ಪುತ್ತೂರು

ಪಿಯು ಫಲಿತಾಂಶ: ತನ್ವಿ ಕೆ.ಪಿ.ಗೆ ಶೇ. 90.5 ಅಂಕ

ಪುತ್ತೂರು: ಇತ್ತೀಚೆಗೆ ಪ್ರಕಟವಾದ ಪದವಿ ಪೂರ್ವ ಫಲಿತಾಂಶದಲ್ಲಿ ಚಾರ್ವಾಕ ನಿವಾಸಿ ತನ್ವಿ ಕೆ.ಪಿ. ಅವರು ವಿಜ್ಞಾನ ವಿಭಾಗದಲ್ಲಿ 543 (90.5 %) ಅಂಕ ಪಡೆದು, ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಂಗಳೂರು ಪದವಿನಂಗಡಿ ವಿಕಾಸ ಕೆನರಾ ಕೇಂದ್ರದಲ್ಲಿ ಪದವಿ ಪೂರ್ವ ವಿದ್ಯಾಭ್ಯಾಸ ಪೂರೈಸಿದ್ದಾರೆ. ಇವರು ಪ್ರೇರಣಾ ಸಂಸ್ಥೆಯ ಆಡಳಿತ ನಿರ್ದೇಶಕ, ಒಕ್ಕಲಿಗ ಪತ್ತಿನ ಸಹಕಾರಿ ಸಂಘದ ನಿರ್ದೇಶಕರೂ ಆದ ಪ್ರವೀಣ್ ಕುಂಟ್ಯಾನ ಹಾಗೂ ಸವಿತಾ ಕುಂಟ್ಯಾನ ದಂಪತಿ ಪುತ್ರಿ. ವೈದ್ಯಕೀಯ ರಂಗದಲ್ಲಿ ಸಾಧನೆ ಮಾಡಬೇಕು ಎಂಬ ಮಹತ್ವಾಕಾಂಕ್ಷೆ ತನ್ವಿ […]

ಪಿಯು ಫಲಿತಾಂಶ: ತನ್ವಿ ಕೆ.ಪಿ.ಗೆ ಶೇ. 90.5 ಅಂಕ Read More »

ಶಾಂತಿಗೋಡು ಪಾಣಂಬು ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಶಾಂತಿಗೋಡು ಗ್ರಾಮದ ಪಾಣಂಬು ತರವಾಡು ಮನೆಯಲ್ಲಿ ಕಲ್ಲುರ್ಟಿ, ಸತ್ಯದೇವತೆ, ವರ್ಣರ ಪಂಜುರ್ಲಿ, ಧೂಮಾವತಿ ದೈವಗಳ ನೇಮೋತ್ಸವದ ಅಂಗವಾಗಿ ಗೊನೆ ಮುಹೂರ್ತ ಬುಧವಾರ ಬೆಳಿಗ್ಗೆ ನಡೆಯಿತು. ಕುಟುಂಬದ ಯಜಮಾನ ತಿಮ್ಮಪ್ಪ ಗೌಡ  ಗೊನೆಮುಹೂರ್ತ ನೆರವೇರಿಸಿದರು. ಮೇ2 ರಂದು ನೇಮೋತ್ಸವ ನಡೆಯಲಿದ್ದು, ತರವಾಡು ಮನೆಯಲ್ಲಿ ಗಣಹೋಮ, ಮುಡಿಪು ಶುದ್ಧ, ಸಂಜೆ 4.30 ಕ್ಕೆ ದೈವಗಳ ಭಂಡಾರ ತೆಗೆದು ನೇಮೋತ್ಸವ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮೇ 3 ಬುಧವಾರ ಬೆಳಿಗ್ಗೆ 5 ಗಂಟೆಗೆ ಶಿರಾಡಿ ದೈವ, ರುದ್ರಚಾಮುಂಡಿ ಮತ್ತು ಗುಳಿಗ

ಶಾಂತಿಗೋಡು ಪಾಣಂಬು ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ ಇಂಗ್ಲೀಷ್ ಭಾಷಾ ಕಾರ್ಯಾಗಾರ

ಪುತ್ತೂರು: ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಹಾಗೂ ಸಂತ ಫಿಲೋಮಿನಾ ಕಾಲೇಜು ಸಹಯೋಗದಲ್ಲಿಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್ ಭಾಷಾ ಕಾರ್ಯಗಾರ ಕಾಲೇಜಿನ ಸ್ನಾತಕೋತ್ತರ ವಿಭಾಗ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಸಂಚಾಲಕ ವಂ| ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮ ಉದ್ಘಾಟಿಸಿ, “ಯಾವುದೇ ವೃತ್ತಿಯಲ್ಲಿ ಯಶಸ್ವಿಯಾಗಲು ನಿರಂತರ ಕಲಿಕೆ ಕನಿಷ್ಠಅವಶ್ಯಕತೆಯಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಶಿಕ್ಷಕರು ಸಂವಹನ ಕಲೆಯನ್ನು ಅಭಿವೃದ್ಧಿಪಡಿಸಿಕೊಂಡಲ್ಲಿ ಯಾವುದೇ ವಿಷಯವನ್ನೂವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಬಹುದು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ ಇಂಗ್ಲೀಷ್ ಭಾಷಾ ಕಾರ್ಯಾಗಾರ Read More »

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು

ಪುತ್ತೂರು: ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಬೈಕೊಂದು ಸ್ಕಿಡ್ ಆಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ದಾವಣಗೆರೆ ಮೂಲಕ, ಕಡಬದ ಕೋಡಿಂಬಾಳದಲ್ಲಿ ವಾಸ್ತವ್ಯವಿರುವ ಮಂಜು ಎಂದು ಗುರುತಿಸಲಾಗಿದೆ. ಮಂಜು ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಬೈಕ್‍ನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು Read More »

ವರುಣನ ಕೃಪೆಗಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಲೋಕಕಲ್ಯಾಣಾರ್ಥವಾಗಿ ಹಾಗೂ ವರುಣನ ಕೃಪೆಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ ಬುಧವಾರ ಬೆಳಿಗ್ಗೆ ನಡೆಯಿತು. ದೇವಸ್ಥಾನದಲ್ಲಿ ಬೆಳಿಗ್ಗೆ ನಡೆಯುವ ನಿತ್ಯ ಬಲಿ ಬಳಿಕ ಶ್ರೀ ದೇವರ ಗರ್ಭಗುಡಿ ಎದುರು ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೀಯಾಳಾಭಿಷೇಕ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್, ರಾಧಾಕೃಷ್ಣ ಗೌಡ ನಂದಿಲ, ಯು.ಲೋಕೇಶ್ ಹೆಗ್ಡೆ, ಉದಯ್

ವರುಣನ ಕೃಪೆಗಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ Read More »

ಗುಂಡ್ಯದಲ್ಲಿ ಬೃಹತ್ ಗಾತ್ರದ ಮರ ಬಿದ್ದು ಅಂಗಡಿಗೆ ಹಾನಿ, ವಾಹನ ಸಂಚಾರ ಸ್ಥಗಿತ

ಪುತ್ತೂರು :ಮಂಗಳವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಗುಂಡ್ಯದಲ್ಲಿ ಮರವೊಂದು ರಸ್ತೆಗೆ ಬಿದ್ದು ಪಕ್ಕದ ಅಂಗಡಿಗೆ ಹಾನಿ ಉಂಟಾಗಿ, ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರದಲ್ಲಿ ಸ್ಥಗಿತಗೊಂಡು ಕಿ.ಮೀ. ಗಟ್ಟಲೆ ರಸ್ತೆಯುದ್ದಕ್ಕೂ ವಾಹನಗಳು ಜ್ಯಾಮ್ ಆಗಿದ್ದವು. ಬಳಿಕ ಮರವನ್ನು ರಸ್ತೆಯಿಂದ ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಲಾಯಿತು.

ಗುಂಡ್ಯದಲ್ಲಿ ಬೃಹತ್ ಗಾತ್ರದ ಮರ ಬಿದ್ದು ಅಂಗಡಿಗೆ ಹಾನಿ, ವಾಹನ ಸಂಚಾರ ಸ್ಥಗಿತ Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ

ಪುತ್ತೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಪ್ರತಿಷ್ಠಿತ ನರಿಮೊಗರಿನಲ್ಲಿರುವ ಬಿಂದು ಫ್ಯಾಕ್ಟರಿಗೆ ಮಂಗಳವಾರ ಭೇಟಿ ನೀಡಿದರು. ಬಿಂದು ಫ್ಯಾಕ್ಟರಿಯ ಪ್ರಮುಖರು ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ ಫ್ಯಾಕ್ಟರಿಯ ಕಾರ್ಯಚಟುವಟಿಕೆ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ Read More »

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್‌ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್‌ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್‌ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »

ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ

ಪುತ್ತೂರು: ಕಾಣಿಯೂರು, ಸುಬ್ರಹ್ಮಣ್ಯ ಪರಿಸರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣವಿತ್ತು. ಇದ್ದಕ್ಕಿದ್ದಂತೆ ಜೋರಾಗಿ ಸುರಿದ ಮಳೆಯಿಂದಾಗಿ, ವಾತಾವರಣ ತಂಪಾಗಿದೆ. ಭಾರೀ ಬಿಸಿಲಿನಿಂದ ಕಂಗೆಟ್ಟಿದ್ದ ಕಾಣಿಯೂರು, ಸುಬ್ರಹ್ಮಣ್ಯ ಭಾಗದ ಜನರಿಗೆ ಮಳೆ ತಂಪೆರೆದಿದೆ.

ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ Read More »

ರಾಷ್ಟ್ರೀಯತೆ, ಹಿಂದುತ್ವ, ಅಭಿವೃದ್ಧಿಯೇ ಗೆಲುವಿಗೆ ಕಾರಣವಾಗಲಿದೆ | ಒಳಮೊಗ್ರು ಪರ್ಪುಂಜದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಶಾ ತಿಮ್ಮಪ್ಪ

ಪುತ್ತೂರು: ಹಿಂದುತ್ವ, ರಾಷ್ಟ್ರೀಯತೆ, ಅಭಿವೃದ್ಧಿಯನ್ನೇ ಗುರಿಯಾಗಿಟ್ಟುಕೊಂಡು ಬಿಜೆಪಿ ಸರಕಾರ ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿದೆ. ಎಲ್ಲೂ ಒಂದು ವರ್ಗ, ಜಾತಿ ಎಂಬ ಬೇಧವನ್ನು ಮಾಡಿಲ್ಲ. ಆದ್ದರಿಂದ ಈ ಬಾರಿ ಮತ್ತೊಮ್ಮೆ ಬಿಜೆಪಿ ಸರಕಾರ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಒಳಮೊಗ್ರು ಪರ್ಪುಂಜ ಬಾರಿಕೆ ನಿವಾಸಿ ನಾರಾಯಣ ಶೆಟ್ಟಿ ಅವರ ಮನೆಯಲ್ಲಿ ನಡೆದ ಒಳಮೊಗ್ರು ಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅತಿ

ರಾಷ್ಟ್ರೀಯತೆ, ಹಿಂದುತ್ವ, ಅಭಿವೃದ್ಧಿಯೇ ಗೆಲುವಿಗೆ ಕಾರಣವಾಗಲಿದೆ | ಒಳಮೊಗ್ರು ಪರ್ಪುಂಜದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಶಾ ತಿಮ್ಮಪ್ಪ Read More »

error: Content is protected !!
Scroll to Top