ಪುತ್ತೂರು

ಕೊಯಿಲದ ಯುವಕ  ವಿದೇಶದಲ್ಲಿ ಆತ್ಮಹತ್ಯೆ

ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ  ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿರಾಷ್ಟ್ರದ  ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು […]

ಕೊಯಿಲದ ಯುವಕ  ವಿದೇಶದಲ್ಲಿ ಆತ್ಮಹತ್ಯೆ Read More »

24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 4 ಕೂಟ ದಾಖಲೆ ಸಹಿತ 16 ಚಿನ್ನದ ಪದಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ೪ ನೂತನ ಕೂಟ ದಾಖಲೆಗಳ ಸಹಿತ 16 ಚಿನ್ನದ ಪದಕ, 11 ಬೆಳ್ಳಿಯ ಪದಕ ಮತ್ತು 11 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಮಹಿಳೆಯರ ವಿಭಾಗದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಮಹಿಳೆಯರ ವಿಭಾಗದ ಚಾಂಪಿಯನ್‌ ಶಿಪ್ ಟ್ರೋಫಿ, ಪುರುಷರ ವಿಭಾಗದ ಚಾಂಪಿಯನ್‌ನಲ್ಲಿ ಪ್ರಥಮ ರನ್ನರ್ ಅಪ್ ಟ್ರೋಫಿ ಹಾಗೂ ಕೂಟದ ಸಮಗ್ರ

24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 4 ಕೂಟ ದಾಖಲೆ ಸಹಿತ 16 ಚಿನ್ನದ ಪದಕ Read More »

ಶಿವಮಣಿ ಕಲಾವಿದರ ಹುಟ್ಟುಹಬ್ಬ ಸಂಭ್ರಮಾಚರಣೆ

ಪುತ್ತೂರು: ಇಲ್ಲಿನ ನೆಹರುನಗರದ ಶಿವನಗರ ಶಿವಮಣಿ ಕಲಾ ಸಂಘದ ವತಿಯಿಂದ ಕಲಾವಿದರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಭಾನುವಾರ ಆಚರಿಸಲಾಯಿತು. ಶಿವಮಣಿ ಬಾಲ ಸಮಿತಿಯ ಮುಂದಿನ ಯೋಜನೆಗಳು ಹಾಗೂ ಕಾರ್ಯವೈಖರಿಯನ್ನು ಸಭೆಯ ಮುಂದಿಟ್ಟ ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ಉತ್ತಮ ಸಂಘಟನೆ, ಹೊಸ ಹುರುಪು, ಆತ್ಮವಿಶ್ವಾಸ, ಪ್ರಾಮಾಣಿಕತೆ ನಮ್ಮ ಜೀವನದ ಯಶಸ್ಸಿನ ಸೂತ್ರಗಳು. ಈ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕಲೆ, ‘ಕಲಿಕೆ’ ಹಾಗೂ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಂಘದ ಉಪಾಧ್ಯಕ್ಷ, ಕಲಾವಿದ ಕೃಷ್ಣಪ್ಪ ಶಿವಾಮಣಿ ಅವರು

ಶಿವಮಣಿ ಕಲಾವಿದರ ಹುಟ್ಟುಹಬ್ಬ ಸಂಭ್ರಮಾಚರಣೆ Read More »

ಅಂಬಿಕಾ ಸಿ. ಬಿ. ಎಸ್. ಇ ವಿದ್ಯಾಲಯದಲ್ಲಿ ಪೋಷಕರ ಸಭೆ

ಪುತ್ತೂರು : ಪೋಷಕರು ತಮ್ಮ ಮಕ್ಕಳಿಗೆ ಧನಾತ್ಮಕ ಚಿಂತನೆಗಳ ಮೂಲಕ ಪ್ರತಿಕ್ರಿಯೆಯನ್ನು ನೀಡಿ ಪ್ರೋತ್ಸಾಹಿಸಬೇಕು. ಮಕ್ಕಳು ತಪ್ಪು ಮಾಡಿದಾಗ ಅದನ್ನು ನಕಾರಾತ್ಮಕವಾಗಿ  ಪರಿಗಣಿಸದೆ ಆ ತಪ್ಪನ್ನು ತಿದ್ದಿ ಸನ್ನಿವೇಶವನ್ನು ನಿಭಾಯಿಸಿಸುವುದು ಪೋಷಕರ ದೊಡ್ಡ ಜವಾಬ್ದಾರಿಯಾಗಿದೆ ಎಂದು ಅಂಬಿಕಾ ಸಿ ಬಿ ಎಸ್ ಇ ಶಾಲಾ   ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಹೇಳಿದರು. ಅವರು 2023 -24 ನೇ ಸಾಲಿನ  ಪೂರ್ವ ಪ್ರಾಥಮಿಕ  ವರ್ಷದ ಮೊದಲ ಪೋಷಕರ ಸಭೆಯಲ್ಲಿ ಮಾತನಾಡಿದರು. ಪೂರ್ವ ಪ್ರಾಥಮಿಕ ಶಾಲಾ ಹಂತ ಅಂದರೆ ಮೂರು,

ಅಂಬಿಕಾ ಸಿ. ಬಿ. ಎಸ್. ಇ ವಿದ್ಯಾಲಯದಲ್ಲಿ ಪೋಷಕರ ಸಭೆ Read More »

ರಾಜ್ಯ, ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ ವಿದ್ಯಾರ್ಥಿನಿ ಸಾಧಕರಿಗೆ ಗೌರವಾರ್ಪಣೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕಿನ ಕರ್ನೂರು ಒಕ್ಕೂಟದ ವತಿಯಿಂದ ಕಬಡ್ಡಿ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ವಿದ್ಯಾರ್ಥಿನಿಯರಾದ  ಕುಮಾರಿ ಪ್ರನ್ವಿಕಾ ರೈ, ಕುಮಾರಿ ಯತೀಕ್ಷ ರೈ ಹಾಗೂ ಕೃತಿಕಾ ಜಿ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷೆ ಆಶಾಲತಾ ರೈ, ಅರಿಯಡ್ಕ ವಲಯ ಅಧ್ಯಕ್ಷ ದಿನೇಶ್ ರೈ, ಪುತ್ತೂರು ತಾಲೂಕು ಆಂತರಿಕ ಲೆಕ್ಕ ಪರಿಶೋಧಕರಾದ ಲತಾ ಮೇಡಂ, ಉಪಾಧ್ಯಕ್ಷ ಸುಬ್ಬಣ್ಣ ರೈ ಕಲ್ಲಾಜೆ, , ವಲಯ ಮೇಲ್ವಿಚಾರಕ ಹರೀಶ್

ರಾಜ್ಯ, ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ ವಿದ್ಯಾರ್ಥಿನಿ ಸಾಧಕರಿಗೆ ಗೌರವಾರ್ಪಣೆ Read More »

ಸುಂದರಿ ವಿ. ಶೆಟ್ಟಿ ನಿಧನ

ಪುತ್ತೂರು: ಕುರಿಯ ಗ್ರಾಮದ ಕೊಡ್ಲಾರು ನಿವಾಸಿ ಸುಂದರಿ ವಿ. ಶೆಟ್ಟಿ (79) ಸ್ವಗೃಹದಲ್ಲಿ ಶನಿವಾರ ನಿಧನರಾದರು. ವಿಜಯಬ್ಯಾಂಕ್ ನಿವೃತ್ತ ಮೆನೇಜರ್ ಪಿ.ವಿಠ್ಠಲ ಶೆಟ್ಟಿ ಕೊಡ್ಲಾರು ಅವರ ಪತ್ನಿಯಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರುವ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸುಂದರಿ ವಿ. ಶೆಟ್ಟಿ ನಿಧನ Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ಗುಡ್ಡಕ್ಕೆ ಬೆಂಕಿ| ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಪುತ್ತೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗುಡ್ಡಕ್ಕೆ ಬೆಂಕಿ ತಗುಲಿ ಗುಡ್ಡ ಬಹುತೇಕ ಸುಟ್ಟುಹೋದ ಘಟನೆ ಭಾನುವಾರ ಸಂಜೆ ಕೆಯ್ಯೂರು ಗ್ರಾಮದ ನೂಜಿ ಎಂಬಲ್ಲಿ ನಡೆದಿದೆ. ನೂಜಿ ಮುತ್ತಪ್ಪ ರೈ ಎಂಬವರ ಮನೆಯ ಸಂಪರ್ಕದ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದ ಪರಿಣಾಮ ತಂತಿಯಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಬಿದ್ದ ಮಾಹಿತಿ ತಿಳಿದು ದಂಬೆಕ್ಕಾನ ಸದಾಶಿವ ರೈ ಹಾಗೂ ಎ.ಕೆ. ಜಯರಾಮ ರೈ ಅವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳದವರು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ಗುಡ್ಡಕ್ಕೆ ಬೆಂಕಿ| ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ Read More »

ಕಾಡಾನೆ ದಾಳಿಯಿಂದ-ವ್ಯಕ್ತಿಗೆ ಗಾಯ

ನೆಲ್ಯಾಡಿ: ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಮೇ.28ರಂದು ಮಧ್ಯಾಹ್ನ ನಡೆದಿದೆ. ಇಚ್ಲಂಪಾಡಿ ನಿವಾಸಿ ವಿಜುಕುಮಾರ್ ಕಾಡಾನೆ ದಾಳಿಯಿಂದ ಗಾಯಗೊಂಡವರಾಗಿದ್ದಾರೆ. ಇವರು ಮಧ್ಯಾಹ್ನ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಇಚ್ಲಂಪಾಡಿ ಗ್ರಾಮದ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಗಂಭೀರ ಗಾಯಗೊಂಡಿರುವ ವಿಜುಕುಮಾರ್ ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಪುತ್ತೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಎರಡು ಕಾಡಾನೆಗಳು ಬೀಡು

ಕಾಡಾನೆ ದಾಳಿಯಿಂದ-ವ್ಯಕ್ತಿಗೆ ಗಾಯ Read More »

ಮೇ 30 : ವಿಟ್ಲದಲ್ಲಿ ನೂತನ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಯುವರ ಅಭಿನಂದನಾ ಸಭೆ ಮೇ 30 ಮಂಗಳವಾರ ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಲಿದೆ, ಮಧ್ಯಾಹ್ನ 3.30 ಕ್ಕೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ನಡೆಯಲಿದೆ. ಆದರಿಂದ ಪಕ್ಷದ ಮುಖಂಡರು, ಮುಂಚೂಣಿ ಘಟಕದ ಪದಾದಿಕಾರಿಗಳು,ವಲಯ , ಬೂತ್ ಮಟ್ಟದ ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹೆಚ್ಚಿನ 

ಮೇ 30 : ವಿಟ್ಲದಲ್ಲಿ ನೂತನ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ Read More »

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಉದ್ಘಾಟನಾ ಸಮಾರಂಭ, ಜಾಗ ಖರೀದಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ

ಕಡಬ :  ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸ ಜಾಗ ಖರೀದಿಯ ಬಗ್ಗೆ ಮತ್ತು ಸಂಘದ ಉದ್ಘಾಟನಾ ಸಮಾರಂಭ ಅಂಗವಾಗಿ ಪೂರ್ವಭಾವಿ ಸಭೆ ಭಾನುವಾರ ನಡೆಯಿತು. ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಶಾ ತಿಮ್ಮಪ್ಪ ಗೌಡ, ಕೇಶವ ಗೌಡ ಎಸ್ ಆರ್ ಕೆ, ಚಂದ್ರಶೇಖರ ಗೌಡ, ತಮ್ಮಯ್ಯ ಗೌಡ, ಊರ ಗೌಡರು , ತಾಲೂಕು ಕಾರ್ಯದರ್ಶಿಗಳು, ಹಿರಿಯರು , ಪದಾಧಿಕಾರಿಗಳು. ಸಮಾಜದ ಮುಖ್ಯಸ್ಥರು

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಉದ್ಘಾಟನಾ ಸಮಾರಂಭ, ಜಾಗ ಖರೀದಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ Read More »

error: Content is protected !!
Scroll to Top