ಪುತ್ತೂರು

ಶಿಕ್ಷಣಾ ಇಲಾಖಾ ಅಧಿಕಾರಿ ಹಾಗೂ ಶಿಕ್ಷಕರ ಸಭೆ

ಪುತ್ತೂರು: ಶಿಕ್ಷಣ ಇಲಾಖೆಯ ಅಧಿಕಾರಿಗಳ ಹಾಗೂ ಶಿಕ್ಷಕರ ಸಭೆ ಗುರುವಾರ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿ ಚರ್ಚಿಸಲಾಯಿತು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸಹಿತ  ಹಲವು ಮಂದಿ ಉಪಸ್ಥಿತರಿದ್ದರು

ಶಿಕ್ಷಣಾ ಇಲಾಖಾ ಅಧಿಕಾರಿ ಹಾಗೂ ಶಿಕ್ಷಕರ ಸಭೆ Read More »

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ‌ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಳದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಶಾಸಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣಪ್ತಸಾದ್ ಆಳ್ವ, ಗ್ರಾಪಂ ಸದಸ್ಯ ನವೀನ್ ರೈ ಚೆಲ್ಯಡ್ಕ, ಸದಾಶಿವ ರೈ ಅಜ್ಜಿಕಲ್ಲು ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ Read More »

ಮುಂದಿನ 20 ದಿನಗಳಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ಮುಗಿಸಬೇಕು | ಅಧಿಕಾರಿ, ಗುತ್ತಿಗೆದಾರರಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮುಂದಿನ 20 ದಿನಗಳಲ್ಲಿ ಮುಗಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಗುರುವಾರ ಕಾಂಗಾರಿ ಹಂತದಲ್ಲಿರುವ ಉಪ್ಪಿನಂಗಡಿ-ಪುತ್ತೂರು ಚತುಷ್ಪಥ ಕಾಮಗಾರಿಯನ್ನು ವೀಕ್ಷಿಸಿ ಈ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಗುತ್ತಿಗೆದಾರರು, ಕಾಂಗ್ರೆಸ್ ಮುಖಂಡರು, ಉಪಸ್ಥಿತರಿದ್ದರು.

ಮುಂದಿನ 20 ದಿನಗಳಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ಮುಗಿಸಬೇಕು | ಅಧಿಕಾರಿ, ಗುತ್ತಿಗೆದಾರರಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ Read More »

ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಕುರಿತು ಸಭೆ

ಉಪ್ಪಿನಂಗಡಿ : ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂದಿಸಿ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಇನ್ನಿತರ ಚಟುವಟಿಕೆಗಳು ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಆಧ್ಯಕ್ಷ ಡಾ. ರಾಜಾರಾಂ ಕೆ ಬಿ, ಕಾಂಗ್ರೆಸ್ ಮುಖಂಡರಾದ ಚಂದ್ರಹಾಸ ಶೆಟ್ಟಿ,ನಝೀರ್ ಮಠ, ಗ್ರಾಪಂ ಸದಸ್ಯ ಯು ಟಿ ತ ಸೀಫ್, ಅಬ್ದುಲ್ ರಹಿಮಾನ್ ಯುನಿಕ್, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ ಸೇರಿದಂತೆ ಹಲವು ಮಂದಿ

ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಕುರಿತು ಸಭೆ Read More »

ಗೂಂಡಾ ರಾಜಕಾರಣದ ವಿರುದ್ಧ ಕ್ರಮ ಕೈಗೊಳ್ಳಿ: ಮುರಳಿಕೃಷ್ಣ ಹಸಂತಡ್ಕ | ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಮುಖಂಡ

ಪುತ್ತೂರು : ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ರಾಜಕಾರಣದ ಮುಖಾಂತರ ಪ್ರತೀಕಾರ ತೀರಿಸುವಂತಹ ಲಕ್ಷಣ ಕಾಣಿಸುತ್ತಿದೆ. ಇದನ್ನು ಹಿಂದೂ ಸಂಘಟನೆ ಸಹಿಸುವುದಿಲ್ಲ. ಸಂಘಟನೆ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾಣಿ ಪೇಟೆಯಲ್ಲಿ ಜಗಳ ನಡೆದಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ಅಹಿತಕರ ಘಟನೆ ನಡೆಯುವ ಮೊದಲು ನಡುರಸ್ತೆಯಲ್ಲಿ ಹಲ್ಲೆ ಮಾಡುವಂತಹ ಕೆಲಸವನ್ನು ಯಾರೂ ಮಾಡಿದ್ದಾರೋ

ಗೂಂಡಾ ರಾಜಕಾರಣದ ವಿರುದ್ಧ ಕ್ರಮ ಕೈಗೊಳ್ಳಿ: ಮುರಳಿಕೃಷ್ಣ ಹಸಂತಡ್ಕ | ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಮುಖಂಡ Read More »

ಕಲ್ಲುಗುಡ್ಡೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಸನ್ಮಾನ

ಕಡಬ: ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಸೇರ್ಪಡೆ ಮಾಡುವ ಮೊದಲು ಅವರಿಗೆ ಪೂರ್ವ ಶಿಕ್ಷಣ ಅಂಗನವಾಡಿ ಕೇಂದ್ರದಲ್ಲಿ ಸಿಗುತ್ತಿದೆ. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಂಸ್ಕಾರವನ್ನು  ನೀಡಿ, ಯಾವುದೇ ಒತ್ತಡ ನೀಡಿದೆ ಅವರನ್ನು ಮುಂದಿನ ಶಾಲಾ ಶಿಕ್ಷಣಕ್ಕೆ ತಯಾರು ಮಾಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ, ಶಾಲಾ ಶಿಕ್ಷಣಕ್ಕೆ ಮಕ್ಕಳನ್ನು ಸಿದ್ಧತೆ ಮಾಡಿದ ಕೀರ್ತಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಲ್ಲುತ್ತದೆ ಎಂದು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ  ಅಧ್ಯಕ್ಷೆ ಗಂಗಮ್ಮ ಕೆ. ಹೇಳಿದರು.  ಅವರು ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ

ಕಲ್ಲುಗುಡ್ಡೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಸನ್ಮಾನ Read More »

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

ಪುತ್ತೂರು: ಕಲ್ಲಾರೆ ಕಟ್ಟಡವೊಂದರ ಬಳಿ ವ್ಯಕ್ತಿಯೊಬ್ಬರ ಶವ ಬುಧವಾರ ಪತ್ತೆಯಾಗಿದೆ. ಉಪ್ಪಿನಂಗಡಿ ಮೂಲದ, ಗುಜರಿ ಹೆಕ್ಕುತ್ತಿದ್ದ ಮಂಜುನಾಥ ಮೃತಪಟ್ಟ ರೀತಿಯಲ್ಲಿ ಪತ್ತೆಯಾದವರು. ಮಂಜುನಾಥ್ ಅವರು ನಿತ್ಯ ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದರು. ಕಲ್ಲಾರೆ ಕಟ್ಟಡವೊಂದರ ಬಳಿ ಅವರು ಮಲಗುತ್ತಿದ್ದರು. ಕಳೆದ ಮೂರು ತಿಂಗಳ ಹಿಂದೆ ಪಕ್ಷಪಾತಕ್ಕೀಡಾಗಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಕೆಗೊಂಡ ಬಳಿಕ ಮತ್ತೆ ಅದೇ ಕಾಯಕ ಮಾಡುತ್ತಿದ್ದರು. ಇದೀಗ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ Read More »

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ

ಪುತ್ತೂರು: ಬಳ್ಳಾರಿಯಿಂದ ಆಗಮಿಸಿದ ಹಿಂದೂ ಕಾರ್ಯಕರ್ತನೋರ್ವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹಾಕಿ, ಭಗವದ್ಗೀತೆಯ ಪುಸ್ತಕ ನೀಡಿ ಗೌರವಿಸಿದರು. ಅರುಣ್ ಪುತ್ತಿಲ ಅವರ ಕಚೇರಿಗೆ ಆಗಮಿಸಿದ ಬಳ್ಳಾರಿಯ ತೇಜ ಎನ್ನುವ ಯುವಕ, ಅಭಿಮಾನ ಮೆರೆದದ್ದು ಹೀಗೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತ‌ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರಸಿದ್ಧಿ ಪಡೆದುಕೊಳ್ಳುತ್ತಿದ್ದಾರೆ‌.

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ Read More »

ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ

ಪುತ್ತೂರು: ಕರಾವಳಿ ಸಿನಿಮಾಸ್ ಲಾಂಛನದಲ್ಲಿ -ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಜಾವು, ನಿರ್ಮಾಣದಲ್ಲಿ, ಹೆಚ್.ಡಿ.ಆರ್ಯ ನಿರ್ದೇಶನದಲ್ಲಿ  ತಯಾರಾದ “ಪಿರ್ಕಿಲು” ತುಳು ಸಿನಿಮಾ ಮೇ 26 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಹೆಚ್.ಡಿ.ಆರ್ಯ ತಿಳಿಸಿದ್ದಾರೆ. ಬುಧವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್,  ಉಡುಪಿಯಲಿ, ಕಲ್ಪನ, ಮಣಿಪಾಲದಲ್ಲಿ ಭಾರತ್ ಸಿನಿಮಾ, ಐಸಾಕ್ಸ್ ಪಡುಬಿದ್ರೆಯಲ್ಲಿ ಭಾರತ್ ಸಿನಿಮಾ, ಸುರತ್ಕಲ್‌ ನಲ್ಲಿ ನಟರಾಜ್ ಸಿನಿ ಗ್ಯಾಲಕ್ಷ್ಮಿ ಪುತ್ತೂರಿನಲ್ಲಿ ಭಾರತ್ ಸಿನಿಮಾ ಮೂಡಲಿದೆ

ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ Read More »

ಮೇ 26 : ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನೆ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಪ್ರಾತಿನಿಧ್ಯ ಹೊಂದಿರು ವ ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತುಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡುವೆ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಹಾಗೂ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭ ಮೇ 26 ಶುಕ್ರವಾರ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ರೆ.ಆಂಟನಿ ಪ್ರಕಾಶ್ ಮೊಂತೆರೋ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉನ್ನತ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಐಸಿಎಸ್ಐ ಕ್ಷೇತ್ರ

ಮೇ 26 : ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನೆ Read More »

error: Content is protected !!
Scroll to Top