ಪುತ್ತೂರು

ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಉಳಿದಲ್ಲಿ ಮಾತ್ರ ಮಾನವ ಬದುಕಿನ ಉಳಿವು ಸಾಧ್ಯ-ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪರಿಸರ ಸಮತೋಲನದಲ್ಲಿ ಮರಗಿಡಗಳ ಪಾತ್ರ ಮಹತ್ತರವಾಗಿದೆ. ನಗರ ಬೆಳವಣಿಗೆಯ ಹಿನ್ನಲೆಯಲ್ಲಿ ಕಾಡುಗಳ ನಾಶವಾಗುತ್ತಿದ್ದು, ಪರಿಸರಕ್ಕೆ ಹಾನಿಯಾಗುತ್ತಿದೆ. ಪರಿಸರ ಉಳಿದಲ್ಲಿ ಮಾತ್ರ ಮಾನವ ಬದುಕು ಉಳಿಯಲು ಸಾಧ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸೋಮವಾರ ಪುತ್ತೂರು ನಗರಸಭೆ ಸಹಯೋಗದಲ್ಲಿ ಪರ್ಲಡ್ಕದ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ನಗರೀಕರಣದ ಬಿರುಸಿನಲ್ಲಿ ಕಾಡುಗಳು ಕಡಿಮೆಯಾಗುತ್ತಿದೆ. ಆದರೆ ಸರ್ಕಾರದ ಕಾನೂನು ಭದ್ರತೆಯ ಕಾರಣದಿಂದಾಗಿ ವೃಕ್ಷಗಳು […]

ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಉಳಿದಲ್ಲಿ ಮಾತ್ರ ಮಾನವ ಬದುಕಿನ ಉಳಿವು ಸಾಧ್ಯ-ಶಾಸಕ ಅಶೋಕ್ ಕುಮಾರ್ ರೈ Read More »

ಪುತ್ತೂರು ನಗರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು : ಪುತ್ತೂರು ನಗರಭೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪುತ್ತೂರು ನಗರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಶಾಸಕ ಅಶೋಕ್ ಕುಮಾರ್ ರೈಗೆ ಎಸ್‍ಕೆಡಿಆರ್ ಡಿಪಿ ವತಿಯಿಂದ ಅಭಿನಂದನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ವತಿಯಿಂದ ಪುತ್ತೂರು ತಾಲೂಕಿನ ನೂತನ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಲಾಯಿತು. ಭೇಟಿ ಮಾಡಿದ ಸಂದರ್ಭ ಯೋಜನೆ ಮತ್ತು ವೇದಿಕೆ ವತಿಯಿಂದ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜನಜಾಗೃತಿ ಜಿಲ್ಲಾಧ್ಯಕ್ಷರು ಪದ್ಮನಾಭ ಶೆಟ್ಟಿ, ತಾಲೂಕು ಅಧ್ಯಕ್ಷರು ಲೋಕೇಶ್ ಹೆಗ್ಡೆ, ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರು ದುಗ್ಗೆ

ಶಾಸಕ ಅಶೋಕ್ ಕುಮಾರ್ ರೈಗೆ ಎಸ್‍ಕೆಡಿಆರ್ ಡಿಪಿ ವತಿಯಿಂದ ಅಭಿನಂದನೆ Read More »

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಆರಂಭಿಕ ಕಾರ್ಯಕ್ರಮವಾಗಿ ಶಿಕ್ಷಕರಿಗೆ ‘ಸನ್ಮತಿ’ ಕಲಿಕಾ ಕಾರ್ಯಾಗಾರ ನಡೆಯಿತು. ಮೂರು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಬೆಂಗಳೂರು ‘ಸಂವಿತ್’ಸAಶೋಧನಾ ಕೇಂದ್ರದ ಯೋಗ ವಿಭಾಗದ  ಮುಖ್ಯಸ್ಥ ಡಾ.ಸಿಂಧೂ ಮಾತನಾಡಿ, ಯೋಗ ಹಾಗೂ ಮೌಲ್ಯಶಿಕ್ಷಣವು ಪಠ್ಯ ವಿಷಯಗಳಲ್ಲಿ ಬೆಸೆದುಕೊಂಡಿದ್ದು ಇದನ್ನು ಗುರುತಿಸಿ ಮಕ್ಕಳಿಗೆ ಹೇಳಲು ಪ್ರತ್ಯೇಕ ಶಿಕ್ಷಕರ ಅಗತ್ಯವಿರುವುದಿಲ್ಲ. ಪ್ರತಿಯೊಬ್ಬ ಶಿಕ್ಷಕರು ಇದನ್ನು ಗುರುತಿಸಿ ತಮ್ಮಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದರು. ಜಿಲ್ಲಾ ಸಂಯೋಜಕರಾದ ಚಂದ್ರಶೇಖರ ಹಾಗೂ ಸಂಜಯ್ ಕಥಾ

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ

ಪುತ್ತೂರು: ಇಲ್ಲಿನ ಕೃಷ್ಣನಗರ ಅಲಂಬುಡದಲ್ಲಿ ನೂತನವಾಗಿ ಆರಂಭಗೊಂಡಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಜೂನ್ 5ರಂದು ನಡೆಯಿತು. ತಾಳ್ಮೆಯಿಂದ ಮಕ್ಕಳನ್ನು ಬೆಳೆಸಬೇಕು: ಡಾ. ಸುಕುಮಾರ್ ಗೌಡ,ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ತಜ್ಞ ಡಾ. ಸುಕುಮಾರ್ ಗೌಡ, ಮಕ್ಕಳನ್ನು ತಾಳ್ಮೆಯಿಂದ ಬೆಳೆಸಿ. ಆಗ ಮಕ್ಕಳು ಬೆಳೆಯುತ್ತಾರೆ ಎಂದ ಅವರು, ವಿದ್ಯಾಸಂಸ್ಥೆಯ ಸುತ್ತಲಿನ ಕಾಡನ್ನು ಇದೇ ರೀತಿ ಉಳಿಸುಕೊಳ್ಳಿ ಎಂದು‌ ಕಿವಿಮಾತು ಹೇಳಿದರು.ಶಿಕ್ಷಣ ತಜ್ಞ ಎನಿಸಿಕೊಳ್ಳಲು ಕಾಳಜಿ ಇರಬೇಕು. ಆ ಕಾಳಜಿ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ Read More »

ಸಂತ ಫಿಲೋಮಿನಾ ಎಂ.ಎಸ್.ಡಬ್ಲ್ಯೂ ವಿಭಾಗ ವತಿಯಿಂದ ಉಚಿತ ವೈದ್ಯಕೀಯ ಶಿಬಿರ  

ಸವಣೂರು :ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಎಂ. ಎಸ್. ಡಬ್ಲೂ  ವಿಭಾಗ (ಸ್ನಾತಕೋತ್ತರ ಸಮಾಜಕಾರ್ಯ ), ಸವಣೂರು ಗ್ರಾಮ ಪಂಚಾಯತ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸವಣೂರು ವಲಯ  ಇದರ ವತಿಯಿಂದ ಮಂಗಳೂರು ಎ. ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಇದರ ಸಹಯೋಗದೊಂದಿಗೆ ಜೂ.4 ರಂದು ಸವಣೂರು ಉನ್ನತಿಕರೀಸಿದ  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಅರೋಗ್ಯ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ನಡೆಯಿತು . ಕಾರ್ಯಕ್ರಮ ಉದ್ಘಾಟಿಸಿದ ಸಂತ ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲ 

ಸಂತ ಫಿಲೋಮಿನಾ ಎಂ.ಎಸ್.ಡಬ್ಲ್ಯೂ ವಿಭಾಗ ವತಿಯಿಂದ ಉಚಿತ ವೈದ್ಯಕೀಯ ಶಿಬಿರ   Read More »

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

ಪುತ್ತೂರು: ‘ನಮ್ಮಲ್ಲಿ ನಾವು ಪ್ರಮುಖವಾಗಿ ಐದು ಗುಣಗಳಾದ ಯೋಚನಾ ಸಾಮರ್ಥ್ಯ, ಯೋಜನಾ ಬದ್ಧತೆ, ಸಾಮಾನ್ಯಜ್ಞಾನ, ಸಮಯ ಪ್ರಜ್ಞೆ, ಸಮಾಜಮುಖಿ ಬದುಕು ಇವುಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕಾಗಿದೆ ಎಂದು ಬೆಂಗಳೂರಿನ ವಕೀಲ ವಸಂತ ಕೋನಡ್ಕ ಹೇಳಿದರು. ವಿವೇಕಾನAದ ಕನ್ನಡ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾದ ಸಾಧನಾಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ನೊರ್ವ ಅತಿಥಿಯಾಗಿ ಪುತ್ತೂರು ಪಿ.ಎಸ್ ಪ್ರೊಜೆಕ್ಟ್ ಮಾಲಕ ಪ್ರತಾಪಸಿಂಹ ವರ್ವ ವಿದ್ಯಾರ್ಥಿಗಳಿಗೆ ನೀಡಿದ ಅಭಿನಂದನಾ ಪತ್ರ, ಸಸ್ಯದ ಕೊಡುಗೆ ಮಾಡಿದ

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ Read More »

ಪರ್ಪುಂಜ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಪುತ್ತೂರು: ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಮತ್ತು ಪರ್ಪುಂಜ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಜಂಟಿ ಆಶ್ರಯದಲ್ಲಿ  ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಪರ್ಪುಂಜ ಶಾಲೆಯಲ್ಲಿ ಆಚರಿಸಲಾಯಿತು. ಒಳಮೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕುಂಬ್ರ  ಜನಜಾಗೃತಿ ವೇದಿಕ ವಲಯ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ದೀಪ ಬೆಳಗಿಸಿ ಉದ್ಘಾಟಿಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ದಿವಾಕರ ಪೂಜಾರಿ ಪಾಲ್ಗೊಂಡು, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು,ತಾಯಂದಿರು ಮಕ್ಕಳ

ಪರ್ಪುಂಜ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ Read More »

ವಿಶ್ವ ತಂಬಾಕು ದಿನಾಚರಣೆ

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮೆತ್ತಡ್ಕ ವಲಯ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ದಿನಾಚರಣೆಯನ್ನು ಭಾನುವಾರ ಪುತ್ತೂರು ಯೋಜನಾ ಕಚೇರಿಯಲ್ಲಿ ಆಚರಿಸಲಾಯಿತು. ತಾಲೂಕು ಜನಜಾಗ್ರತಿ ಅಧ್ಯಕ್ಷ ಲೋಕೇಶ್ ಹೆಗೆ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಾಮೆತ್ತಡ್ಕ ಒಕ್ಕೂಟ ಅಧ್ಯಕ್ಷೆ ಅಹಲ್ಯ ವಹಿಸಿದ್ದರು.     ಅಖಿಲ ಕರ್ನಾಟಕ ಜನಜಾಗೃತಿ ಯೋಜನಾಧಿಕಾರಿ  ಗಣೇಶ್ ಆಚಾರ್ಯ ಸಂಪನ್ಮೂಲ ವ್ಯೆಕ್ತಿಯಾಗಿ ಮಾತನಾಡಿದರು. ತಾಲ್ಲೂಕು ಯೋಜನಾಧಿಕಾರಿ  ಶಶಿಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಜನಜಾಗೃತಿ ಮಾಜಿ ಅಧ್ಯಕ್ಷ ಮಹಾಬಲ ರೈ, ವಲಯ ಜನಜಾಗೃತಿ ಅಧ್ಯಕ್ಷ ಸತೀಶ್ ನಾಯ್ಕ್ ಉಪಸ್ಥಿತರಿದ್ದರು.

ವಿಶ್ವ ತಂಬಾಕು ದಿನಾಚರಣೆ Read More »

ಶೈಕ್ಷಣಿಕ ಹಬ್‌ ಹಿರಿಮೆಗೆ ಮತ್ತೊಂದು ಗರಿಮೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್  | ಜೂನ್ 5: ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶೋತ್ಸವ

ಪುತ್ತೂರು: ಆಧುನಿಕತೆಯ ವೇಗಕ್ಕೆ ಸಂಸ್ಕಾರ ಪಾಠಗಳು ಮೂಲೆಗುಂಪಾಗುತ್ತಿವೆ ಎನ್ನುವ ಆತಂಕದ ನಡುವೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಭರವಸೆಯ ಸೆಲೆಯಾಗಿ ಟಿಸಿಲೊಡೆದಿದೆ. ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿಯ ನಡುವಿನ ಬನ್ನೂರು ಪುತ್ತೂರು ಪೇಟೆಗೆ ಕೂಗಳತೆಯ ದೂರದಲ್ಲಿದೆ. ಇಲ್ಲಿನ ಅಲುಂಬುಡ ಪ್ರದೇಶದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ತಲೆಎತ್ತಿದೆ. ಪಟ್ಟಣದ್ದೇ ವಾತಾವರಣ ಆದರೆ ತೋಟದ ನಡುವೆ ಶಾಲೆ. ಹೇಗಿರಬಹುದು ನೀವೇ ಊಹಿಸಿ. ಕಣ್ಣು ಸುಸ್ತಾಗಿ ಹೊರ ನೋಡಿದರೆ ಹಚ್ಚ ಹಸುರಿನ ಪರಿಸರ ಕಣ್ಣಿಗೆ ಇಂಪು. ದಿನವಿಡೀ ಸ್ವಚ್ಛ

ಶೈಕ್ಷಣಿಕ ಹಬ್‌ ಹಿರಿಮೆಗೆ ಮತ್ತೊಂದು ಗರಿಮೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್  | ಜೂನ್ 5: ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶೋತ್ಸವ Read More »

error: Content is protected !!
Scroll to Top