ಪುತ್ತೂರು

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಶೀಘ್ರದಲ್ಲಿ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ

ಪುತ್ತೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳೇ ಗಮನಿಸಿ. ನಿಮಗೆ ಕಲಿಕೆ ಕಷ್ಟವಾಗುತ್ತಿದೆಯೇ ? ಹಾಗಾದರೆ ತಡಮಾಡಬೇಡಿ. ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ಇಲ್ಲಿ ನುರಿತ ಬೋಧಕರಿಂದ ನೀಡುವ ಟ್ಯೂಷನ್ ತರಗತಿಯಲ್ಲಿ ಪಾಲ್ಗೊಳ್ಳಿ. ನಗರದ ಅರುಣಾ ಥಿಯೇಟರ್ ಎದುರುಗಡೆ ಇರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಶೀಘ್ರದಲ್ಲಿ ಆರಂಭಗೊಳ್ಳಲಿದೆ. ನುರಿತ ಶಿಕ್ಷಕರುಗಳಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯದಲ್ಲಿ ಟ್ಯೂಷನ್ ನೀಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಟ್ಯೂಷನ್ ಜತೆಗೆ ಉಚಿತವಾಗಿ ಮೆಡಿಟೇಷನ್ ತರಗತಿಗಳನ್ನು ನೀಡಲಾಗುವುದು. […]

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಶೀಘ್ರದಲ್ಲಿ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಸಂತ ಫಿಲೋಮಿನಾ ಕಾಲೇಜಿನ ಎನ್‌ ಸಿ ಸಿ ಮತ್ತು ಎನ್‌ ಎಸ್‌ ಎಸ್‌ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೊ ಮಾತನಾಡಿ, “ಯೋಗವು ಪ್ರಪಂಚಕ್ಕೆ ಭಾರತದ ಕೊಡುಗೆಯಾಗಿದೆ. ಇಂದು ಗಡಿ, ಸಂಸ್ಕೃತಿಯನ್ನು ಮೀರಿ ವಿಶ್ವದಾದ್ಯಂತ ಕೋಟ್ಯಂತರ ಜನರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಪುತ್ತೂರು ರೋಟರಿ ಕ್ಲಬ್ ನ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ

ಪುತ್ತೂರು: ರೋಟರಿ ಸಂಸ್ಥೆಗಳ ಆಶ್ರಯದಲ್ಲಿ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ರೋಟರಿ ಬ್ಲಡ್ ಬ್ಯಾಂಕ್ ಕಟ್ಟಡದ ತಳ ಅಂತಸ್ತಿನಲ್ಲಿ ಬುಧವಾರ ಉದ್ಘಾಟನೆಗೊಂಡಿತು. ರೋಟರಿ ಅಂತರಾಷ್ಟ್ರೀಯ ನಿರ್ದೇಶಕ ಮಹೇಶ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿದರು. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಮೋಡ್ಯುಲರ್ ಒಟಿಯನ್ನು ಉದ್ಘಾಟಿಸಿದರು. ಅಂತರಾಷ್ಟ್ರೀಯ ರೋಟರಿ ಚೆಯರ್ ಮ್ಯಾನ್ ರವಿ ನಡ್ಲಮನಿ ಡೆ ಕೇರ್ ಸೆಂಟರನ್ನು ಉದ್ಘಾಟಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು,  ರೋಟರಿ ಫೌಂಡೇಶನ್ ಚೆಯರ್

ಪುತ್ತೂರು ರೋಟರಿ ಕ್ಲಬ್ ನ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ Read More »

ಒಂದರಿಂದ ಎಂಟನೇ ತರಗವತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಿಸುವಂತೆ ಸರಕಾರದ ಸುತ್ತೋಲೆ

ಬೆಂಗಳೂರು: ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಈ ಸಾಲಿನ ಶೈಕ್ಷಣಿಕ ವರ್ಷದಿಂದ ವಾರಕ್ಕೊಮ್ಮೆ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಜೂ.20 ರಿಂದ ಜು.15 ರ ತನಿ ಅಥವಾ ಮುಂದಿನ ಆದೇಶದ ವರೆಗೆ ನೀಡುವಂತೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಪೌಷ್ಠಿಯ ಆಹಾರವಾಗಿ ಬೇಸಿಯಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ

ಒಂದರಿಂದ ಎಂಟನೇ ತರಗವತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಿಸುವಂತೆ ಸರಕಾರದ ಸುತ್ತೋಲೆ Read More »

ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ನರಿಮೊಗರು ಸರಸ್ವತಿ ವಿದ್ಯಾಮಂದಿರದ ಅವಿನಾಶ್ ಕೊಡೆಂಕಿರಿ ಮಾತನಾಡಿ, ಯೋಗವು ಜೀವನ ಶೈಲಿಯನ್ನು ರೂಪಿಸುವ ಪರಿಪೂರ್ಣ ವಿಧಾನ. ಅಷ್ಟಾಂಗ ಯೋಗವು ದೇಹ, ಮನಸು ಮತ್ತು ಬುದ್ಧಿ ಸಂಸ್ಕಾರದ ಜೊತೆಗೆ ಆಧ್ಯಾತ್ಮಿಕ ಉನ್ನತಿ ತಂದುಕೊಡುತ್ತದೆ ಎಂದು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಮಾತನಾಡಿ, ಜೀವನ ಶಿಸ್ತು ಅವಶ್ಯ. ಯೋಗ ಅದನ್ನು ನೀಡುತ್ತದೆ. ನಿತ್ಯ ಯೋಗಾಸನ ಮಾಡುವಂತೆ ತಿಳಿಸಿದರು. ಶಾಲಾ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು

ಉಪ್ಪಿನಂಗಡಿ : ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ ಅವರು ಗಂಡು

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವು ಮನುಷ್ಯ ಮತ್ತು ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ.ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗದಲ್ಲಿ ಸಂಪೂರ್ಣತೆಯನ್ನು ಪಡೆದವರು ಬ್ರಹ್ಮಜ್ಞಾನವನ್ನು ಪಡೆಯುತ್ತಾರೆ.ಆಧ್ಯಾತ್ಮದ ಸೂಕ್ಷ್ಮ ಸತ್ಯವನ್ನು ಅರಿತುಕೊಳ್ಳುತ್ತಾರೆ.ಯೋಗವನ್ನು ಹಿಡಿದು ಪರಿಪೂರ್ಣತೆಯನ್ನು ಪಡೆಯುವವನೇ ಸಾಧಕನಾಗುತ್ತಾನೆ. ಎಂದು ಕೊಂಬೆಟ್ಟು ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕಿ ವಾರಿಜ ಹೇಳಿದರು. ಅವರು ಬುಧವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ  ಆಸನಗಳೊಂದಿಗೆ ಯೋಗದ ಮಹತ್ವ ಎಂಬ ವಿಷಯದ ಕುರಿತಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಸಕಾರಾತ್ಮಕ ಚಿಂತನೆಗಳಿಗೆ ಯೋಗ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ Read More »

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹಿರೆಬಂಡಾಡಿ: ರಾಜ್ಯದ ಪ್ರತೀ ಮಹಿಳೆಯರಿಗೆ ಜಾತಿ, ಮತ, ಧರ್ಮಗಳ ವೆತ್ಯಾಸವಿಲ್ಲದೆ ಅವರವರು ನಂಬುವ ದೇವರ, ತೀರ್ಥ ಸ್ಥಳಗಳ ಯಾತ್ರೆಗೆ ಉಚತ ಬಸ್ ಮೂಲಕ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ಸ್ ನಿಜವಾದ ಹಿಂದುತ್ವ ಪಕ್ಷವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು ಅವರು ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕರ ಅಸ್ತಿತ್ವಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ. ಸರಕಾರದ ಐದು ಗ್ಯಾರಂಟಿ ಜನರನ್ನು ಸಂತೋಷದಿಂದ ಇರುವಂತೆ ಮಾಡಿದೆ. ಉಚಿತ ಸರಕಾರಿ ಬಸ್ ಯೋಜನೆಯಿಂದ

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ವಲಯ ಯುವಜನೋತ್ಸವ-2023ರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ದಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ವಿವಿಧ ವಲಯಗಳಿಂದ ಆಯ್ದ 30 ಕಾಲೇಜುಗಳ ವಿದ್ಯಾರ್ಥಿ ತಂಡಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿನಿ ಲಘು ಸಂಗೀತಾ ದಲ್ಲಿ ಪ್ರಥಮ ಸ್ಥಾನ, 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿ ಶ್ರೇಯಸ್ ಎಂ ರಾವ್ ಭಾಷಣ

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವನ್ನು ಪ್ರತಿಯೊಬ್ಬರೂ ಕೂಡಾ ತನ್ನ ದೈನಂದಿನ ದಿನಚರಿಯ ಭಾಗವನ್ನಾಗಿ ಅಳವಡಿಸಿಕೊಳ್ಳುವುದರಿಂದ ಒತ್ತಡ ನಿವಾರಣೆ, ಮಾನಸಿಕ ಸ್ಥಿತಿಯ ಸುಧಾರಣೆ, ದೈಹಿಕ ಸಧೃಢತೆಯನ್ನು ಸಾಧಿಸಬಹುದು ಎಂದು ವಿದ್ಯಾಭಾರತಿಯ ದಕ್ಷಿಣ ಕನ್ನಡದ ಯೋಗ ಸಂಯೋಜಕ ಶ್ರೀ.ಚಂದ್ರಶೇಖರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ಆಶ್ರಯದಲ್ಲಿ ಕಾಲೇಜಿನ ವಿಶ್ವೇಶ್ವರಯ್ಯ ಸಭಾ ಭವನದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಯೋಗ ಇಂದು ವಿಶ್ವವ್ಯಾಪಿಯಾಗಿದೆ, ವಿದೇಶಗಳೂ ಅದರ ಮಹತ್ವವನ್ನು ಅರಿತಿವೆ.

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ Read More »

error: Content is protected !!
Scroll to Top