ಪುತ್ತೂರು

ಸಿಬಿಎಸ್‌ಸಿ 10ನೇ ತರಗತಿಯ ಫಲಿತಾಂಶ ಪ್ರಕಟ: ತಿರುವನಂತಪುರಂ ಪ್ರಥಮ, ಬೆಂಗಳೂರು ದ್ವಿತೀಯ

ಬೆಂಗಳೂರು: ಸಿಬಿಎಸ್‌ಇ‌ 10ನೇ ತರಗತಿಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೇರಳದ ತಿರುವನಂತಪುರದ ಶೇಕಡ 99.91ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಅತ್ಯುತ್ತಮ ಉತ್ತೀರ್ಣ ದಾಖಲಿಸಿದೆ. ಶೇ. 98.64 ಅಂಕಗಳನ್ನು ಪಡೆದಿರುವ ಬೆಂಗಳೂರು 2ನೇ ಸ್ಥಾನದಲ್ಲಿದೆ. ಅಧಿಕೃತ ವೆಬ್‌ ಸೈಟ್‌ ಗಳಾದ http://cbse.nic.in  ಮತ್ತು http://cbse.gov.in ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಬಹುದು. ಸಿಬಿಎಸ್‌ಇ 10ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21ರವರೆಗೆ ನಡೆದಿತ್ತು. 12ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15ರಿಂದ […]

ಸಿಬಿಎಸ್‌ಸಿ 10ನೇ ತರಗತಿಯ ಫಲಿತಾಂಶ ಪ್ರಕಟ: ತಿರುವನಂತಪುರಂ ಪ್ರಥಮ, ಬೆಂಗಳೂರು ದ್ವಿತೀಯ Read More »

ಮೇ 12 ರಿಂದ 25 : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ :ಮೇ 14 ರಂದು ಪುತ್ತೂರಿನಿಂದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಮಂಗಳೂರಿನ ಕುಲಶೇಖರಲ್ಲಿರುವ ಶ್ರೀ ವೀರನಾರಾಯಣ ದೇವಸ್ಥಾನದ  ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮೇ 14 ರಿಂದ 25 ರ ತನಕ ನಡೆಯಲಿದ್ದು, ಮೇ.14 ರಂದು ಪುತ್ತೂರು ಕುಲಾಲರ ಯಾನೆ ಮೂಲ್ಯರ ಸಂಘದ ವತಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಪುತ್ತೂರು ತಾಲೂಕು ಕುಲಾಲ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಸುಮಾರು 1200 ವರ್ಷಗಳ ಇತಿಹಾಸ ಇರುವ ದೇವಸ್ಥಾನ ಸುಮಾರು 10 ಕೋಟಿ ರೂ. ವಚ್ಚದಲ್ಲಿ ಪುನರ್ ನಿರ್ಮಾಣಗೊಂಡಿದ್ದು, ಈ ಭಾಗದ

ಮೇ 12 ರಿಂದ 25 : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ :ಮೇ 14 ರಂದು ಪುತ್ತೂರಿನಿಂದ ಹೊರೆಕಾಣಿಕೆ ಮೆರವಣಿಗೆ Read More »

ದ್ವಿತೀಯ ಪಿಯುಸಿ : ಕುಂಬ್ರ ಸ.ಪ.ಪೂ. ಕಾಲೇಜಿಗೆ ಶೇ. 80 ಫಲಿತಾಂಶ

ಪುತ್ತೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜು ಶೇ. 80 ಫಲಿತಾಂಶ ದಾಖಲಿಸಿದೆ. ಕಾಲೇಜಿನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ 105 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 84 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 44 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ. 81.8 ಫಲಿತಾಂಶ ಬಂದಿರುತ್ತದೆ. ಸ್ವಾತಿ ಪಿ. 530 ಮತ್ತು ಅಕ್ಷಿತಾ 529 ಅಂಕ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 43

ದ್ವಿತೀಯ ಪಿಯುಸಿ : ಕುಂಬ್ರ ಸ.ಪ.ಪೂ. ಕಾಲೇಜಿಗೆ ಶೇ. 80 ಫಲಿತಾಂಶ Read More »

ಅರುಣ್ ಕುಮಾರ್ ಪುತ್ತಿಲ ಅವರಿಂದ ಪ್ರಮುಖರ ಸಭೆ | ಅಪಪ್ರಚಾರ, ಅವಮಾನಗಳಿಗೆ ಮುಂದಿನ ದಿನದಲ್ಲಿ ಉತ್ತರ | 7-8 ಸಾವಿರ ಅಂತರಗಳಿಂದ ಗೆಲುವು ಪಡೆಯಲಿದ್ದೇವೆ

ಪುತ್ತೂರು: ಹಿಂದುತ್ವದ ಪರ ಇದ್ದೇವೆ ಎನ್ನುವ ಒಂದೇ ಯೋಚನೆಯೊಂದಿಗೆ ನನ್ನ ಜೊತೆ ಬಂದು ನಿಂತಿದ್ದಾರೆ. ನನ್ನ ಕೊನೆಯ ಉಸಿರು ಇರುವ ತನಕ ನಿಮ್ಮ ಜೊತೆಗೆ ಇರುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಗುರುವಾರ ಸಂಜೆ ಮುಕ್ರಂಪಾಡಿ ಸುಭದ್ರ ಸಭಾಮಂದಿರದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ನಿಶ್ಚಿತವಾಗಿಯೂ ಈ ಬಾರಿಯ ಗೆಲುವು ನಮ್ಮದೇ. ಹಿಂದು ರಾಷ್ಟ್ರದ ಕಲ್ಪನೆಯನ್ನು ನಾವೆಲ್ಲ ಸೇರಿ ಸಾಕಾರಗೊಳಿಸೋಣ. ಸಿದ್ಧಾಂತ, ಬದ್ಧತೆಯ ಆಧಾರದಲ್ಲಿ ಹಿಂದು ಸಮಾಜಕ್ಕೆ ಶಕ್ತಿ ಕೊಡುವ ಕೆಲಸವನ್ನು ನಾವೆಲ್ಲ

ಅರುಣ್ ಕುಮಾರ್ ಪುತ್ತಿಲ ಅವರಿಂದ ಪ್ರಮುಖರ ಸಭೆ | ಅಪಪ್ರಚಾರ, ಅವಮಾನಗಳಿಗೆ ಮುಂದಿನ ದಿನದಲ್ಲಿ ಉತ್ತರ | 7-8 ಸಾವಿರ ಅಂತರಗಳಿಂದ ಗೆಲುವು ಪಡೆಯಲಿದ್ದೇವೆ Read More »

ಕೊಂಬೆಟ್ಟು ರಸ್ತೆಯಲ್ಲಿ ಧರೆಗುರುಳಿದ ಮರ: ವಿದ್ಯುತ್ ಸಂಪರ್ಕ ಕಡಿತ

ಪುತ್ತೂರು: ಇಲ್ಲಿನ ಕೊಂಬೆಟ್ಟು ರಸ್ತೆಯಲ್ಲಿ ಮರವೊಂದು ರಸ್ತೆಗಡ್ಡವಾಗಿ ಧರೆಗುರುಳಿದ್ದು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮರ ರಸ್ತೆಗಡ್ಡವಾಗಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರಮಾದವಶಾತ್, ಯಾವುದೇ ಅಪಾಯ ಸಂಭವಿಸಿಲ್ಲ. ಈ ಭಾಗದ ಅನೇಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್ ತಂತಿ ಕಡಿದು ಬಿದ್ದಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕೊಂಬೆಟ್ಟು ರಸ್ತೆಯಲ್ಲಿ ಧರೆಗುರುಳಿದ ಮರ: ವಿದ್ಯುತ್ ಸಂಪರ್ಕ ಕಡಿತ Read More »

ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಪುತ್ತೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ, ಪ್ರವೀಣ್ ಹೆತ್ತವರೊಂದಿಗೆ ಮಾತನಾಡಿದರು. ಪ್ರವೀಣ್ ನೆಟ್ಟಾರು ಅವರ ಪುತ್ಥಳಿಗೆ ನಮಸ್ಕರಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ – ತಾಯಿಯ ಆಶೀರ್ವಾದ ಪಡೆದರು. ಇತ್ತೀಚೆಗೆ ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದು, ರಾಜ್ಯ – ದೇಶದ ಗಮನ ಸೆಳೆದಿತ್ತು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಹೊಸ ಮನೆಯನ್ನು ನಿರ್ಮಿಸಿಕೊಡಲಾಗಿತ್ತು.

ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ Read More »

ಕಾರ್ಯಕರ್ತರ ಅವಗಣನೆಗೆ ತಕ್ಕ ಉತ್ತರ ನೀಡಿದ್ದೇವೆ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಒಂದು ಬದ್ಧತೆಗಾಗಿ ಚುನಾವಣೆ ಎದುರಿಸಿದ್ದೇವೆ. ಸ್ಪಷ್ಟ ಸಂದೇಶವನ್ನು ನಾಯಕರಿಗೆ ನೀಡಿದ್ದೇವೆ. ಚುನಾವಣಾ ಆಯೋಗ ತಿಳಿಸಿದ ಪರಿಮಿತಿಯೊಳಗಡೇ ಖರ್ಚು – ವೆಚ್ಚಗಳನ್ನು ಸರಿದೂಗಿಸಿದ್ದೇವೆ. ಇದನ್ನೆಲ್ಲಾ ಕಾರ್ಯಕರ್ತರೇ ನಿರ್ವಹಿಸಿದ್ದು, ಆದ್ದರಿಂದ ಚುನಾವಣೆಯ ಗೆಲುವು ಕಾರ್ಯಕರ್ತರ ಗೆಲುವು ಎಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಕಾರ್ಯಕರ್ತರಿಂದ, ಮತದಾರರಿಂದ ಅಭೂತಪೂರ್ವ ಬೆಂಬಲ ಸಿಕ್ಕಿದೆ. ನಿರೀಕ್ಷೆಗೂ ಮೀರಿದ ಪ್ರೋತ್ಸಾಹ, ಬೆಂಬಲ ವ್ಯಕ್ತವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ. ಸುಮಾರು 8ರಿಂದ 9

ಕಾರ್ಯಕರ್ತರ ಅವಗಣನೆಗೆ ತಕ್ಕ ಉತ್ತರ ನೀಡಿದ್ದೇವೆ: ಅರುಣ್ ಕುಮಾರ್ ಪುತ್ತಿಲ Read More »

ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ

ಪುತ್ತೂರು: ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟಿಪ್ಪರ್ ಅಪ್ಪಳಿಸಿತ್ತು. ಅಷ್ಟೇ, ಬೈಕಿನಲ್ಲಿದ್ದ ಸಹೋದರರಿಬ್ಬರಿಗೂ ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು. ನೆರವಿಗೆ ನಿಲ್ಲಬೇಕಿದ್ದ ತಂದೆ ವಿಕಲಚೇತನ. ಸಹಾಯಕ್ಕೆ ನಿಲ್ಲುವವರಾರು? ಕುಟುಂಬದ ಜವಾಬ್ದಾರಿಗೆ ಹೆಗಲು ಕೊಡುವವರಾರು? ಇಂತಹ ದೈನವೀ ಸ್ಥಿತಿಯಲ್ಲಿ ಸಹೋದರರಿಗೆ ನೆರವಾಗುವಂತೆ ತಾಯಿ ಮನವಿ ಮಾಡಿಕೊಂಡಿದ್ದಾರೆ. ಇದು ಕುಟುಂಬವೊಂದರ ಹೃದಯ ವಿದ್ರಾವಕ ಸ್ಥಿತಿ. ಕಡಬ ತಾಲೂಕಿನ ಕುದ್ಮಾರು ಗ್ರಾಮದ ಪದ್ಮಯ್ಯ ಗೌಡ ಪುಷ್ಪಲತಾ ದಂಪತಿ ಪುತ್ರರಾದ ಮಿಥುನ್ ಹಾಗೂ ಚಿಂತನ್ ಅಪಘಾತಕ್ಕೀಡಾದವರು.

ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ Read More »

ಆಶಾ ತಿಮ್ಮಪ್ಪ ಪರ 70ರಿಂದ 80 ಸಾವಿರ ಮತ | ಗೆಲುವು ಖಂಡಿತಾ ಎಂದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಈ ಬಾರಿ ಉತ್ತಮ ಮತದಾನವಾಗಿದ್ದು, ಶೇ. 80ರಷ್ಟು ಮತದಾರರು ಮತದಾನ ಮಾಡಿದ್ದಾರೆ. ಇದರಲ್ಲಿ 75 ಸಾವಿರದಿಂದ 80 ಸಾವಿರದಷ್ಟು ಮತಗಳು ಬಿಜೆಪಿ ಪರವಾಗಿ ಬಿದ್ದಿವೆ ಎಂದು ಶಾಸಕ ಸಂಜೀವ ಮಠಂದೂರು ವಿಶ್ವಾಸ ವ್ಯಕ್ತಪಡಿಸಿದರು. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ಹಿಂದುತ್ವಕ್ಕೆ ಒತ್ತು ನೀಡಿರುವ ಕ್ರಮ, ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡಿರುವ ಸಮರೋಪಾದಿ ಕೆಲಸಗಳ ಪರಿಣಾಮವಾಗಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಬಹುಮತದಿಂದ ಗೆದ್ದು ಬರಲಿದ್ದಾರೆ ಎಂದರು. ಹಿಂದಿನ ವಿಧಾನಸಭಾ

ಆಶಾ ತಿಮ್ಮಪ್ಪ ಪರ 70ರಿಂದ 80 ಸಾವಿರ ಮತ | ಗೆಲುವು ಖಂಡಿತಾ ಎಂದ ಶಾಸಕ ಸಂಜೀವ ಮಠಂದೂರು Read More »

25ರಿಂದ 30 ಸಾವಿರ ಮತಗಳ ಅಂತರದಿಂದ ಜಯ: ಅಶೋಕ್ ಕುಮಾರ್ ರೈ ವಿಶ್ವಾಸ | ಹಾರ, ಸನ್ಮಾನ ಬೇಡ, ಆ ಹಣ ಬಡವರಿಗೆ ನೀಡಿ | ಬೇರೆ ಪಕ್ಷದವರಿಗೂ ನೋವುಂಟು ಮಾಡಬೇಡಿ | ಕಾಂಗ್ರೆಸ್ ಒಗ್ಗಟ್ಟಿಗೆ ಅಭಿನಂದನೆ ತಿಳಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ಚುನಾವಣೆಯಲ್ಲಿ ಗೆಲುವಿನ ಅಲೆ ನಮ್ಮ ಪರವಾಗಿದೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಈ ಬಾರಿ ಗೆಲುವುದು ಖಂಡಿತಾ. ಪುತ್ತೂರಿನಲ್ಲಿ 25ರಿಂದ 30 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಚುನಾವಣೆ ಉತ್ತಮ ರೀತಿಯಲ್ಲಿ ನಡೆದಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಈ ಚುನಾವಣೆಯಲ್ಲಿ ಮತದಾರರು ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ

25ರಿಂದ 30 ಸಾವಿರ ಮತಗಳ ಅಂತರದಿಂದ ಜಯ: ಅಶೋಕ್ ಕುಮಾರ್ ರೈ ವಿಶ್ವಾಸ | ಹಾರ, ಸನ್ಮಾನ ಬೇಡ, ಆ ಹಣ ಬಡವರಿಗೆ ನೀಡಿ | ಬೇರೆ ಪಕ್ಷದವರಿಗೂ ನೋವುಂಟು ಮಾಡಬೇಡಿ | ಕಾಂಗ್ರೆಸ್ ಒಗ್ಗಟ್ಟಿಗೆ ಅಭಿನಂದನೆ ತಿಳಿಸಿದ ಅಶೋಕ್ ಕುಮಾರ್ ರೈ Read More »

error: Content is protected !!
Scroll to Top