ಪುತ್ತೂರು

ಜೂ. 10: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾನ್ಯಾಸ | ಜೀರ್ಣೋದ್ಧಾರ ಸಿದ್ಧತೆಯಲ್ಲಿರುವ ಪ್ರಾಚೀನ ದೇವಳ

ಸವಣೂರು: ಇಲ್ಲಿನ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೂರ್ವಭಾವಿಯಾಗಿ ಜೂನ್ 10ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 6.58ರಿಂದ 7.55ರ ನಡುವಿನ ಸಮುಹೂರ್ತದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಆರು ಗ್ರಾಮದ ಭಕ್ತಾದಿಗಳು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಂಚಿತವಾಗಿ ಹಾಜರಿರುವಂತೆ ಕೋರಲಾಗಿದೆ. ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸೀಯಾಳ, ತೆಂಗಿನಕಾಯಿ, ತರಕಾರಿ, ಹೂವು, ಬಾಳೆ ಎಲೆ ಅಗತ್ಯವಿದ್ದು, ಭಕ್ತಾದಿಗಳು ನೀಡಬಹುದು ಎಂದು ವ್ಯವಸ್ಥಾಪನಾ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಪ್ರಕಟಣೆ ತಿಳಿಸಿದೆ.

ಜೂ. 10: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾನ್ಯಾಸ | ಜೀರ್ಣೋದ್ಧಾರ ಸಿದ್ಧತೆಯಲ್ಲಿರುವ ಪ್ರಾಚೀನ ದೇವಳ Read More »

ಮರ ಕಡಿಯುವ ವೇಳೆ ಗೆಲ್ಲು ಬಡಿದು ಮೃತ್ಯು | ತಡವಾಗಿ ಬೆಳಕಿಗೆ ಬಂದ ಪ್ರಕರಣ

ಕುಂಬ್ರ: ಮನೆ ಹಿತ್ತಲಿನ ಮರ ಕಡಿಯುವ ವೇಳೆ ಮರದ ಗೆಲ್ಲು ತಲೆಗೆ ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದರ್ಬೆತ್ತಡ್ಕದಲ್ಲಿ ಬುಧವಾರ ಸಂಜೆ ನಡೆದಿದೆ. ದರ್ಬೆತ್ತಡ್ಕದ ಗುರುಪ್ರಸಾದ್ ಮೃತಪಟ್ಟವರು. ಬುಧವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ಮರ ಕಡಿಯುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಮರ ಕಡಿಯುವ ವೇಳೆ ಗೆಲ್ಲು ಬಡಿದು ಮೃತ್ಯು | ತಡವಾಗಿ ಬೆಳಕಿಗೆ ಬಂದ ಪ್ರಕರಣ Read More »

ಗ್ರಾಫಿಕ್ ಡಿಸೈನರ್, ರಿಪೋರ್ಟರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ

ಪುತ್ತೂರು: ಜನಮನದ ಪ್ರತಿಧ್ವನಿಯಾಗಿ ನೆಲೆಯೂರಿರುವ ನ್ಯೂಸ್ ಪುತ್ತೂರು ತಂಡಕ್ಕೆ ನುರಿತ ಗ್ರಾಫಿಕ್ ಡಿಸೈನರ್, ರಿಪೋರ್ಟರ್ ಹಾಗೂ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ. ಕಳೆದ ಆರು ತಿಂಗಳಿನಿಂದ ಕಾರ್ಯಾಚರಿಸುತ್ತಿರುವ ವೆಬ್ ನ್ಯೂಸ್ ಚಾನೆಲ್‍ನಲ್ಲಿ ಈ ಉದ್ಯೋಗಾವಕಾಶಗಳಿದ್ದು, ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ತಮ್ಮ ಸ್ವ-ವಿವರವನ್ನು ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಸಂಪರ್ಕಕ್ಕಾಗಿ ಪ್ರಥಮ ಮಹಡಿ, ಪ್ರಭು ಬಿಲ್ಡಿಂಗ್, ಅರುಣ್ ಥಿಯೇಟರ್ ಎದುರು, ಕೆನರಾ ಬ್ಯಾಂಕ್ ಹತ್ತಿರ, ಪುತ್ತೂರು. Gmail Id :newsputtur821@gmail.com, Ph:9108382821

ಗ್ರಾಫಿಕ್ ಡಿಸೈನರ್, ರಿಪೋರ್ಟರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆಗಳ ವತಿಯಿಂದ ನೀಡಿದ 6 ಡಯಾಲಿಸಿಸ್  ಮೆಷಿನ್, ಆರ್.ಒ ಪ್ಲಾಂಟ್ ಲೋಕಾರ್ಪಣೆ

ಪುತ್ತೂರು: ರೋಟರಿ ಕ್ಲಬ್ ಸಂಸ್ಥೆಗಳಿಂದ ಡಯಾಲಿಸಿಸ್ ಮೆಷಿನ್ ನೀಡುವ ಮೂಲಕ ಒಳ್ಳೆಯ ಯೋಜನೆಯೊಂದು ಸಮಾಜಕ್ಕೆ ಅರ್ಪಣೆ ಮಾಡುವ ಕೆಲಸ ನಡೆದಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಶುಕ್ರವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಜಿಲ್ಲೆ 3181ರ ರೋಟರಿ ಕ್ಲಬ್‌ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್, ಅಮೆರಿಕಾ ಫ್ಲೋರಿಡಾ ರೋಟರಿ ಜಿಲ್ಲೆ 5890 ರೋಟರಿ ಕ್ಲಬ್ ನ್ಯೂ ಟಾಂಪಾ ನೂನ್ ವತಿಯಿಂದ ರೋಟರಿ ಡಯಾಲಿಸಿಸ್ ಸೆಂಟರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬಡವರ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆಗಳ ವತಿಯಿಂದ ನೀಡಿದ 6 ಡಯಾಲಿಸಿಸ್  ಮೆಷಿನ್, ಆರ್.ಒ ಪ್ಲಾಂಟ್ ಲೋಕಾರ್ಪಣೆ Read More »

ಸವಣೂರು ಸೀತಾರಾಮ ರೈ ಹುಟ್ಟುಹಬ್ಬ ಆಚರಣೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಕೆ.ಸೀತಾರಾಮ ರೈ ಸವಣೂರು ಅವರ 76ನೇ ಹುಟ್ಟುಹಬ್ಬದ ಸಂದರ್ಭ ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ಸವಣೂರು ಸೀತಾರಾಮ ರೈ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನುಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ಸುಂದರ ರೈ ಸವಣೂರು, ಸದಸ್ಯೆ ರಶ್ಮಿ ಅಶ್ವಿನ್ ಶೆಟ್ಟಿ, ಕಸ್ತೂರಿ ಕಲಾ ಎಸ್‍. ರೈ, ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ನಾರಾಯಣ ಮೂರ್ತಿ, ಉಪಪ್ರಾಂಶುಪಾಲೆ ಪುಷ್ಪಲತಾ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಸವಣೂರು ಸೀತಾರಾಮ ರೈ ಹುಟ್ಟುಹಬ್ಬ ಆಚರಣೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ Read More »

ಸ್ವಾಗತ್ ಬೇಕರಿ ಮಾಲಕ ಜಯರಾಮ್ ಶೆಟ್ಟಿ ನಿಧನ

ಪುತ್ತೂರು: ಇಲ್ಲಿಯ  ಅರುಣಾ ಥಿಯೇಟರ್ ಬಳಿಯ ಸ್ವಾಗತ್ ಬೇಕರಿ ಮಾಲಕ, ಸಾಮೆತ್ತಡ್ಕ ನಿವಾಸಿ ಜಯರಾಮ್ ಶೆಟ್ಟಿ (72) ಗುರುವಾರ ನಿಧನರಾಗಿದ್ದಾರೆ. ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಮಕ್ಕಳು, ಅಳಿಯ, ಸೊಸೆ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸ್ವಾಗತ್ ಬೇಕರಿ ಮಾಲಕ ಜಯರಾಮ್ ಶೆಟ್ಟಿ ನಿಧನ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಶಾಲಾ ಪ್ರಾರಂಭೋತ್ಸವ, ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ

ಸವಣೂರು: ಎಸ್.ಎನ್.ಆರ್.ರೂರಲ್ ಎಜುಕೇನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ ಜೂ.9ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಎನ್.ಸುಂದರ ರೈ ,ಕಸ್ತೂರಿ ಕಲಾ ಸೀತಾರಾಮ ರೈ

ಸವಣೂರು ವಿದ್ಯಾರಶ್ಮಿಯಲ್ಲಿ ಶಾಲಾ ಪ್ರಾರಂಭೋತ್ಸವ, ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ Read More »

ಯುವಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ಯುವಕನನ್ನು ಕರೆದೊಯ್ದ ನಗರ ಠಾಣಾ ಪೊಲೀಸರು

ಪುತ್ತೂರು: ಯುವಕನೋರ್ವ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಗುರುವಾರ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆ ಕುರಿತು ಪೊಲೀಸರು ಯುವಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಯುವಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ಯುವಕನನ್ನು ಕರೆದೊಯ್ದ ನಗರ ಠಾಣಾ ಪೊಲೀಸರು Read More »

ಸವಣೂರು ಸೀತಾರಾಮ ರೈ 76ನೇ ವರ್ಷದ ಹುಟ್ಟುಹಬ್ಬ | ನಾಳೆ (ಜೂನ್ 9) ಸವಣೂರು ವಿದ್ಯಾರಶ್ಮಿ ಆವರಣದಲ್ಲಿ ಆಚರಣೆ

ಸವಣೂರು: ಸವಣೂರಿನ ಶಿಲ್ಪಿ ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬದ ಸಂಭ್ರಮ ಜೂನ್ 9ರಂದು ನಡೆಯಲಿದೆ. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಅವರನ್ನು ಗೌರವಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸವಣೂರು ಸೀತಾರಾಮ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಗುವುದು. ಇದೇ ಸಂದರ್ಭ ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸವಣೂರು ಸೀತಾರಾಮ ರೈ 76ನೇ ವರ್ಷದ ಹುಟ್ಟುಹಬ್ಬ | ನಾಳೆ (ಜೂನ್ 9) ಸವಣೂರು ವಿದ್ಯಾರಶ್ಮಿ ಆವರಣದಲ್ಲಿ ಆಚರಣೆ Read More »

ದೈಪಿಲ ಕ್ರೀಡಾ ಸೇವಾ  ಸಂಘದಿಂದ ಶ್ರಮದಾನ

ಪುತ್ತೂರು: ದೈಪಿಲ ಕ್ರೀಡಾ ಸೇವಾ ಸಂಘದವರು ವಿದ್ಯುತ್ ಕಂಬಳಿಗೆ ತಾಕುವ ಮರಗಳನ್ನು ಶ್ರಮದಾನದ ಮೂಲಕ ತೆರವುಗೊಳಿಸಿದರು. ಕಾಪೆಜಾಲಿನಿಂದ ನಾನಿಲ ತನಕ ಎಚ್‍ ಟಿ ಲೈನ್‍ಗಳನ್ನು ಸ್ಪರ್ಶಿಸುವ ಮರದ ಗೆಲ್ಲುಗಳನ್ನು ಕಡಿದು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ದೈಪಿಲ ಕ್ರೀಡಾ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ದೈಪಿಲ ಕ್ರೀಡಾ ಸೇವಾ  ಸಂಘದಿಂದ ಶ್ರಮದಾನ Read More »

error: Content is protected !!
Scroll to Top