ಪುತ್ತೂರು

ಪುರುಷರಕಟ್ಟೆ ಮೂಲದ ವಸಂತ್ ಮೃತದೇಹ ಪತ್ತೆ | ಮುಂದಿನ ತಿಂಗಳು 20ನೇ ವಿವಾಹ ವಾರ್ಷಿಕೋತ್ಸವ ಆಚರಿಸಲು ಸಿದ್ಧವಾಗಿದ್ದ ದಂಪತಿ

ಪುತ್ತೂರು: ಪುರುಷರಕಟ್ಟೆಯ ಕುರೆಮಜಲು ಮೂಲದ ವಸಂತ ಅವರ ಮೃತದೇಹ ಸೋಮೇಶ್ವರ ಸಮುದ್ರದಲ್ಲಿ ಗುರುವಾರ ಸಂಜೆ ವೇಳೆ ಪತ್ತೆಯಾಗಿದೆ. ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಬುಧವಾರ ರಾತ್ರಿ ವಸಂತ ಅವರ ಚಪ್ಪಲಿ ಹಾಗೂ ಸಮುದ್ರ ತೀರದಲ್ಲಿ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಗುರುವಾರ ಸಂಜೆ ವೇಳೆ ಮೃತದೇಹ ಪತ್ತೆಯಾಗಿದೆ. ವಸಂತ ಅವರು ಉಳ್ಳಾಲದಲ್ಲಿ ವಾಸ್ತವ್ಯ ಹೊಂದಿದ್ದು, ವಿ ಕಾರ್ ಮ್ಯಾಕ್ಸ್ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಐಶಾರಾಮಿ ಮನೆಯೊಂದನ್ನು ನಿರ್ಮಿಸಿದ್ದರು. ಮುಂದಿನ ತಿಂಗಳು 20ನೇ […]

ಪುರುಷರಕಟ್ಟೆ ಮೂಲದ ವಸಂತ್ ಮೃತದೇಹ ಪತ್ತೆ | ಮುಂದಿನ ತಿಂಗಳು 20ನೇ ವಿವಾಹ ವಾರ್ಷಿಕೋತ್ಸವ ಆಚರಿಸಲು ಸಿದ್ಧವಾಗಿದ್ದ ದಂಪತಿ Read More »

ದೇವಸ್ಥಾನದ ದುಡ್ಡು ಹೊಡೆದ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ | ದಿ. ಪ್ರವೀಣ್ ನೆಟ್ಟಾರು ಮನೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್

ಪುತ್ತೂರು: ದೇವಸ್ಥಾನದ ದುಡ್ಡು ಹೊಡೆದ, ಹಿಂದೂಗಳ ಮೇಲೆಯೇ ದೌರ್ಜನ್ಯ ನಡೆಸಿದ ಅರುಣ್ ಕುಮಾರ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ ಎಂದು ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನಿಸಿದ್ದಾರೆ. ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ನೂತನ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ, ಮಾಧ್ಯಮದೊಂದಿಗೆ ಮಾತನಾಡಿದ ಅವರು ಅರುಣ್ ಕುಮಾರ್ ಪುತ್ತಿಲ ವಿರುದ್ಧ ಹರಿಹಾಯ್ದರು. ಹೆಣ್ಣು ಮಗಳೊಬ್ಬಳು ತನ್ನ ಕಾರಿನಡಿಗೆ ಬಿದ್ದು ಮೃತಪಟ್ಟಾಗ, ತಿರುಗಿ ನೋಡದೇ ಹೋದ ಅರುಣ್ ಪುತ್ತಿಲ ಯಾವ ಹಿಂದುತ್ವವಾದಿ. ಗೋ ಸಾಗಾಟವನ್ನು ಹಿಂದೂ

ದೇವಸ್ಥಾನದ ದುಡ್ಡು ಹೊಡೆದ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ | ದಿ. ಪ್ರವೀಣ್ ನೆಟ್ಟಾರು ಮನೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ Read More »

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಗುರುವಾರ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು. ದೇವಸ್ಥಾನದ ಅರ್ಚಕರು ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಭೇಟಿ Read More »

ಧರ್ಮಕ್ಕೆ ಅವಿನಾಶಿ ಗುಣವಿದೆ : ಯಶಸ್ವಿ

ಪುತ್ತೂರು: ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನುರಕ್ಷಿಸುತ್ತದೆ. ಧರ್ಮವೆನ್ನುವುದು ಸತ್ಯ, ಸತ್ಯಕ್ಕೆ ಹೇಗೆ ಸಾವಿಲ್ಲವೋ ಹಾಗೆಯೇ ಧರ್ಮಕ್ಕೆ ಸಾವಿಲ್ಲ. ಧರ್ಮಕ್ಕೆ ಅವಿನಾಶಿ ಗುಣವಿದೆ. ಪೂರ್ವಜರಿಂದ ಬಂದಂತಹ ಆಚಾರ ವಿಚಾರಗಳನ್ನು ಒಪ್ಪಿಕೊಳ್ಳಬೇಕಾದರೆ ನಮ್ಮ ಧರ್ಮದ ಶ್ರೇಷ್ಠತೆಯನ್ನು ಅರಿತುಕೊಳ್ಳಬೇಕು. ಹಿಂದೂ ಧರ್ಮವು  ಸಮರವನ್ನು ಸಾರುವ ಧರ್ಮವಲ್ಲಅದು ಶಾಂತಿಯನ್ನು ಸಾರುವ ಧರ್ಮ. ಹಿಂದೂ ಧರ್ಮ. ಶಾಂತಿ, ಸಹನೆ, ತ್ಯಾಗ ಇರುವುದೇ ಹಿಂದೂ ಧರ್ಮದಲ್ಲಿ. ಸಂಸ್ಕೃತಿಯ ನಿಟ್ಟಿನಲ್ಲಿ ನಮ್ಮ ಹಿಂದೂ ಧರ್ಮ ಸೃಷಿಗೊಂಡಿದೆ ಎಂದು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿ ಹೇಳಿದರು. ವಿವೇಕಾನಂದ ಕಲಾ,

ಧರ್ಮಕ್ಕೆ ಅವಿನಾಶಿ ಗುಣವಿದೆ : ಯಶಸ್ವಿ Read More »

ಪೆರ್ಲಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ. ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ  ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ಪೆರ್ಲಂಪಾಡಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ಬಂದಾಗ ಅನೇಕ ಮಂದಿ ಭೂಮಿ ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡವರೆಲ್ಲರೂ ಇಂದಿಗೂ ಕಾಂಗ್ರೆಸ್ಸಲ್ಲೇ

ಪೆರ್ಲಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ವರದಿ | ಶಾಸಕ ಸಂಜೀವ ಮಠಂದೂರಿಗೆ 2ನೇ ಸ್ಥಾನ

ಪುತ್ತೂರು: ವಿಧಾನಸಭೆಯಲ್ಲಿ 2018ರಿಂದ 2022ರ ನಡುವೆ ನಡೆದಿರುವ ಅಧಿವೇಶನಗಳಲ್ಲಿ ಭಾಗಿಯಾದ ಶಾಸಕರ ಹಾಜರಾತಿಯ ವರದಿ ಪ್ರಕಟಗೊಂಡಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು 2ನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2018ರಿಂದ 2022ರ ತನಕ ನಡೆದ 15 ಅಧಿವೇಶನಗಳಲ್ಲಿ ಶಾಸಕರ ಹಾಜರಾತಿ ಬಗ್ಗೆ ಕೇಳಲಾದ ಪ್ರಶ್ನೆಗಳು, ಮಸೂದೆಗಳ ಮಂಡನೆ, ಹಾಗೂ ಅಂಗೀಕಾರ ಸೇರಿ ಇತರ ಮಾಹಿತಿ ಒಳಗೊಂಢ ಅಂಶಗಳು ಈ ವರದಿಯಲ್ಲಿವೆ. ಶಾಸಕರ ಕಾರ್ಯಕ್ಷಮತೆ ಬಗ್ಗೆ ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರೀಫಾರ್ಮ್ಸ್ ವರದಿ ಮಾಡಿದೆ. ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೀವ್ರವಾಗಿ

ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ವರದಿ | ಶಾಸಕ ಸಂಜೀವ ಮಠಂದೂರಿಗೆ 2ನೇ ಸ್ಥಾನ Read More »

ಹಿಂದೂಪರ ಕೆಲಸಗಳಿಗೆ ಶಾಸಕತ್ವವೇ ಬೇಕೆ? | ದೇವಸ್ಥಾನಗಳಲ್ಲಿ ಹಣ ದುರುಪಯೋಗ ಮಾಡಿದ್ದ ಪುತ್ತಿಲ | ಅರುಣ್ ಪುತ್ತಿಲ ಸಿಂಪಥೈಸರ್ | ಆಶಾ ತಿಮ್ಮಪ್ಪ ಸಮರ್ಥರು. ಅವರ ಬಗ್ಗೆ ಅಪಪ್ರಚಾರ ತರವಲ್ಲ

ಪುತ್ತೂರು: ಹಿಂದೂಪರ ಕೆಲಸ ಮಾಡಲು ಶಾಸಕನೇ ಆಗಬೇಕೆಂದು ಹಠ ಹಿಡಿದು ನಿಲ್ಲುವುದು ಸರಿಯಲ್ಲ. ಆರ್.ಎಸ್.ಎಸ್., ಬಿಜೆಪಿಯನ್ನು ಕಟ್ಟಿ ಬೆಳೆಸಿದ ಅದೆಷ್ಟೋ ಮಹನೀಯರು ಯಾವುದೇ ಹುದ್ದೆಗೆ ಆಸೆ ಪಡದೇ, ಕೆಲಸ ಮಾಡಿದ್ದಾರೆ. ಹೀಗಿರುವಾಗ ಅರುಣ್ ಕುಮಾರ್ ಪುತ್ತಿಲ ಸಿಂಪಥೈಸರ್ ಆಗಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರು ಚುನಾವಣೆ ಬಂದಾಗ ಗಲಾಟೆಗೆ ನಿಂತು ಬಿಡುವ ಪ್ರವೃತ್ತಿ ಸರಿಯಲ್ಲ ಎಂದು ವೈದ್ಯ ಡಾ. ಎಂ.ಕೆ. ಪ್ರಸಾದ್ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತಿಲ ಅವರಲ್ಲಿ ಸಂಘಟನಾ ಶಕ್ತಿ ಇದೆ. ನನ್ನ

ಹಿಂದೂಪರ ಕೆಲಸಗಳಿಗೆ ಶಾಸಕತ್ವವೇ ಬೇಕೆ? | ದೇವಸ್ಥಾನಗಳಲ್ಲಿ ಹಣ ದುರುಪಯೋಗ ಮಾಡಿದ್ದ ಪುತ್ತಿಲ | ಅರುಣ್ ಪುತ್ತಿಲ ಸಿಂಪಥೈಸರ್ | ಆಶಾ ತಿಮ್ಮಪ್ಪ ಸಮರ್ಥರು. ಅವರ ಬಗ್ಗೆ ಅಪಪ್ರಚಾರ ತರವಲ್ಲ Read More »

ಆಶ್ಮಿ ಕಂಫರ್ಟ್ ನಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

ಪುತ್ತೂರು : ಬೈಪಾಸ್ ರಸ್ತೆಯಲ್ಲಿರುವ ಆಶ್ಮಿ ಕಂಫರ್ಟ್ ನಲ್ಲಿ ಬಿಜೆಪಿ ಚುನಾವಣಾ ಕಚೇರಿ ಗುರುವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಗಣಹೋಮ ನೆರವೇರಿಸುವ ಮೂಲಕ ಕಚೇರಿ ಉದ್ಘಾಟನೆಗೊಂಡು ಚುನಾವಣೆಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಬೆಳಿಗ್ಗೆ ಕರ್ನಾಟಕದ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲೇ  ಕಚೇರಿ ಉದ್ಘಾಟನೆಗೊಂಡಿತು. ಗಣಹೋಮ ನೆರವೇರಿದ ಬಳಿಕ ಬಿಜೆಪಿ ಮುಂಖಡರು, ಕಾರ್ಯಕರ್ತರು ಎಲ್ ಇಡಿ ಪರದೆ ಮೂಲಕ ನರೇಂದ್ರ ಮೋದಿಯರ ಭಾಷಣಕ್ಕೆ ಕಿವಿಯಾದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು,

ಆಶ್ಮಿ ಕಂಫರ್ಟ್ ನಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘಕ್ಕೆ 2022-23ನೇ ಸಾಲಿನಲ್ಲಿ ಒಂದು ಕೋಟಿಗೂ ಆಧಿಕ ಲಾಭ : ಚಿದಾನಂದ ಬೈಲಾಡಿ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ 2022-23ನೇ ಸಾಲಿನಲ್ಲಿ 400 ಕೋಟಿಗೂ ಅಧಿಕ ವ್ಯವಹಾರ ನಡೆಸಿ ಒಂದು ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ 2002ರಲ್ಲಿ ಸಂಘ  ಆರಂಭಗೊಂಡಿದ್ದು, ಮುಖ್ಯ ಕಚೇರಿ ಸಹಿತ ಒಟ್ಟು 8 ಶಾಖೆಗಳನ್ನು ಹೊಂದಿದೆ. ಪುತ್ತೂರು ಎಪಿಎಂಸಿ ಮಾನಾಯಿ ಆರ್ಚ್ ಕಟ್ಟಡ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ, ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಆಲಂಕಾರು, ಕುಂಬ್ರ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘಕ್ಕೆ 2022-23ನೇ ಸಾಲಿನಲ್ಲಿ ಒಂದು ಕೋಟಿಗೂ ಆಧಿಕ ಲಾಭ : ಚಿದಾನಂದ ಬೈಲಾಡಿ Read More »

ಸುಳ್ಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ರಿಂದ ಪ್ರಚಾರ ಕಾರ್ಯ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ಸುಳ್ಯ ತಾಲೂಕಿನ ಹಲವೆಡೆ ಪ್ರಚಾರ ಕಾರ್ಯ ನಡೆಸಿದರು. ಅಜ್ಜಾವರ, ಅಡ್ಕ, ಮಾವಿನಪಳ್ಳ ಸೇರಿದಂತೆ ಹಲವಾರು ಕಡೆ ಚುನಾವಣಾ ಪ್ರಚಾರ ನಡೆಸಿ, ಕಾರ್ನರ್ ಸಭೆ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಸುಮಾರು 50 ಕ್ಕೂ ಅಧಿಕ ಮಂದಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಗುರುಪ್ರಸಾದ್ ಮೆರ್ಕಜೆ, ಖಲಂದರ್ ಎಲಿಮಲೆ, ಗಣೇಶ್ ಕುಂಡಡ್ಕ, ರಾಮಕೃಷ್ಣ ಬೀರಮಂಗಿಲ, ಸಂಶುದ್ದೀನ್ ಕೆ.ಎಂ., ವಸಂತ, ಸಿಂಚನ,

ಸುಳ್ಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ರಿಂದ ಪ್ರಚಾರ ಕಾರ್ಯ Read More »

error: Content is protected !!
Scroll to Top