ಪುತ್ತೂರು

ಬೆಟ್ಟಂಪಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಪುತ್ತೂರು: ತ್ಯಾಗ ಮತ್ತು ಸೇವೆ ಜೀವನದ ಪರಮೋಚ್ಚ ಧರ್ಮ ಎಂದು ಸವಣೂರು ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ ವಿ ಸೂರ್ಯನಾರಾಯಣ ಹೇಳಿದರು.ಆಂತರಿಕ ಗುಣಮಟ್ಟ ಭರವಸಾ ಕೋಶ , ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು ಹಾಗೂ ಯೂತ್ ರೆಡ್ ಕ್ರಾಸ್ ಘಟಕಗಳ ವತಿಯಿಂದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿವೇಕಾನಂದರ ಧರ್ಮದ ವ್ಯಾಖ್ಯಾನವೇ ಬೇರೆ ಇತ್ತು. ‘ದೇವರು ಬಂದು ಭೂಮಂಡಲವನ್ನು […]

ಬೆಟ್ಟಂಪಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ Read More »

ಜ. 22: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ಜಯಂತ್ಯೋತ್ಸವ ಸಂಸ್ಮರಣೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣಾ ಸಮಿತಿ ನೇತೃತ್ವದಲ್ಲಿ ಜ. 22ರಂದು ಬೆಳಿಗ್ಗೆ 10.30ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಗುರುವಂದನೆ, ರಜತ ತುಲಾಭಾರ, ಗ್ರಂಥ ಬಿಡುಗಡೆ ಸಮಾರಂಭ ನಡೆಯಲಿದೆ. ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ, ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕ ದಶಮಾನೋತ್ಸವ ಹಿನ್ನೆಲೆಯಲ್ಲಿ ರಜತ ತುಲಾಭಾರ, ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಮಹಾಪ್ರಬಂಧ ಸಂಸ್ಕೃತ

ಜ. 22: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ಜಯಂತ್ಯೋತ್ಸವ ಸಂಸ್ಮರಣೆ Read More »

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಗೋಣಿಕೊಪ್ಪದ ಕಾವೇರಿ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಐಟಿ ಫೆಸ್ಟ್“ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್”ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟ್ರೆಶರ್ ಹಂಟ್ ಸ್ಪರ್ಧೆಯಲ್ಲಿ ಕಾರ್ತಿಕ್ ಕೆ.ಆರ್ ಮತ್ತು ಪ್ರಿನ್ಸಿಟಾ ಡಿಸೋಜ ದ್ವಿತೀಯ ಬಹುಮಾನ, ವೆಬ್ಸೈಟ್ ಡಿಜೈನ್ ಸ್ಪರ್ಧೆಯಲ್ಲಿ ದೀಪಕ್ ಆಚಾರ್ಯ ಮತ್ತು ಮಹಮ್ಮದ್ ಶಿಯಾಬುದ್ದೀನ್ ಪ್ರಥಮ ಬಹುಮಾನ, ವಿಡಿಯೋಗ್ರಫಿಯಲ್ಲಿ ಕೆಲ್ವಿನ್ ಆಂಟನಿ ಕುರಿಯಾಕೋಸ್ ಮತ್ತು ಆದಿತ್ಯ ದಿನೇಶ್ ಪ್ರಥಮ ಬಹುಮಾನ ಪಡೆದಿರುತ್ತಾರೆ.ವಿದ್ಯಾರ್ಥಿಗಳಿಗೆ ಪಿನ್ಯಾಕಲ್ ಐಟಿ ಕ್ಲಬ್ನ

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ಘಟಕಗಳು, ಎನ್ ಸಿ ಸಿ ಆರ್ಮಿ ಮತ್ತು ನೇವಿ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಐಕ್ಯುಎಸಿ ಇವುಗಳ ಸಹಯೋಗದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅತಿಥಿಗಳು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ Read More »

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ

ಪುತ್ತೂರು: ಪುತ್ತೂರಿಗೆ ಆಗಮಿಸಿದ ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ ಸ್ವಾಗತ ನೀಡಲಾಯಿತು. ತಾಲೂಕು ಯುವಜನ ಒಕ್ಕೂಟ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನೇತೃತ್ವದಲ್ಲಿ ಕಬಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಬಕ ಗ್ರಾಪಂ ಅಧ್ಯಕ್ಷ ವಿನಯ್ ಕಲ್ಲೇಗ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಬಳಿಕ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪಕ್ಕೆ ಜಾಥಾದಲ್ಲಿ ತೆರಳಲಾಯಿತು.

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ Read More »

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ

ಪುತ್ತೂರು: ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ನೀಡಲಾಯಿತು. ಆಮಂತ್ರಣವನ್ನು ದೇವರ ಮುಂದೆ ಇಟ್ಟು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಎಂ.ಪಿ ಉಮೇಶ್, ಯು.ಪಿ. ರಾಮಕೃಷ್ಣ ಉಪಸ್ಥಿತರಿದ್ದರು.

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ Read More »

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ

ಪುತ್ತೂರು: ಜಲಸಿರಿ ಯೋಜನೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಿರ್ವಹಿಸಬೇಕಾದ ಜವಾಬ್ದಾರಿ ಜಲಸಿರಿ ಯೋಜನೆಯ ಅಧಿಕಾರಿಗಳಿಗಿದೆ. ಕಾಮಗಾರಿ ನಡೆಸಿದಲ್ಲಿ ಹಿಂದಿನಂತೆ ರಸ್ತೆಯ ಪುನರ್‍ ನಿರ್ಮಾಣ, ಮುಂದೆ ಕಾಮಗಾರಿ ಆಗಬೇಕಾದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿ ನಿರ್ವಹಿಸುವಂತೆ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದರು. ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಜ. 13ರಂದು ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಒಟ್ಟು 62 ದೂರುಗಳು ಜಲಸಿರಿ ಯೋಜನೆಯ

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ

ಪುತ್ತೂರು: ಹಳೆಯ ಮನೆಗಳ ಭಿತ್ತಿಗಳಲ್ಲಿ ಅನೇಕಾನೇಕ ಮಾದರಿಯೆನಿಸುವ ವ್ಯಕ್ತಿಗಳ ಫೋಟೋಗಳಿರುತ್ತಿದ್ದವು. ಆದರೆ ಹೊಸ ಮನೆಗಳನ್ನು ಕಟ್ಟಿಕೊಂಡಂತೆಲ್ಲ ಗೋಡೆಗಳು ಖಾಲಿಯಾಗುತ್ತಿವೆ. ಅತಿಯಾದ ಮೊಬೈಲ್ ಬಳಕೆಯಿಂದ ಗ್ರಂಥಾಲಯಗಳು ಖಾಲಿಯಾಗುತ್ತಿವೆ. ಪರಿಣಾಮವಾಗಿ ನಮ್ಮ ಜ್ಞಾನವೂ ಖಾಲಿಯಾಗಿ ವ್ಯಕ್ತಿತ್ವಗಳೂ ಖಾಲಿಯೆನಿಸುತ್ತಿವೆ. ಹೀಗೆ ಖಾಲಿಯಾದ ವ್ಯಕ್ತಿತ್ವಗಳನ್ನು ತುಂಬಿಕೊಳ್ಳುವುದಕ್ಕೆ ಸ್ವಾಮಿ ವಿವೇಕಾನಂದರoತಹ ವ್ಯಕ್ತಿತ್ವಗಳ ಆದರ್ಶಗಳು ಬೇಕಾಗಿವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಗುರುವಾರ ಆಯೋಜಿಸಲಾದ ಸ್ವಾಮಿ ವಿವೇಕಾನಂದ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ Read More »

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ

ಪುತ್ತೂರು: ಸ್ತ್ರೀ ಸ್ವಾತಂತ್ರ್ಯದ  ಅರಿವಿನ ಕೊರತೆ ನಮ್ಮ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳಲ್ಲಿ ಒಂದಾಗಿದೆ. ಆದ್ದರಿಂದ ಈ ಬಗೆಗಿನ ಅರಿವನ್ನು ಹೆಣ್ಣುಮಕ್ಕಳಲ್ಲಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೊಜ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿಶ್ವ ಹಿಂದೂ ಪರಿಷತ್, ದುರ್ಗಾ ವಾಹಿನಿ ಪುತ್ತೂರು ಹಾಗೂ ಅಂಬಿಕಾ ವಿದ್ಯಾಲಯದ ಸಹಯೋಗದೊಂದಿಗೆ ನಡೆದ ಸ್ತ್ರೀ ಸಬಲೀಕರಣದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸನಾತನ ಸಂಸ್ಕೃತಿಯಲ್ಲಿ,

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ Read More »

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ ಜ. 14ರಂದು ನಡೆಯಲಿದೆ. ಹಿಂದೂ ಜಾಗರಣಾ ವೇದಿಕೆ, ಕೂಡುರಸ್ತೆ ದುರ್ಗಾ ಭಜನಾ ಮಂಡಳಿ, ವಿಕ್ರಂ ಯುವಕ ಮಂಡಲ, ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ Read More »

error: Content is protected !!
Scroll to Top