ಪುತ್ತೂರು

ಏ.28 : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ ಏ.28 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಏ.27 ಗುರುವಾರ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ 12.15 ಕ್ಕೆ ದೇವತಾ ಪ್ರಾರ್ಥನೆ, ಮಹಾಪೂಜೆ, ಸಂಜೆ 6 ಕ್ಕೆ ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ, ರಾತ್ರಿ 7 ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ರಾತ್ರಿ 9 ಕ್ಕೆ ತಂಬಿಲಾದಿಗಳು ನಡೆದು ಪ್ರಸಾದ ವಿತರಣೆ, 9.30 ಕ್ಕೆ ಅನ್ನಸಂತರ್ಪಣೆ […]

ಏ.28 : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ Read More »

ತಲೆಬೈಲು ಮಠದಲ್ಲಿ ಬೊಟ್ಯಾಡಿ ವಿಶೇಷ ಪ್ರಾರ್ಥನೆ

ಪುತ್ತೂರು: ಶತ್ರುನಿಗ್ರಹ ಕ್ಷೇತ್ರ ಶ್ರೀ ತಲೆಬೈಲು ನರಸಿಂಹ ದೇವರ ಮಠದಲ್ಲಿ ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ಮಂಡಳಿಯ ನಿರ್ದೇಶಕ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾಜ್ಯದಲ್ಲಿ ಹಾಗೂ ಪುತ್ತೂರಿನಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಪ್ರಾರ್ಥಿಸಿದರು. ಇದೇ ಸಂದರ್ಭ ಮಠದ ಮಂಜುನಾಥ್ ಉಡುಪ ಅವರು ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ತಲೆಬೈಲು ಮಠದಲ್ಲಿ ಬೊಟ್ಯಾಡಿ ವಿಶೇಷ ಪ್ರಾರ್ಥನೆ Read More »

ಕಾಣಿಯೂರು, ಬೆಳಂದೂರಿನಲ್ಲಿ ಮಳೆಯ ಸಿಂಚನ

ಪುತ್ತೂರು: ತಾಲೂಕಿನ ವಿವಿಧೆಡೆ ಬುಧವಾರ ಸಂಜೆ ಮಳೆ ಸುರಿದಿದೆ. ಈ ಮೂಲಕ ತಂಪಿನ ಸಿಂಚನ ಉಂಟಾಗಿದೆ. ಕಾಣಿಯೂರು, ಬೆಳಂದೂರು ಮುಂತಾದ ಕಡೆಗಳಲ್ಲಿ ಮಳೆ ಸುರಿಯುತ್ತಿದ್ದು, ಪುತ್ತೂರಿನಲ್ಲಿ ಸಂಜೆ ವೇಳೆ ಮೋಡ ಕವಿದ ವಾತಾವರಣ ಉಂಟಾಗಿತ್ತು. ಪುತ್ತೂರಿನಲ್ಲೂ ಸಂಜೆ ವೇಳೆ ಮೋಡ ಮುಸುಕಿದ ವಾತಾವರಣವಿದ್ದು, ಗುಡುಗಿನ ಅನುರಣನ ಕೇಳಿ ಬರುತ್ತಿದ್ದು ಆದರೂ ಮಳೆ ಬರಲೇ ಇಲ್ಲ.

ಕಾಣಿಯೂರು, ಬೆಳಂದೂರಿನಲ್ಲಿ ಮಳೆಯ ಸಿಂಚನ Read More »

ದೇಶದ ಆದರ್ಶವೇ ಉದಾತ್ತ ಸೇವೆ ಮತ್ತು ಸಮರ್ಪಣೆ | ವಿವೇಕಾನಂದ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಮುರಳಿಕೃಷ್ಣ ಕೆ.ಎನ್.

ಪುತ್ತೂರು: ಸೇವೆ ಎನ್ನುವ ಪರಿಕಲ್ಪನೆ ಅತ್ಯಂತ ಅದ್ಭುತವಾದುದು. ದೇಶದ ಆದರ್ಶವೇ ಸೇವೆ ಮತ್ತು ಸಮರ್ಪಣೆ. ಪರಸ್ಪರ ಸಹಕಾರ, ಸೌಹಾರ್ಧತೆಯೇ ದೇಶದ ಏಳಿಗೆಗೆ ಸಹಕಾರಿ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇದರ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾಲಯ, ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಮತ್ತು ಕೇಪು ಕೈಲಾಸೇಶ್ವರ ದೇವಾಲಯದ ಆಶ್ರಯದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ

ದೇಶದ ಆದರ್ಶವೇ ಉದಾತ್ತ ಸೇವೆ ಮತ್ತು ಸಮರ್ಪಣೆ | ವಿವೇಕಾನಂದ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಮುರಳಿಕೃಷ್ಣ ಕೆ.ಎನ್. Read More »

ಶಂಕರಾಚಾರ್ಯರು ಜಗತ್ತಿನ ಮೊದಲ ತತ್ವಜ್ಞಾನಿ| ಅಂಬಿಕಾ ಮಹಾವಿದ್ಯಾಲಯದಲ್ಲಿ ನಡೆದ ಶಂಕರ ಜಯಂತಿಯಲ್ಲಿ ವಿದ್ವಾನ್ ಕೇಶವ ಭಟ್ ಕೇಕಣಾಜೆ

ಪುತ್ತೂರು: ಕೇರಳದ ಕಾಲಡಿಯಲ್ಲಿ ಹುಟ್ಟಿದ ಶಂಕರಾಚಾರ್ಯರು ಸಮಾಜದಲ್ಲಿ ತುಂಬಿದ್ದ ಕರಾಳತೆಯನ್ನು ಮಟ್ಟಹಾಕಲು ಪಣತೊಟ್ಟರು. ಸಮಗ್ರ ಭಾರತವನ್ನು ಅದ್ವೈತ ತತ್ವದಡಿಯಲ್ಲಿ ಒಂದುಗೂಡಿಸಿದರು. ಅವರು ವೈದಿಕ ಸಂಸ್ಕೃತಿಯ ಮೂಲಕ ವೇದಗಳನ್ನು ಹಾಗೂ ಧರ್ಮವನ್ನು ಸಂರಕ್ಷಿಸಿದ ಪರಿ ಅದ್ಭುತವಾದುದು ಎಂದು ವಿದ್ವಾಂಸ ವಿದ್ವಾನ್ ಕೇಶವ ಭಟ್ಟ ಕೇಕಣಾಜೆ ಹೇಳಿದರು. ಅವರು ನಗರದ ನಟ್ಟೋಜ ಪೌಂಢೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಐಕ್ಯೂಎಸಿ ಹಾಗೂ ತತ್ವಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸೋಮವಾರದಂದು ಆಚರಿಸಲಾದ ಶಂಕರ ಜಯಂತಿ ಹಾಗೂ ವಿಶ್ವ ತತ್ವಜ್ಞಾನಿಗಳ ದಿನಾಚರಣೆಯ ಪ್ರಯುಕ್ತ

ಶಂಕರಾಚಾರ್ಯರು ಜಗತ್ತಿನ ಮೊದಲ ತತ್ವಜ್ಞಾನಿ| ಅಂಬಿಕಾ ಮಹಾವಿದ್ಯಾಲಯದಲ್ಲಿ ನಡೆದ ಶಂಕರ ಜಯಂತಿಯಲ್ಲಿ ವಿದ್ವಾನ್ ಕೇಶವ ಭಟ್ ಕೇಕಣಾಜೆ Read More »

ಪುತ್ತಿಲ ಪ್ರಣಾಳಿಕೆಯಲ್ಲಿ ಏನೇನಿದೆ? | ಎಂಡೋ ಸಲ್ಫಾನ್ ಪರಿಹಾರ, ಜಿಲ್ಲಾಕೇಂದ್ರ, 24×7 ಹೆಲ್ಪ್ ಲೈನ್ ಇತ್ಯಾದಿ ಪ್ರಣಾಳಿಕೆಯಲ್ಲಿವೆ

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅರುಣ್ ಕುಮಾರ್ ಪುತ್ತಿಲ ಅವರು 31 ವಿಷಯಗಳನ್ನು ಮುಂದಿಟ್ಟುಕೊಂಡು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ದರ್ಬೆ ಸುಭದ್ರ ಕಲಾಣ ಮಂಟಪದ ಬಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸತೀಶ್ ರೈ ನೀರ್ಪಾಡಿ, ಪ್ರಮೋದ್ ರೈ, ಮನ್ಮಥ ಶೆಟ್ಟಿ ಅವರು ಪ್ರಣಾಳಿಕೆ ತಯಾರಿಸುವ ನೇತೃತ್ವ ವಹಿಸಿದ್ದರು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಹಿಂದಾರು, ಸೇಡಿಯಾಪು ಜನಾರ್ದನ ಭಟ್, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ

ಪುತ್ತಿಲ ಪ್ರಣಾಳಿಕೆಯಲ್ಲಿ ಏನೇನಿದೆ? | ಎಂಡೋ ಸಲ್ಫಾನ್ ಪರಿಹಾರ, ಜಿಲ್ಲಾಕೇಂದ್ರ, 24×7 ಹೆಲ್ಪ್ ಲೈನ್ ಇತ್ಯಾದಿ ಪ್ರಣಾಳಿಕೆಯಲ್ಲಿವೆ Read More »

ಆಮ್ ಆದ್ಮಿ ಅಭ್ಯರ್ಥಿ ಡಾ. ಬಿ.ಕೆ. ವಿಶು ಕುಮಾರ್ ಬಿರುಸಿನ ಪ್ರಚಾರ

ಪುತ್ತೂರು: ಆಮ್ ಆದ್ಮಿ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಬಿ.ಕೆ. ವಿಶು ಕುಮಾರ್ ಅವರು ಕಬಕ ವಿದ್ಯಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಪ್ರಚಾರ ಕಾರ್ಯದ ನಡುವೆ ಹಲವರನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ವಿದ್ಯಾಪುರದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಪಕ್ಷದ ಪರವಾಗಿ ಒಲವು ವ್ಯಕ್ತಪಡಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ, ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವ ಬಗ್ಗೆ ಭರವಸೆ ನೀಡಲಾಯಿತು ಎಂದು ಡಾ. ಬಿ.ಕೆ. ವಿಶು ಕುಮಾರ್ ತಿಳಿಸಿದ್ದಾರೆ.

ಆಮ್ ಆದ್ಮಿ ಅಭ್ಯರ್ಥಿ ಡಾ. ಬಿ.ಕೆ. ವಿಶು ಕುಮಾರ್ ಬಿರುಸಿನ ಪ್ರಚಾರ Read More »

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶೇಖರ್ ಬಿ. ಮಾಡಾವು ಬಿಜೆಪಿಗೆ ಸೇರ್ಪಡೆ

ಪುತ್ತೂರು: 2018ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಶೇಖರ್ ಬಿ. ಮಾಡಾವು ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಕೇಂದ್ರ ಸಚಿವೆ ಡಾ. ಭಾರತಿ ಪವಾರ್ ಅವರು ಬಿಜೆಪಿ ಧ್ವಜ ನೀಡಿ, ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಇದೇ ಸಂದರ್ಭ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ ಮೊದಲಾದವರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶೇಖರ್ ಬಿ. ಮಾಡಾವು ಬಿಜೆಪಿಗೆ ಸೇರ್ಪಡೆ Read More »

ಮಾತೃಶಕ್ತಿ  ಮೇಲೆ ಬಿಜೆಪಿಗೆ ವಿಶ್ವಾಸ | ಸಂಜೀವ ಮಠಂದೂರು ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪ ಗೆಲುವಿಗೆ ಪೂರಕ

ಪುತ್ತೂರು: ಮಾತೃಶಕ್ತಿ ಮೇಲೆ ಬಿಜೆಪಿಗೆ ವಿಶ್ವಾಸವಿದೆ. ಈ ಬಾರಿಗೆ ಪುತ್ತೂರಿನಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು, ಪುತ್ತೂರು ಬಿಜೆಪಿ ಅಭ್ಯರ್ಥಿಗೆ ಎಲ್ಲರೂ ಮತ ನೀಡುವ ಮೂಲಕ ಗೆಲ್ಲಿಸಿ ಕೊಡುವಲ್ಲಿ ಪ್ರಯತ್ನಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ವಿನಂತಿಸಿದರು. ಅವರು ಪುತ್ತೂರು ಭಾರತೀಯ ಜನತಾ ಪಾರ್ಟಿ ವತಿಯಿಂದ ಬಪ್ಪಳಿಗೆ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರಸ್ ಪಕ್ಷ ಮಹಿಳಾ ವಿರೋಧಿಯಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ಕಾಂಗ್ರೆಸ್ ಗೆ

ಮಾತೃಶಕ್ತಿ  ಮೇಲೆ ಬಿಜೆಪಿಗೆ ವಿಶ್ವಾಸ | ಸಂಜೀವ ಮಠಂದೂರು ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪ ಗೆಲುವಿಗೆ ಪೂರಕ Read More »

ಅರಿಯಡ್ಕ: ದಲಿತ ಕಾಲನಿಗೆ ಅಶೋಕ್ ರೈ ಭೇಟಿ ಮತ ಯಾಚನೆ

ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ ಸಮಸ್ಯೆಯಾಗಿದ್ದು ಮಳೆಗಾಲದಲ್ಲಿ ಶಾಲೆಗೆ ಮಕ್ಕಳು ತೆರಳಲೂ ಸಾಧ್ಯವಾಗುತ್ತಿಲ್ಲ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಕಾಲನಿ ನಿವಾಸಿಗಳು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಅಶೋಕ್ ರೈಯವರು ಇಲ್ಲಿ ಇಷ್ಟೊಂದು ಅಪಾಯಕಾರಿಯಾದ ಸ್ಥಳವಿದ್ದರೂ ಸೂಕ್ತ ಸ್ಪಂದನೆ ಸಿಗದೇ ಇದ್ದದ್ದು ಅತ್ಯಂತ ಬೇಸರದ ಸಂಗತಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ

ಅರಿಯಡ್ಕ: ದಲಿತ ಕಾಲನಿಗೆ ಅಶೋಕ್ ರೈ ಭೇಟಿ ಮತ ಯಾಚನೆ Read More »

error: Content is protected !!
Scroll to Top