ಪುತ್ತೂರು

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರಲ್ಲಿ ಸಂಸದ ಪ್ರತಾಪ್‌ ಸಿಂಹ ಅವರು ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ. ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ […]

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ Read More »

ಪೊಲೀಸರ ಕೃತ್ಯ ಅಮಾನುಷ : ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಚಕ್ರವರ್ತಿ ಸೂಲಿಬೆಲೆ

ಪುತ್ತೂರು: ದೌರ್ಜನ್ಯಕ್ಕೆ ಒಳಗಾದ ಯುವಕರ ಫೊಟೋ ನೋಡಿ ಎದೆ ಝಲ್ಲೆನಿಸಿತು. ಪೊಲೀಸರ ಕೃತ್ಯ ಅಮಾನುಷ. ಇಂತಹ ಪರಿಸ್ಥಿತಿ ಬೇರಾರಿಗೂ ಬರಬಾರದು ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಪೊಲೀಸ್ ರಿಂದ ದೌರ್ಜನ್ಯಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಚಕ್ರವರ್ತಿ ಸೂಲಿಬೆಲೆಯವರು ಪುತ್ತೂರು ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿ, ಮಾತನಾಡಿದರು. ತೇಜೋವಧೆ, ಅವಮಾನ ಮಾಡುವುದನ್ನು ನಾವು ಸಹಿಸಿಕೊಳ್ಳಬೇಕಾದ ಸಂದರ್ಭಗಳು ಜೀವನದಲ್ಲಿ ಬರುತ್ತವೆ. ಅದರಲ್ಲೂ ಪಕ್ಷಕ್ಕೆ ಸೋಲಾದಾಗ ಇಂತಹ ಘಟನೆಗಳು ಸಹಜ. ಹಾಗೆಂದು ನೋವುಂಟಾದವರು ಎಲ್ಲರೂ ನರೇಂದ್ರ ಮೋದಿಯನ್ನು ನೋಡಬೇಕು. ಅವರಷ್ಟು

ಪೊಲೀಸರ ಕೃತ್ಯ ಅಮಾನುಷ : ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಚಕ್ರವರ್ತಿ ಸೂಲಿಬೆಲೆ Read More »

ಪೊಲೀಸರಿಂದ ಹಲ್ಲೆ: ಇಬ್ಬರು ಪೊಲೀಸರು ಅಮಾನತು

ಪುತ್ತೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆ ಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸ್ ರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ PSI ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಹರ್ಷಿತ್ PC ರವರುಗಳನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. DSP ಪುತ್ತೂರು ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಎಸ್ಪಿ ಅವರ ಪ್ರಕಟಣೆ ತಿಳಿಸಿದೆ. ಹಲ್ಲೆಗೊಳಗಾದ ಅವಿನಾಶ್ ನೀಡಿದ ದೂರಿನ ಮೇರೆಗೆ Dysp ಪುತ್ತೂರು, PSI ಪುತ್ತೂರು

ಪೊಲೀಸರಿಂದ ಹಲ್ಲೆ: ಇಬ್ಬರು ಪೊಲೀಸರು ಅಮಾನತು Read More »

ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ

ಪುತ್ತೂರು: ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಯತ್ನಾಳ್ ಭೇಟಿ ಮಹತ್ವ ಪಡೆದುಕೊಂಡಿದೆ. ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದ್ದು, ರಾಜ್ಯದಲ್ಲಿ ಭಾರೀ ಸುದ್ದಿಯಾಗುತ್ತಿದೆ.

ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ Read More »

ಪೊಲೀಸ್ ಹಲ್ಲೆ ಪ್ರಕರಣ: ತನಿಖೆಯ ಹೊಣೆ DYSPಗೆ | ಎಸ್ಪಿ ಡಾ. ವಿಕ್ರಂ ಅಮಟೆ 

ಪುತ್ತೂರು: ಅವಹೇಳನ ಮಾಡಿ ಬ್ಯಾನರ್ ಹಾಕಿದ ಪ್ರಕರಣದ ಆರೋಪಿಗಳಿಗೆ ಪೊಲೀಸರಿಂದ ಹಲ್ಲೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ASP ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆಗೆ DYSP ಅವರಿಗೆ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ‌ ವಿಕ್ರಂ ಅಮಟೆ ಹೇಳಿದರು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಅಭಿ / ಅವಿನಾಶ್ ದೂರು ನೀಡಿದ್ದು, ಎಫ್.ಐ.ಆರ್. ದಾಖಲಾಗುತ್ತಿದೆ. ಮುಂದಿನ ತನಿಖೆಗೆ ಡಿ.ವೈ.ಎಸ್.ಪಿ.ಗೆ ನೀಡಲಾಗುವುದು. ಹಲ್ಲೆ ನಡೆಸಿದ ಬಗ್ಗೆ 3 ಪೊಲೀಸರ

ಪೊಲೀಸ್ ಹಲ್ಲೆ ಪ್ರಕರಣ: ತನಿಖೆಯ ಹೊಣೆ DYSPಗೆ | ಎಸ್ಪಿ ಡಾ. ವಿಕ್ರಂ ಅಮಟೆ  Read More »

ಇಂದಿನಿಂದ ನೆಹರುನಗರ ವಿವೇಕಾನಂದ ಕಾಲೇಜು ರಸ್ತೆ ಮೇಲ್ಸೇತುವೆ ಕಾಮಗಾರಿ ಹಿನ್ನಲೆ : ಬದಲಿ ರಸ್ತೆಯಲ್ಲಿ ಸಂಚಾರ

ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ರೈಲ್ವೇ ಇಲಾಖೆಯಿಂದ ನಡೆಸುವ ಹಿನ್ನಲೆಯಲ್ಲಿ ಮೇ 18 ರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಈಗಾಗಲೇ ಬದಲಿ ರಸ್ತೆಯಲ್ಲಿ ವಾಹನ ಸಂಚಾರ ನಡೆಸಬೇಕಾಗಿದ್ದು, ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದೆ. ಪುತ್ತೂರು-ಮಂಗಳೂರು ಹೆದ್ದಾರಿಯಿಂದ ವಿವೇಕಾನಂದ ಕಾಲೇಜು ಸಂಪರ್ಕಿಸಲು ಬದಲಿ ರಸ್ತೆಯಾಗಿ ಮುರದಿಂದ ಕೆದಿಲಕ್ಕೆ ಹೋಗುವ ರಸ್ತೆಯಲ್ಲಿ ಸಂಚರಿಸಿ ಶಾಂತಿನಗರ, ಅಜೇಯನಗರ ಮೂಲಕ ಕಾಲೇಜು ಕಡೆಗೆ ಹೋಗುವ ರಸ್ತೆಯನ್ನು ಹಾಗೂ ಬನ್ನೂರು ಮಾರ್ಗವಾಗಿ ಪಡೀಲ್ ಕಡೆಗೆ ಸಂಪರ್ಕಿಸಬೇಕಾಗುವುದು

ಇಂದಿನಿಂದ ನೆಹರುನಗರ ವಿವೇಕಾನಂದ ಕಾಲೇಜು ರಸ್ತೆ ಮೇಲ್ಸೇತುವೆ ಕಾಮಗಾರಿ ಹಿನ್ನಲೆ : ಬದಲಿ ರಸ್ತೆಯಲ್ಲಿ ಸಂಚಾರ Read More »

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ | ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ

ಪುತ್ತೂರು: ಯಾರು ನಮ್ಮ ಕಾರ್ಯಕರ್ತರ ಮೇಲೆ ಅಮಾನುಷವಾಗಿ ದೌರ್ಜನ್ಯವೆಸಗಿದ್ದಾರೋ ಅವರನ್ನ ಸಸ್ಪೆಂಡ್ ಮಾಡಿ. ಇದರಲ್ಲಿ ರಾಜಕೀಯ ಬೇಡ. ಯಾರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವಾಗಿದ್ಯೋ ಅವೆರೆಲ್ಲ ನಮ್ಮವರು. ತಕ್ಷಣ ಅಮಾನಯಷವಾಗಿ ವರ್ತಿಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಆಗ್ರಹಿಸಿದ್ದಾರೆ. ಪ್ರಕಟಣೆ ನೀಡಿದ ಅವರು, ಕ್ರಮ ಕೈಗೊಳ್ಳದೇ ಹೋದಲ್ಲಿ ಹಿಂದೂ ಸಮಾಜದಿಂದ ಹೋರಾಟ, ಅಗತ್ಯ ಬಿದ್ದಲ್ಲಿ ಪೊಲೀಸ್ ಸ್ಟೇಷನ್ ಬಳಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು. ಇಂದು ಸಂಜೆ ವೇಳೆಗೆ

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ | ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ Read More »

ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಇಲಾಖೆಗೇ ಕಪ್ಪುಚುಕ್ಕಿ: ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕಿ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಪ್ರತಿಕ್ರಿಯಿಸಿದ್ದಾರೆ.

ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಇಲಾಖೆಗೇ ಕಪ್ಪುಚುಕ್ಕಿ: ಸಂಸದ ನಳಿನ್ ಕುಮಾರ್ ಕಟೀಲ್ Read More »

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅವಹೇಳನಕಾರಿಯಾಗಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ದೌರ್ಜನ್ಯದ ಬಗೆಗಿನ ಫೊಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಒಟ್ಟು ಪ್ರಕರಣದ ಮಾಹಿತಿ ಪಡೆದುಕೊಂಡು, ಘಟನೆಯ ಸತ್ಯಾಂಶದ ಬಗ್ಗೆ ತಿಳಿದುಕೊಳ್ಳಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ‍್ಳಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೊಟೋ, ವೀಡಿಯೋದ ಬಗ್ಗೆ ಶಾಸಕರನ್ನು ಕೇಳಿದಾಗ, ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ Read More »

ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಮೋರಿ ರಚನೆ: ವಾಹನ ಸಂಚಾರಕ್ಕೆ ಅಡಚಣೆ

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬರುವ ಮರ್ಧಾಳ ಸಮೀಪದ ನೆಕ್ಕಿತಡ್ಕ ಎಂಬಲ್ಲಿ ರಸ್ತೆಗೆ  ಮೋರಿ ಅಳವಡಿಸಲು ಪ್ರಾರಂಭಿಸಿ ಎರಡು ತಿಂಗಳಾದರೂ ಕಾಮಗಾರಿ ಮುಗಿಯದೆ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಲೇ ಇದೆ. ಈಗ ಮೋರಿ ಅಳವಡಿಸುತ್ತಿರುವ  ಸ್ಥಳದಲ್ಲಿ ಈ ಹಿಂದೆ ಎರಡು ಫೀಟ್ ಸುತ್ತಳತೆಯ ಪೈಪ್ ಅಳವಡಿಸಿರುವುದರಿಂದ ಮಳೆಗಾಲದಲ್ಲಿ ಇಲ್ಲಿ ನೀರು ಸರಾಗವಾಗಿ ಹರಿಯದೆ ಮಳೆ ನೀರು ಶೇಕರಣೆಯಾಗಿ ಸಮಸ್ಯೆ ತಲೆದೋರುತ್ತಿತ್ತು. ಈ ಬಗ್ಗೆ  ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿ ಸದೃಢ ಮೋರಿ ಅಳವಡಿಸುವಂತೆ ಕೇಳಿಕೊಂಡಿದ್ದರು.

ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಮೋರಿ ರಚನೆ: ವಾಹನ ಸಂಚಾರಕ್ಕೆ ಅಡಚಣೆ Read More »

error: Content is protected !!
Scroll to Top