ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ-ಡಿಪಾರ್ಟ್ಮೆಂಟ್  ಐಟಿ ಫೆಸ್ಟ್ ವಿಶನ್ -2023

ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಬೆಳ್ಳಿಹಬ್ಬಸಭಾಂಗಣದಲ್ಲಿ ವಿಷನ್-2023 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಯೋಜಿಸಲಾಯಿತು.  ಸಮಾರಂಭದ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿಪ್ರಕಾಶ್ ಮೊಂತೆರೊ ವಹಿಸಿ ಮಾತನಾಡಿ,ಇಂದಿನ ಸ್ಪರ್ಧಾತ್ಮಕ ವಾತಾವರಣದಲ್ಲಿ ಇಂತಹ ಸ್ಪರ್ಥೆಗಳು ವಿದ್ಯಾರ್ಥಿಗಳಿಗೆ ತಮ್ಮಪ್ರತಿಭೆ ಹಾಗೂ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಕಾರಿಯಾಗುತ್ತವೆ. ಕಾಲೇಜು ಮಟ್ಟದ ಸ್ಪರ್ಧೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ದ್ವಿಗುಣಗೊಳಿಸುತ್ತವೆ ಎಂದರು. ವಿದ್ಯಾರ್ಥಿನಿಯರಾದ ದಿಶಾ ಮತ್ತು ಅಪೂರ್ವ ಪ್ರಾರ್ಥಿಸಿದರು. ವಿನ್ಯಾಕಲ್ ಐ ಟಿ ಕ್ಲಬ್  ಸಂಯೋಜಕಿ ರಾಜೇಶ್ವರಿ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗ ಮುಖ್ಯಸ್ಥ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ-ಡಿಪಾರ್ಟ್ಮೆಂಟ್  ಐಟಿ ಫೆಸ್ಟ್ ವಿಶನ್ -2023 Read More »

ಪುತ್ತೂರು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಕೊನೆ | ದ.ಕ.ಜಿಲ್ಲಾಧಿಕಾರಿ ಆಡಳಿತಾಧಿಕಾರಿಯಾಗಿ ನೇಮಕ

ಪುತ್ತೂರು: ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌಡಿ ಅಧಿಕಾರವಧಿ ಮುಗಿದಿದ್ದು, ಆಡಳಿತಾಧಿಕಾರಿಯಾಗಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ. ಮುಂದಿನ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕ್ರಿಯೆ ನಡೆದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಅಧಿಕಾರ ವಹಿಸಿಕೊಳ್ಳುವ ತನಕ ಜಿಲ್ಲಾಧಿಕಾರಿಯವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರನ್ನು ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿ ಮೇ 25 ರಂದು ಆದೇಶ ಹೊರಡಿಸಲಾಗಿತ್ತು.

ಪುತ್ತೂರು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಕೊನೆ | ದ.ಕ.ಜಿಲ್ಲಾಧಿಕಾರಿ ಆಡಳಿತಾಧಿಕಾರಿಯಾಗಿ ನೇಮಕ Read More »

ರಸ್ತೆ ಬದಿ ನೀರು ಹೋಗುವ ಚರಂಡಿ ನಾಪತ್ತೆ | ಜೆ.ಜೆ.ಎಂ. ಯೋಜನೆಯ ಪೈಪ್ ಲೈನ್ ಅಳವಡಿಕೆ ವೇಳೆ ಘಟನೆ

ನಿಡ್ಪಳ್ಳಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯು ಒಂದು. ಮನೆ ಮನೆಗೆ ಕುಡಿಯುವ ನೀರು ಪೂರೈಕೆಗಾಗಿ ಇರುವ ಈ ಯೋಜನೆಯಿಂದ ನಿಡ್ಪಳ್ಳಿ ಗ್ರಾಮದಲ್ಲಿ ಕೊಳವೆ ಬಾವಿ ಕೊರೆದು‌ ಟ್ಯಾಂಕ್ ನಿರ್ಮಾಣ ನಡೆದಿದೆ. ಇದೀಗ ಕಾಮಗಾರಿ ಮುಂದುವರಿದು ರಸ್ತೆ ಬದಿಯಲ್ಲಿ ಪೈಪು ಅಳವಡಿಕೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಹೆಚ್ಚಿನ ಕಡೆ ರಸ್ತೆ ಬದಿಯ ಚರಂಡಿ ಮೂಲಕವೇ ಗುಂಡಿ ತೆಗೆದು ಪೈಪು ಆಳವಡಿಸಲಾಗುತ್ತಿದೆ. ಆದರೆ ಪೈಪ್ ಅಳವಡಿಸಿದ ನಂತರ ಮೊದಲಿದ್ದ ಚರಂಡಿ ನಾಪತ್ತೆ. ನಿಡ್ಪಳ್ಳಿ ಗ್ರಾಮದ ಕೊಪ್ಪಳ

ರಸ್ತೆ ಬದಿ ನೀರು ಹೋಗುವ ಚರಂಡಿ ನಾಪತ್ತೆ | ಜೆ.ಜೆ.ಎಂ. ಯೋಜನೆಯ ಪೈಪ್ ಲೈನ್ ಅಳವಡಿಕೆ ವೇಳೆ ಘಟನೆ Read More »

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ | ಮರು ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುವೆ’: ಪುತ್ತೂರು  ಶಾಸಕ ಅಶೋಕ್ ರೈ

ಪುತ್ತೂರು : ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುವ  ವಿಚಾರ ಈಗಾಗಲೇ ವರದಿಯಾಗಿದ್ದು,  ಈ ಕುರಿತು ಮುಖ್ಯಮಂತ್ರಿಗಳ ಜತೆ ಮತನಾಡುವೆ ಎಂದು  ಪುತ್ತೂರು ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಮಾಧ್ಯಮ ವರದಿಯನ್ನು ನೋಡಿದ ಬಳಿಕ ನನಗೆ ತಿಳಿದಿದೆ. ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನಮೂದಿಸಿದ್ದು,ಇದು

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ | ಮರು ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುವೆ’: ಪುತ್ತೂರು  ಶಾಸಕ ಅಶೋಕ್ ರೈ Read More »

ಮಾನಕ ಜ್ಯುವೆಲ್ಲರ‍್ಸ್‌ನ ನೂತನ ಮಳಿಗೆ ಉದ್ಘಾಟನೆ | ಹತ್ತೂರಿನಲ್ಲಿ ಮನೆಮಾತಾಗಿರುವ ಮಾನಕ ಜ್ಯುವೆಲ್ಲರ್ಸ್

ಪುತ್ತೂರು: ಪುತ್ತೂರಿನಲ್ಲಿ ಕಳೆದ 18 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಮಾನಕ ಜ್ಯುವೆಲ್ಲರರ್ಸ್ ನ ನೂತನ ಬೃಹತ್ ಜ್ಯುವೆಲ್ಲರಿ ಶೋರೂಮ್ ಮೇ.27 ರಂದು ಪುತ್ತೂರು ಮುಖ್ಯರಸ್ತೆಯಲ್ಲಿ ಸಿಪಿಸಿ ಪ್ಲಾಝಾದ ಎದುರು ಉದ್ಘಾಟನೆಗೊಂಡಿತ್ತು. ಸಂಜೀವ ಶೆಟ್ಟಿ ಜವುಳಿ ಮಳಿಗೆಯ ಗಿರಿಧರ್  ನೂತನ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸಹೋದರ ಶಿವಶಂಕರ್, ಮಾಜಿ ಪುರಸಭೆ ಅಧ್ಯಕ್ಷರಾದ  ರಾಜೇಶ್ ಬನ್ನೂರು, ಗಣೇಶ್ ರಾವ್, ದಯಾರೇಶ್ ಕದಾಮ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಉಲಾಸ್ ಪೈ, ಗಿರಿಧರ್ ಅವರ ಪತ್ನಿ ವಿದ್ಯಾ,

ಮಾನಕ ಜ್ಯುವೆಲ್ಲರ‍್ಸ್‌ನ ನೂತನ ಮಳಿಗೆ ಉದ್ಘಾಟನೆ | ಹತ್ತೂರಿನಲ್ಲಿ ಮನೆಮಾತಾಗಿರುವ ಮಾನಕ ಜ್ಯುವೆಲ್ಲರ್ಸ್ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ

ಪುತ್ತೂರು: ತಮ್ಮಲ್ಲಿ ಅಡಕವಾಗಿರುವ ಪ್ರತಿಭೆಗಳು ಮತ್ತು ಹವ್ಯಾಸಗಳು ವಿದ್ಯಾರ್ಥಿ ದೆಸೆಯಲ್ಲಿ ಪ್ರದರ್ಶಿತವಾಗಿ ಕಮರಿ ಹೋಗುವಂತಾಗಬಾರದು ಬದಲಿಗೆ ಜೀವನದುದ್ದಕ್ಕೂ ಅದು ಬೆಳೆದು ಪ್ರದರ್ಶಿತವಾಗಬೇಕು ಇದರಿಂದ ಮಾನಸಿಕ ಒತ್ತಡವನ್ನು ಕಡಿಮೆಮಾಡಿಕೊಳ್ಳಬಹುದು ಎಂದು ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಸಾದ್ ಶಾನುಬೋಗ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಸಮಾರಂಭದದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವೃತ್ತಿಪರ ಶಿಕ್ಷಣದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಷ್ಟ ಸಾಧ್ಯ ಅದರಲ್ಲೂ ಕೊರೋನಾ ನಂತರ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ Read More »

ಅಕ್ಷಯ ಕಾಲೇಜಿನಲ್ಲಿ “Maths Shortcut tricks and Tips for Competitive Exam” ಮಾಹಿತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸಂಪ್ಯ ಅಧೀನದಲ್ಲಿ ಕಾರ‍್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಶನ್ ವತಿಯಿಂದ “Maths Shortcut tricks and Tips for Competitive Exam” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ‍್ಯಗಾರ ಮೇ.26ರಂದು ನಡೆಯಿತು. ಕಾರ‍್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ವೇತ ಜೆ ರಾವ್ ಆಗಮಿಸಿ “Maths Shortcut tricks and Tips for Competitive Exam” ಎಂಬ ವಿಷಯದ ಕುರಿತು ಕಾರ‍್ಯಗಾರವನ್ನು

ಅಕ್ಷಯ ಕಾಲೇಜಿನಲ್ಲಿ “Maths Shortcut tricks and Tips for Competitive Exam” ಮಾಹಿತಿ ಕಾರ್ಯಾಗಾರ Read More »

ಕರುಣಾಕರ ಪೂಜಾರಿ ಪಟ್ಟೆ ನಿಧನ

ಪುತ್ತೂರು: ಬೆಳಂದೂರು ಗ್ರಾಪಂ ಮಾಜಿ ಅಧ್ಯಕ್ಷ ಕರುಣಾಕರ ಪೂಜಾರಿ ಪಟ್ಟೆ ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು. ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಸವಣೂರು ಸ.ಉ.ಹಿ. ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯಾಗಿದ್ದು, ವೃತ್ತಿಯಲ್ಲಿ ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದರು. ಮೃತರು ತಾಯಿ, ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಕರುಣಾಕರ ಪೂಜಾರಿ ಪಟ್ಟೆ ನಿಧನ Read More »

ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು.ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರು ಭರವಸೆ

ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ Read More »

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್, ಸ್ವಸಹಾಯ ಸಂಘಗಳ ಒಕ್ಕೂಟ ಬೆಳಂದೂರು ಇದರ ಆಶ್ರಯದಲ್ಲಿ ಶ್ರೀ ಸದಾಶಿವ ದೇವಸ್ಥಾನ ಅಗಳಿ ಇದರ ಸಹಕಾರದೊಂದಿಗೆ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಮೇ 27ರಂದು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ಕಲ್ಪೋಕ್ತ ಶನೈಶ್ಚರ ಪೂಜೆ, ಮಹಾಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಗಳಿ ಶ್ರೀ ಸದಾಶಿವ

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ Read More »

error: Content is protected !!
Scroll to Top