ಪುತ್ತೂರು

ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಧಾನ ಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105 ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಬಳಿಕ ಮನೆ ಮನೆ ಭೇಟಿ ನೀಡಿ ಸಂಪರ್ಕ ಅಭಿಯಾನ ಮಾಡಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಬಿಜೆಪಿ ಬಲ್ನಾಡು ಶಕ್ತಿ ಕೇಂದ್ರದ ಪ್ರಮುಖ್ ಅಕ್ಷಯ್ […]

ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಯುವಕನ ಚಿಕಿತ್ಸೆಗೆ ನೇರವಾದ ಕುಂಟಾಲಫಲ್ಕೆ ಪೆರಿಯಾರು ದೋಟ ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ಶಾಖೆ

ಪುತ್ತೂರು: ಅಕ್ಷಿಡೆಂಟ್ ಆಗಿ ಕೆಲಸಕ್ಕೆ ಹೋಗಲು ಸಾಧ್ಯವಾಗದೆ ಮನೆಯಲ್ಲೆ ಕಷ್ಟದ ಜೀವನ ನಡೆಸುತ್ತಿರುವ ಭಜರಂಗದಳ ಕಾರ್ಯಕರ್ತ ಪ್ರದೀಪ್ ಬಾವಂತಬೆಟ್ಟು ಅವರ ಮನೆಯವರಿಗೆ ಸೇವಾ ಸುರಕ್ಷಾ ಸಂಸ್ಕಾರ ದ್ಯೇಯ ವಾಕ್ಯದಂತೆ ಭಜರಂಗದಳ ಕಾರ್ಯಕರ್ತರು, ಊರಿನ ಕೊಡುಗೈ ದಾನಿಗಳು, ಬಿಜೆಪಿ ಸದಸ್ಯರು ಕಾರ್ಯಕರ್ತರು ಒಟ್ಟು ಸೇರಿ ಸುಮಾರು 58,000 ಧನಸಹಾಯ  ಹಸ್ತಾಂತರಿಸಿದರು. ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಚಾಲಕರಾದ ಗುರುರಾಜ್ ಬಂಟ್ವಾಳ, ಪ್ರಸಾದ್ ಕುಮಾರ್ ರೈ ಸಮ್ಮುಖದಲ್ಲಿ ಪ್ರದೀಪ್ ಬಾವಂತಬೆಟ್ಟು ಮನೆಯವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಭಜರಂಗದಳ ಪುತ್ತೂರು

ಯುವಕನ ಚಿಕಿತ್ಸೆಗೆ ನೇರವಾದ ಕುಂಟಾಲಫಲ್ಕೆ ಪೆರಿಯಾರು ದೋಟ ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ಶಾಖೆ Read More »

ಶಾಂತಿಗೋಡು ಬೂತ್ ನಲ್ಲಿ ಬಿಜೆಪಿ ಪರ ಮತ ಯಾಚನೆ

ಪುತ್ತೂರು: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಶಾಂತಿಗೋಡು ಬೂತ್ ನಲ್ಲಿ ಮತ ಯಾಚನೆ ಭಾನುವಾರ ನಡೆಯಿತು. ಬೂತ್ ಸದಸ್ಯರು, ಶಕ್ತಿ ಕೇಂದ್ರದ ಅಧ್ಯಕ್ಷರು ಸಹಿತ ಮತ್ತಿತರರು ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷ ಶ್ಯಾಮ್ ಭಟ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,  ಬೂತ್ ಅಧ್ಯಕ್ಷ ಎಸ್ ಕೃಷ್ಣ ಸಾಲ್ಯಾನ್, ಯುವಮೋರ್ಚಾ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ, ವಿಘ್ನೇಶ್ ಕುಕ್ಯನ ಮತ್ತಿತರರು ಉಪಸ್ಥಿತರಿದ್ದರು

ಶಾಂತಿಗೋಡು ಬೂತ್ ನಲ್ಲಿ ಬಿಜೆಪಿ ಪರ ಮತ ಯಾಚನೆ Read More »

ವಿಟ್ಲ ಕುಂಡಡ್ಕದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರಿಂದ ಮಾಲಾರ್ಪಣೆ

ವಿಟ್ಲ: ವಿಟ್ಲ ಕುಂಡಡ್ಕದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಬಿಜೆಪಿ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ವಿಟ್ಲದ ಕುಂಡಡ್ಕದಲ್ಲಿ ಮಹಾ ಅಭಿಯಾನಕ್ಕೆ ತೆರಳುವ ಮುನ್ನ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಟ್ಲ ಕುಂಡಡ್ಕದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರಿಂದ ಮಾಲಾರ್ಪಣೆ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು ಚರ್ಚ್ ಗೆ ಭೇಟಿ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾನುವಾರ ಬೆಳಿಗ್ಗೆ ಪುತ್ತೂರು ಬನ್ನೂರು ಚರ್ಚ್ ಗೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಚರ್ಚ್ ಧರ್ಮಗುರುಗಳೊಂದಿಗೆ ಮಾತನಾಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು ಚರ್ಚ್ ಗೆ ಭೇಟಿ Read More »

ಬಿಜೆಪಿ ಡಬಲ್ ಇಂಜಿನಿನಲ್ಲಿ ಸಾಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿದೆ | ನರೇಂದ್ರ ಮೋದಿ ಅವಮಾನಿಸುವ ಕಾಂಗ್ರೆಸಿಗೆ ಮತದಾರರಿಂದ ತಕ್ಕ ಪಾಠ | ವಿಟ್ಲದಲ್ಲಿ ರೋಡ್ ಶೋ ನಡೆಸಿ, ಮತದಾರರ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ

ವಿಟ್ಲ: ಬಿಜೆಪಿ ಡಬಲ್ ಇಂಜಿನಿನಲ್ಲಿ ಮುಂದೆ ಹೋಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿ ಹಿಂದೆ ಸಾಗುತ್ತಿದೆ. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಕಾಂಗ್ರೆಸಿಗೆ ತಕ್ಕ ಪಾಠ ಕಲಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ ಎಂದು ಕರ್ನಾಟಕ ಬಿಜೆಪಿ ಚುನಾವಣೆಯ ಸಹಪ್ರಭಾರಿ, ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಅಣ್ಣಾಮಲೈ ಹೇಳಿದರು. ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದಲ್ಲಿ ಬಿಜೆಪಿ ಸಾಕಷ್ಟು

ಬಿಜೆಪಿ ಡಬಲ್ ಇಂಜಿನಿನಲ್ಲಿ ಸಾಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿದೆ | ನರೇಂದ್ರ ಮೋದಿ ಅವಮಾನಿಸುವ ಕಾಂಗ್ರೆಸಿಗೆ ಮತದಾರರಿಂದ ತಕ್ಕ ಪಾಠ | ವಿಟ್ಲದಲ್ಲಿ ರೋಡ್ ಶೋ ನಡೆಸಿ, ಮತದಾರರ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ Read More »

ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಪುತ್ತೂರು: ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು  ನೇಮೋತ್ಸವದ ಅಂಗವಾಗಿ ಏ. 29ರಂದು ಬೆಳಿಗ್ಗೆ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರಕಟ್ಟೆ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಭಕ್ತಾದಿಗಳು ತರಕಾರಿ, ಎಳನೀರು, ತೆಂಗಿನಕಾಯಿ, ಬಾಳೆಗೊನೆ, ಹಿಂಗಾರ, ಅಡಿಕೆಗೊನೆ, ಅಕ್ಕಿ, ಬೆಲ್ಲ, ಉಪ್ಪಿನಕಾಯಿ, ಎಣ್ಣೆ, ತುಪ್ಪ, ಸಕ್ಕರೆ ಇನ್ನಿತರ ಸಾಮಗ್ರಿಗಳನ್ನು ನೀಡಿದರು. ಆಡಳಿತ ಸಮಿತಿ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂಡಾಡಿ, ಜಿರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವಪ್ಪ ಪಜೀರೋಡಿ, ಪ್ರತಿಷ್ಠಾ ಸಮಿತಿ ಪ್ರಧಾನ ಕಾರ್ಯದರ್ಶಿ

ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ Read More »

ಕಾಂಗ್ರೆಸ್ ಬೆಂಬಲಿಸಿ : ಕಲ್ಲಂದಡ್ಕದಲ್ಲಿ ಅಶೋಕ್ ರೈ ಮತಯಾಚನೆ

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅಶೋಕ್ ಕುಮಾರ್ ರೈ, ಕಲ್ಲಂದಡ್ಕದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಕುಡಿಯುವ ನೀರು, ರಸ್ತೆಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಅಗತ್ಯವಿದೆ. ಎಲ್ಲಾ ಸಮಸ್ಯೆಗಳಿಗೂ ಕಾಂಗ್ರೆಸ್ ಪರಿಹಾರ ಕಾಣಿಸಲಿದೆ. ಆದ್ದರಿಂದ ಕಾಂಗ್ರೆಸನ್ನು ಬೆಂಬಲಿಸಿ ಎಂದು ಭರವಸೆ ನೀಡಿದರು. ಕೆಪಿಸಿಸಿ ವಕ್ತಾರ ಕಾವು ಹೇಮನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಡಾ. ‌ರಾಜಾರಾಂ ಕೆ.ಬಿ., ಎಂ‌.ಎಸ್. ಮಹಮ್ಮದ್

ಕಾಂಗ್ರೆಸ್ ಬೆಂಬಲಿಸಿ : ಕಲ್ಲಂದಡ್ಕದಲ್ಲಿ ಅಶೋಕ್ ರೈ ಮತಯಾಚನೆ Read More »

ದರ್ಬೆ ‘ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್’ ಮಾಲಕ ಆತ್ಮಹತ್ಯೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಮೀಪದ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49 ವ.) ತಮ್ಮ ಶಾಪ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಜೇಸಿಐ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ದರ್ಬೆ ‘ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್’ ಮಾಲಕ ಆತ್ಮಹತ್ಯೆ Read More »

ಯುವ ಮತದಾರರೊಂದಿಗೆ ಸಿಂಗಂ ಖ್ಯಾತಿಯ ಅಣ್ಣಾಮಲೈ ಸಂವಾದ

ಪುತ್ತೂರು: ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈ ಅವರು ಯುವಮತದಾರರೊಂದಿಗೆ ಶನಿವಾರ ಸಂವಾದ ನಡೆಸಿದರು. ರಾಷ್ಟ್ರೀಯ ವಿಚಾರಧಾರೆಯೊಂದಿಗೆ ಪಡೆಯುವ ಶಿಕ್ಷಣ ಯುವಜನಾಂಗವನ್ನು ಪ್ರಜ್ಞಾವಂತರನ್ನಾಗಿಸುತ್ತದೆ. ಮಾತ್ರವಲ್ಲ, ದೇಶಕಟ್ಟುವ ಕಾಯಕದಲ್ಲಿ ಪ್ರತಿಯೋರ್ವರನ್ನು ಸಮರ್ಥವಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ಶಿಕ್ಷಣ ಪಡೆಯುತ್ತಾ ಹೋದಂತೆ, ಮನಸ್ಸು ದೇಶಪ್ರೇಮದಿಂದ ವಿಚಲಿತವಾಗದಂತೆ ನೋಡಿಕೊಳ್ಳುತ್ತದೆ. ಆದ್ದರಿಂದ ಶಿಕ್ಷಣ ಪಡೆಯುವ ಜೊತೆಜೊತೆಗೆ ರಾಷ್ಟ್ರೀಯ ವಿಚಾರಧಾರೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ಶಿಕ್ಷಣ ಸಂಸ್ಥೆಗಳು ದೇಶಕ್ಕೆ ಮಾದರಿ ಎಂದು ಅಣ್ಣಾಮಲೈ ಅಭಿಪ್ರಾಯಪಟ್ಟರು. ಸುಡಾನಿನಲ್ಲಿ ತೊಂದರೆ ಅನುಭವಿಸುತ್ತಿದ್ದ ಭಾರತೀಯರನ್ನು

ಯುವ ಮತದಾರರೊಂದಿಗೆ ಸಿಂಗಂ ಖ್ಯಾತಿಯ ಅಣ್ಣಾಮಲೈ ಸಂವಾದ Read More »

error: Content is protected !!
Scroll to Top