ಪುತ್ತೂರು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರಲ್ಲಿದ್ದವರು ಪಾರು

ಪುತ್ತೂರು: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೌಡಿಚ್ಚಾರು ಮಡ್ಯಂಗಳ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ನಜ್ಜುಗುಜ್ಜಾಗಿದೆ. ಕಾರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ನಿದ್ದೆಯ ಮಂಪರಿನಲ್ಲಿದುದೇ, ಘಟನೆಗೆ ಕಾರಣ ಎನ್ನಲಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರಲ್ಲಿದ್ದವರು ಪಾರು Read More »

ವಿದ್ಯಾನಗರ ಶ್ರೀ ಕೊರತ್ತಿ ಪರಿವಾರ ದೈವಗಳಿಗೆ ತಂಬಿಲ ಅಗೇಲು ಸೇವೆ

ಕಡಬ: ಕಡಬ ವಿದ್ಯಾನಗರದ ಕೋಟೆಂಬರ ಕೊಚ್ಚಿಯಲ್ಲಿನ ಶ್ರೀ ಕೊರತ್ತಿ, ಪಂಜುರ್ಲಿ, ಗುಳಿಗ ದೈವಗಳಿಗೆ ತಂಬಿಲ ಹಾಗೂ ಅಗೇಲು ಸೇವೆ ಮಂಗಳವಾರ ನಡೆಯಿತು. ಬೆಳಿಗ್ಗೆ ದೈವಜ್ಞ ಪ್ರಸಾದ್ ಕೆದಿಲಾಯ ಅವರ ನೇತೃತ್ವದಲ್ಲಿ ದೈವಗಳಿಗೆ ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಪ್ರಧಾನ ಪರಿಚಾರಕ ಶ್ರೀಧರ ನಾಯ್ಕ್ ಕುಂಡಿಲು ಅವರ ನೇತೃತ್ವದಲ್ಲಿ ದೈವಗಳಿಗೆ ಅಗೇಲು ಹಾಕಿ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ದೈವಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಗೌರವಾಧ್ಯಕ್ಷ ವೆಂಕಟ್ರಮಣ ರಾವ್ ಮಂಕುಡೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ,

ವಿದ್ಯಾನಗರ ಶ್ರೀ ಕೊರತ್ತಿ ಪರಿವಾರ ದೈವಗಳಿಗೆ ತಂಬಿಲ ಅಗೇಲು ಸೇವೆ Read More »

ನೂಜಿಬಾಳ್ತಿಲ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿಯ ಗ್ರಂಥಾಲಯ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ಶಿಬಿರ ಉದ್ಘಾಟಿಸಿ ಮಾತನಾಡಿ, ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾರಂಭ ಆಗಲಿದೆ. ಇದಕ್ಕೂ ಮೊದಲು ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತಿರುವುದು ಮಕ್ಕಳಿಗೆ ಶಾಲಾರಂಭಕ್ಕೆ ಹೊಂದಿಕೊಳ್ಳಲು ಪೂರಕವಾಗಲಿದೆ. ಅಲ್ಲದೆ ಶಿಬಿರಗಳು ಮಕ್ಕಳಿಗೆ ವಿವಿಧ ರೀತಿಯಲ್ಲಿ ತೊಡಗಿಕೊಳ್ಳಲು ಹಾಗೂ ತಮ್ಮ ವ್ಯಕ್ತಿತ್ವ

ನೂಜಿಬಾಳ್ತಿಲ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ಮೇ 25, 26, 27 : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮ, ವಿದ್ಯಾರ್ಥಿಗಳ ಪ್ರತಿಭಾ ದಿನ,  ಕಾಲೇಜು ವಾರ್ಷಿಕೋತ್ಸವ ವಿಬ್‌ಜಯಾರ್-2023, ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಸಂಜೆ ರಿದಂ ಕಾರ್ಯಕ್ರಮಗಳು ಮೇ 25, 26 ಹಾಗೂ 27ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಮೇ 25 ಗುರುವಾರ ಬೆಳಗ್ಗಿನಿಂದ ವಿದ್ಯಾರ್ಥಿಗಳ ವರ್ಷವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ನಡೆಯಲಿದೆ. ಸಂಜೆ 3ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದ್ದು, ತೆಂಕಿಲ ನರೇಂದ್ರ ಪದವಿಪೂರ್ವ

ಮೇ 25, 26, 27 : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ Read More »

ಬೆಳ್ಳಿಪ್ಪಾಡಿ ಕೂಟೇಲು ನಿವಾಸಿ ಶೀನಪ್ಪ ಗೌಡ ನಿಧನ

ಪುತ್ತೂರು: ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೂಟೇಲು ನಿವಾಸಿ ಶೀನಪ್ಪ ಗೌಡ ಕೂಟೇಲು (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಕೃಷಿಕರಾಗಿದ್ದ ಅವರು ಪತ್ನಿ ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ನಿಧನದ 5ನೇ ದಿನದ ಕಾರ್ಯ ನಾಳೆ (ಬುಧವಾರ) ಕೂಟೇಲು ಮನೆಯಲ್ಲಿ ನಡೆಯಲಿದೆ.

ಬೆಳ್ಳಿಪ್ಪಾಡಿ ಕೂಟೇಲು ನಿವಾಸಿ ಶೀನಪ್ಪ ಗೌಡ ನಿಧನ Read More »

ರಾಷ್ಟ್ರ ಮಟ್ಟದ ಸ್ಪರ್ಧೆ‍ಯಲ್ಲಿ ಅಕ್ಷಯ ಕಾಲೇಜಿಗೆ ಹಲವು ಬಹುಮಾನ

ಪುತ್ತೂರು: ಮಂಗಳೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಅಂತರ್ ಸ್ಪರ್ಧೆಯಲ್ಲಿ ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ವಿವಿಧ ಬಹುಮಾನಗಳನ್ನು ಪಡೆದಿದೆ. ಎಕೆಲಾನ್ 23 ರಾಷ್ಟ್ರಮಟ್ಟದ ಸ್ಪರ್ಧೆ ಮೆಹಂದಿಯಲ್ಲಿ ಪ್ರಥಮ, ದೇಹದಾರ್ಢ್ಯ ಪ್ರಥಮ, ಮೈಮ್ ಶೋ ಪ್ರಥಮ ಹಾಗೂ ಫ್ಯಾಶನ್ ಶೋದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದ ಎಕ್ಸೆಲೋ 2ಕೆ23 ರಾಷ್ಟ್ರಮಟ್ಟದ ಸ್ಪರ್ಧೆ‍ಯಲ್ಲಿ ಸ್ಟ್ಯಾಂಡ್ ಆಪ್ ಕಾಮಿಡಿಯಲ್ಲಿ ಪ್ರಥಮ, ಆರ್ಟ್‍‍ ಔಟ್ ಆಫ್ ಪೇಸ್ಟ್

ರಾಷ್ಟ್ರ ಮಟ್ಟದ ಸ್ಪರ್ಧೆ‍ಯಲ್ಲಿ ಅಕ್ಷಯ ಕಾಲೇಜಿಗೆ ಹಲವು ಬಹುಮಾನ Read More »

ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ ಡಿವೈಎಸ್ ಪಿ ಅವರನ್ನು ಸಸ್ಪೆಂಡ್ ಮಾಡಲಿ : ಅಖಿಲ ಭಾರತ ಹಿಂದೂ ಮಹಾಸಭಾ ಆಗ್ರಹ

ಪುತ್ತೂರು: ಇತ್ತೀಚೆಗೆ ಹಿಂದೂ  ಕಾರ್ಯಕರ್ತರ ಮೇಲೆ ಡಿವೈಎಸ್ ಪಿ ಸಹಿತ ಪೊಲೀಸರು ನಡೆಸಿದ ದೌರ್ಜನ್ಯದಲ್ಲಿ ಕೇವಲ ಪೊಲೀಸರನ್ನು ಮಾತ್ರ ಸಸ್ಪೆಂಡ್ ಮಾಡಲಾಗಿದ್ದು, ಡಿವೈಎಸ್ ಪಿಯವರನ್ನೂ ಯಾಕೆ ಸಸ್ಪೆಂಡ್ ಮಾಡಿಲ್ಲ. ಇದನ್ನು ನ್ಯಾಯಾಲಯದ ಮೂಲಕ ಪ್ರಶ್ನಿಸಲಾಗುವುದು ಎಂದು ಅಭಿನವ ಭಾರತ ಹಾಗೂ ಅಖಿಲ ಭಾರತ ಹಿಂದು ಮಹಾಸಭಾ ತಿಳಿಸಿದೆ. ಮಂಗಳವಾರ ಹಿಂದೂ ಮಹಾಸಭಾದ ಸಭಾಚಾಲಕ್ ಧರ್ಮೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರಿನಲ್ಲಿ ನಡೆದ ಘಟನೆ ತಲೆತಗ್ಗಿಸುವಂತದ್ದು. ಪೊಲೀಸ್ ಇಲಾಖೆ ಕಾನೂನಿನ ದುರ್ಬಳಕೆ ಮಾಡುವುದನ್ನು ಹಿಂದು ಮಹಾಸಭಾ  ಸಹಿಸುವುದಿಲ್ಲ. ದೌರ್ಜನ್ಯ ಎಸಗಿದ

ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ ಡಿವೈಎಸ್ ಪಿ ಅವರನ್ನು ಸಸ್ಪೆಂಡ್ ಮಾಡಲಿ : ಅಖಿಲ ಭಾರತ ಹಿಂದೂ ಮಹಾಸಭಾ ಆಗ್ರಹ Read More »

ವಿದ್ಯುತ್ ಸ್ಪರ್ಶ : ಯುವಕ ಮೃತ್ಯು

ಪುತ್ತೂರು : ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ತೀರದ ಬಳಿ ನಡೆದಿದೆ. ಶರೀಫುದ್ದೀನ್ (19) ವಿದ್ಯುತ್ ಶಾಕ್‍ನಿಂದ ಮೃತಪಟ್ಟ ಯುವಕ. ಹಮ್ಮಬ್ಬ ಎಂಬವರ ಅಳಿಯ ಶರೀಪುದ್ದೀನ್ , ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದು, ಮೇ.21 ರಂದು ಸಂಜೆ ಪುತ್ತೂರು ತಾಲೂಕು ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡವರನ್ನು ಸಾರ್ವಜನಿಕರ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಬಗ್ಗೆ

ವಿದ್ಯುತ್ ಸ್ಪರ್ಶ : ಯುವಕ ಮೃತ್ಯು Read More »

ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿಯನ್ನು ಸೋಮವಾರ ಉದ್ಘಾಟಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಯಂ ಕೃಷ್ಣ ಭಟ್, ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು, ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಎಂ.ಪಿ. ಹಾಗೂ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರುಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಸಕ್ತ ವರ್ಷದಲ್ಲಿ ಬಿ.ಫಾರ್ಮಾ ಹಾಗೂ ಡಿ. ಫಾರ್ಮಾ ಆರಂಭಗೊಳ್ಳಲಿದ್ದು, ದಾಖಲಾತಿ

ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ Read More »

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್

ಪುತ್ತೂರು: ಆರ್ಯಾಪು ಗ್ರಾಮದ ನೀಲಪ್ಪ ಕೋಟ್ಯಾನ್ ಅವರ ಮಗ ರಂಜಿತ್ ಪೂಜಾರಿ ಹಾಗೂ ಮಾಣಿ ಏನಾಜೆ ರಾಮಪ್ಪ ಪೂಜಾರಿ ಪುತ್ರಿ ಕವಿತಾ ಸಾಲ್ಯಾನ್ ಅವರ ನಿಶ್ಚಿತಾರ್ಥ ಮಾಣಿ ಏನಾಜೆ ವಧುವಿನ ಮನೆಯಲ್ಲಿ ನಡೆಯಿತು.

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್ Read More »

error: Content is protected !!
Scroll to Top