ಪುತ್ತೂರು

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ

ಪುತ್ತೂರು: ಧರ್ಮಜಾಗೃತಿಯ ಜೊತೆಗೆ ಅನ್ನ, ಅಕ್ಷರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜ. 22ರಂದು ಆಯೋಜಿಸಿದ್ದು, ರಾಜ್ಯದ ಎಲ್ಲಾ ಕಡೆಗಳಿಂದಲೂ ಜನ ಬಂದು ಸೇರಲಿದ್ದಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನ ಒಕ್ಕಲಿಗರ ಪೀಠವಾದರೂ, ಎಲ್ಲಾ ಸಮುದಾಯದವರನ್ನು ಅಪ್ಪಿಕೊಂಡು – ಒಪ್ಪಿಕೊಂಡು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. […]

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ Read More »

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ.

ಪುತ್ತೂರು: ಸೇತುವೆ ನಿರ್ಮಾಣದ ಸಂದರ್ಭ ಸ್ಥಗಿತಗೊಂಡಿದ್ದ ಬಸ್ ಸಂಪರ್ಕವನ್ನು ಮತ್ತೆ ಆರಂಭಿಸುವಂತೆ ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ, ಪುತ್ತೂರು – ರೆಂಜ ನಡುವೆ ಮೊದಲು ಬಸ್ ಓಡಾಟವಿತ್ತು. ಸೇತುವೆ ನಿರ್ಮಾಣ ಕಾಮಗಾರಿಗಾಗಿ ಬಸ್ ಸಂಚಾರವನ್ನು ಮೊಟುಕುಗೊಳಿಸಲಾಗಿತ್ತು. ಇದೀಗ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಸಂಪರ್ಕ ರಸ್ತೆ ಸುಸ್ಥಿತಿಗೆ ಬಂದಿದೆ.

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ. Read More »

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ

ಪುತ್ತೂರು: ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ (65) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಅವರ ಪತ್ನಿಯ ಸಹೋದರಿ ದಿ. ಪುಷ್ಪಲತಾ ಅವರ ಪತಿ ಗಂಗಾಧರ ಗೌಡ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರದ ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿದ್ದಾರೆ.ಮೃತರು ಪುತ್ರ, ಕೆಪಿಟಿ ಉದ್ಯೋಗಿ ಧನುಷ್ ಹಾಗೂ ಪುತ್ರಿ ಲಿಖಿತ

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ 6 ವಿದ್ಯಾರ್ಥಿಗಳು ನೈರುತ್ಯ ವಲಯ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಜನವರಿ 9ರಿಂದ 12ರ ವರೆಗೆ ಚೆನ್ನೈನ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ತೃತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿರಂಜನ್ ಎಚ್. 100 ಮೀಟರ್ ಓಟ ಹಾಗೂ 4100 ಮೀ. ರಿಲೇ ಮತ್ತು ಕೀರ್ತಿರಾಜ್ ಕೆ.ಎಸ್. ಜಾವೆಲಿನ್ ಎಸೆತದಲ್ಲಿ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ Read More »

ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ | ಮನೆ ಮನೆಗೆ ಆಮಂತ್ರಣ

ಪುತ್ತೂರು: ಪುತ್ತೂರಿನಲ್ಲಿ ನಡೆಯಲಿರುವ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ ಪತ್ರವನ್ನು ಗೌಡ ಸಮುದಾಯದ ಕುಂಬ್ರ ವಲಯದ ಮನೆಮನೆಗೆ ತಲುಪಿಸಲಾಯಿತು. ಸತೀಶ್ ಪಾಂಬಾರು, ಲೊಕೇಶ್ ಚಾಕೋಟೆ, ವೆಂಕಟ್ರಮಣ ಗೌಡ ಕೈಕುಳಿ, ಶ್ರೀಧರ ಗೌಡ ಅಂಗಡಿಹಿತ್ಲು, ಜಯರಾಮ ಗೌಡ ದೊಡ್ಡಮನೆ, ವಿದ್ಯಾಧರ ಪರ್ಲ, ಗಣೇಶ್ ಅಮೆಚೋಡು, ಪುಷ್ಪಾವತಿ ಪಾಲ್ತಾಡಿ ಉಪಸ್ಥಿತರಿದ್ದರು.

ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ | ಮನೆ ಮನೆಗೆ ಆಮಂತ್ರಣ Read More »

ಜ. ೨೨: ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ಜಯಂತ್ಯೋತ್ಸವ | ಆಲಂಕಾರಿನಲ್ಲಿ ವಲಯ ಮಟ್ಟದ ಪೂರ್ವಸಿದ್ಧತಾ ಸಭೆ

ಪುತ್ತೂರು: ಪುತ್ತೂರಿನಲ್ಲಿ ಜ. ೨೨ರಂದು ನಡೆಯಲಿರುವ ಭೈರವೈಕ್ಯ ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಆಲಂಕಾರಿನಲ್ಲಿ ಸೋಮವಾರ ವಲಯವಾರು ಪೂರ್ವಸಿದ್ಧತಾ ಸಭೆ ನಡೆಯಿತು. ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚು ಜನ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು. ಇದಕ್ಕಾಗಿ ಸಮುದಾಯದ ಪ್ರತಿ ಮನೆಗೂ ಆಮಂತ್ರಣ ಪತ್ರವನ್ನು ತಲುಪಿಸಬೇಕು ಮತ್ತು ಪ್ರತಿಯೊಬ್ಬರೂ ಸಭೆಯಲ್ಲಿ ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಅದ್ದೂರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದರಲ್ಲೂ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಿಳಿಸಲಾಯಿತು. ಸಭೆಯಲ್ಲಿ ರಾಮಣ್ಣ ದೋಳ, ಚಕ್ರಪಾಣಿ ಬಾಕಿಲ, ರಾಮಣ್ಣ

ಜ. ೨೨: ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ಜಯಂತ್ಯೋತ್ಸವ | ಆಲಂಕಾರಿನಲ್ಲಿ ವಲಯ ಮಟ್ಟದ ಪೂರ್ವಸಿದ್ಧತಾ ಸಭೆ Read More »

ಜ. 22ಕ್ಕೆ ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಶ್ರೀಗಳ ಜಯಂತ್ಯೋತ್ಸವ| ಗೌಡ ಸಮುದಾಯ ಭವನದಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜ.೨೨ ರಂದು ನಡೆಯಲಿರುವ ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವದ ಪೂರ್ವ ಸಿದ್ದತೆ ಹಿನ್ನೆಲೆಯಲ್ಲಿ ಸೋಮವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ತುರ್ತು ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು. ಮುಂದೆ ಆಗಬೇಕಾಗಿರುವ ಸಿದ್ಧತೆಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಜಂಯತ್ಯೋತ್ಸವ ಸಮಿತಿ ಸಂಚಾಲಕ ದಿನೇಶ್ ಮೆದು, ಒಕ್ಕಲಿಗ

ಜ. 22ಕ್ಕೆ ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಶ್ರೀಗಳ ಜಯಂತ್ಯೋತ್ಸವ| ಗೌಡ ಸಮುದಾಯ ಭವನದಲ್ಲಿ ಪೂರ್ವಸಿದ್ಧತಾ ಸಭೆ Read More »

ರಾಜ್ಯ ಗೃಹ ಸಚಿವರ ವಜಾಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರೈತ ಸಂಘ

ಪುತ್ತೂರು: ಅಡಕೆ ಬಗ್ಗೆ ಗೊಂದಲಕಾರಿ ಹೇಳಿಕೆ ನೀಡಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತಕ್ಷಣವೇ ಮಂತ್ರಿ ಪದವಿಯಿಂದ ಕೈಬಿಡುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಗೃಹ ಸಚಿವ ಅರಜ ಜ್ಞಾನೇಂದ್ರ ಅವರು ಅಧಿವೇಶನದಲ್ಲಿ ಅಡಕೆ ಬೆಳೆಗೆ ಪ್ರೋತ್ಸಾಹ ನೀಡಬಾರದು. ಅಡಕೆ ಬೆಳೆಯುವುದನ್ನು ನಿಲ್ಲಿಸಬೇಕು ಎಂಬ ಹೇಳಿಕೆ ನೀಡಿ ಅಡಕೆ ಬೆಳಗಾರರಿಗೆ ದೊಡ್ಡ ಅಘಾತ ನೀಡಿದ್ದಾರೆ. ಅವರ

ರಾಜ್ಯ ಗೃಹ ಸಚಿವರ ವಜಾಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರೈತ ಸಂಘ Read More »

ಗೃಹ ಸಚಿವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪುತ್ತೂರು: ಅಡಕೆ ಬಗ್ಗೆ ರಾಜ್ಯ ಗೃಹ ಸಚಿವರ ಹೇಳಿಕೆಯನ್ನು ಖಂಡಿಸಿ ಸೋಮವಾರ ಅಮರ್ ಜವಾನ್ ಜ್ಯೋತಿ ಸಮೀಪ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಕಿಸಾನ್ ಘಟಕ ಪ್ರತಿಭಟನೆ ನಡೆಸಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಅಡಕೆಯ ಪಾತ್ರ ಮಹತ್ವದ್ದು. ಅಡಕೆಗೆ ಭವಿಷ್ಯವಿಲ್ಲ ಎಂದು ಗೃಹ ಸಚಿವರ ನೀಡಿರುವ ಹೇಳಿಕೆಯು ಖಂಡನೀಯವಾಗಿದೆ. ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಡಕೆ ಮಾತ್ರವಲ್ಲ ಯಾವುದಕ್ಕೂ ಭವಿಷ್ಯವಿಲ್ಲ ಎಂದಾಗಿದೆ. ಅಡಕೆಗೆ ಬಂದಿರುವ

ಗೃಹ ಸಚಿವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ Read More »

ಕಟ್ಟತ್ತಾರಿನಲ್ಲಿ ಸಂಪರ್ಕ ರಸ್ತೆಯಿಲ್ಲದೇ ಸಮಸ್ಯೆ | ರಸ್ತೆ ನಿರ್ಮಿಸಲು ರೈತ ಸಂಘ ಆಗ್ರಹ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು – ಬಂಟಕಲ್ಲು- ಬಾರೆಕೊಚ್ಚಿ- ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ನೀಡಿದ್ದಾರೆ. ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ ಇದೆ. ಅಗತ್ಯ ಸಾಮಾಗ್ರಿಗಳನ್ನು ಕೊಂಡೊಯ್ಯಲೂ ಸಮಸ್ಯೆ ಇದೆ. ಸುಮಾರು ಅರ್ಧದಷ್ಟು ರಸ್ತೆಯನ್ನು ರೈತ

ಕಟ್ಟತ್ತಾರಿನಲ್ಲಿ ಸಂಪರ್ಕ ರಸ್ತೆಯಿಲ್ಲದೇ ಸಮಸ್ಯೆ | ರಸ್ತೆ ನಿರ್ಮಿಸಲು ರೈತ ಸಂಘ ಆಗ್ರಹ Read More »

error: Content is protected !!
Scroll to Top