ಪುತ್ತೂರು

ಹುತಾತ್ಮ ಸೈನಿಕರ ಮನೆಯಲ್ಲಿ ಶತ್ ಶತ್ ನಮನ | ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕಾರ್ಯಕ್ರಮ

ಪುತ್ತೂರು: ೧೯ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಎನ್‌ಸಿಸಿ ಘಟಕದ ಆಶ್ರಯದಲ್ಲಿ ಶತ್ ಶತ್ ನಮನ ವಿಶೇಷ ಕಾರ್ಯಕ್ರಮ ಹವಾಲ್ದಾರ್ ದಿ. ಪರಮೇಶ್ವರ ಕೆ. ಅವರ ದೋಲ್ಪಾಡಿ ಮನೆಯಲ್ಲಿ ನಡೆಯಿತು. ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ಅವರಿಗೆ ಗೌರವ ಅರ್ಪಿಸಲು ಹಾಗೂ ಅವರ ಕುಟುಂಬಕ್ಕೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಶತ್ ಶತ್ ನಮನ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ೧೯ ವರ್ಷಗಳ ಹಿಂದೆ ಭೂಸೇನೆಗೆ ಸೇರ್ಪಡೆಗೊಂಡ ಯೋಧ ಪರಮೇಶ್ವರ ಗೌಡ ಅವರು ಬೆಂಗಳೂರಿನಲ್ಲಿ […]

ಹುತಾತ್ಮ ಸೈನಿಕರ ಮನೆಯಲ್ಲಿ ಶತ್ ಶತ್ ನಮನ | ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕಾರ್ಯಕ್ರಮ Read More »

ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮ ಜರಗಿತು.ಮಂಗಳೂರು ವಿಶ್ವವಿದ್ಯಾಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಪುತ್ತೂರು ಅಕ್ಷಯ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಟಿಪಳ್ಳ ಶ್ರೀ ನಾರಾಯಣಗುರು ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್ ಅವರು ನಾರಾಯಣಗುರುಗಳ ಸಾಮಾಜಿಕ ಸುಧಾರಣೆ ಹಾಗೂ ಅವರ ಚಿಂತನೆಗಳ ಬಗ್ಗೆ

ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ Read More »

ಎನ್‌ಆರ್‌ಎಲ್‌ಎಂ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಎನ್‌ಆರ್‌ಎಲ್‌ಎಂ ಯೋಜನೆಯ ಕಟ್ಟಡಕ್ಕೆ ನಿರ್ಮಾಣಕ್ಕೆ ಬನ್ನೂರಿನ ಬೀರಿಗದಲ್ಲಿ ಶನಿವಾರ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು.ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದಲ್ಲಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಿತು. ಎನ್‌ಆರ್‌ಎಲ್‌ಎಂ ಯೋಜನೆಯಡಿ ಸಂಜೀವಿನಿ ಒಕ್ಕೂಟ ಈಗಾಗಲೇ ಪುತ್ತೂರು ತಾಲೂಕಿನಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಹಲವು ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಬೀರಿಗದಲ್ಲಿ ಕಟ್ಟಡಕ್ಕೆ ನಿರ್ಮಾಣ ಕಾಮಗಾರಿ ನಡೆಯಲಿದೆ. ಸುಮಾರು ೧೮.೫ ಲಕ್ಷ ರೂ. ವೆಚ್ಚದಲ್ಲಿ ಯೋಜನೆಯು ಕಾರ್ಯಗತಗೊಳ್ಳಲಿದೆ.

ಎನ್‌ಆರ್‌ಎಲ್‌ಎಂ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ Read More »

ಕಜೆ ಅಂಗನವಾಡಿ ಕಟ್ಟಡ ಉದ್ಘಾಟನೆ | ಶಾಸಕ ಸಂಜೀವ ಮಠಂದೂರು ಕಾರ್ಯ ಮೆಚ್ಚಿ ಸನ್ಮಾನಿಸಿದ ಸ್ಥಳೀಯರು

ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಯಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಶಾಸಕ ಸಂಜೀವ ಮಠಂದೂರು ಅವರು ಶನಿವಾರ ಬೆಳಿಗ್ಗೆ ಉದ್ಘಾಟಿಸಿದರು. ಕಜೆ ಎಂಬಲ್ಲಿಗೆ ನೂತನ ಅಂಗನವಾಡಿಯ ಅಗತ್ಯತೆಯನ್ನು ಮನಗಂಡು, ನೂತನ ಅಂಗನವಾಡಿಯನ್ನು ಮಂಜೂರು ಮಾಡುವಲ್ಲಿ ಶಾಸಕರು ಯಶಸ್ವಿಯಾಗಿದ್ದರು. ರಾಜ್ಯ ಸರಕಾರದ ಅನುದಾನದಿಂದ ಅಂಗನವಾಡಿಯ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಶಾಸಕ ಸಂಜೀವ ಮಠಂದೂರು ಅವರ ಕಾರ್ಯವೈಖರಿಯನ್ನು ಮೆಚ್ಚಿರುವ ಸ್ಥಳೀಯರು, ಅಂಗನವಾಡಿ ಉದ್ಘಾಟನಾ ಸಮಾರಂಭದಲ್ಲೇ ಶಾಸಕರನ್ನು ಸನ್ಮಾನಿಸಿ, ಗೌರವ ತೋರಿದರು. ಅಂಗನವಾಡಿ ಸ್ಥಳ ನೀಡಿದ

ಕಜೆ ಅಂಗನವಾಡಿ ಕಟ್ಟಡ ಉದ್ಘಾಟನೆ | ಶಾಸಕ ಸಂಜೀವ ಮಠಂದೂರು ಕಾರ್ಯ ಮೆಚ್ಚಿ ಸನ್ಮಾನಿಸಿದ ಸ್ಥಳೀಯರು Read More »

ಡಯಾಲಿಸಿಸ್ ಯಂತ್ರ ಖರೀದಿಗೆ ದಾನಿಗಳ ನೆರವು | ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆ ತೀರ್ಮಾನ

ಪುತ್ತೂರು: ತಾಲೂಕು ಸರಕಾರಿ ಆಸ್ಪತ್ರೆಯಲ್ಲಿರುವ ಅವಿಭಜಿತ ತಾಲೂಕುಗಳ ಏಕೈಕ ಡಯಾಲಿಸಿಸ್ ಕೇಂದ್ರಕ್ಕೆ ಇನ್ನೂ 6 ಡಯಾಲಿಸಿಸ್ ಮೆಷಿನ್‌ಗಳ ಅಗತ್ಯವಿದ್ದು, ದಾನಿಗಳಿಂದ ಸಂಗ್ರಹಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ಶಾಸಕ ಸಂಜೀವ ಮಠಂದೂರು ಮಾತನಾಡಿ, ಪುತ್ತೂರು ಹಾಗೂ ಕಡಬ ತಾಲೂಕಿಗೆ ಏಕೈಕ ಡಯಾಲಿಸಿಸ್ ಕೇಂದ್ರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿದೆ. ಇದು ಸಾಕಾಗುತ್ತಿಲ್ಲ. ಆದ್ದರಿಂದ ಮಂಗಳೂರು ಸೇರಿದಂತೆ ಇತರ

ಡಯಾಲಿಸಿಸ್ ಯಂತ್ರ ಖರೀದಿಗೆ ದಾನಿಗಳ ನೆರವು | ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆ ತೀರ್ಮಾನ Read More »

ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರಿಣಾಕ್ಷ ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸದಸ್ಯ ಹಾಗೂ ಉದ್ಯಮಿ ವಿ.ಕೆ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಒಳ್ಳೆಯ ಗುಣಗಳನ್ನು ಮೈಗೊಡಿಸಿಕೊಳ್ಳಬೇಕೆಂದು ಹೇಳಿದರು. ನಿವೃತ್ತ ಪ್ರಾಧ್ಯಾಪಕ ವಿಷ್ಣು ಭಟ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ, ನೈತಿಕ ನೈರ್ಮಲ್ಯಗಳನ್ನು ವಿದ್ಯಾರ್ಥಿಗಳೆಲ್ಲರೂ ಅಳವಡಿಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕೆಂದು ಕರೆ

ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ Read More »

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ೨೦೨೨-೨೩ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.ಉಪ್ಪಿನAಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿ ಮಾತನಾಡಿ, ಒಂದು ಹಣತೆಯಿಂದ ಸಾವಿರಾರು ಹಣತೆಗಳನ್ನು ಹಚ್ಚಬಹುದು. ಹಾಗೆಯೇ ನಮ್ಮ ಜ್ಞಾನವನ್ನು ಇತರರೊಂದಿಗೆ ಹಂಚಿದಲ್ಲಿ ಮಾತ್ರ ಅದು ವೃದ್ಧಿಯಾಗುತ್ತದೆ. ಜ್ಞಾನವನ್ನು ತಲೆಯಲ್ಲಿಟ್ಟು ಮೆರೆಯದೆ ಹೃದಯದಲ್ಲಿಟ್ಟು ವಿನಮ್ರವಾಗಿ ನಡೆದುಕೊಂಡರೆ ಜೀವನ ಸಾರ್ಥಕವಾಗುವುದು. ನಾಯಕರು ಅನುಯಾಯಿಗಳನ್ನು ಸೃಷ್ಠಿಸುವ ಬದಲು ನಾಯಕರನ್ನು ಸೃಷ್ಠಿಸಬೇಕು. ವ್ಯಕ್ತಿಗಳನ್ನು ಹಾಗೂ ವ್ಯಕ್ತಿತ್ವಗಳನ್ನು ಉಳಿಸಿ

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »

ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ನಾಟಿಕೋಳಿ ಮರಿ ವಿತರಣೆ

ಪುತ್ತೂರು: ಗ್ರಾಮೀಣ ಭಾಗದ ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ ಉಚಿತವಾಗಿ ನಾಟಿಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ನೂರಿನ್ನೂರು ಕೋಳಿಮರಿಗಳನ್ನು ಸಾಕಿಕೊಂಡು, ಜೀವನವನ್ನು ಸುಗಮವಾಗಿ ಸಾಗಿಸಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಗ್ರಾಮೀಣ ಭಾಗದ ಅರ್ಹ ರೈತ ಮಹಿಳೆಯರಿಗೆ ಉಚಿತ ನಾಟಿ ಕೋಳಿ ಮರಿಗಳನ್ನು ವಿತರಿಸಿ ಮಾತನಾಡಿದರು.ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟನಲ್ಲಿ ಸರಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಲ್ಲಿ ಇದು ಕೂಡ ಒಂದು. ಐವತ್ತು ಸಾವಿರ ಕೋಳಿಮರಿಗಳನ್ನು

ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ನಾಟಿಕೋಳಿ ಮರಿ ವಿತರಣೆ Read More »

ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ

ಪುತ್ತೂರು: ಪುತ್ತೂರು ವಕೀಲರ ಸಂಘದಿಂದ ಬುಧವಾರ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಯಿತು. ಮಂಗಳೂರಿನ ಯುವ ವಕೀಲ ಕುಲ್‌ದೀಪ್ ಶೆಟ್ಟಿ ಅವರ ಮೇಲಿನ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಮಾತನಾಡಿ, ಕುಲದೀಪ್ ಶೆಟ್ಟಿ ಅವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿದ್ದು ಅಲ್ಲದೇ,

ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ನೇತೃತ್ವದ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯವು ಪಿ.ಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್‌ಕಾಲೇಜು ಸಾಂಸ್ಕೃತಿಕ ಹಾಗೂ ಸೃಜನಶೀಲ ಸ್ಪರ್ಧೆ `ಅನ್ವೇಷಣಾ-೨೦೨೨’ರಲ್ಲಿ ಪುತ್ತೂರಿನ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ನಿಂತಿಕಲ್ಲು ಕೆ.ಎಸ್. ಗೌಡ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು. ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದ ಶ್ರೀ ಶಂಕರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಭಾರತ ದೇಶ

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ Read More »

error: Content is protected !!
Scroll to Top