ಪುತ್ತೂರು

ಜೂ. 18: ಪುತ್ತೂರು ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ

ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 18ರಂದು ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ ಎಂದು ಮಂಗಳೂರು ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮತ್ತು ಬಂಟರ ಸಂಘ ಪುತ್ತೂರು ಘಟಕದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. […]

ಜೂ. 18: ಪುತ್ತೂರು ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ Read More »

“ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಚಾಲನೆ | ಕಲಿಕೆಗೆ ವಯಸ್ಸಿನ ಮಿತಿಯಿಲ್ಲ : ಪ್ರೀತಾ

ಪುತ್ತೂರು: ನಗರದ ಅರುಣಾ ಥಿಯೇಟರ್ ಬಳಿಯ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ “ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಗುರುವಾರ ಚಾಲನೆ ನೀಡಲಾಯಿತು. ಪ್ರಗತಿ ಪ್ಯಾರಾ ಮೆಡಿಕಲ್ & ಅಲೈಡ್ ಸೈನ್ಸ್ ನ ಪ್ರಾಂಶುಪಾಲೆ ಪ್ರೀತಾ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತನ್ನ ಆಸಕ್ತಿ ನೆಲೆಯಲ್ಲಿ ಯಾವುದೇ ವಿಷಯವನ್ನು ಕಲಿಯಬಹುದು.  ಪ್ರಸ್ತುತ ದಿನಗಳಲ್ಲಿ ಆಂಗ್ಲ ಭಾಷೆ ಪ್ರತಿಯೊಂದು ಕ್ಷೇತ್ರದಲ್ಲಿ ಅತೀ ಅಗತ್ಯವಿದ್ದು, ದೊಡ್ಡ ದೊಡ್ಡ ನಗರಗಳಲ್ಲಿ

“ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಚಾಲನೆ | ಕಲಿಕೆಗೆ ವಯಸ್ಸಿನ ಮಿತಿಯಿಲ್ಲ : ಪ್ರೀತಾ Read More »

ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್‍ಯಕ್ರಮ “ವಿವೇಕ ಸಂಜೀವಿನಿ”

ಪುತ್ತೂರು : ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔ?ಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಪ್ರಸಾದ್ ಶ್ಯಾನಭಾಗ್ ಹೇಳಿದರು. ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ವಿವೇಕ ಸಂಜೀವಿನಿ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಔಷಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜೊತೆಗೆ ಸಸ್ಯಗಳ

ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್‍ಯಕ್ರಮ “ವಿವೇಕ ಸಂಜೀವಿನಿ” Read More »

ಜೂ.17 : ಬೆಳಂದೂರು ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಸವಣೂರು: ಬೆಳಂದೂರು ಗ್ರಾಮದ ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಗಣಪತಿ ಹವನ, ಮೃತ್ಯುಂಜಯ ಹೋಮ ಮತ್ತು ದುರ್ಗಾ ಪೂಜೆ ಜೂ.17 ರಂದು ನಡೆಯಲಿದೆ . ಬೆಳಿಗ್ಗೆ ಗಂಟೆ 9-00ರಿಂದ ಗಣಪತಿ ಹವನ ಮೃತ್ಯುಂಜಯ ಹೋಮ ಮಧ್ಯಾಹ್ನ 12-30ಕ್ಕೆ ಮಹಾಪೂಜೆ ಸಂಜೆ 6-00ರಿಂದ ದುರ್ಗಾ ಪೂಜೆ ರಾತ್ರಿ ಗಂಟೆ 8-30ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.17 : ಬೆಳಂದೂರು ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು Read More »

ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023” | ಹಲಸಿನ ಹಣ್ಣು ಸಹಿತ ವಿವಿಧ ಹಣ್ಣುಗಳ ಪ್ರದರ್ಶನ, ಮಾರಾಟ | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆ

ಪುತ್ತೂರು: ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ6ನೇ  “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದಲ್ಲಿ ಸುಮಾರು 30 ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಗಳ ಮಳಿಗೆಗಳಿವೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ

ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023” | ಹಲಸಿನ ಹಣ್ಣು ಸಹಿತ ವಿವಿಧ ಹಣ್ಣುಗಳ ಪ್ರದರ್ಶನ, ಮಾರಾಟ | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆ Read More »

ಬೊಬ್ಬೆಕೇರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವ

ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಯಲ್ಲಿ ಎಲ್.ಕೆ.ಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವವು ಜೂ 14ರಂದು ನಡೆಯಿತು. ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯರು ಆರತಿ ಬೆಳಗಿ, ತಿಲಕವನ್ನಿಟ್ಟು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ತೀರ್ಥರಾಮ ಪೈಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಜೊತೆ ಕಾರ್ಯದರ್ಶಿ ಅಶ್ವಿನ್, ನಿವೃತ್ತ ಸೈನಿಕರು ಮತ್ತು ಚಿಣ್ಣರ ಮಂಟಪ ಟ್ರಸ್ಟ್ ಅಧ್ಯಕ್ಷ ಮಹೇಶ್ ಪೈಕ, ಶಾಲಾ ಮುಖ್ಯಗುರುಗಳಾದ ಶಶಿಕಲಾ, ಸಹ ಶಿಕ್ಷಕರಾದ ಜನಾರ್ಧನ, ಗೀತಾ

ಬೊಬ್ಬೆಕೇರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವ Read More »

ನೀಟ್ 2023-ಅಂಬಿಕಾ ಪದವಿಪೂರ್ವ ವಿದ್ಯಾಲಯದಿಂದ | ಅತ್ಯಧಿಕ ಮಂದಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆ

ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ನೀಟ್ – 2023 ಪರೀಕ್ಷೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ಕೃಷ್ಟ ಫಲಿತಾಂಶ ದಾಖಲಿಸಿದ್ದಾರೆ. ಪಡೀಲಿನ ಸಂಜೀತ್ ಕುಮಾರ್ ಮತ್ತು ಕುಮಾರಿ ಬೆನಿಟ ಸಿನ್ಹ ದಂಪತಿಯ ಪುತ್ರಿ ಖುಷಿ ಗರಿಷ್ಟ 720 ಅಂಕಗಳಲ್ಲಿ 618 ಅಂಕ ದಾಖಲಿಸಿದರೆ, ಕಾಸರಗೋಡಿನ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಸುಧಾ ದಂಪತಿಗಳ ಪುತ್ರ ಅನಂತರಾಮ ಎಸ್ 592,

ನೀಟ್ 2023-ಅಂಬಿಕಾ ಪದವಿಪೂರ್ವ ವಿದ್ಯಾಲಯದಿಂದ | ಅತ್ಯಧಿಕ ಮಂದಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆ Read More »

ಪೆರಿಯಡ್ಕ ಜಕಾರಿಯಾ ನಿಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಪೆರಿಯಡ್ಕ ನಿವಾಸಿ ಜಕಾರಿಯಾ (52) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನರಾಗಿದ್ದಾರೆ. ಪೆರಿಯಡ್ಕ ಎಸ್‍ ಕೆಎಸ್‍ ಎಸ್‍ ಎಫ್ ಘಟಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕೆಲ ವರ್ಷಗಳ ಹಿಂದೆ ಅವರ ತಮ್ಮ ಯು.ಕೆ.ಹಮೀದ್ ಅವರ ಸಾವಿನಿಂದ ಕಂಗೆಟ್ಟಿದ್ದರು. ಮೃತರು ತಾಯಿ, ಪತ್ನಿ, ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರ ಹಾಗೂ ಸಹೋದರನನ್ನು ಅಗಲಿದ್ದಾರೆ.

ಪೆರಿಯಡ್ಕ ಜಕಾರಿಯಾ ನಿಧನ Read More »

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’

ಪುತ್ತೂರು: ಪ್ರತಿ ವರ್ಷ ವಿಶ್ವ ಆರೋಗ್ಯ ಸಂಸ್ಥೆ ವಿಶ್ವ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ನಾವು ದಿನನಿತ್ಯ ಸೇವಿಸುವ ಆಹಾರದಲ್ಲಿ ರಾಸಾಯನಿಕಗಳ ಮಿತಿಮೀರಿದ ಬಳಕೆ ಮನುಷ್ಯನ ದೇಹದ ಮೇಲೆ ತಾತ್ಕಾಲಿಕ ಹಾಗೂ ದೀರ್ಘಕಾಲಿಕ ಪರಿಣಾಮ ಬೀರುತ್ತದೆ. ಆಹಾರ ಸುರಕ್ಷತಾ ಕೊರತೆಯಿಂದಾಗಿ ವಿಶ್ವದಾದ್ಯಂತ ಪ್ರತಿವರ್ಷ ಮಕ್ಕಳು ಸೇರಿದಂತೆ ಸುಮಾರು 22 ಲಕ್ಷ ಜನತೆ ಸಾವನ್ನಪ್ಪುತ್ತಿದ್ದಾರೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ, ಪ್ರಚಲಿತ ಘಟನೆಗಳ ವಿಶ್ಲೇಷಕ ಸೂರ್ಯ ಹೇಳಿದ್ದಾರೆ. ವಿವೇಕಾನಂದ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’ Read More »

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ದೊರೆಯಬೇಕು :ಡಾ|ಪ್ರಭಾಕರ ಭಟ್ | ಕಡಬ ಸರಸ್ವತೀ ವಿದ್ಯಾಲಯದಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ

ಕಡಬ : , ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ವ್ಯಕ್ತಿತ್ವ ನಿರ್ಮಾಣ ಮಾಡುವುದರೊಂದಿಗೆ ರಾಷ್ಟ್ರನಿರ್ಮಾಣಕ್ಕೆ ಪ್ರೇರಣೆ ನೀಡುವ ಶಿಕ್ಷಣವನ್ನು ನೀಡಿದಾಗ ಸದೃಢ ಭಾರತ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ ಎಂದು ಮಂಗಳೂರಿನ ಸಮಾಜಿಕ ಕಾರ್ಯಕರ್ತ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು ಅವರು ಬುಧವಾರ ಕಡಬದ ಕೇವಳ  ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಪ್ರಾರಂಭವಾದ  ಆಂಗ್ಲ ಮಾಧ್ಯಮ ವಿಭಾಗದ ತರಗತಿಗಳ ಉದ್ಘಾಟನೆ ಹಾಗೂ ಶಾಲಾ ಪ್ರಾರಂಭೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ದೊರೆಯಬೇಕು :ಡಾ|ಪ್ರಭಾಕರ ಭಟ್ | ಕಡಬ ಸರಸ್ವತೀ ವಿದ್ಯಾಲಯದಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ Read More »

error: Content is protected !!
Scroll to Top