ಪುತ್ತೂರು

ಬಿಜೆಪಿಯಿಂದ ರಾಜ್ಯದಲ್ಲಿ ಸುದೃಢ ಸರಕಾರ ರಚನೆ : ರಘುಪತಿ ಭಟ್ ವಿಶ್ವಾಸ

ಪುತ್ತೂರು: ಈ ಬಾರಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವುದು ಅನಿವಾರ್ಯ ಹಾಗೂ ಅವಶ್ಯಕ. ಖಂಡಿತವಾಗಿಯೂ ಬಿಜೆಪಿ ರಾಜ್ಯದಲ್ಲಿ ಸುಸ್ಥಿರ ಸರಕಾರವನ್ನು ರಚಿಸಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಂಜೀವ ಮಠಂದೂರು ಅವರ ಆಡಳಿತ ವೈಖರಿ ಪುತ್ತೂರಿನಲ್ಲಿ ಬಿಜೆಪಿಗೆ ಲಾಭವಾಗಲಿದೆ. ಪುತ್ತೂರಿನಲ್ಲಿ ಬಿಜೆಪಿ ಗೆಲ್ಲುವ ಜೊತೆಗೆ, ಕರಾವಳಿಯಲ್ಲಿ ಎಲ್ಲಾ ಸೀಟುಗಳನ್ನು ಬಿಜೆಪಿ ಬಾಚಿಕೊಳ್ಳಲಿದೆ. ಆದ್ದರಿಂದ ರಾಜ್ಯದಲ್ಲಿ‌ ಬಿಜೆಪಿ ಸುಸ್ಥಿರ ಅಧಿಕಾರ ಸ್ಥಾಪಿಸುವುದರಲ್ಲಿ ಎರಡು ಮಾತಿಲ್ಲ ಎಂದರು.ಸಂವಿಧಾನದಲ್ಲಿ ಇಲ್ಲದನ್ನು ಬಿಜೆಪಿ ಸರಿಪಡಿಸಿದೆ. […]

ಬಿಜೆಪಿಯಿಂದ ರಾಜ್ಯದಲ್ಲಿ ಸುದೃಢ ಸರಕಾರ ರಚನೆ : ರಘುಪತಿ ಭಟ್ ವಿಶ್ವಾಸ Read More »

ಪುತ್ತೂರು: ಬಿಜೆಪಿ ಮಹಾಸಂಪರ್ಕ ಅಭಿಯಾನದ ಸಂಚಲನ | ಒಂದೇ ದಿನ 34 ಸಾವಿರ ಮತದಾರರ ಸಂಪರ್ಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಬಿಜೆಪಿ ಮಹಾಸಂಪರ್ಕ ಅಭಿಯಾನ ನಡೆಸಿದ್ದು, ತಾಲೂಕಿನಾದ್ಯಂತ ಸಂಚಲನ ಸೃಷ್ಟಿಸಿತು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಸಾರಥ್ಯದಲ್ಲಿ ತಾಲೂಕಿನ ಪ್ರತಿ ಬೂತ್‌ನ ಮತದಾರರನ್ನು ಸಂಪರ್ಕಿಸಿ, ಬಿಜೆಪಿ ಸರಕಾರದ ಸಾಧನೆಗಳನ್ನು ಅವರಿಗೆ ತಲುಪಿಸಲಾಯಿತು. ಕರ್ನಾಟಕದಲ್ಲಿ ಕಳೆದ ಮೂರುವರೆ ವರ್ಷದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಪುತ್ತೂರು ಒಂದೇ ವಿಧಾನಸಭಾ ಕ್ಷೇತ್ರಕ್ಕೆ ಸಾವಿರ ಕೋಟಿ ರೂ.ಗೂ ಮಿಕ್ಕಿ ಅನುದಾನವನ್ನು ಬಿಡುಗಡೆ ಮಾಡಿದೆ ಅಂದರೆ ಬಿಜೆಪಿ ಮಾಡಿರುವ ಕಾರ್ಯಗಳನ್ನು ಗಮನಿಸಬೇಕು.

ಪುತ್ತೂರು: ಬಿಜೆಪಿ ಮಹಾಸಂಪರ್ಕ ಅಭಿಯಾನದ ಸಂಚಲನ | ಒಂದೇ ದಿನ 34 ಸಾವಿರ ಮತದಾರರ ಸಂಪರ್ಕ Read More »

ಇಂಗ್ಲೀಷ್ ಭಾಷಾ ಕಾರ್ಯಗಾರದ ಸಮಾರೋಪ ಸಮಾರಂಭ

ಪುತ್ತೂರು:  ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಹಾಗೂ ಸಂತ ಫಿಲೋಮಿನಾ ಕಾಲೇಜು ಸಹಯೋಗದಲ್ಲಿ ಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್ ಭಾಷಾ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿಪ್ರಕಾಶ್ ಮೊಂತೆರೋರವರು ಮಾತನಾಡಿ, ವಯೋ ಸಹಜ ಸಮಸ್ಯಗಳನ್ನು ಬದಿಗಿರಿಸಿ ಅಧ್ಯಾಪಕ ವೃತ್ತಿಯಲ್ಲಿ ನಿರತರಾದವರು ದಿನನಿತ್ಯ ಹೊಸ ವಿಷಯಗಳನ್ನು ಕಲಿತುಕೊಳ್ಳಬೇಕು. ತನ್ನ ದಿನದ ಒಂದೆರಡು ಗಂಟೆಗಳನ್ನು ಓದಿಗಾಗಿ ಮೀಸಲಾಗಿಡಬೇಕು. ಇದರಿಂದ ಖಂಡಿತವಾಗಿಯೂ ಪರಿಣಾಮಕಾರಿಯಾಗಿ ಪಾಠ

ಇಂಗ್ಲೀಷ್ ಭಾಷಾ ಕಾರ್ಯಗಾರದ ಸಮಾರೋಪ ಸಮಾರಂಭ Read More »

ಮತದಾನ ಜಾಗೃತಿಗೆ ಬೀದಿ ನಾಟಕ

ಪುತ್ತೂರು : ತಾಲೂಕು ಸ್ವೀಪ್ಸ ಮಿತಿಯ ಸಹಕಾರದೊಂದಿಗೆ ರೋಟರಿ ಪುತ್ತೂರು ಎಲೈಟ್ ರೋಟರ್ಯಾಕ್ಟ್ ಕ್ಟ್ಕ್ಲಬ್, ಬೆಟ್ಟಂಪಾಡಿ ಪ್ರಥಮದರ್ಜೆ ಕಾಲೇಜು ಸಹಯೋಗದಲ್ಲಿ ಮತದಾನ ಜಾಗೃತಿಗೆ ಬೀದಿನಾಟಕ” ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮತದಾನ ಮಾಡುವ ಬಗೆಗಿನ ಹೆಚ್ಚಿನ ಅರಿವು ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಅಗತ್ಯ, ಮತದಾನ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ”ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು

ಮತದಾನ ಜಾಗೃತಿಗೆ ಬೀದಿ ನಾಟಕ Read More »

ಪ್ರವೀಣ್ ನೆಟ್ಟಾರು ಮನೆಗೆ ಜೆ.ಪಿ. ನಡ್ಡಾ ಭೇಟಿ | ಪತ್ನಿ, ಹೆತ್ತವರಿಗೆ ಸಾಂತ್ವನ ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಪುತ್ತೂರು: ಸುಳ್ಯಕ್ಕೆ ತೆರಳುವ ಹಾದಿಯಲ್ಲಿ ಬೆಳ್ಳಾರೆಯಲ್ಲಿರುವ ದಿವಂಗತ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಅವರ ಪತ್ನಿ ಹಾಗೂ ಹೆತ್ತವರ ಜೊತೆ ಮಾತನಾಡಿ, ಸಾಂತ್ವನ ಹೇಳಿದರು. ಮನೆಯವರ ಜೊತೆ ತಾವು ಇರುವುದಾಗಿ ಭರವಸೆ ನೀಡಿದರು. ಇದೇ ಸಂಧರ್ಭ ಪ್ರವೀಣ್ ನೆಟ್ಟಾರು ಅವರ ನೂತನ ಮನೆಯನ್ನು ವೀಕ್ಷಿಸಿ, ಪ್ರವೀಣ್ ನೆಟ್ಟಾರು ಸಮಾಧಿಗೆ ಭೇಟಿ ನೀಡಿದರು.

ಪ್ರವೀಣ್ ನೆಟ್ಟಾರು ಮನೆಗೆ ಜೆ.ಪಿ. ನಡ್ಡಾ ಭೇಟಿ | ಪತ್ನಿ, ಹೆತ್ತವರಿಗೆ ಸಾಂತ್ವನ ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read More »

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮತಿ ಹೆಗ್ಡೆ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು. ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕಾರ್ಯಕರ್ತರೊಂದಿಗೆ ಮಾತನಾಡಿ, ಸಾರ್ಜಜನಿಕರಿಂದ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕುಮಾರ್ ವೈ, ದ. ಕ ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಪ್ರಿಯಾ ಸಾಲಿಯಾನ್, ಪದ್ಮ ಮಣಿ ,ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ Read More »

ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಪ್ರತಿಷ್ಠಾ ಮಹೋತ್ಸವ | ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ

ಪುತ್ತೂರು: ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ನೇಮೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ಪುರುಷರಕಟ್ಟೆ ಶ್ರೀ ದುರ್ಗಾ ಭಜನಾ ಮಂಡಳಿ, ನೆಟ್ಟಣ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ುದಯಗಿರಿ ಶ್ರೀ ವಿಷ್ಣು ಭಜನಾ ಮಂಡಳಿ, ಪುರುಷರಕಟ್ಟೆ ಶ್ರೀ ವನದುರ್ಗ ಭಜನಾ ಮಂಡಳಿ, ಶಾಂತಿಗೋಡು ಶ್ರೀ ಅಯ್ಯಪ್ಪ ಭಜನಾ ಮಂಡಳಿ ಹಾಗೂ ಮುಕ್ವೆ ಶ್ರೀ, ಉಮಾಮಹೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ

ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಪ್ರತಿಷ್ಠಾ ಮಹೋತ್ಸವ | ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ Read More »

ನಾಳೆ (ಮೇ1) : ಕಾರ್ಮಿಕ ದಿನಾಚರಣೆ, ಮತದಾರರ ಸ್ವಯಂ ಜಾಗೃತಿ ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ

ಮುಡಿಪು : ಮುಡಿಪು ಜನ ಶಿಕ್ಷಣ ಟ್ರಸ್ಟ್ ನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಮತ್ತು ಮತದಾರರ ಸ್ವಯಂ ಜಾಗೃತಿ, ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ ಮೇ1 ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 10.30 ರಿಂದ 11.30 ರ ತನಕ ಕಾರ್ಯಕ್ರಮ ನಡೆಯಲಿದೆ. ಕಾಯಕ ಯೋಗಿಗಳ ಬದುಕಿಗೆ ಬೆಳಕು ಚೆಲ್ಲುವ,, ಪ್ರಜಾಪ್ರಭುತ್ವದಲ್ಲಿ ಮತದಾರನ ಪಾತ್ರ, ಸ್ವಚ್ಛ-ಸಂಪೂರ್ಣ ಮತದಾನದ ಮಹತ್ವದ ಸಂದೇಶ ಸಾರುವ ಈ ಕಾರ್ಯಕ್ರಮದಲ್ಲಿ ನುಡಿ ಮತ್ತುಗಳು, ಶಕ್ತಿವಾಣಿಗಳು,ಕವನ,ನೃತ್ಯ ಪ್ರಸ್ತುತಿಯಿದೆ. ಜಾಗೃತ ಮತದಾರರು, ಮತದಾರರ ಜಾಗೃತಿ ವೇದಿಕೆ ಸದಸ್ಯರು,

ನಾಳೆ (ಮೇ1) : ಕಾರ್ಮಿಕ ದಿನಾಚರಣೆ, ಮತದಾರರ ಸ್ವಯಂ ಜಾಗೃತಿ ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ Read More »

ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಕೆ. ಶ್ರೀಧರ್ ಆಚಾರ್ಯ ಅಧ್ಯಕ್ಷ, ಆನಂದ ಆಚಾರ್ಯ ಕಾರ್ಯದರ್ಶಿ

ಪುತ್ತೂರು: ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಅಧ್ಯಕ್ಷ ಜಗದೀಶ್ ಎಸ್.ಎನ್. ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ವಿಶ್ವಕರ್ಮ ಯುವ ಸಮಾಜದ ಮಾಜಿ ಅಧ್ಯಕ್ಷ, ಪುತ್ತೂರು ರೋಟರಿ ಕ್ಲಬ್ ಸದಸ್ಯ, ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ, ಕೋರ್ಟ್ ರಸ್ತೆಯಲ್ಲಿರುವ ಐಶ್ವರ್ಯ ಜ್ಯುವೆಲ್ಲರ್ಸ್ ಮಾಲಕ ಶ್ರೀಧರ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಘದ ಸ್ಥಳ ದಾನಿ ಅಣ್ಣಿ ಆಚಾರ್ಯ, ಎಸ್. ಭುಜಂಗ ಆಚಾರ್ಯ, ಕಾರ್ಯದರ್ಶಿಯಾಗಿ  ಮಂಗಳೂರು

ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಕೆ. ಶ್ರೀಧರ್ ಆಚಾರ್ಯ ಅಧ್ಯಕ್ಷ, ಆನಂದ ಆಚಾರ್ಯ ಕಾರ್ಯದರ್ಶಿ Read More »

ಕ್ಯಾಂಪ್ಕೋ ನಿವೃತ್ತ ಡೆಪ್ಯೂಟಿ ಮೆನೇಜರ್ ಉಷಾ ಅವರಿಗೆ ಬೀಳ್ಕೊಡುಗೆ

ಪುತ್ತೂರು: ಕ್ಯಾಂಪ್ಕೋ ದಲ್ಲಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿ, ಡೆಪ್ಯುಟಿ ಮೆನೇಜರ್ ಆಗಿ ಇಂದು ನಿವೃತ್ತಿ ಹೊಂದಿರುವ ಉಷಾ ಅವರಿಗೆ ಬೀಳ್ಕೊಡುಗೆ ಸಮಾರಂಭ ಭಾನುವಾರ ನಡೆಯಿತು. ಸಮಾರಂಭದಲ್ಲಿ ಉಷಾ ಅವರನ್ನು ಶಾಲು ಹೊದಿಸಿ,ಹಾರ ಹಾಕಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಎಂಡಿ ಕೃಷ್ಣ ಕುಮಾರ್, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಯಾಂಪ್ಕೋ ನಿವೃತ್ತ ಡೆಪ್ಯೂಟಿ ಮೆನೇಜರ್ ಉಷಾ ಅವರಿಗೆ ಬೀಳ್ಕೊಡುಗೆ Read More »

error: Content is protected !!
Scroll to Top