ಪುತ್ತೂರು

ಸಾಮೆತ್ತಡ್ಕ ನಿವಾಸಿ ಭರತ್ ಬಿ.ಜೆ. ನಿಧನ

ಪುತ್ತೂರು: ಸಾಮೆತ್ತಡ್ಕ ನಿವಾಸಿ ಭರತ್ ಬಿ.ಜೆ. (36ವ) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಾಮೆತ್ತಡ್ಕ ನಿವಾಸಿ ಜಯಂತ್ ಬಿ. ಅವರ ಪುತ್ರರಾಗಿರುವ ಅವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ, ಒಂದೂವರೆ ವರ್ಷದ ಮಗು, ಸಹೋದರನನ್ನು ಅಗಲಿದ್ದಾರೆ.

ಸಾಮೆತ್ತಡ್ಕ ನಿವಾಸಿ ಭರತ್ ಬಿ.ಜೆ. ನಿಧನ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಪುತ್ತೂರು ನಗರಠಾಣೆ ಸಬ್‍ ಇನ್‍ ಸ್ಪೆಕ್ಟರ್ ಆಂಜನೇಯ ರೆಡ್ಡಿ ಕಾರ್ಯಾಗರ ಉದ್ಘಾಟಿಸಿ, ಮಕ್ಕಳು ಅತೀ ವೇಗವಾಗಿ ಮಾದಕವಸ್ತುಗಳಿಗೆ ಬಲಿಪಶುವಾಗುತ್ತಿದ್ದಾರೆ. ಆದ್ದರಿಂದ ಮಕ್ಕಳು ಆದಷ್ಟು ಮಾದಕ ವಸ್ತುಗಳಿಂದ ದೂರವಿರಬೇಕು. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ, ಸಾಮಾಜಿಕ ಜಾಲತಾಣಗಳಿಂದ ದೂರವಾಗಿರಬೇಕು. ಮಕ್ಕಳು ದುಷ್ಚಟಗಳಿಂದ ದೂರವಿರಲು ಏಕಾಗ್ರತೆ ಮತ್ತು ಒಳ್ಳೆಯ ವಿಷಯಗಳನ್ನು ಗ್ರಹಿಸಿ, ಪಾಠದ ಬಗ್ಗೆ ಹೆಚ್ಚು ಗಮನಹರಿಸಿಬೇಕು ಎಂದು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ Read More »

ತಾಸೆ ಬಳಗದಲ್ಲಿ ಗುರುತಿಸಿಕೊಂಡ ರಕ್ಷಿತ್ ಜೋಗಿ ನಿಧನ

ಪುತ್ತೂರು: ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದರು. ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಾಯಿ, ಅಜ್ಜಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ತಾಸೆ ಬಳಗದಲ್ಲಿ ಗುರುತಿಸಿಕೊಂಡ ರಕ್ಷಿತ್ ಜೋಗಿ ನಿಧನ Read More »

ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಯುವಕ | ಗಂಡು ಮಗುವಿಗೆ ಜನ್ಮವಿತ್ತ ಯುವತಿ

ಪುತ್ತೂರು: ಯುವತಿಯನ್ನು ವಂಚಿಸಿ ಗರ್ಭಿಣಿಯಾಗಿಸಿ ವಂಚಿಸಿದ ಯುವಕನ ಶೋಧ ಕಾರ್ಯ ಮುಂದುವರಿದಿದ್ದು, ಈ ನಡಿಗೆ ಯುವತಿ ನಿನ್ನೆ ರಾತ್ರಿ ಗಂಡು ಮಗಿವಿಗೆ ಜನ್ಮ ನೀಡಿದ್ದಾರೆ. ಸಂತ್ರಸ್ತೆಯೂ ಜೂ 24 ರಂದು ರಾತ್ರಿ ಬಪ್ಪಳಿಗೆ ನಿವಾಸಿ ಇಂಜಿನಿಯರಿಂಗ್‍ ವಿದ್ಯಾರ್ಥಿಯೋರ್ವ ತನಗೆ ಮದುವೆಯಾಗುವುದಾಗಿ ನಂಬಿಸಿ ಇದೀಗ ಮದುವೆಯಾಗಲು ನಿರಾಕರಿಸಿರುವುದಾಗಿ ದೂರು ನೀಡಿದಂತೆ ನಗರ ಠಾಣೆಯಲ್ಲಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹದ ಪ್ರಕರಣ ದಾಖಲಿಸಿದ್ದರು. ಸಂತ್ರಸ್ತ ಯುವತಿಯ ತಾಯಿ ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಿಗದಿ ಮಾಡಿದ್ದರು. ಆದರೇ ನಿಗದಿತ ಸಮಯಕ್ಕೆ ಮಹಿಳೆ

ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಯುವಕ | ಗಂಡು ಮಗುವಿಗೆ ಜನ್ಮವಿತ್ತ ಯುವತಿ Read More »

ವಿದ್ಯಾರ್ಥಿನಿಗೆ ವಂಚಿಸಿದ ವಿದ್ಯಾರ್ಥಿ : ವಿದ್ಯಾರ್ಥಿಗಾಗಿ ಪೊಲೀಸರಿಂದ ಶೋಧಕಾರ್ಯ

ಪುತ್ತೂರು: ಪುತ್ತೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಬಳಿಕ ವಂಚಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ದಿಢೀರ್ ರದ್ದಾದ ಘಟನೆ ಶುಕ್ರವಾರ ನಡೆದಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನಿಂದ ವಂಚನೆಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿರುವ ವಿದ್ಯಾರ್ಥಿನಿಯ ತಾಯಿ ಪುತ್ತೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಿಗದಿ ಪಡಿಸಿದ್ದರು. ಇದರ ಮಾಹಿತಿ ತಿಳಿದ ಪತ್ರಕರ್ತರು ಪತ್ರಿಕಾಗೋಷ್ಠಿಗೆ ಆಗಮಿಸಿದ್ದರು. ಆದರೆ ಕೊನೇಯ ಘಳಿಗೆಯಲ್ಲಿ ಪತ್ರಿಕಾಗೋಷ್ಠಿ ರದ್ದು ಪಡಿಸಲಾಗಿದೆ. ರಾಜಕೀಯ ಒತ್ತಡದಿಂದ ಪತ್ರಿಕಾಗೋಷ್ಠಿ

ವಿದ್ಯಾರ್ಥಿನಿಗೆ ವಂಚಿಸಿದ ವಿದ್ಯಾರ್ಥಿ : ವಿದ್ಯಾರ್ಥಿಗಾಗಿ ಪೊಲೀಸರಿಂದ ಶೋಧಕಾರ್ಯ Read More »

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಪಾದಾರ್ಪಣೆ : ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ

ಪುತ್ತೂರು: ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಶುಕ್ರವಾರ ಪಾದಾರ್ಪಣೆ ಮಾಡಿತು. ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ಪ್ರವೀಣ್‍ ಕುಂಟ್ಯಾನ, ಸತೀಶ್‍ ಪಾಂಬಾರು, ಶಾಖಾ ಅಧ್ಯಕ್ಷರಾದ ತೇಜಸ್ವಿನಿ ಕಟ್ಟಪುಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ, ಶಾಖಾ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಪಾದಾರ್ಪಣೆ : ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ Read More »

ಜು.13 : ಪುತ್ತೂರು ಮರಾಟಿ ಸಮಾಜ ಸೇವಾ ಸಂಘದಿಂದ ‘ವಧು-ವರಾನ್ವೇಷಣಾ ಸಮಾವೇಶ-2025’

ಪುತ್ತೂರು: ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ ಹಾಗೂ ಯುವ ವೇದಿಕೆ ಸಹಭಾಗಿತ್ವದಲ್ಲಿ ವಧು-ವರಾನ್ವೇಷಣಾ ಸಮಾವೇಶ-2025 ಜು.13 ಭಾನುವಾರ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್‍.ದುಗ್ಗಪ್ಪ ನಾಯ್ಕ ಬಡಾವು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸಂಘ ಸ್ವಜಾತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಾರ್ಷಿಕ ಕ್ರೀಡಾಕೂಟ, ಧಾರ್ಮಿಕ ಕಾರ್ಯಕ್ರಮಗಳು, ಪ್ರಾಕೃತಿಕ ವಿಕೋಪ ಪೀಡಿತರು, ಅನಾರೋಗ್ಯ ಪೀಡಿತರಿಗೆ ನಗದು

ಜು.13 : ಪುತ್ತೂರು ಮರಾಟಿ ಸಮಾಜ ಸೇವಾ ಸಂಘದಿಂದ ‘ವಧು-ವರಾನ್ವೇಷಣಾ ಸಮಾವೇಶ-2025’ Read More »

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ | ನಾಡಪ್ರಭು ಕೆಂಪೇಗೌಡರು ನಾಡನ್ನು ಕಟ್ಟಿದ ತುಡಿತ ಅದ್ಭುತ : ಭವ್ಯ ಪಿ.ಆರ್. ನಿಡ್ಪಳ್ಳಿ | ಕೆಂಪೇಗೌಡರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಕೊಂಡಾಗ ರಾಮರಾಜ್ಯವಾಗಲು ಸಾಧ್ಯ : ರವಿ ಮುಂಗ್ಲಿಮನೆ | ಕೆಂಪೇಗೌಡರ ಸಾಧನೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ : ಲೋಕೇಶ್‍ ಎಸ್‍.ಆರ್.

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ನಾಡಪ್ರಭು ಕೆಂಪೇಗೌಡರು ನಾಡನ್ನು ಕಟ್ಟಿದ ತುಡಿತ ಅದ್ಭುತ : ಭವ್ಯ ಪಿ.ಆರ್‍. ನಿಡ್ಪಳ್ಳಿ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್‍.

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ | ನಾಡಪ್ರಭು ಕೆಂಪೇಗೌಡರು ನಾಡನ್ನು ಕಟ್ಟಿದ ತುಡಿತ ಅದ್ಭುತ : ಭವ್ಯ ಪಿ.ಆರ್. ನಿಡ್ಪಳ್ಳಿ | ಕೆಂಪೇಗೌಡರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಕೊಂಡಾಗ ರಾಮರಾಜ್ಯವಾಗಲು ಸಾಧ್ಯ : ರವಿ ಮುಂಗ್ಲಿಮನೆ | ಕೆಂಪೇಗೌಡರ ಸಾಧನೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ : ಲೋಕೇಶ್‍ ಎಸ್‍.ಆರ್. Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ | ತೆಂಗಿನ ಬೆಲೆ ಏರಿಕೆಯಲ್ಲಿ ತೆಂಗು ರೈತ ಉತ್ಪಾದಕರ ಕಂಪೆನಿಯ ಮಹತ್ವ ಬಹಳಷ್ಟಿದೆ : ಸುಭಾಸ್ ರೈ ಕಡಮಜಲು | ಧಾರ್ಮಿಕ, ಔಷಧವಾಗಿ ತೆಂಗು ಮಹತ್ವ ಪಡೆದಿದೆ : ಶಂಕರ ಭಟ್‍ ಬದನಾಜೆ | ಮುಂದಿನ ದಿನಗಳಲ್ಲಿ ಕಂಪೆನಿಯನ್ನು ದೇಶಾದ್ಯಂತ ವಿಸ್ತರಿಸುವ ಯೋಜನೆಯಿದೆ : ಕುಸುಮಾಧರ್ ಎಸ್‍.ಕೆ.

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ ಪುತ್ತೂರು ಜೈನಭವನದಲ್ಲಿ ಗುರುವಾರ ನಡೆಯಿತು. ಕಂಪೆನಿ ಸಲಹೆಗಾರ ಶಂಕರ ಭಟ್‍ ಬದನಾಜೆ ಮಹಾಸಭೆ ಉದ್ಘಾಟಿಸಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಅದರಲ್ಲೂ ಸಮುದ್ರ ತೀರ ಪ್ರದೇಶದಲ್ಲಿ ತೆಂಗು ಬೆಳೆ ಅಧಿಕವಾಗಿ ಬೆಳೆಯುತ್ತದೆ. ಕೇರಳ ಎಂಬ ಹೆಸರು ಬಂದಿದ್ದೇ ತೆಂಗಿನಿಂದಾಗಿ. ಕಲ್ಪವೃಕ್ಷ ಎಂದೇ ಕರೆಯಲ್ಪಡುವ ತೆಂಗು ಪ್ರಸ್ತುತ ಮೌಲ್ಯವರ್ಧಿತ ಉತ್ಪನ್ನಗಳಲ್ಲಿ ದೇಶಾದ್ಯಂತ ತನ್ನದೇ ಆದ ಛಾಪನ್ನು ಮೂಡಿಸಿದೆ. ಔಷಧವಾಗಿಯೂ ತೆಂಗಿನ ಮರದ ವಿವಿಧ ಭಾಗಗಳು ಉಪಯೋಗಿಸಲ್ಪಡುತ್ತಿದೆ. ಸುಮಾರು

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ | ತೆಂಗಿನ ಬೆಲೆ ಏರಿಕೆಯಲ್ಲಿ ತೆಂಗು ರೈತ ಉತ್ಪಾದಕರ ಕಂಪೆನಿಯ ಮಹತ್ವ ಬಹಳಷ್ಟಿದೆ : ಸುಭಾಸ್ ರೈ ಕಡಮಜಲು | ಧಾರ್ಮಿಕ, ಔಷಧವಾಗಿ ತೆಂಗು ಮಹತ್ವ ಪಡೆದಿದೆ : ಶಂಕರ ಭಟ್‍ ಬದನಾಜೆ | ಮುಂದಿನ ದಿನಗಳಲ್ಲಿ ಕಂಪೆನಿಯನ್ನು ದೇಶಾದ್ಯಂತ ವಿಸ್ತರಿಸುವ ಯೋಜನೆಯಿದೆ : ಕುಸುಮಾಧರ್ ಎಸ್‍.ಕೆ. Read More »

ಶ್ರೀ ಕ್ಷೇತ್ರ ಬಾರ್ಯ ಆಡಳಿತ ಸೇವಾ ಟ್ರಸ್ಟಿನ ಸಭೆ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ  ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಬಾರ್ಯದಲ್ಲಿ ಜರಗಿತು. ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ಪ್ರಥಮ ಬಾರಿ ಜರಗಿದ ಶ್ರೀ ಮಹಾವಿಷ್ಣುಯಾಗದ ಫಲ ಶ್ರುತಿಯ ಬಗ್ಗೆ, ದೇವಾಲಯ ಪರಿಸರದ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು.ಟ್ರಸ್ಟಿನ ಕಾರ್ಯದರ್ಶಿ ಪ್ರಶಾಂತ ಪೈ ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು.  ಸಭೆಯಲ್ಲಿ ಉಪಾಧ್ಯಕ್ಷ ನಾರಾಯಣಗೌಡ, ಕೋಶಾಧಿಕಾರಿ ಸೇಸಪ್ಪ

ಶ್ರೀ ಕ್ಷೇತ್ರ ಬಾರ್ಯ ಆಡಳಿತ ಸೇವಾ ಟ್ರಸ್ಟಿನ ಸಭೆ Read More »

error: Content is protected !!
Scroll to Top