ಪುತ್ತೂರು

ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ

ಪುತ್ತೂರು: “ಎನನ್ ಬದ್ಕಾಯ ಮಗ…” ತನ್ನ ಅನಾರೋಗ್ಯದ ಸಮಯದಲ್ಲಿ ನೆರವಾದ ಶಾಸಕ ಸಂಜೀವ ಮಠಂದೂರು ಅವರಿಗೆ ಮಹಿಳೆಯೊಬ್ಬರು ಕೃತಜ್ಞತೆ ಸಲ್ಲಿಸಿದ್ದ ಭಾವುಕ ಕ್ಷಣವಿದು. ಕೆಲ ದಿನಗಳ ಹಿಂದೆ ಪುರಭವನದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ಮಠಂದೂರು ಅವರು ಹೊರಬರುತ್ತಿದ್ದಂತೆ, ಮಹಿಳೆಯೊಬ್ಬರು ಶಾಸಕರ ಕೈಹಿಡಿದು ತನ್ನ ಒಡಲಿನ ಮಾತುಗಳನ್ನು ಹೊರಗೆಡವಿದ ಬಗೆ ಇದು. ಕಳೆದ ಕೆಲ ದಿನಗಳಿಂದ ಬೇರೆ ಬೇರೆ ಸಾಲುಗಳನ್ನು ಹೊದ್ದುಕೊಂಡು, ಶಾಸಕರ ಫೊಟೋವೊಂದು ವೈರಲ್ ಆಗಿತ್ತು. ಹೆಚ್ಚಿನ ಮಂದಿ ತಮ್ಮ ಸಂದೇಹವನ್ನು ತೋಡಿಕೊಂಡಿದ್ದರೂ ಕೂಡ. ಮಹಿಳೆಯ ಕಣ್ಣಲ್ಲಿ ಕೃತಜ್ಞತಾ […]

ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ Read More »

ನಾಳೆಯಿಂದ ವೀರಮಂಗಲ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

ಪುತ್ತೂರು: ವೀರಮಂಗಲ ಶಾಲಾ ವಾರ್ಷಿಕೋತ್ಸವ ಡಿ. 31 ರಂದು ಶಾಲಾ ಆವರಣದಲ್ಲಿ  ನಡೆಯಲಿದೆ.  60 ವರ್ಷಗಳನ್ನು  ಪೂರೈಸಿದ  ಗ್ರಾಮೀಣ ಪ್ರದೇಶದ  ಕುಮಾರನದಿಯ ತಟದಲ್ಲಿರುವ ಈ  ಶಾಲೆಯಲ್ಲಿ 155 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಾದರಿ ಶಾಲೆಯಾಗಿ ಮೂಡಿಬಂದಿದೆ. ಶಾಸಕ ಸಂಜೀವ ಮಠಂದೂರು ಅವರು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಶಾಂತಿಗೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್, ವೀರಮಂಗಲ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾಮ ಭಟ್ ಬಾವ, ವೀರಮಂಗಲ ಜುಮ್ಮಾ ಮಸೀದಿ ಅಧ್ಯಕ್ಷ ರಝಾಕ್ ವಿ.ಎಸ್. ಅತಿಥಿಗಳಾಗಿರುವರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಾದ ಯಜ್ಣ ಇವರಿಗೆ ಗೌರವಾರ್ಪಣೆ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಂದ ವೈವಿಧ್ಯಮಯ ನೃತ್ಯ, ಭಾರತೀಯ ಸಂಸ್ಕೃತಿ ಬಿಂಭಿಸುವ ಏಕ್ ಭಾರತ್ ಶ್ರೇಷ್ಠ ಭಾರತ್ ಸಂಸ್ಕೃತಿಗಳ ಅನಾವರಣಗೊಳ್ಳಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಬೆಳಗ್ಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಶಾಂತಿಗೋಡು ಗ್ರಾಮ ಪಂಚಾಯತ್  ಉಪಾಧ್ಯಕ್ಷ ಸುಧಾಕರ ಕುಲಾಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಸ್ ಡಿ ಎಂ ಸಿ ಅಧ್ಯಕ್ಷೆ  ಅನುಪಮ  ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ ಸದಸ್ಯ ಬಾಬು ಶೆಟ್ಟಿ ಬಹುಮಾನ  ವಿತರಣೆ  ಮಾಡಲಿದ್ದಾರೆ. ಗ್ರಾಮ  ಪಂಚಾಯಿತಿ  ಸದಸ್ಯರಾದ ಪದ್ಮಾವತಿ,  ವಸಂತಿ,  ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಸಮನ್ವಯಾಧಿಕಾರಿ ನವೀನ್ ವೇಗಸ್,  ಸಿ.ಆರ್.ಪಿ ಪರಮೇಶ್ವರಿ, ಶಾಲಾ ಮುಖ್ಯಗುರು  ತಾರಾನಾಥ ಸವಣೂರು, ಎಸ್ ಡಿ ಎಂ ಸಿ ಅಧ್ಯಕ್ಷೆಅನುಪಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ರೈ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಆನಂದ ಗೌಡ ಗುತ್ತು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ಶಾಸಕರಾದಿಯಾಗಿ ಕೊಡುಗೆಗಳ

ನಾಳೆಯಿಂದ ವೀರಮಂಗಲ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ Read More »

ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2022ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ ಪಾಸುಗಳನ್ನು 2023ರ ಫೆ. 28ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ ಅಥವಾ ಹೊಸ ಪಾಸು ಪಡೆಯುವ ಫಲಾನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸುವುದು ಕಡ್ಡಾಯ. ಅರ್ಜಿ ಸಲ್ಲಿಸುವಾಗ ವಿಕಲಚೇತನರು ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್‍ ಪೋರ್ಟ್ ಸೈಜಿನ ಫೊಟೋ, ಯಡಿಐಪಿ ಗುರುತಿನ ಚೀಟಿಯನ್ನು ಆನ್ ಲೈನಿನಲ್ಲಿ ಅಪ್ಲೋಡ್ ಮಾಡಬೇಕು. ಹೊಸದಾಗಿ

ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ Read More »

ಜ. 1ರಿಂದ 10ರವರೆಗೆ ಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ

ಪುತ್ತೂರು: ಸಾಮಾಜಿಕ, ಶೈಕ್ಷಣಿಕ ಪ್ರಗತಿಗಾಗಿ ಕೆಲಸ ನಿರ್ವಹಿಸುತ್ತಿರುವ ಸುನ್ನಿ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಇದರ ಸದಸ್ಯತ್ವ ಅಭಿಯಾನ 2023ರ ಜನವರಿ 1ರಿಂದ 10ರವರೆಗೆ ರಾಜ್ಯಾದ್ಯಂತ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಹೇಳಿದರು. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್ಸೆಸ್ಸೆಫ್, ಲಕ್ಷಾಂತರ ವಿದ್ಯಾರ್ಥಿಗಳನ್ನು ನಾಡಿಗೆ ಪರಿಚಯಿಸಿದೆ. ಹಾದಿ ತಪ್ಪುತ್ತಿರುವ ವಿದ್ಯಾರ್ಥಿ ಸಮೂಹಕ್ಕೆ ಧಾರ್ಮಿಕತೆ, ನೈತಿಕತೆ ಹಾಗೂ ಆಧ್ಯಾತ್ಮಿಕತೆಯನ್ನು ತುಂಬಿ, ಸಮಾಜದ ಸತ್ರ್ಪಜೆಗಳನ್ನಾಗಿ ಮಾಡಲು

ಜ. 1ರಿಂದ 10ರವರೆಗೆ ಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ Read More »

ರಕ್ತದಾನ, ನೇತ್ರದಾನ, ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ | ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರಿಗೆ ಆಹಾರ ಸಾಮಗ್ರಿ ವಿತರಣೆ

ಪುತ್ತೂರು: ವಿಷನ್ ಸಹಾಯ ನಿಧಿ ಸೇವಾ ಟ್ರಸ್ಟ್ ದಾನಿಗಳಿಂದ ಸಂಗ್ರಹಿಸಿದ ಹಣದಿಂದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಆಯ್ದ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ನೇತ್ರದಾನ ಶಿಬಿರ, ಉಚಿತ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಡಿ. 30ರಂದು ಅನುರಾಗ ವಠಾರದಲ್ಲಿ ನಡೆಯಿತು. ಆಹಾರ ಸಾಮಾಗ್ರಿ ವಿತರಿಸಿ ಮಾತನಾಡಿದ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶರತ್ ಕುಮಾರ್ ಮಾತನಾಡಿ, ಸೇವೆ ಎಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯಬೇಕು ಎಂದು ಹಿರಿಯರು ತಿಳಿಸಿಕೊಟ್ಟಿದ್ದಾರೆ. ಜನರ

ರಕ್ತದಾನ, ನೇತ್ರದಾನ, ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ | ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರಿಗೆ ಆಹಾರ ಸಾಮಗ್ರಿ ವಿತರಣೆ Read More »

ಜ. 7ರಂದು ತುಳುವೆರೆ ಮೇಳೊ 2023, ತುಳುಕೂಟೊದ ಸ್ವರ್ಣ ಮಹೋತ್ಸವ

ಪುತ್ತೂರು: ತುಳುಕೂಟೊ ಪುತ್ತೂರು ಇದರ ಸ್ವರ್ಣ ಮಹೋತ್ಸವದ ಉದ್ಘಾಟನೆ ಹಾಗೂ ಪುತ್ತೂರು ತಾಲೂಕು ತುಳುವೆರೆ ಮೇಳೊ 2023 ಜ. 7ರಂದು ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ ಎಂದು ತುಳುವೆರೆ ಮೇಳೊ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು. ಪುತ್ತೂರು ತಾಲೂಕು ತುಳುವೆರೆ ಮೇಳೊ ಸಮಿತಿ ಗೌರವಾಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸುವರು. ಸಹಾಯಕ

ಜ. 7ರಂದು ತುಳುವೆರೆ ಮೇಳೊ 2023, ತುಳುಕೂಟೊದ ಸ್ವರ್ಣ ಮಹೋತ್ಸವ Read More »

ಜ. 1: ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯ

ಪುತ್ತೂರು: ಕೆಲಿಂಜ ಕೇಸರಿ ಫ್ರೆಂಡ್ಸ್, ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಆಶ್ರಯದಲ್ಲಿ 65 ಕೆ.ಜಿ. ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಜ. 1ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಬಿಪಿನ್ ರಾವತ್ ವೇದಿಕೆಯಲ್ಲಿ ಬೆಳಿಗ್ಗೆ 9.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕೈ ಉದ್ಘಾಟಿಸಲಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವೀರಕಂಭ ಗ್ರಾ.ಪಂ. ಅಧ್ಯಕ್ಷ ದಿನೇಶ್ ಪೂಜಾರಿ ವೀರಕಂಭ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್

ಜ. 1: ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯ Read More »

ಸಂಜೀವ ಪೂಜಾರಿ ಅಮಾನತಿಗೆ ಆಗ್ರಹಿಸಿ ಏಕಕಾಲದಲ್ಲಿ ಪ್ರತಿಭಟನೆ | ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣಾ ಮುಂಭಾಗ ಧರಣಿ

ಪುತ್ತೂರು: ಭಜನೆ ಹಾಗೂ ಭಜಕರ ಬಗ್ಗೆ, ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟ್ ಗಳನ್ನು ಫೇಸ್ ಬುಕ್ ಹಾಗೂ ವಾಟ್ಸ್ ಆ್ಯಪ್ ಗಳಲ್ಲಿ ಹರಿಬಿಟ್ಟು ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಉಪವಲಯ ಅರಣ್ಯ ಅಧಿಕಾರ ಸಂಜೀವ ಪೂಜಾರಿ ಕಾಣಿಯೂರ್ ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣೆಗಳಲ್ಲಿ ಗುರುವಾರ ವಿಶ್ವ ಹಿಂದು ಪರಿಷದ್ ಹಾಗೂ ಭಜರಂಗದಳ ಏಕಕಾಲದಲ್ಲಿ ಪ್ರತಿಭಟನೆ ನಡೆಸಿತು. ಪುತ್ತೂರು ನಗರ ಪೊಲೀಸ್

ಸಂಜೀವ ಪೂಜಾರಿ ಅಮಾನತಿಗೆ ಆಗ್ರಹಿಸಿ ಏಕಕಾಲದಲ್ಲಿ ಪ್ರತಿಭಟನೆ | ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣಾ ಮುಂಭಾಗ ಧರಣಿ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಬಲಿ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವದ ಅಂಗವಾಗಿ ಡಿ. 29ರಂದು ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 28 ಹಾಗೂ 29ರಂದು ಕಿರುಷಷ್ಠಿ ಉತ್ಸವ ನಡೆಯಿತು. ಡಿ. 29ರಂದು ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಗಂಧ – ಪ್ರಸಾದ, ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆ ಜರಗಿತು. ಮಧ್ಯಾಹ್ನದ ನಂತರ ಶ್ರೀ ವ್ಯಾಘ್ರ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಬಲಿ Read More »

ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ‌ ಗುರುವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. ಭಜನೆ, ಪ್ರಾರ್ಥನೆಗೆ ಮಹತ್ವವಿದೆ:ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಮಾತನಾಡಿ, ಗಾಂಧೀಜಿ ಹೇಳಿರುವಂತೆ ಭಜನೆ ಹಾಗೂ ಪ್ರಾರ್ಥನೆಗೆ ಅದರದ್ದೆ ಆದ ಮಹತ್ವವಿದೆ. ನಮ್ಮ ಸಂಸ್ಕೃತಿ ಉಳಿವಿಗಾಗಿ ಭಜನಾ ಕಾರ್ಯ ಮಾಡುವುದು ಉತ್ತಮ ಕೆಲಸ. ಯಾವಾಗಲು ಅಪರಾಧ ಪ್ರಕರಣಗಳನ್ನು ದಾಖಲಿಸುವ ಠಾಣೆಯಲ್ಲಿ ಕಾರ್ಯಕರ್ತರು ಭಜನೆ ಮಾಡಿದ್ದು ತುಂಬಾ ಸಂತೋಷದ ವಿಷಯ ಎಂದರು.ಅಪರಾಧ ತಡೆಗಟುವಲ್ಲಿ ತಮ್ಮ ಸಹಕಾರ ಅತ್ಯಗತ್ಯ.ಮೊಬೈಲ್, ತಂತ್ರಜ್ಞಾನ ಅಭಿವೃದ್ಧಿ ಆಗುತ್ತಿದ್ದಂತೆ, ಅಪರಾಧಗಳು ಹೆಚ್ಚಾಗಿ ನಡೆಯುತ್ತವೆ.

ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ Read More »

error: Content is protected !!
Scroll to Top