ಪುತ್ತೂರು

ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ  ಕಾರ್ಯದ ನೈಪುಣ್ಯತೆ  ಜೊತೆಗೆ  ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ : ಕೆ.ರವಿರಾಜ ಹೆಗ್ಡೆ | ಹಾಲು ಉತ್ಪಾದಕರ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ

ಪುತ್ತೂರು: ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ  ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ ಮಂಗಳವಾರ ಪುತ್ತೂರು ಟೌನ್ ಕೋಪರೆಟಿವ್ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು,  ದ. ಕ.ಹಾಲು ಒಕ್ಕೂಟ ನಿಯಮಿತ, ಮಂಗಳೂರು,  ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ದ. ಕ. ಸಹಕಾರಿ […]

ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ  ಕಾರ್ಯದ ನೈಪುಣ್ಯತೆ  ಜೊತೆಗೆ  ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ : ಕೆ.ರವಿರಾಜ ಹೆಗ್ಡೆ | ಹಾಲು ಉತ್ಪಾದಕರ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ Read More »

ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ

ಪುತ್ತೂರು: ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ವಿದ್ಯಾರ್ಥಿನಿ ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಪಿಎಚ್‍ ಡಿ ಪದವಿ ನೀಡಿದೆ. ಶಿವಾನಿ ಡಿ ಗೌಡ ಅವರು ಹಿರಿಯ ಪ್ರಾಧ್ಯಾಪಕ ಹಾಗೂ ಜಲಕೃಷಿ ವಿಭಾಗದ ಮುಖ್ಯಸ್ಥರಾಗಿರುವ ಡಾ.ಗಣಪತಿ ನಾಯ್ಕ ಎಂ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ Effect of dietary watermelon (Citrullus lanatus) and _Bacillus amyloliquefaciens on growth performance, immune response, disease resistance,

ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ Read More »

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಕೊಳ್ತಿಗೆ ಗ್ರಾಮ ಪಂಚಾಯತ್ ಎದುರು ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು ರಾಜ್ಯ ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ವತಿಯಿಂದ ಕೊಳ್ತಿಗೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸತ್ಯಪ್ರಕಾಶ್ ಕುಂಟಿಕಾನ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತೀರ್ಥನಂದ ಗೌಡ ದುಗ್ಗಳ, ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಸತೀಶ್ ಪಾಂಬಾರು, ಬಿಜೆಪಿ ತಾಲೂಕು ಉಪಾಧ್ಯಕ್ಷ ಯತಿಂದ್ರ ಕೊಚ್ಚಿ, ಶಿವರಾಮ್ ಭಟ್ ಭೀರ್ನಕಜೆ, ಗಣೇಶ್ ಭಟ್

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಕೊಳ್ತಿಗೆ ಗ್ರಾಮ ಪಂಚಾಯತ್ ಎದುರು ಬಿಜೆಪಿಯಿಂದ ಪ್ರತಿಭಟನೆ Read More »

ಅಕ್ಷಯ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಹೇಮ ಚಂದ್ರಹಾಸ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಮಾತನಾಡಿ, ಯೋಗವನ್ನು ಪ್ರತಿದಿನ ಅಭ್ಯಾಸ ಮಾಡಿದರೆ ದೇಹ ಮತ್ತು ಮನಸ್ಸು ಒತ್ತಡಮುಕ್ತವಾಗುತ್ತದೆ. ಅನೇಕ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್‍ ಪಕ್ಕಳ ಅಧ್ಯಕ್ಷತೆ ವಹಿಸಿ ಮಾತನಾಡಿ,  ಯೋಗದ ಮೂಲಕ ದೇಹದ ಆರೋಗ್ಯ ಹಾಗೂ ಮನಸ್ಸಿನ ಸಮತೋಲನ ವೃದ್ಧಿ

ಅಕ್ಷಯ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

ರಾಜ್ಯ ಸರಕಾರ ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ : ಕ್ಯಾ.ಗಣೇಶ್‍ ಕಾರ್ಣಿಕ್‍ | ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು: ಬಡವರಿಗೆ ಸರ್ಕಾರದ ಮನೆ ಸಿಗಬೇಕಾದರೆ ಲಂಚ ನೀಡಬೇಕಾದ ಪರಿಸ್ಥಿತಿ ಪ್ರಸ್ತುತ ಒದಗಿ ಬಂದಿದೆ. ರಾಜ್ಯ ಸರಕಾರ ಅಧಿಕಾರ ಬಳಸಿಕೊಂಡು ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದರು. ಅವರು ಸೋಮವಾರ ಅಮರ್ ಜವಾನ್ ಜ್ಯೋತಿ ಬಳಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ನಗರ ಸಭೆಯ ವ್ಯಾಪ್ತಿಯಲ್ಲಿ ನಡೆದ

ರಾಜ್ಯ ಸರಕಾರ ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ : ಕ್ಯಾ.ಗಣೇಶ್‍ ಕಾರ್ಣಿಕ್‍ | ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ Read More »

ದಶಮಾನೋತ್ಸವ ಸಂಭ್ರಮದಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆ | ಗಣಹೋಮ, ಲಕ್ಷ್ಮೀಪೂಜೆಯೊಂದಿಗೆ ದಶಮಾನೋತ್ಸವ ಆಚರಣೆ | ಸಭಾ ಕಾರ್ಯಕ್ರಮ | ದಾಖಲೆ ವ್ಯವಹಾರ, ಗುರಿ ಮುಟ್ಟಿದ ಸಾಧನೆ : ಚಿದಾನಂದ ಬೈಲಾಡಿ | ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ : ಸಂಜೀವ ಮಠಂದೂರು | ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಿ ಮಾದರಿ ಸಹಕಾರಿ ಸಂಘವಾಗಿ ಮೂಡಿಬರಲಿ : ಮೋಹನ್ ಗೌಡ ಇಡ್ಯಡ್ಕ | ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಸಹಕಾರಿ ಸಂಘ : ತ್ರಿವೇಣಿ ಪಲ್ಲತ್ತಾರು | ವ್ಯವಹಾರ ಧರ್ಮ ಸಂಘದ ಅಭಿವೃದ್ಧಿಗೆ ಪೂರಕವಾಗಿದೆ : ಸುಭಾಷ್ ರೈ ಕಡಮಜಲು | ಎಲ್ಲಾ ಜಾತಿ-ಧರ್ಮಗಳ ಗ್ರಾಹಕರ ಆರ್ಥಿಕ ಪ್ರಗತಿಗೆ ಸಹಕರಿಸುವ ಸಂಘ : ಪಿ.ಕೆ.ಮಹಮ್ಮದ್

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಕುಂಬ್ರ ಕಿರಣ್‍ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಯಲ್ಲಿ ನಡೆಯಿತು. ದಶಮಾನೋತ್ಸವದ ಅಂಗವಾಗಿ ಬೆಳಿಗ್ಗೆ 7 ಗಂಟೆಗೆ  ಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ಜರಗಿತು. ದಾಖಲೆಯ ವ್ಯವಹಾರ, ಗುರಿ ಮುಟ್ಟಿದ ಸಾಧನೆ : ಚಿದಾನಂದ ಬೈಲಾಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗ ಸಮುದಾಯ ಹತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಮಾತನಾಡಿ, ಒಕ್ಕಲಿಗ ಗೌಡ ಸೇವಾ ಸಂಘದ

ದಶಮಾನೋತ್ಸವ ಸಂಭ್ರಮದಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆ | ಗಣಹೋಮ, ಲಕ್ಷ್ಮೀಪೂಜೆಯೊಂದಿಗೆ ದಶಮಾನೋತ್ಸವ ಆಚರಣೆ | ಸಭಾ ಕಾರ್ಯಕ್ರಮ | ದಾಖಲೆ ವ್ಯವಹಾರ, ಗುರಿ ಮುಟ್ಟಿದ ಸಾಧನೆ : ಚಿದಾನಂದ ಬೈಲಾಡಿ | ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ : ಸಂಜೀವ ಮಠಂದೂರು | ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಿ ಮಾದರಿ ಸಹಕಾರಿ ಸಂಘವಾಗಿ ಮೂಡಿಬರಲಿ : ಮೋಹನ್ ಗೌಡ ಇಡ್ಯಡ್ಕ | ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಸಹಕಾರಿ ಸಂಘ : ತ್ರಿವೇಣಿ ಪಲ್ಲತ್ತಾರು | ವ್ಯವಹಾರ ಧರ್ಮ ಸಂಘದ ಅಭಿವೃದ್ಧಿಗೆ ಪೂರಕವಾಗಿದೆ : ಸುಭಾಷ್ ರೈ ಕಡಮಜಲು | ಎಲ್ಲಾ ಜಾತಿ-ಧರ್ಮಗಳ ಗ್ರಾಹಕರ ಆರ್ಥಿಕ ಪ್ರಗತಿಗೆ ಸಹಕರಿಸುವ ಸಂಘ : ಪಿ.ಕೆ.ಮಹಮ್ಮದ್ Read More »

ವಿಷ ಸೇವಿಸಿದ ಬೆಂಗಳೂರು ಮೂಲದ ಯುವ ಜೋಡಿ

ಕೊಕ್ಕಡ: ವಿಷ ಸೇವಿಸಿ ಅಸ್ವಸ್ವಗಾಗಿ, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಹಾಗೂ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರು ಮೂಲದ ಯುವಕ ಹಾಗೂ ಯುವತಿ ಜೂ.22ರಂದು ಬೆಳಿಗ್ಗೆ ಧರ್ಮಸ್ಥಳದಿಂದ ಕೊಕ್ಕಡಕ್ಕೆ ಬಸ್ಸಿನಲ್ಲಿ ಬಂದು ಅಲ್ಲಿಂದ ಕೊಕ್ಕಡ-ಪೆರಿಯಶಾಂತಿ ರಾಜ್ಯ ಹೆದ್ದಾರಿ ಮೂಲಕ ನಡೆದುಕೊಂಡು ದಡ್ಡಲುಪಳಿಕೆ ಎಂಬಲ್ಲಿ ಅರಣ್ಯದೊಳಗೆ ಹೋಗಿ ವಿಷ ಸೇವಿಸಿದ್ದರು ಎನ್ನಲಾಗಿದೆ. ಅಲ್ಲಿಂದ ಅವರು ಮತ್ತೆ ಹೆದ್ದಾರಿ ಪಕ್ಕಕ್ಕೆ ಬಂದಿದ್ದು, ಈ ವೇಳೆ ಅಸ್ವಸ್ವರಂತೆ ಕಾಣುತ್ತಿದ್ದ ಇವರನ್ನು ಸ್ಥಳೀಯರು ವಿಚಾರಿಸಿದ ವೇಳೆ ಇಬ್ಬರು

ವಿಷ ಸೇವಿಸಿದ ಬೆಂಗಳೂರು ಮೂಲದ ಯುವ ಜೋಡಿ Read More »

ಕೊಯಿಲ  ಕೆ. ಸಿ. ಫಾರಂ ಶಾಲೆಯಲ್ಲಿ ಯೋಗ ದಿನಾಚರಣೆ

ಕಡಬ: ಕೊಯಿಲ ಕೆ. ಸಿ. ಫಾರಂ ಶಾಲೆಯಲ್ಲಿ 11ನೇಯ ವಿಶ್ವಯೋಗ ದಿನವನ್ನು ಶನಿವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಭಾರ ಮುಖ್ಯಶಿಕ್ಷಕಿ ಅನುಪಮಾ ಅವರು ಮಕ್ಕಳಿಗೆ ‘ ವಿಶ್ವ ಯೋಗ’ ದಿನದ ಪ್ರತಿಜ್ಞೆಯ ಮೂಲಕ ಯೋಗ ದಿನಾಚರಣೆಯ ಸಂಕಲ್ಪ ಮಾಡಿಸಿದರು. ಕಾರ್ಯಕ್ರಮದಲ್ಲಿ ಯೋಗ ಸಂಯೋಜಕ ಲಂಕೇಶ್ ಮಕ್ಕಳಿಗೆ ಯೋಗದ ಬಗ್ಗೆ ಘೋಷ ವಾಕ್ಯದ ಮೂಲಕ ಯೋಗದ ಅರಿವು ಮೂಡಿಸಿದರು.. ನಂತರ ಯೋಗದ ಹಲವಾರು ಆಸನ ಗಳನ್ನು ಮಾಡಿಸಿ, ಯೋಗ ದಿನವನ್ನು ಅರ್ಥವತ್ತಾಗಿ ಆಚರಣೆ ಮಾಡಲಾಯಿತು. ಲ್ಲಿ ಎಲ್ಲಾ  ಶಾಲಾ

ಕೊಯಿಲ  ಕೆ. ಸಿ. ಫಾರಂ ಶಾಲೆಯಲ್ಲಿ ಯೋಗ ದಿನಾಚರಣೆ Read More »

ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟನೆ

ಪುತ್ತೂರು: ಗುರುಕುಲ  ಶಿಕ್ಷಣ  ಪದ್ಧತಿ  ಬ್ರಿಟಿಷರಿಂದ  ನಾಶವಾಗಿದೆ.  ಇಂದಿನ  ಶಿಕ್ಷಣ  ಪಠ್ಯಪುಸ್ತಕಗಳಲ್ಲಿ  ದೇಶಭಕ್ತಿ  ಕಾಣಸಿಗುವುದಿಲ್ಲ  ಎಂದು  ತಾಲೂಕು  ಧರ್ಮ  ಶಿಕ್ಷಣ  ಸಮಿತಿ ಸಂಚಾಲಕ  ಸುಬ್ರಹ್ಮಣ್ಯ ನಟ್ಟೋಜ ಅಭಿಪ್ರಾಯಪಟ್ಟರು. ಅವರು ಭಾನುವಾರ ಧರ್ಮ ಶಿಕ್ಷಣ ಸಮಿತಿ ವತಿಯಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟಿಸಿ ಮಾತನಾಡಿದರು. ನಮ್ಮನ್ನು ನಿರ್ಗತಿಕರನ್ನಾಗಿ ಮಾಡಿದ ಬ್ರಿಟಿಷ್ ಅಧಿಕಾರಿಗಳನ್ನು ವೈಭವೀಕರಿಸುವ ಶಿಕ್ಷಣ ಇನ್ನೂ ಕೂಡ ನಮ್ಮ ಪಠ್ಯ ಪುಸ್ತಕಗಳಲ್ಲಿದೆ.  ಮನುಷ್ಯನನ್ನು ಮನುಷ್ಯತ್ವಕ್ಕೇರಿಸುವ ಶಿಕ್ಷಣ ನಮಗೆ ಬೇಕಾಗಿದೆ. ಇಂದಿನ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕು. ದೇಶಪ್ರೇಮ ಎದ್ದು ಕಾಣಬೇಕು. ಹಿಂದೂ ಧರ್ಮದ ರಕ್ಷಣೆ ಗೋಸ್ಕರ ಇಂದಿನ ಮಕ್ಕಳಿಗೆ ಧಾರ್ಮಿಕಶಿಕ್ಷಣದ ಅವಶ್ಯಕತೆ ಇದೆ ಎಂದರು. ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರ ಗೌರವಾಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ ಮಾತನಾಡಿ, ಇಂದಿನ ಪೀಳಿಗೆಗೆ ಧರ್ಮ ಶಿಕ್ಷಣದ  ಅವಶ್ಯಕತೆ ಇದೆ.  ಈ ಶುಭ ಕಾರ್ಯಕ್ಕೆ ಶ್ರೀ ಕೃಷ್ಣನ ಆಶೀರ್ವಾದ ಇರಲಿ ಎಂದು ಶುಭ ಹಾರೈಸಿದರು. ಧರ್ಮ ಶಿಕ್ಷಣದ ತಾಲೂಕು ಸಮಿತಿ ಅಧ್ಯಕ್ಷ ಸದಾಶಿವ ರೈ ದಂಬೆಕಾನ ಮಾತನಾಡಿ, ಪ್ರತಿಯೊಬ್‍ ಹಿಂದೂವಿಗೂ  ಧಾರ್ಮಿಕ  ಶಿಕ್ಷಣದ  ಅವಶ್ಯಕತೆ ಇದೆ.  ಧಾರ್ಮಿಕ  ಶಿಕ್ಷಣ  ಸಿಗದೇ ನಾವು ಸೋತಿದ್ದೇವೆ. 

ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟನೆ Read More »

ಕನ್ಯಾಡಿ ಯಕ್ಷಭಾರತಿಯಿಂದ ವಿಶ್ವ ಯೋಗ ದಿನಾಚರಣೆ

ಕನ್ಯಾಡಿ ಯಕ್ಷಭಾರತಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಕನ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನ ದಲ್ಲಿ ಜರಗಿತು. ದೇವಸ್ಥಾನದ ಸಮಿತಿ ಅಧ್ಯಕ್ಷ ಹರೀಶ ರಾವ್ ಯಂ. ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿ,  ಯೋಗದ ನಿತ್ಯ ಅನುಷ್ಠಾನದಿಂದ ಸ್ವಸ್ತ ಮನಸ್ಸು ಮತ್ತು ಅರೋಗ್ಯ ಹೊಂದಲು ಸಾಧ್ಯವೆಂದರು.  ಉಜಿರೆಯ ಎಸ್ ಡಿ ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಡಾ ಅಭಿಷೇಕ್ ಪೂಜಾರಿ, ಯೋಗದ ಅಷ್ಟಾಂಗಗಳ ಬಗ್ಗೆ ಮಾಹಿತಿ ನೀಡಿ ಸರಳವಾಗಿ ಮಾಡುವ ಯೋಗ ಕ್ರಿಯೆಗಳ ಪ್ರಾತ್ಯಕ್ಷಿಕೆಯನ್ನು ನೀಡಿ

ಕನ್ಯಾಡಿ ಯಕ್ಷಭಾರತಿಯಿಂದ ವಿಶ್ವ ಯೋಗ ದಿನಾಚರಣೆ Read More »

error: Content is protected !!
Scroll to Top