಪರಿಸರ ಮಾಹಿತಿ, ಸಸಿ ವಿತರಣಾ ಕಾರ್ಯಕ್ರಮ

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಬೆಟ್ಟಂಪಾಡಿ ವಲಯದ ಪರಿಸರ ಮಾಹಿತಿ ಮತ್ತು ಸಸಿ ವಿತರಣಾ ಕಾರ್ಯಕ್ರಮ ಉಪ್ಪಳಿಗೆ ಸರಕಾರಿ ಪ್ರೌಢಶಾಲೆ ಯಲ್ಲಿ ನಡೆಯಿತು. ವೇದಿಕೆಯಲ್ಲಿ ನಿಕಟಪೂರ್ವ ಡಿಎಂಸಿ ಅಧ್ಯಕ್ಷ ಕೃಷ್ಣಪ್ರಸಾದ ಆಳ್ವ, ಯೋಜನಾಧಿಕಾರಿ ಶಶಿಧರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯೆ ಮೀನಾಕ್ಷಿ, ವಲಯ ಅಧ್ಯಕ್ಷ ಬಾಲಕೃಷ್ಣ, ಶಿಕ್ಷಕ ರಾಮಚಂದ್ರ, ಒಕ್ಕೂಟದ ಅಧ್ಯಕ್ಷ ಹರೀಶ್ ಗೌಡ ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕ ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಶ್ಯಾಮಲ ಸ್ವಾಗತಿಸಿದರು. ವಲಯದ

ಪರಿಸರ ಮಾಹಿತಿ, ಸಸಿ ವಿತರಣಾ ಕಾರ್ಯಕ್ರಮ Read More »

ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಪಾಲ್ತಾಡಿ ಶಾಖಾ ವ್ಯವಸ್ಥಾಪಕ ಜಯರಾಮ ಕೆ.ನಿಧನ

ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಾಲ್ತಾಡಿ ಶಾಖಾ ವ್ಯವಸ್ಥಾಪಕ ಜಯರಾಮ ಕೆ.ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಪೆರ್ಲಂಪಾಡಿ ನಿವಾಸಿಯಾಗಿರುವ ಜಯರಾಮ ಕೆ.ಅವರು ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಾಲ್ತಾಡಿ ಶಾಖಾವ್ಯವಸ್ಥಾಪಕರಾಗಿದ್ದು, ಬಳಿಕ ಪೆರ್ಲಂಪಾಡಿಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಅಸೌಖ್ಯದಿಂದಿದ್ದ ಜಯರಾಮ ಅವರು ಆರೋಗ್ಯದಲ್ಲಿ ಚೇತರಿಕೆಗೊಂಡು ಕರ್ತವ್ಯದಲ್ಲಿದ್ದರು.ಬಳಿಕ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೌಮ್ಯಸ್ವಭಾವದ ವ್ಯಕ್ತಿತ್ವದ ಜಯರಾಮ ಕೆ.ಅವರು ಬ್ಯಾಂಕಿನಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದರು.

ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಪಾಲ್ತಾಡಿ ಶಾಖಾ ವ್ಯವಸ್ಥಾಪಕ ಜಯರಾಮ ಕೆ.ನಿಧನ Read More »

ಜೂ.24 : ಕೊಳ್ತಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗ್ರಾಮ ಸಾಹಿತ್ಯ ಸಂಭ್ರಮ 6ನೇ ಸರಣಿ ಕಾರ್ಯಕ್ರಮ

ಪುತ್ತೂರು: ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ  ಘೋಷ ವಾಕ್ಯದಲ್ಲಿ ಪುತ್ತೂರು ತಾಲೂಕು  ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಹಾಗೂ  ಕ್ಷೇತ್ರ ಶಿಕ್ಷಣಾಧಿಕಾರಿಗಳ ಇಲಾಖೆ, ಕೊಳ್ತಿಗೆ ಗ್ರಾಮ ಪಂಚಾಯತ್ ಸಹಕಾರದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಸಂಚಾಲಕತ್ವದಲ್ಲಿ, ಗ್ರಾಮ ಸಾಹಿತ್ಯ ಸಂಭ್ರಮದ  ಆರನೇ ಸರಣಿ ಕಾರ್ಯಕ್ರಮವು  ಕೊಳ್ತಿಗೆ  ಗ್ರಾಮದ ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಜೂ. 24 ಶನಿವಾರ ನಡೆಯಲಿದೆ. ಮಿತ್ರಂಪಾಡಿ  ಜಯರಾಮ ರೈ ಅವರ ಮಹಾ ಪೋಷಕತ್ವದಲ್ಲಿ  ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಷಣ್ಮುಖ ದೇವ ಪ್ರೌಢಶಾಲೆಯ ಅಧ್ಯಕ್ಷರಾದ  ಶ್ರೀ

ಜೂ.24 : ಕೊಳ್ತಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗ್ರಾಮ ಸಾಹಿತ್ಯ ಸಂಭ್ರಮ 6ನೇ ಸರಣಿ ಕಾರ್ಯಕ್ರಮ Read More »

ಶ್ರೀ ಆದಿ ಚುಂಚನಗಿರಿ ಕಾವೂರು ಮಂಗಳೂರು ಶಾಖಾ ಮಠದ ಬಿಜಿಎಸ್ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು : ಶ್ರೀ ಆದಿ ಚುಂಚನಗಿರಿ ಕಾವೂರು ಮಂಗಳೂರು ಶಾಖಾ ಮಠದ ನೇತೃತ್ವದಲ್ಲಿ ನಡೆಯುವ ಬಿಜಿಎಸ್ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಬುಧವಾರ ಆಚರಿಸಲಾಯಿತು. ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಶ್ರೀಗಳು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ, ಸ್ವತಃ ಯೋಗ ಪ್ರಾತ್ಯಕ್ಷಿಕೆ ನಡೆಸಿದರು. ಈ ಸಂದರ್ಭದಲ್ಲಿ ಬಿಜಿಎಸ್‍ ಸ್ಕೂಲ್ ನ ಮುಖ್ಯ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು.

ಶ್ರೀ ಆದಿ ಚುಂಚನಗಿರಿ ಕಾವೂರು ಮಂಗಳೂರು ಶಾಖಾ ಮಠದ ಬಿಜಿಎಸ್ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕೆಎಂಎಫ್ ಮಿನಿ ಡೈರಿ ನಿರ್ಮಾಣ ಯೋಜನೆ | ಶಾಸಕರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗುತ್ತಿರುವ ಕೆಎಂಎಫ್ ಮಿನಿ ಡೈರಿ ಯೋಜನೆಗಾಗಿ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನಾ ಕಾರ್ಯ ನಡೆಯಿತು. ಸುಮಾರು 15 ಎಕ್ರೆ ವಿಸ್ತೀರ್ಣದಲ್ಲಿ ನೆಲೆನಿಲ್ಲಿರುವ ಕೆಎಂಎಫ್ ಮಿನಿ ಡೈರಿ ನಿರ್ಮಾಣಕ್ಕಾಗಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಬೇಕಿದೆ. ಆರ್ಯಾಪು ಗ್ರಾಮ ವ್ಯಾಪ್ತಿಯ ಕುರಿಯ, ದಾರಂದಕುಕ್ಕು, ಬನ್ನೂರು ಸೇರಿದಂತೆ ಕೆಲವು ಕಡೆಗಳಲ್ಲಿ ಸ್ಥಳಗಳ ಪರಿಶೀಲನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್, ತಹಶಿಲ್ದಾರ್ ಶಿವಶಂಕರ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ

ಕೆಎಂಎಫ್ ಮಿನಿ ಡೈರಿ ನಿರ್ಮಾಣ ಯೋಜನೆ | ಶಾಸಕರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ Read More »

ವಾಟ್ಸ್ ಪ್ ಮೂಲಕ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ | ಇಬ್ಬರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸರು

ಪುತ್ತೂರು: ವಿದ್ಯಾರ್ಥಿಗಳಿಬ್ಬರು ವಾಟ್ಸ್ ಪ್ ಮೂಲಕ ಕಾಲೇಜೊಂದರ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ ಕಳುಹಿಸಿದ ವಿಷಯಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ವಿದ್ಯಾರ್ಥಿಗಳಿಬ್ಬರನ್ನು ಬಂಧಿಸಿದ್ದಾರೆ. ಪಡ್ನೂರು ಮೂಲಕ ವಿದ್ಯಾರ್ಥಿಗಳಿಬ್ಬರು ಈ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಇಬ್ಬರನ್ನು ಠಾಣೆಗೆ ಕರೊದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ವಾಟ್ಸ್ ಪ್ ಮೂಲಕ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ | ಇಬ್ಬರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸರು Read More »

error: Content is protected !!
Scroll to Top