ಪುತ್ತೂರು ತಾಲೂಕು ತುಳುವ ಮಹಾಸಭೆಗೆ ತುಳು ಲಿಪಿಯ ಹರಿಕಾರಿಣಿ : ಶ್ರೀಶಾವಾಸವಿ ತುಳುನಾಡ್ ಸಂಚಾಲಕಿಯಾಗಿ ಆಯ್ಕೆ
ಪುತ್ತೂರು : ತುಳುನಾಡಿನ ಭಾಷಾ, ಸಾಹಿತ್ಯ, ಲಿಪಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಬಹುಮುಖ ಪ್ರತಿಭೆ ಶ್ರೀಶಾವಾಸವಿ ತುಳುನಾಡ್ (ವಿದ್ಯಾಶ್ರೀ ಎಸ್) ಅವರನ್ನು ಪುತ್ತೂರು ತಾಲೂಕು ತುಳುವ ಮಹಾಸಭೆಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ಪವಿತ್ರ ಪಡುಮಲೆಯ ಪುಣ್ಯ ಭೂಮಿಯಲ್ಲಿ ಜನಿಸಿ, B.Sc. in Multimedia Technology ಪದವಿ ಪಡೆದಿರುವ ಶ್ರೀಶಾವಾಸವಿ, ತಮ್ಮ ತಾಯ್ನಾಡು ತುಳುನಾಡಿನ ಭಾಷೆ ಹಾಗೂ ಲಿಪಿಯ ವೈಭವವನ್ನು ಅರಿತು ಅದನ್ನು ಜನಮಾನಸದಲ್ಲಿ ಉಜ್ವಲಗೊಳಿಸಲು ನಿತ್ಯ ಶ್ರಮಿಸುತ್ತಿದ್ದಾರೆ. 2013ರಿಂದ ತುಳು ಲಿಪಿಯ ಅಭ್ಯಾಸ […]










