ಪುತ್ತೂರು

ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸಿಐಟಿಯು ಆಗ್ರಹ | ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ

ಪುತ್ತೂರು: ಮಣಿಪುರ ರಾಜ್ಯದಲ್ಲಿ ಮೀಸಲಾತಿ ಹೆಸರಿನಲ್ಲಿ ಗಲಭೆ ಸೃಷ್ಟಿಸಿ ಚರ್ಚ್‍ ಹಾಗೂ ಕ್ರಿಶ್ಚಿಯನ್ನರ ಮೇಲಾಗುತ್ತಿರುವ ವ್ಯಾಪಕ ದಾಳಿಯನ್ನು ಖಂಡಿಸಿ, ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ತಾಲೂಕು ಸಿಐಟಿಯು ವತಿಯಿಂದ ಪ್ರತಿಭಟನೆ ಮಂಗಳವಾರ ತಾಲೂಕು ಆಡಳಿತ ಸೌಧದ ಎದುರು ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿಐಟಿಯು ಮುಖಂಡ, ನ್ಯಾಯವಾದಿ ಬಿ.ಎಂ.ಭಟ್‍ ಮಾತನಾಡಿ, ಮೀಸಲಾತಿ ಹೆಸರಲ್ಲಿ ಧರ್ಮಗಳ ಮಧ್ಯೆ ಮೈಮನಸ್ಸು ಹುಟ್ಟಿಸಿ ಸಮಾಜದಲ್ಲಿ ಶಾಂತಿ ಕದಡುವುದತ್ತಿರುವುದು ಖಂಡನೀಯವಾಗಿದ್ದು, ಅಲ್ಲಿಯ ಕರ್ಪ್ಯೂ ಹೇರುವ ಮೂಲಕ ಜನತೆಯನ್ನು ಗೃಹಬಂಧನದಲ್ಲಿರಿಸುವಂತೆ ಮಾಡಿದೆ. ಕಳೆದ ಕೊರೋನಾ ಸಂದರ್ಭದಲ್ಲೂ […]

ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸಿಐಟಿಯು ಆಗ್ರಹ | ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ Read More »

ಗೃಹ ಸಚಿವ ಪರಮೇಶ್ವರವರಿಗೆ ಸತೀಶ್ ಕುಮಾರ್ ಕೆಡೆಂಜಿ ಗೌರವಾರ್ಪಣೆ

ಮಂಗಳೂರು: ರಾಜ್ಯದ ನೂತನ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ್ ಕುಮಾರ್ ಕೆಡೆಂಜಿ ಅವರು ಗೌರವಿಸಿದರು. ಮಂಗಳೂರಿಗೆ ಆಗಮಿಸಿದ್ದ ಗೃಹ ಸಚಿವರನ್ನು ಭೇಟಿಯಾದ ಸತೀಶ್ ಕೆಡೆಂಜಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಗೃಹ ಸಚಿವ ಪರಮೇಶ್ವರವರಿಗೆ ಸತೀಶ್ ಕುಮಾರ್ ಕೆಡೆಂಜಿ ಗೌರವಾರ್ಪಣೆ Read More »

ಕಡಬ ಪತ್ರಕರ್ತರಿಂದ ಸುಳ್ಯ ಶಾಸಕಿಯವರಿಗೆ ಅಭಿನಂದನೆ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರ ನೇತೃತ್ವದಲ್ಲಿ ಶಾಸಕರನ್ನು ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು  ಕ್ಷೇತ್ರದ ಅಭಿವೃದ್ಧಿಗೆ  ಪತ್ರಕರ್ತರ ಸಹಕಾರ ಕೋರಿದರು.  ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ. ಕಾರ್ಯದರ್ಶಿ ವಿಜಯಕುಮಾರ್

ಕಡಬ ಪತ್ರಕರ್ತರಿಂದ ಸುಳ್ಯ ಶಾಸಕಿಯವರಿಗೆ ಅಭಿನಂದನೆ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಮನೆಗೆ ಭೇಟಿ

ಸುಳ್ಯ: ಸುಳ್ಯ ವಿಧಾನ ಸಭಾಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯರು ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರನ್ನು ಮನೆಯವರು ಗೌರವಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ, ರಾಕೇಶ್ ರೈ ಕೆಡೆಂಜಿ, ಸಂತೋಷ್ ಕುತ್ತಮೊಟ್ಟೆ ಮತ್ತು ಮಹಿಳಾ ಪ್ರಮುಖರು, ಮನೆಯವರು ಉಪಸ್ಥಿತರಿದ್ದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಮನೆಗೆ ಭೇಟಿ Read More »

ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಪಿಎಂಶ್ರೀ ಯೋಜನೆಯಡಿ ಆಯ್ಕೆಯಾದ ವೀರಮಂಗಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ  ದಿನಾಚರಣೆಯನ್ನು ಆಚರಿಸಲಾಯಿತು. ಗಿಡಗಳನ್ನು ನೀಡುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ಕೌಟ್ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ಗಿಡಗಳನ್ನು ಮನೆಯಿಂದ ತಂದು ನೀಡಲು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆಯನ್ನು ಹಾಡಿದರು.  ಬಳಿಕ ಸ್ಲೋಗನ್ ಗಳನ್ನು ಹಾಕಿ ಮಕ್ಕಳಿಂದ ಹೇಳಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲಾಖೆಯ ವತಿಯಿಂದ ನೀಡಲಾದ  ಮಾಹಿತಿಯ ವೀಡಿಯೋವನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ

ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ

ಪುತ್ತೂರು: ಪರಿಸರ ಪ್ರಜ್ಞೆಯನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ್ದು ಇಂದಿನ ಅಗತ್ಯ  ಎಂದು  ಶಿಕ್ಷಕಿ ಲತಾ ಯು. ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ  ‘ವಿಶ್ವಪರಿಸರ ದಿನ’ ದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಿಡವೊಂದಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕನ್ನಡ ಶಿಕ್ಷಕ ಸುಧೀಶ್ ಕೆ , ವಿಜ್ಞಾನ ಶಿಕ್ಷಕಿ ಮಮತಾ ರಾವ್. ಬಿ ಪರಿಸರ ದಿನಾಚರಣೆಯ ಮಹತ್ವ ವಿವರಿಸಿದರು.  ವಿದ್ಯಾರ್ಥಿಗಳು ಪರಿಸರ ಗೀತೆಗಳನ್ನು ಹಾಡಿದರು. ಗಿಡಮರಗಳ ಮಹತ್ವ ಸಾರುವ ನೃತ್ಯವನ್ನು ಗೀತಾಲಕ್ಷ್ಮೀ  ಮತ್ತು

ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ Read More »

ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಸುಳ್ಯ ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಸಂಕಲ್ಪಕ್ಕೆ ಸಹಕರಿಸಿ: ನೂತನ ಶಾಸಕಿ ಭಾಗೀರಥಿ ಮುರುಳ್ಯ

ಕಡಬ : ಅಧಿಕಾರಿಗಳು ಲಂಚ ಪ್ರಪಂಚದಿಂದ ಹೊರಬಂದು  ಭ್ರಷ್ಟಾಚಾರ ಮುಕ್ತವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನನ್ನ ಕನಸಿನ ಸುಳ್ಯ ಕ್ಷೇತ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು, ಆ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ಮಾಡಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಸೋಮವಾರ ಕಡಬ ತಾಲೂಕು ಪಂಚಾಯಿತಿಯ ನೂತನ ಕಟ್ಟಡದ  ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನನ್ನ ಕನಸಿನ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಧಿಕಾರಿಗಳು ಏನು ಮಾಡಬೇಕು ಎಂದು ಚರ್ಚಿಸಿದರು.

ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಸುಳ್ಯ ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಸಂಕಲ್ಪಕ್ಕೆ ಸಹಕರಿಸಿ: ನೂತನ ಶಾಸಕಿ ಭಾಗೀರಥಿ ಮುರುಳ್ಯ Read More »

ಕಾಂಗ್ರೇಸ್ ಮುಖಂಡ ಜಿ.ಕೃಷ್ಣಪ್ಪ ರಿಂದ ಕಡಬ ಮಿನಿವಿಧಾನ ಸೌಧ ಪರಿಶೀಲನೆ | ಪರಾಜಿತ ಅಭ್ಯರ್ಥಿಯಿಂದ ಭರಪೂರ ಭರವಸೆ

ಕಡಬ : ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಉಸ್ತುವಾರಿ ಕಾಂಗ್ರೇಸ್ ಮುಖಂಡ ಪರಾಜಿತ ಎಂಎಲ್‌ಎ  ಅಭ್ಯರ್ಥಿ ಕೃಷ್ಣಪ್ಪ ಜಿ ಅವರು ಸೋಮವಾರ ಕಡಬ ಮಿನಿ ವಿಧಾನ ಸೌಧ ಹಾಗೂ ಇತರ ಕಛೇರಿಗಳಿಗೆ ಭೇಟಿ ನೀಡಿ ಕಡಬ ಅಭಿವೃದ್ಧಿಯ ಬಗ್ಗೆ ಭರವಸೆ ನೀಡಿದರು. ಮಿನಿ ವಿಧಾನ ಸೌಧಕ್ಕೆ ಭೇಟಿ ನಮ್ಮ ಕಾಂಗ್ರೇಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಂಜೂರು ಮಾಡಿತ್ತು,  ಕಾಂಗ್ರೇಸ್ ಕಟ್ಟಿದ ಕಡಬದ ಆಡಳಿತ ಸೌಧ ಮಿನಿ ವಿಧಾನಸೌಧವನ್ನು ಈಗಾಗಲೇ ಮಾಜಿಮುಖ್ಯಮುಖ್ಯಂತ್ರಿಗಳು ಉದ್ಘಾಟಿಸಿದ್ದಾರೆ. ಆದರೆ ಅಲ್ಲಿ ಯಾವುದೇ ಕೆಲಸಗಳು

ಕಾಂಗ್ರೇಸ್ ಮುಖಂಡ ಜಿ.ಕೃಷ್ಣಪ್ಪ ರಿಂದ ಕಡಬ ಮಿನಿವಿಧಾನ ಸೌಧ ಪರಿಶೀಲನೆ | ಪರಾಜಿತ ಅಭ್ಯರ್ಥಿಯಿಂದ ಭರಪೂರ ಭರವಸೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ

ಪುತ್ತೂರು: ಮಕ್ಕಳ ಮೇಲೆ ನಡೆಯುವ ಲೈಂಗಿಕ ಹಾಗೂ ಇತರೇ ಪ್ರಕಾರದ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ 2012ರಲ್ಲಿ ಜಾರಿಗೆ ಬಂದಿದ್ದೇ ಪೋಕ್ಸೋ ಕಾಯ್ದೆ. ಅದು ಯಶಸ್ವಿಯಾಗಬೇಕಾದರೆ ಅದರ ಕುರಿತು ಮಾಹಿತಿಯನ್ನು ಸಮಾಜದ ಎಲ್ಲರಿಗೂ ತಿಳಿಸಬೇಕಾದ ಅನಿವಾರ್ಯತೆಯಿದೆ ಎಂದು ವಕೀಲ ಶ್ಯಾಮ್ ಪ್ರಸಾದ್ ಕೈಲಾರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅರಿವು ನೆರವು ಘಟಕದ ವತಿಯಿಂದ ನಡೆದ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012ರ ಕುರಿತು ವಿಶೇಷ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ Read More »

ಅಕ್ಷಯ ಕಾಲೇಜಿನ B.Com with Hospitality Management  ನ ಒಂದು ದಿನದ ಶೈಕ್ಷಣಿಕ ಪ್ರವಾಸ

ಪುತ್ತೂರು: ಇತ್ತೀಚೆಗೆ   ಅಕ್ಷಯ ಕಾಲೇಜಿನ ವೃತ್ತಿಪರ ಕೋರ್ಸ್ BCom with Aviation & Hospitality Managemnt  ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ wings of fortune Aviation ಆಸೋಸಿಯೆಶನಿಂದ ಒಂದು ದಿನದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಏವಿಯೇಷನ್ ಹಾಗೂ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ನ ಕುರಿತಾಗಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ತೆರಳಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಾರ್ಯಚರಣೆಗಳನ್ನು ತಿಳಿದುಕೊಂಡು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ  ಬೆಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ಧಾಣಕ್ಕೆ

ಅಕ್ಷಯ ಕಾಲೇಜಿನ B.Com with Hospitality Management  ನ ಒಂದು ದಿನದ ಶೈಕ್ಷಣಿಕ ಪ್ರವಾಸ Read More »

error: Content is protected !!
Scroll to Top