ಪುತ್ತೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ

ಬೆಂಗಳೂರು : ರಾಜ್ಯದ 16ನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಮೇ 24ರಿಂದ ರಾಜ್ಯದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿದ್ದು, 3 ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಜೊತೆಗೆ ಸಭಾಪತಿ ಅವರ ಆಯ್ಕೆಯೂ ಇದರಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರು ಬೆಂಗಳೂರಿನಲ್ಲಿ ನಡೆದ ಮೊದಲ […]

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ Read More »

ಪುತ್ತೂರಿನಲ್ಲಿ ಮಲೇರಿಯಾ ಡೆಂಗ್ಯೂ ದಿನಾಚರಣೆ | ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ

ಪುತ್ತೂರು: ಮುತ್ತೂಟ್ ಫೈನಾನ್ಸ್, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ಕಸ್ವಿ ಹಸಿರು ದಿಬ್ಬಣ ಹಾಗೂ ಪುತ್ತೂರು ತಾಲೂಕು ಆರೋಗ್ಯ ಕೇಂದ್ರದ ಆಶ್ರಯದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಲೇರಿಯಾ – ಡೆಂಗ್ಯು ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ ಮತ್ತು ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಎಸ್.ಆರ್.ಕೆ. ಲ್ಯಾಡರ್ಸಿನ ಕೇಶವ್ ಅಮೈ ಮಾತನಾಡಿ, ಮುತ್ತೂಟ್ ಫೈನಾನ್ಸ್ ಹಲವಾರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಆಶಾ ಕಾರ್ಯಕರ್ತೆಯರ ಸೇವಾ ಕಾರ್ಯವನ್ನು ಗಮನಿಸಿ ಅವರಿಗೆ ಗೌರವಪೂರ್ವಕವಾಗಿ ಟಾರ್ಚ್ ಲೈಟ್

ಪುತ್ತೂರಿನಲ್ಲಿ ಮಲೇರಿಯಾ ಡೆಂಗ್ಯೂ ದಿನಾಚರಣೆ | ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ Read More »

ವಿದ್ಯುತ್ ತಂತಿ ರಸ್ತೆಗೆ: ಕೌಡಿಚಾರು – ಸುಳ್ಯಪದವು ರಸ್ತೆ ಸಂಚಾರ ಬಂದ್

ಪುತ್ತೂರು: ಭಾರೀ ಮಳೆಗೆ ಟಿವಿ, ವಿದ್ಯುತ್ ತಂತಿಗಳಿಗೆ ಹಾನಿಯಾಗಿದ್ದು, ಕೌಡಿಚ್ಚಾರು – ಸುಳ್ಯಪದವು ರಸ್ತೆ ಸಂಚಾರಕ್ಕೆ ತೊಡಕಾಗಿದೆ. ರಸ್ತೆಗಡ್ಡವಾಗಿ ಮರ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾನ್ಸ್ ಫಾರ್ಮರ್ ಹಾನಿಯಾಗಿರುವುದರಿಂದ ವಿದ್ಯುತ್ ಕಡಿತ ಉಂಟಾಗಿದೆ. ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಗೆ ಬಿದ್ದಿವೆ. ಇದರಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ರಸ್ತೆಗೆ ಬಿದ್ದಿರುವ ಮರವನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ. ಮೆಸ್ಕಾಂ ಇಲಾಖೆಯೂ ವಿದ್ಯುತ್ ತಂತಿಗಳ ಸರಿಪಡಿಸುವ ಕಾರ್ಯದಲ್ಲಿ ಮಗ್ನವಾಗಿದೆ.

ವಿದ್ಯುತ್ ತಂತಿ ರಸ್ತೆಗೆ: ಕೌಡಿಚಾರು – ಸುಳ್ಯಪದವು ರಸ್ತೆ ಸಂಚಾರ ಬಂದ್ Read More »

`ಪುತ್ತಿಲ ಪರಿವಾರ’ದ ಲೋಗೊ ಅನಾವರಣ | ದೇಶಕ್ಕೆ ಸ್ಪಷ್ಟ ಸಂದೇಶ ನೀಡಿದ್ದೇವೆ: ಪುತ್ತಿಲ

ಪುತ್ತೂರು: ನಿರೀಕ್ಷೆಯಂತೆಯೇ ಪುತ್ತಿಲ ಪರಿವಾರ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಸೇವಾ ಸಮರ್ಪಣೆ ಸಮಾರಂಭ ಹಲವು ಕುತೂಹಲಗಳಿಗೆ ನಾಂದಿ ಹಾಡಿತ್ತು. ಆ ಎಲ್ಲಾ ಕುತೂಹಲಗಳಿಗೆ ಸಮಾರಂಭ ಉತ್ತರ ನೀಡಿದೆ. ದರ್ಬೆ ವೃತ್ತದಿಂದ ಪುತ್ತೂರು ಪೇಟೆಯಾಗಿ ಸಾಗಿ ಬಂದ ಕಾಲ್ನಡಿಗೆ ಜಾಥಾ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಒಂದು ಪ್ರದಕ್ಷಿಣೆ ಬಂದು, ರಥಬೀದಿಯಲ್ಲಿ ಹಾಕಿದ್ದ ವೇದಿಕೆಗೆ ಆಗಮಿಸಿತು. ವೇದಿಕೆಗೆ ಹತ್ತಿದ ಅರುಣ್ ಕುಮಾರ್ ಪುತ್ತಿಲ ಅವರು ಸಭೆಗೆ ಸಾಷ್ಟಾಂಗ ನಮಸ್ಕರಿಸಿದರು. ನಂತರ ನಡೆದ ಸಭೆಯಲ್ಲಿ ಪುತ್ತಿಲ ಪರಿವಾರ ಲೋಗೊ ಅನಾವರಣ

`ಪುತ್ತಿಲ ಪರಿವಾರ’ದ ಲೋಗೊ ಅನಾವರಣ | ದೇಶಕ್ಕೆ ಸ್ಪಷ್ಟ ಸಂದೇಶ ನೀಡಿದ್ದೇವೆ: ಪುತ್ತಿಲ Read More »

ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ | ಕಾಲ್ನಡಿಗೆ ಜಾಥಕ್ಕೆ ದರ್ಬೆಯಲ್ಲಿ ಚಾಲನೆ

ಪುತ್ತೂರು: ಪುತ್ತಿಲ ಅಭಿಮಾನಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿರುವ ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ ಕಾಲ್ನಡಿಗೆ ಜಾಥಕ್ಕೆ ದರ್ಬೆಯಲ್ಲಿ ಚಾಲನೆ ನೀಡಲಾಯಿತು. ದರ್ಬೆಯಲ್ಲಿ ಚಾಲನೆ ಪಡೆದ ಜಾಥ ಮುಖ್ಯರಸ್ತೆಯಾಗಿ ಸಂಚರಿಸಿತು. ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವು ಮಂದಿ ಜಾಥಾದಲ್ಲಿ ಬರಿಗಾಲಲ್ಲಿ ನಡೆದುಕೊಂಡು ಬಂದರು. ಜಾಥಾ ಶಿಸ್ತುಬದ್ಧವಾಗಿ ಸಾಗಿಬಂದಿತು.

ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ | ಕಾಲ್ನಡಿಗೆ ಜಾಥಕ್ಕೆ ದರ್ಬೆಯಲ್ಲಿ ಚಾಲನೆ Read More »

ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶ

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶ Read More »

ನರಿಮೊಗರು : ಉಚಿತ ಗ್ರಾಮೀಣ ಮಕ್ಕಳ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ

ನರಿಮೊಗರು: ನರಿಮೊಗರು ಗ್ರಾಮ ಪಂಚಾಯತ್ ಗ್ರಂಥಾಲಯ, ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಶಾಂತಿಗೋಡು ಹಿ.ಪ್ರಾ. ಶಾಲೆಯಲ್ಲಿ ಆರಂಭಗೊಂಡಿದೆ. ನರಿಮೊಗರು ಗ್ರಾ.ಪಂ. ಉಪಾಧ್ಯಕ್ಷ ಸುಧಾಕರ ಕುಲಾಲ್ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯರಾದ ಹೊನ್ನಪ್ಪ ಪೂಜಾರಿ ಕೈಂದಾಡಿ, ಆಶಾ ಸಚ್ಚಿದಾನಂದ ಬೊಳ್ಳೆಕ್ಕು,ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಶಾಂತಿಗೋಡು ಶಾಲೆಯ ಮುಖ್ಯಗುರು ಸವಿತಾ, ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪ್ರಫುಲ್ಲ ಗಣೇಶ್ ಉಪಸ್ಥಿತರಿದ್ದರು. ನರಿಮೊಗರು ಗ್ರಂಥಾಲಯ ಮೇಲ್ವಿಚಾರಕ ವರುಣ್ ಕುಮಾರ್

ನರಿಮೊಗರು : ಉಚಿತ ಗ್ರಾಮೀಣ ಮಕ್ಕಳ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆ ಸೇರಿರುವ ಹಿಂದೂ ಕಾರ್ಯಕರ್ತರನ್ನು ಶಾಸಕ ಅಶೋಕ್ ಕುಮೃ್ ರೈ ಅವರು ಭೇಟಿಯಾಗಿ ಸಾಂತ್ವನ ಹೇಳಿದರು. ಪೊಲೀಸ್ ದೌರ್ಜನ್ಯದಲ್ಲಿ ಕಾಂಗ್ರೆಸಿನ ಕೈವಾಡ ಇಲ್ಲ ಎನ್ನುವುದು ನಿಮಗೂ ತಿಳಿದಿದೆ. ಪೊಲೀಸರು ಪ್ರಕರಣವನ್ನು ಅಲ್ಲಿಂದಲ್ಲಿಗೆ ಮುಗಿಸುವ ಪ್ರಯತ್ನದಲ್ಲಿದ್ದರು. ಈ ಪ್ರಕರಣದ ವಿಷಯ ತಿಳಿಯುತ್ತಿದ್ದಂತೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆಯನ್ನು ನೀಡಿದ್ದೇನೆ ಎಂದ ಅವರು, ಅಗತ್ಯ ಸಹಕಾರ ಕೇಳಿ. ನನ್ನಿಂದಾಗುವ ಸಹಕಾರ ಖಂಡಿತಾ ನೀಡುತ್ತೇನೆ ಎಂದು ಭರವಸೆ ನೀಡಿದರು. ಮಾಜಿ ಶಾಸಕಿ ಶಕುಂತಳಾ

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಶಾಸಕ ಅಶೋಕ್ ರೈ Read More »

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತಿವೆ. ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು, ಜಡೆ, ಬಟ್ಟಲು, ನಂದಿ, ಪಾದಗಳು ಹೀಗೆ ಹತ್ತಾರು

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ Read More »

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಭಾನುವಾರ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಭೇಟಿಯಾಗಿ ಧೈರ್ಯ ತುಂಬಿದರು. ಬ್ಯಾನರ್ ಪ್ರಕರಣದಲ್ಲಿ ಪೊಲೀಸರ ಬಂಧಿಯಾಗಿ ಹಲ್ಲೆಗೊಳಗಾದ ಯುವಕರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಭೇಟಿಯಾದರು. ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ Read More »

error: Content is protected !!
Scroll to Top