ಪುತ್ತೂರು

ಪುತ್ತೂರು ಪೇಟೆಯಲ್ಲಿ ಸಾಗಿದ ಕಾಂಗ್ರೆಸ್ ರೋಡ್ ಶೋ

ಪುತ್ತೂರು: ನಟಿ ರಮ್ಯಾ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ರೋಡ್ ಶೋ ಬೊಳುವಾರಿನಿಂದ ದರ್ಬೆ ವೃತ್ತದವರೆಗೆ ಸೋಮವಾರ ಸಂಜೆ ನಡೆಯಿತು. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ರೋಡ್ ಶೋ ನಡೆದ ಸ್ವಲ್ಪ ಹೊತ್ತಿನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ರೋಡ್ ಶೋ ನಡೆಯಿತು. ಚಿತ್ರನಟಿ ರಮ್ಯಾ ಆಗಮಿಸುತ್ತಾರೆ ಎಂದು ಹೇಳಲಾಗಿತ್ತಾದರೂ, ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಕಲ್ಲಡ್ಕ ಗೊಂಬೆ ಬಳಗ, ಕೋಲು ನಡಿಗೆಯ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕಿದರೆ, ಹಿಂಬದಿಯಲ್ಲಿ ಅಶೋಕ್ ಕುಮಾರ್ […]

ಪುತ್ತೂರು ಪೇಟೆಯಲ್ಲಿ ಸಾಗಿದ ಕಾಂಗ್ರೆಸ್ ರೋಡ್ ಶೋ Read More »

ಪುತ್ತೂರು: ಕೇಸರಿ ರಂಗಿನ ನಡುವೆ ಪುತ್ತಿಲ ರೋಡ್ ಶೋ

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ರೋಡ್ ಶೋ ನಡೆಸಿದರು. ಬೊಳುವಾರಿನಿಂದ ಆರಂಭಗೊಂಡ ರೋಡ್ ಶೋ ಪುತ್ತೂರು ಪೇಟೆಯಾಗಿ ಸಾಗಿ ದರ್ಬೆಯಲ್ಲಿ ಸಮಾಪನಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ರೋಡ್ ಶೋಗೆ ಹೊಸ ಮೆರುಗು ತಂದರು. ಬಹಿರಂಗ ಪ್ರಚಾರದ ಕೊನೆ ದಿನವಾದ ಸೋಮವಾರ ಸಂಜೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಜೊತೆ ರೋಡ್ ಶೋ ನಡೆಯಿತು.

ಪುತ್ತೂರು: ಕೇಸರಿ ರಂಗಿನ ನಡುವೆ ಪುತ್ತಿಲ ರೋಡ್ ಶೋ Read More »

ವಿದ್ಯಾರಶ್ಮಿಗೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 100 ಫಲಿತಾಂಶ

ಪುತ್ತೂರು: ಮಾರ್ಚ್ ನಲ್ಲಿ ಜರಗಿದ 10ನೆ ತರಗತಿಯ ಪರೀಕ್ಷೆಗೆ ವಿದ್ಯಾರಶ್ಮಿ ವಿದ್ಯಾಲಯದ 32 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೇರ್ಗಡೆಯಾಗುವ ಮೂಲಕ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಈ ಬಾರಿಯ ಫಲಿತಾಂಶ ಸೇರಿದಂತೆ ಒಟ್ಟು 16 ಬಾರಿ ವಿದ್ಯಾರಶ್ಮಿ ವಿದ್ಯಾಲಯ ಶೇ. 100 ಫಲಿತಾಂಶ ದಾಖಲಿಸಿದೆ. ಒಟ್ಟು ವಿದ್ಯಾರ್ಥಿಗಳ ಪೈಕಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತೃಷಾ ಡಿ. ಸಾಲಿಯಾನ್ – 607 (ದಿನೇಶ್ ಕುಮಾರ್ ಡಿ. ಮತ್ತು ಮಮತಾ ಡಿ., ಬೆಳ್ಳಾರೆ ಇವರ ಪುತ್ರಿ), ಸನಾ

ವಿದ್ಯಾರಶ್ಮಿಗೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 100 ಫಲಿತಾಂಶ Read More »

ದಲಿತ ನಿಂದನೆ : ಹತ್ತು ದಿನ ಕಳೆದರೂ ಆರೋಪಿ ಬಂಧನವಾಗಿಲ್ಲ : ದ.ಕ.ಜಿಲ್ಲಾ ದಲಿತ ಸೇವಾ ಸಮಿತಿ ಆರೋಪ

ಪುತ್ತೂರು: ನೆಕ್ಕಿಲಾಡಿ ಗ್ರಾಮದ ಅಲಿಮಾರ್ ನಿವಾಸಿ ಲೀಲಾ ಆದಿದ್ರಾವಿಡ ಅವರ ಕುಟುಂಬಕ್ಕೆ ವಂಚನೆ ಆಗಿರುವ ಹಾಗೂ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ನಡೆಸಿರುವವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿ 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ದ.ಕ. ಜಿಲ್ಲಾ ದಲಿತ ಸೇವಾ ಸಮಿತಿ ಆರೋಪಿಸಿದೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಮಾತನಾಡಿ, ಬಡ ಕುಟುಂಬದ ಪ. ಜಾತಿಗೆ ಸೇರಿದ

ದಲಿತ ನಿಂದನೆ : ಹತ್ತು ದಿನ ಕಳೆದರೂ ಆರೋಪಿ ಬಂಧನವಾಗಿಲ್ಲ : ದ.ಕ.ಜಿಲ್ಲಾ ದಲಿತ ಸೇವಾ ಸಮಿತಿ ಆರೋಪ Read More »

ಎಸ್‍ ಎಸ್‍ ಎಲ್‍ಸಿ ಫಲಿತಾಂಶ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶ್ರಾವ್ಯ ಕೆ. ಯವರಿಗೆ ಶೇ.97 ಅಂಕ

ಪುತ್ತೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶ್ರಾವ್ಯ ಕೆ.ಎಚ್. 608 ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತಾ ದಂಪತಿ ಸುಪುತ್ರಿಯಾಗಿದ್ದಾರೆ. ರಾಷ್ಟ್ರಮಟ್ಟದ ಯೋಗಪಟುವಾಗಿದ್ದು, ರಾಷ್ಟ್ರಮಟ್ಟದ ವಕ್ರಾಸನದಲ್ಲಿ ಒಂದು ಗಂಟೆ 10 ನಿಮಿಷ 39 ಸಕೆಂಡ್  ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲೆ ಮಾಡಿದ್ದಾರೆ.

ಎಸ್‍ ಎಸ್‍ ಎಲ್‍ಸಿ ಫಲಿತಾಂಶ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶ್ರಾವ್ಯ ಕೆ. ಯವರಿಗೆ ಶೇ.97 ಅಂಕ Read More »

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಪುನಃ ಪ್ರತಿಷ್ಠಾಪನೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನೆ ಮೇ 12 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷ ಎನ್‍.ಕೆ.ಜಗನ್ನಿವಾಸ ರಾವ್ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾವಿರ ವರ್ಷಗಳ ಇತಿಹಾಸ ಇರುವ ಪುತ್ತೂರು ಸೀಮೆಗೊಳಪಟ್ಟ ಈ ತೊಟ್ಟಿಲಕಯಕ್ಕೆ ಸಾಕ್ಷಿ ಎಂಬಂತೆ ಶ್ರೀ ದಂಡನಾಯಕ ಉಳ್ಳಾಲ್ತಿಯ ನೇಮನಡಾವಳಿಯಲ್ಲಿ ದರ್ಶನ ಪಾತ್ರಿಯ ಮೂಲಕ “ನಾನು ತೊಟ್ಟಿಲಕಯದಿಂದ ಅವಿರ್ಭಸಿದ್ದೇನೆ” ಎಂಬ ಮಾತನ್ನು ಉಚ್ಚರಿಸುವುದು ೈತಿಹಾಸಿಕ ವಿಷಯಕ್ಕೆ ಹಿಡಿದ

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಪುನಃ ಪ್ರತಿಷ್ಠಾಪನೆ Read More »

ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳು ಕಣಕ್ಕೆ : ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ

ಪುತ್ತೂರು: ದ.ಕ.ಜಿಲ್ಲೆಯಲ್ಲಿ ಈ ಬಾರಿ ಜೆಡಿಎಸ್ ಪಕ್ಷದಿಂದ ಜನ ಸಾಮಾನ್ಯರಿಗೆ ಸ್ಪಂದಿಸುವ, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜನತೆ ನಮ್ಮನ್ನು ಗೆಲ್ಲಿಸಿದಲ್ಲಿ ಈಗಾಗಲೇ ಪ್ರಣಾಳಿಕೆಯನ್ನು ತಿಳಿಸಿದಂತೆ ನೂರಕ್ಕೆ ನೂರು ಈಡೇರಿಸಲಿದ್ದೇವೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ ಪಕ್ಷ ನೇತಾರ ದೇವೇಗೌಡರು ಪ್ರಧಾನಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ದೇಶಕ್ಕೆ, ಕರ್ನಾಟಕ ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಆದರ್ಶ ಮುಖ್ಯಮಂತ್ರಿಯಾಗಿದ್ದರು, ರೈತಾಪಿ, ದುಡಿಯುವ ವರ್ಗಕ್ಕೆ ಆಶಾವಾದಿಯಾಗಿದ್ದರು. ಎಂದು

ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳು ಕಣಕ್ಕೆ : ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ Read More »

ತಲೆಬೈಲು ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ ಪತ್ನಿ

ಪುತ್ತೂರು: ಶತ್ರುನಿಗ್ರಹ ಕ್ಷೇತ್ರವೆಂದೇ ಹೆಸರುವಾಸಿಯಾದ ಶ್ರೀ ತಲೆಬೈಲು ನರಸಿಂಹ ದೇವರ ಮಠಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಪತ್ನಿ ಶೈಲಜಾ ರೈ ಅವರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರದ ಮಂಜುನಾಥ್ ಉಡುಪ ಅವರು ಅನುಗ್ರಹ ಪ್ರಾರ್ಥನೆ ಸಲ್ಲಿಸಿದರು. ರಮಾನಾಥ ರೈ ಪುತ್ರಿ ಚರಿಷ್ಮಾ ರೈ, KPCC ಮಹಿಳಾ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ಮಲ್ಲಿಕಾ ಪಕಳ ಮತ್ತು ವೀಣಾ ಉಪಸ್ಥಿತರಿದ್ದರು.

ತಲೆಬೈಲು ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ ಪತ್ನಿ Read More »

ಶಾಂತಿಗೋಡು ಬೂತ್ ವತಿಯಿಂದ ಆಶಾ ತಿಮ್ಮಪ್ಪ ಪರ ಮತ ಯಾಚನೆ

ಪುತ್ತೂರು: ಶಾಂತಿಗೋಡು ಬೂತ್ ವತಿಯಿಂದ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಯಾಚನೆ ನಡೆಯಿತು. ಜಿಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮನೆ ಮನೆ ಭೇಟಿ ಮಾಡಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಮ್ ಭಟ್, ಉಪಾಧ್ಯಕ್ಷ ದೇವರಾಜ್ ಕಲ್ಕಾರ್, ಯುವಮೋರ್ಚಾ ಕಾರ್ಯದರ್ಶಿ ವಿನೋದ್ ಕರ್ಪುತಮೂಲೆ, ಶಿವಪ್ರಸಾದ್ ಕೈಂದಾಡಿ, ಪ್ರವೀಣ್ ಶೆಟ್ಟಿ, ವಿಘ್ನೇಶ್ ಕುಕ್ಯನ ನಾರಾಯಣ ಗೌಡ ಪಾದೆ, ರಂಜಿತ್ ಕೈಂದಾಡಿ, ದೀಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.

ಶಾಂತಿಗೋಡು ಬೂತ್ ವತಿಯಿಂದ ಆಶಾ ತಿಮ್ಮಪ್ಪ ಪರ ಮತ ಯಾಚನೆ Read More »

ಬಿಳಿಯೂರು-ಪಾದೆಬರಿಯಲ್ಲಿ ಆಶಾ ತಿಮ್ಮಪ್ಪ ಪರ ಮತ ಯಾಚನೆ

ಪುತ್ತೂರು: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಬಂಟ್ವಾಳ ತಾಲೂಕಿನ ಬಿಳಿಯೂರು-ಪಾದೆಬರಿಯಲ್ಲಿ ಮತ ಯಾಚನೆ ನಡೆಯಿತು. ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ಮತ ಯಾಚನೆ ಸಭೆಯಲ್ಲಿ ಆಶಾ ತಿಮ್ಮಪ್ಪ ಅವರನ್ನು ಗೆಲ್ಲಿಸಿಕೊಂಡುವಂತೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಬಿಳಿಯೂರು-ಪಾದೆಬರಿಯಲ್ಲಿ ಆಶಾ ತಿಮ್ಮಪ್ಪ ಪರ ಮತ ಯಾಚನೆ Read More »

error: Content is protected !!
Scroll to Top