ಪುತ್ತೂರು

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ

ಪುತ್ತೂರು: ಕೇಂದ್ರ ಸರಕಾರದ ಎನ್.ಟಿ.ಎ. ನಡೆಸುವ ರಾಷ್ಟ್ರೀಯ ಮಟ್ಟದ ಜೆ.ಇ.ಇ. ಎಡ್ವಾನ್ಸ್ಡ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವರ್ಷಿತ್ ಜೆ ಮತ್ತು ಅಮೋಘ್ ಎ.ಪಿ. ಉತ್ತಮ ರ್‍ಯಾಂಕುಗಳನ್ನು ಗಳಿಸಿ ರಾಷ್ಟ್ರಮಟ್ಟದ ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ವರ್ಷಿತ್ ಜೆ 108 ಅಂಕಗಳನ್ನು ಗಳಿಸುವ ಮೂಲಕ ಸಾಮಾನ್ಯ ವರ್ಗದಲ್ಲಿ 1540 ರ್‍ಯಾಂಕ್, ಒ.ಬಿ.ಸಿ. ವಿಭಾಗದಲ್ಲಿ 3806  ರ್‍ಯಾಂಕ್ ಗಳಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಮೂಡ ಭಂಡಾರಿ ಬೆಟ್ಟುವಿನ ಜಯಂತ ಆರ್ ಮತ್ತು ಸೌಮ್ಯ ಜೆ ದಂಪತಿ […]

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ Read More »

ಜೂ.21 : ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಜೂ.21 ಬುಧವಾರ ರೋಟರಿ ಬ್ಲಡ್ಕ ಬ್ಯಾಂಕ್ ಕಟ್ಟಡದ ತಳ ಅಂತಸ್ತಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆಯ ಚೆಯರ್ ಮ್ಯಾನ್ ಡಾ.ಭಾಸ್ಕರ ಎಸ್. ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಎರಡೂವರೆ ಸಾವಿರ ಚದರ ಅಡಿ ಜಾಗದಲ್ಲಿ ಆಸ್ಪತ್ರೆ ಕಾರ್ಯಾಚರಿಸಲಿದ್ದು, ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಈಗಾಗಲೇ ಉಡುಪಿ ಪ್ರಸಿದ್ಧ ಕಣ್ಣಿನ ಆಸ್ಪತ್ರೆ

ಜೂ.21 : ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ Read More »

ಪಡೆದ ಲಂಚವನ್ನು ಮರಳಿ ಕೊಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಶೇಂದಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ. ಕೋಡಿಂಬಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಷಯ ತಿಳಿಸಿದ ಶಾಸಕ ಅಶೋಕ್ ರೈ ಶೇಂದಿ ಕೊಂಡೊಯ್ಯತ್ತಿದ್ದ ಓರ್ವ ಬಡಪಾಯಿಯ ವಾಹನ ನಿಲ್ಲಿಸಿದ್ದ ಅಬಕಾರಿ ಇಲಾಖೆಯವರು ಆತನನ್ನು ತಡೆದು ಶೇಂದಿ ಕೊಂಡು ಹೋಗುವುದು ಯಾಕೆ ಎಂದೆಲ್ಲಾ ಆತನನ್ನು ಬೆದರಿಸಿ ಆತನ ವಿರುದ್ದ ಪ್ರಕರಣ ದಾಖಲಿಸಿದ್ದು ಮಾತ್ರವಲ್ಲದೆ ಆತನ ವಾಹನವನ್ನು ಜಪ್ತಿ ಮಾಡಿದ್ದಾರೆ.

ಪಡೆದ ಲಂಚವನ್ನು ಮರಳಿ ಕೊಡಿಸಿದ ಶಾಸಕ ಅಶೋಕ್ ರೈ Read More »

ಚಿಕ್ಕಪುತ್ತೂರು ನಿವಾಸಿ ಮಾಲತಿ ನಿಧನ

ಪುತ್ತೂರು: ಚಿಕ್ಕಪುತ್ತೂರು ನಿವಾಸಿ ಚೇತನ್ ಕುಮಾರ್ ಪತ್ನಿ ಮಾಲತಿ (43) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಕಳೆದ 15 ವರ್ಷಗಳಿಂದ ನೆಲ್ಲಿಕಟ್ಟೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಚಿಕ್ಕಪುತ್ತೂರು ನಿವಾಸಿ ಮಾಲತಿ ನಿಧನ Read More »

ಬ್ಯಾನರ್ ವಿಚಾರದಲ್ಲಿ ಯುವಕರ ಮೇಲೆ ಪೊಲೀಸ್  ದೌರ್ಜನ್ಯ | ಡಿವೈಎಸ್‍ ಪಿ ಡಾ.ವೀರಯ್ಯ ಹೀರೇಮಠ ನ್ಯಾಯಾಲಯಕ್ಕೆ ಶರಣು | ಜಾಮೀನಿನ ಮೇಲೆ ಬಿಡುಗಡೆ

ಪುತ್ತೂರು: ಚುನಾವಣೆ ಸಂದರ್ಭ ನಡೆದ  ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ಎದುರಿಸುತ್ತಿರುವ ಡಿವೈಎಸ್‍ಪಿ ಡಾ.ವೀರಯ್ಯ ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣಾ ಎಸ್‍ಐ ಶ್ರೀನಾಥ್ ರೆಡ್ಡಿ ಮತ್ತು ಕಾನ್‍ಸ್ಟೇಬಲ್ ಹರ್ಷಿತ್ ಅವರನ್ನು ಸೇವೆಯಿಂದ ಈಗಾಗಲೇ ಅಮಾನತುಗೊಳಿಸಲಾಗಿದೆ. ವಿಧಾನಸಭಾ ಚುನಾವಣೆ ಬಳಿಕ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಶ್ರದ್ಧಾಂಜಲಿ ಬರಹದೊಂದಿಗೆ ಬ್ಯಾನರ್ ಅಳವಡಿಸಿ, 

ಬ್ಯಾನರ್ ವಿಚಾರದಲ್ಲಿ ಯುವಕರ ಮೇಲೆ ಪೊಲೀಸ್  ದೌರ್ಜನ್ಯ | ಡಿವೈಎಸ್‍ ಪಿ ಡಾ.ವೀರಯ್ಯ ಹೀರೇಮಠ ನ್ಯಾಯಾಲಯಕ್ಕೆ ಶರಣು | ಜಾಮೀನಿನ ಮೇಲೆ ಬಿಡುಗಡೆ Read More »

ಉಪ್ಪಿನಂಗಡಿ ವಲಯ ಶೌರ್ಯವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರಮದಾನ

ಉಪ್ಪಿನಂಗಡಿ : ಉಪ್ಪಿನಂಗಡಿ ವಲಯದ ಶೌರ್ಯವಿಪತ್ತು ನಿರ್ವಹಣಾ ಘಟಕ ಸದಸ್ಯರಿಂದ ಬಜತ್ತೂರು ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಒಳಚರಂಡಿ ದುರಸ್ತಿ ಮತ್ತು ಸ್ವಚ್ಛತೆ ಶ್ರಮಾದಾನದ ಮಾಡಲಾಯಿತು  ಮಳೆಗಾಲದಲ್ಲಿ ನೀರು ನಿಂತು  ಓಡಾಡಲು ತೀರ  ಕಷ್ಟಕರವಾಗಿರುವುದನ್ನು ಮನಗಂಡು ಉಪ್ಪಿನಂಗಡಿ ಬಜತ್ತೂರು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ವಳಾಲಿನಲ್ಲಿ ಒಳಚರಂಡಿ ದುರಸ್ತಿ ಮತ್ತು ಸ್ವಚ್ಛತೆ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಘಟಕದ ಪ್ರತಿನಿಧಿ ಸದಾನಂದ ಶಿಬಾರ್ಲ, ಸಂಯೋಜಕಿ, ಮಮತ, ಸದಸ್ಯರಾದ ಮನೋಜ್ ನೀರಕಟ್ಟೆ, ವಾಸುದೇವ ರೆಂಜಾಳ, ಸಾವಿತ್ರಿ ಶಿಬಾರ್ಲ, ಅನಿತಾ ಪಿಜಕ್ಕಳ, ಸುಜಾತ ರೆಂಜಾಳ,

ಉಪ್ಪಿನಂಗಡಿ ವಲಯ ಶೌರ್ಯವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರಮದಾನ Read More »

ಶ್ರೀ ಉಳ್ಳಾಕುಲು ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

ಬೆಳಂದೂರು: ಬೆಳಂದೂರು ಗ್ರಾಮದ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯ ಕೊಡಿಮಾರು ಅಬೀರದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು. ಶಿವರಾಮ ಉಪಾಧ್ಯಾಯ ಮತ್ತು ಜಗನ್ನಾಥ ಕಲ್ಪಡ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹವನ ಮೃತ್ಯುಂಜಯ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು ಸಂಜೆ  ದುರ್ಗಾ ಪೂಜೆ ನಡೆದು  ರಾತ್ರಿ  ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ತಿಮ್ಮಪ್ಪ ಗೌಡ ಕಾಯೆರ್ತಡಿ, ಅಧ್ಯಕ್ಷರಾದ ಉದಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿ

ಶ್ರೀ ಉಳ್ಳಾಕುಲು ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ವೈದಿಕ ಕಾರ್ಯಕ್ರಮ Read More »

ಕಡಬ ಜೇಸಿ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಶಾಲಾ ಬ್ಯಾಗ್ ಪುಸ್ತಕ ವಿತರಣೆ

ಕಡಬ : ಜೇಸಿಐ ಕಡಬ ಕದಂಬ ಇದರ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ ಕಡಬ ಶ್ರೀಕಂಠ ಸ್ವಾಮಿ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ದಾನಿ ಹಾಗೂ ಸಾಮಾಜಿ ಮುಂದಾಳ ತಿಲಕ್ ರೈ  ಮುಂಡ್ರಾಡಿ ವಿತರಣಾ ಕಾರ್ಯ ನೆರವೇರಿಸಿ ಮಾತನಾಡಿ ಕಡಬ ತಾಲೂಕಿನ ಪತ್ರಕರ್ತರು ಇಲ್ಲಿನ ಸಮಸ್ಯೆಗಳನ್ನು ಕಾಲಕಾಲಕ್ಕೆ ಸಂಬಂಧಪಟ್ಟವರ ಗಮನಕ್ಕೆ ತರುವಂತಹ ವರದಿಗಳನ್ನು ಮಾಡುತ್ತಾ ತಾಲೂಕಿನ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು

ಕಡಬ ಜೇಸಿ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಶಾಲಾ ಬ್ಯಾಗ್ ಪುಸ್ತಕ ವಿತರಣೆ Read More »

ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ

ಪುತ್ತೂರು:  ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಬಪ್ಪಳಿಗೆ ಜೈನ ಭವನ ದಲ್ಲಿ ನಡೆದ ಎರಡು ದಿನಗಳ ಹಲಸು ಮತ್ತು ಹಣ್ಣುಗಳ ಮೇಳದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಎರಡು ದಿನಗಳಲ್ಲಿ ಹಲಸಿನ ಮೇಳದ ಜೊತೆಗೆ ವಿವಿಧ ಸ್ಪರ್ಧೆಗಳು ನಡೆದಿದ್ದು, ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಸಮಾರೋಪದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ,

ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ Read More »

ವಿಶ್ವ ರಕ್ತದಾನಿಗಳ ದಿನಾಚರಣೆ | ಸಾರ್ವಜನಿಕ ರಕ್ತದಾನ ಶಿಬಿರ

ಪುತ್ತೂರು :  ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ ರೋಟರಿ ಕ್ಲಬ್ ಪುತ್ತೂರು ಹಾಗೂ ಸ್ವಯಂ ಪ್ರೇರಿತ ನಿಯಮಿತ ದಾನಿಗಳ ಸಹಕಾರದೊಂದಿಗೆ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ ಭಾನುವಾರ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು. ಕಕ್ಕಿಂಜೆ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ ಸಿದ್ದೀಕ್ ಜಲಾಲಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವು ಇಂದು ಮಾಡುವ

ವಿಶ್ವ ರಕ್ತದಾನಿಗಳ ದಿನಾಚರಣೆ | ಸಾರ್ವಜನಿಕ ರಕ್ತದಾನ ಶಿಬಿರ Read More »

error: Content is protected !!
Scroll to Top