ಪುತ್ತೂರು

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಂಜನಾಗೆ  97.33 ಶೇ.

ಪುತ್ತೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ಸಂಜನಾ ಕೆ ಶೇಕಡ 97.33 (584) ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅವರು ಪುತ್ತೂರು ಕೆಎಸ್ ಆರ್‍ ಟಿಸಿ ಉದ್ಯೋಗಿ ಕೃಷ್ಣಪ್ಪ ಕೆ, ಹಾಗೂ ಕ್ಯಾಂಪ್ಕೋ ಡೆಪ್ಯೂಟಿ ಮ್ಯಾನೇಜರ್ ಉಷಾ ದಂಪತಿ ಪುತ್ರಿ ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿನಿ

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಂಜನಾಗೆ  97.33 ಶೇ. Read More »

ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ | ಮತಯಾಚನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪುತ್ತೂರಿನ ಕೃಷ್ಣನಗರದಲ್ಲಿರುವ ಗೇರು ಸಂಸ್ಕರಣಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿದರು. ಭೇಟಿ ನೀಡಿದ ಅವರು ಸಭೆ ನಡೆಸಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಮಾತನಾಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ | ಮತಯಾಚನೆ Read More »

ಕೇಂದ್ರ ಸಚಿವೆ ಡಾ. ಭಾರತಿ ಪವಾರ್ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ಕೇಂದ್ರದ ಆರೋಗ್ಯ ಖಾತೆಯ ರಾಜ್ಯ ಸಚಿವೆ ಡಾ. ಭಾರತಿ ಪವಾರ್ ಅವರು ಮಂಗಳವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಡಾ. ಭಾರತಿ ಪವಾರ್ ಅವರಿಗೆ ಬಿಜೆಪಿ ಕಚೇರಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಹೂ ನೀಡಿ ಸ್ವಾಗತಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸೀರೆ, ಬಳೆ, ಕುಂಕುಮ ನೀಡಿ ಆದರಿಸಿದರು. ಇದೇ ಸಂದರ್ಭ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ನಗರಸಭೆ ಉಪಾಧ್ಯಕ್ಷೆ ಗೌರಿ ಬನ್ನೂರು,

ಕೇಂದ್ರ ಸಚಿವೆ ಡಾ. ಭಾರತಿ ಪವಾರ್ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ Read More »

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಶ್ರೇಯೋಭಿವೃದ್ಧಿಗೆ ಕುಂಟಾರು ರವೀಶ ತಂತ್ರಿಗಳಿಂದ ವಿಶೇಷ ಪ್ರಾರ್ಥನೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಗೆಲುವು, ಶ್ರೇಯೋಭಿವೃದ್ಧಿಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ ಕುಂಟಾರು ಶ್ರೀ ರವೀಶ ತಂತ್ರಿಗಳು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು. ವಿಶೇಷ ಪ್ರಾರ್ಥನೆ ಸಲ್ಲಿಸಿದ ತಂತ್ರಿಗಳು ಬಳಿಕ ಆಶಾ ತಿಮ್ಮಪ್ಪ ಅವರಿಗೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಶ್ರೇಯೋಭಿವೃದ್ಧಿಗೆ ಕುಂಟಾರು ರವೀಶ ತಂತ್ರಿಗಳಿಂದ ವಿಶೇಷ ಪ್ರಾರ್ಥನೆ Read More »

ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪುತ್ತೂರು ಶಾಸನಗಳ ಕುರಿತು ಪ್ರಬಂಧ ಮಂಡನೆಗೆ ಪುತ್ತೂರು ಉಮೇಶ್ ನಾಯಕ್ ಅವರ ಪ್ರಬಂಧ ಆಯ್ಕೆ

ಪುತ್ತೂರು: ಭಾರತ ಸರಕಾರದ ಅಧೀನವಿರುವ ಉನ್ನತ ಶಿಕ್ಷಣ ಇಲಾಖೆ ಸಚಿವಾಲಯದ ಶಾಸ್ತ್ರೀಯ  ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಭಾರತೀಯ ಭಾಷಾ ಸಂಸ್ಥಾನಂ ಮೈಸೂರು  ಇವರು  ಆಯೋಜಿಸಿರುವ  ಶಾಸ್ತ್ರೀಯ ಕನ್ನಡ ಸಾಂಸ್ಕೃತಿಕ ಪರಿಶೋಧನಾ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ  ‘ಪುತ್ತೂರ ಶಾಸನಗಳು ಮತ್ತು ಅದರಲ್ಲಿ ಉಲ್ಲೇಖಿಸುವ ವಿಷಯಗಳ ವರ್ಗೀಕರಣ ಮತ್ತು ಆರ್ಥ ವ್ಯವಸ್ಥೆ’ ಕುರಿತು ರಚಿಸಿರುವ ಪ್ರಬಂಧ ಮಂಡನೆಗೆ ಆಯ್ಕೆಯಾಗಿದೆ. ಏ.26 ರಿಂದ  28ರ ತನಕ

ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪುತ್ತೂರು ಶಾಸನಗಳ ಕುರಿತು ಪ್ರಬಂಧ ಮಂಡನೆಗೆ ಪುತ್ತೂರು ಉಮೇಶ್ ನಾಯಕ್ ಅವರ ಪ್ರಬಂಧ ಆಯ್ಕೆ Read More »

ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ ಪರ ಭಾಗವಹಿಸದಂತೆ ಪ್ರತಿಷ್ಠಿತ ಕ್ಯಾಂಪ್ಕೋದಿಂದ ಸಿಬ್ಬಂದಿಗಳಿಗೆ ನೋಟೀಸ್ ಜ್ಯಾರಿ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳುವುದು ಅಥವಾ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು ಅಥವಾ ಅವರೊಂದಿಗೆ ಸಂಬಂಧ ಇರಿಸಬಾರದು ಎಂದು ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ ತನ್ನ ಸಿಬ್ಬಂದಿಗಳಿಗೆ ನೋಟೀಸ್ ಜ್ಯಾರಿ ಮಾಡಿದೆ. ನಿಯಮಗಳ ಪ್ರಕಾರ ಯಾವುದೇ ನೌಕರ ರಾಜಕೀಯ ಪಕ್ಷ ಅಥವಾ ರಾಜಕೀಯದಲ್ಲಿ ಸದಸ್ಯನಾಗಿರಬಾರದು ಹಾಗೂ ಪಕ್ಷದ ಚಟುವಟಿಕೆಗಳಿಗೆ ಸಹಾಯ ಮಾಡುವುದು, ಶಾಸಕಾಂಗದ ಸದಸ್ಯನಾಗಲು ಅನುಮತಿಯಿಲ್ಲದೆ ಚುನಾವಣೆಗೆ ನಿಲ್ಲುವ ಮತ್ತು ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿರಬಾರದು. ಈ ನಿಯಮವನ್ನು ಎಲ್ಲಾ ಸಿಬ್ಬಂದಿಗಳು ಅನುಸರಿಸಲು

ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ ಪರ ಭಾಗವಹಿಸದಂತೆ ಪ್ರತಿಷ್ಠಿತ ಕ್ಯಾಂಪ್ಕೋದಿಂದ ಸಿಬ್ಬಂದಿಗಳಿಗೆ ನೋಟೀಸ್ ಜ್ಯಾರಿ Read More »

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಚಿಹ್ನೆ ಬ್ಯಾಟ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ  ಅರುಣ್ ಕುಮಾರ್ ಪುತ್ತಿಲ ತಮ್ಮ ಚುನಾವಣಾ ಚಿಹ್ನೆಯನ್ನು ಸೋಮವಾರ ಪ್ರಕಟಿಸಿದ್ದು, ಬ್ಯಾಟ್ ಚಿಹ್ನೆಯೆಂದು ಘೋಷಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲೇ ಉಳಿದಿದ್ದ ಅರುಣ್ ಕುಮಾರ್ ಪುತ್ತಿಲ ಯಾವ ಚಿಹ್ನೆ ಆಯ್ಕೆ ಮಾಡಲಿದ್ದಾರೆ ಎಂದು ಕುತೂಹಲವಿತ್ತು.  ಇದೀಗ ಬ್ಯಾಟ್‍ ಚಿಹ್ನೆ ಆಯ್ಕೆ ಮಾಡುವ ಮೂಲಕ ಬ್ಯಾಟ್ ಬೀಸಿ ಎದುರಾಳಿಯನ್ನು ಸೋಲಿಸುತ್ತಾರೋ ಎಂದು ಕಾದು ನೋಡಬೇಕಾಗಿದೆ.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಚಿಹ್ನೆ ಬ್ಯಾಟ್ Read More »

ಕಾವು ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ | ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ – ಆಶಾ ತಿಮ್ಮಪ್ಪ ಗೌಡ

ಪುತ್ತೂರು: ಬಿಜೆಪಿ ಹಿಂದುತ್ವದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಹಿಂದೂ ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿನಂತಿಸಿದರು.  ಅವರು ಕಾವು ನನ್ಯ ವಾಸುದೇವ ಮುಡಿತ್ತಾಯರ ಮನೆಯಲ್ಲಿ ನಡೆದ ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು – ಸಂಜೀವ ಮಟಂದೂರು ಪ್ರಧಾನಿ ನರೇಂದ್ರ ಮೋದಿ

ಕಾವು ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ | ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ – ಆಶಾ ತಿಮ್ಮಪ್ಪ ಗೌಡ Read More »

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್

ಮಂಗಳೂರು : ಕಾಂಗ್ರೆಸ್​​ನವರು ಧಮ್ಕಿ ಹಾಕಿ ನಾಮಪತ್ರ ವಾಪಸ್​ ಪಡೆಸಿದರು ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಕಾಂಗ್ರೆಸ್​ನ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್ Read More »

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ನ ಮಹಮ್ಮದ್ ಅಶ್ರಫ್ ಕಲ್ಲೇಗ ಹಾಗೂ ಎಸ್‍ಡಿಪಿಐಯಿಂದ ನಾಮಪತ್ರ ಸಲ್ಲಿಸಿದ ಪಿ.ಇಬ್ರಾಹಿಂ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಮೇ 10ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಇಬ್ಬರು ಚುನಾವಣೆಯಿಂದ ಹಿಂದೆ ಸರಿದಂತಾಗಿದೆ. ಏ. 24ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದ್ದು, ಇಬ್ಬರು ಅಭ್ಯರ್ಥಿಗಳು ಸೋಮವಾರ ಖುದ್ದು ಚುನಾವಣಾಧಿಕಾರಿ ಕಚೇರಿಗೆ ಹಾಜರಾಗಿ ಉಮೇದುವಾರಿಕೆ ವಾಪಾಸು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್ Read More »

error: Content is protected !!
Scroll to Top