ಪುತ್ತೂರು

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಬ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಗುರುವಾರ ನಾಮಪತ್ರ ಸಲ್ಲಿಸಿದರು. ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು. ಯಾವುದೋ ಕಾರಣಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ.  ಗುರುವಾರ ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಐ.ಸಿ.ಕೈಲಾಸ್, ಮಹಿಳಾ ಪದಾಧಿಕಾರಿಗಳಾದ ಝೊಹರಾ ನಿಸಾರ್, ಪದ್ಮಾಮಣಿ ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ Read More »

ಬಿಜೆಪಿಯನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ | ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ತೇಜಸ್ವಿ ಸೂರ್ಯ ಕರೆ

ಪುತ್ತೂರು: ಈ ಬಾರಿ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರನ್ನು 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕರೆ ನೀಡಿದರು. ಅವರು ಗುರುವಾರ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದರು. ಪುತ್ತೂರು ವಿಧಾನಸಭಾ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಜಿ.ಪಂ. ಸದಸ್ಯರಾಗಿ, ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವ

ಬಿಜೆಪಿಯನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ | ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ತೇಜಸ್ವಿ ಸೂರ್ಯ ಕರೆ Read More »

ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ | ಕಂಬ ಮುರಿತ | ಚಾಲಕನಿಗೆ ಗಾಯ

ಪುತ್ತೂರು: ಟಿಪ್ಪರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆದ್ರಾಳ ರೈಲ್ವೇ ಸೇತುವೆ ಬಳಿ ಗುರುವಾರ ನಡೆದಿದೆ. ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಟಿಪ್ಪರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಉರುಳಿ ಬಿದ್ದಿದ್ದು, ತಂತಿಗಳು ತುಂಡಾಗಿದೆ. ಅಪಘಾತದಿಂದ ಟಿಪ್ಪರ್ ಚಾಲಕನ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ | ಕಂಬ ಮುರಿತ | ಚಾಲಕನಿಗೆ ಗಾಯ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೃಹತ್ ಮೆರವಣಿಗೆಯಲ್ಲಿ ಸಾಗಿ ಅಲ್ಲಿಂದ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಸಹಪ್ರಭಾರಿಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ Read More »

ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ಬೃಹತ್ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬೃಹತ್ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರೊಂದಿಗೆ ದೇವಸ್ಥಾನದ ವಠಾರದಿಂದ ಹೊರಟು ಮುಖ್ಯರಸ್ತೆಯಾಗಿ ಬಸ್ ನಿಲ್ದಾಣದ ತನಕ ಸಾಗಿ ಅಲ್ಲಿಂದ ಕೋರ್ಟ್ ರಸ್ತೆಯಾಗಿ ಕಿಲ್ಲೇ ಮೈದಾನದಲ್ಲಿ ಸಮಾಪನಗೊಂಡಿತು. ಬಳಿಕ ಕಿಲ್ಲೇ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಿತು. ಕೇಸರಿ ರಂಗು : ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರಿಂದ ಹಿಡಿದು

ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ Read More »

ಟಿಕೇಟ್ ಘೋಷಣೆಗೆ ಮೊದಲಿನ ಪುತ್ತಿಲ ಹೇಳಿಕೆ ವೈರಲ್ | ಹೇಳಿಕೆಯಂತೆ ನಡೆಯದ ಪುತ್ತಿಲ ಎಂದು ಕುಟುಕಿದ ನೆಟ್ಟಿಗರು

ಪುತ್ತೂರು: ಬಿಜೆಪಿ ಟಿಕೇಟ್ ಘೋಷಣೆಗೆ ಮೊದಲು ಅರುಣ್ ಕುಮಾರ್ ಪುತ್ತಿಲ ಅವರು ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. “ನಾನು ಸಂಘ ಪರಿವಾರದ ಕಾರ್ಯಕರ್ತ. ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವವರನ್ನು ಗೆಲ್ಲಿಸುವುದು ಜವಾಬ್ದಾರಿ…” ಎಂಬ ಹೇಳಿಕೆ ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇದೇನು ಹೇಳುವುದೊಂದು, ಮಾಡುವುದೊಂದು” ಎಂಬಂತಾಗಿದೆಯಲ್ಲವೇ? ಬಿಜೆಪಿ ಹೈಕಮಾಂಡ್ ಟಿಕೇಟ್ ನೀಡಿರುವ ವ್ಯಕ್ತಿಗೆ ಬೆಂಬಲ ನೀಡದೇ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದು, ಸ್ವತಃ ಬಿಜೆಪಿ ಪಕ್ಷದ ಅಭ್ಯರ್ಥಿ ವಿರುದ್ಧವೇ ಯುದ್ಧಕ್ಕೆ

ಟಿಕೇಟ್ ಘೋಷಣೆಗೆ ಮೊದಲಿನ ಪುತ್ತಿಲ ಹೇಳಿಕೆ ವೈರಲ್ | ಹೇಳಿಕೆಯಂತೆ ನಡೆಯದ ಪುತ್ತಿಲ ಎಂದು ಕುಟುಕಿದ ನೆಟ್ಟಿಗರು Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹುಲಿಭೂತ, ರಕ್ತೇಶ್ವರಿ ನೇಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಶ್ರೀ ದೈವಗಳ ನೇಮೋತ್ಸವ ಬುಧವಾರ ರಾತ್ರಿ ನಡೆಯಿತು. ಬೆಳಿಗ್ಗೆ ವೀರಮಂಗಲದಿಂದ ಶ್ರೀ ದೇವರು ಅವಭೃತ ಸ್ಣಾನದ ಬಳಿಕ ಶ್ರೀ ದೇವಸ್ಥಾನಕ್ಕೆ ಆಗಮಿಸಿ ಧ್ವಜಾವರೋಹಣದ ಮೂಲಕ ಜಾತ್ರೆ ಸಂಪನ್ನಗೊಂಡಿತ್ತು. ರಾತ್ರಿ ಚೂರ್ಣೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಬಳಿಕ ಹುಲಿಭೂತ, ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹುಲಿಭೂತ, ರಕ್ತೇಶ್ವರಿ ನೇಮ Read More »

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್ | ದುಷ್ಕರ್ಮಿ ವಿರುದ್ಧ ಪೊಲೀಸರಿಗೆ ದೂರು

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಏಕವಚನದಲ್ಲಿ ಅವ್ಯಾಚವಾಗಿ ಬೈಯುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸಂದರ್ಭ ಮುಸ್ಲಿಂ ಧರ್ಮಗುರುಗಳು ತಮ್ಮ ಬೆಂಬಲಿಗರೊಂದಿಗೆ ನಳಿನ್ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿ ಫೋಟೊ ತೆಗೆಸಿಕೊಂಡಿದ್ದರು. ಈ ಫೋಟೊವನ್ನು ದುಷ್ಕರ್ಮಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಲ್ಲದೆ ನಳಿನ್ ಕುಮಾರ್ ಕಟೀಲ್ ಅವರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್‍ ಮಾಡಿದ್ದಾನೆ.

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್ | ದುಷ್ಕರ್ಮಿ ವಿರುದ್ಧ ಪೊಲೀಸರಿಗೆ ದೂರು Read More »

ನಾಳೆ (ಏ.21) : ಶ್ರೀ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಏ.21 ಶುಕ್ರವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಉತ್ಸವದ ಅಂಗವಾಗಿ ಬೆಳಿಗ್ಗೆ 7.3೦ ರಿಂದ ಗಣಪತಿ ಹೋಮ, ಮಹಾಪೂಜೆ, ಪಾಷಾಣ ಮೂರ್ತಿಗೆ ತಂಬಿಲ, ನಾಗದೇವರಿಗೆ ತಂಬಿಲ, ಗುಳಿಗನಿಗೆ ತಂಬಿಲ ನಡೆಯಲಿದೆ. 11 ಗಂಟೆಗೆ ಮೂಡಾಯೂರು ಚಂದ್ರಶೇಖರ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ಮಧ್ಯಾಹ್ನ 1230೦ ಕ್ಕೆ ಮಹಾಪೂಜೆ, ದೇವಿದರ್ಶನ, ಪ್ರಸಾದ ವಿತರಣೆ, 1.30 ರಿಂದ

ನಾಳೆ (ಏ.21) : ಶ್ರೀ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ Read More »

ಶಾಸಕ ಸಂಜೀವ ಮಠಂದೂರು ಅವರ ಹಿಂದಿನ ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪರಿಗೆ ಶ್ರೀರಕ್ಷೆಯಾಗಲಿದೆಯೇ ? | ಅಭ್ಯರ್ಥಿ ಆಶಾ ತಿಮ್ಮಪ್ಪರೊಂದಿಗೆ ಫೀಲ್ಡಿಗಿಳಿದ ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ಬಿಜೆಪಿಗೆ ಈ ಬಾರಿ ಹಿಂದಿನ ಅವಧಿಯ ಅಭಿವೃದ್ಧಿ ಕಾರ್ಯಗಳೇ ಶ್ರೀ ರಕ್ಷೆಯಾಗಲಿದೆಯೇ ? ಹೀಗೊಂದು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಹಿಂದಿನ ಅವಧಿಯ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತಂದ ಅನುದಾನ, ವಿಧಾನಸಭಾ ಕ್ಷೇತ್ರಾದ್ಯಂತ ಮಾಡಿದ ಅಭಿವೃದ್ಧಿ ಕಾರ್ಯಗಳು ಈ ಬಾರಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಕೈಹಿಡಿಯಲಿರುವುದು ಗ್ಯಾರಂಟಿ. ಹಿಂದಿನ ಅವಧಿಯಲ್ಲಿ ಸಂಜೀವ ಮಠಂದೂರು ಅವರು ರಸ್ತೆಗಳ ಅಭಿವೃದ್ಧಿ, ನೂತನ ರಸ್ತೆಗಳು, ಕಿಂಡಿ ಅಣೆಕಟ್ಟುಗಳು, ವಿವಿಧ ಇಲಾಖೆಗಳ ವಿಸ್ತೃತ ಕಟ್ಟಡ, ನೂತನ ಕಟ್ಟಡಗಳಿಗೆ ಶಿಲಾನ್ಯಾಸ, ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳು ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ಈ ನಡುವೆ ಕ್ಷೇತ್ರದಿಂದ ಟಿಕೇಟ್ ಪಡೆಯುವಲ್ಲಿ ವಂಚಿತವಾದರೂ, ಪಕ್ಷದ ಹೈಕಮಾಂಡ್ ನ ಬದ್ಧತೆಗೆ ತಲೆಬಾಗಿ ತನ್ನ ಪ್ರಾಮಾಣಿಕತೆಯನ್ನು ಮೆರೆಯುವ ಮೂಲಕ ಜನಮಾನಸದಲ್ಲಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಅಭ್ಯರ್ಥಿ ಆಶಾ ತಿಮ್ಮಪ್ಪರ ಗೆಲುವಿಗಾಗಿ ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದು, ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿರುವುದು ಬಿಜೆಪಿಯ ಗೆಲುವಿನ ಪತಾಕೆ ಹಾರಿಸುವಲ್ಲೂ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ. ಆಶಾ ತಿಮ್ಮಪ್ಪ ಅವರು ಈಗಾಗಲೇ ವಿವಿಧ ಧಾರ್ಮಿಕ ಕೇಂದ್ರಗಳು, ಮಠಾಧೀಶರು, ದೇವಸ್ಥಾನಗಳನ್ನು ಭೇಟಿ ಮಾಡಿ ಅಲ್ಲಿಯ ಸ್ವಾಮೀಜಿಗಳು, ಮಠಾಧೀಶರಿಂದ ಆಶೀರ್ವಚನ ಪಡೆದಿದ್ದಾರೆ. ತನ್ನ ಕಾರ್ಯಕ್ಷೇತ್ರದಲ್ಲಿ ದಣಿವರಿಯದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು,, ಕಾರ್ಯಕರ್ತರು ಫೀಲ್ಡಿಗಿಳಿದು ಹುರುಪಿನಿಂದ ಆಶಾ ತಿಮ್ಮಪ್ಪ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.  ಒಟ್ಟಾರೆಯಾಗಿ  ಗ್ರಾಮೀಣ ಮಟ್ಟದಲ್ಲಿ ಭರಪೂರ ಬೆಂಬಲ ದೊರೆತಿದೆ. ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದಂದಿನಿಂದಲೇ ಆಶಾ ತಿಮ್ಮಪ್ಪ ಅವರು ಬಿಜೆಪಿಯ ಹಿರಿಯ ಮುಖಂಡರು, ಸಂಘ ಪರಿವಾರದ ಮುಖಂಡರುಗಳು ಸಹಿತ ಕ್ಷೇತ್ರಾದ್ಯಂತ ಕಾರ್ಯಕರ್ತರನ್ನು ಭೇಟಿ ಮಾಡುವ ಮೂಲಕ ಸಾಕಷ್ಟು ಚರ್ಚೆಗಳನ್ನು ಈಗಾಗಲೇ ಮಾಡಿದ್ದಾರೆ. ಮುಖ್ಯವಾಗಿ ಶಾಸಕ ಸಂಜೀವ ಮಠಂದೂರು ಅವರೇ ಸ್ವತಃ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಜತೆ ಫೀಲ್ಡಿಗಿಳಿದು ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಆಶಾ ತಿಮ್ಮಪ್ಪರಿಗೆ ಬಲ ಬರುವುದರ ಜತೆಗೆ ಶ್ರೀ ರಕ್ಷೆಯಾಗಲಿದೆ ಎಂಬ ಆಶಾಭಾವನೆಯನ್ನು ಹೊಂದಿದ್ದಾರೆ. ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯಕರ್ತರು ಹಾಗೂ ಮತದಾರರನ್ನು ಭೇಟಿ ಮಾಡುವ ಮೂಲಕ ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಶಾಸಕ ಸಂಜೀವ ಮಠಂದೂರು ಅವರ ಊರಾದ ಹಿರೇಬಂಡಾಡಿಗೆ ಸಂಜೀವ ಮಠಂದೂರು ಜತೆ ಇತ್ತೀಚೆಗೆ ಭೇಟಿ ನೀಡಿ ಅಲ್ಲಿನ ಕಾರ್ಯಕರ್ತರೊಂದಿಗೆ ಚರ್ಚಿಸಿದ್ದಾರೆ.

ಶಾಸಕ ಸಂಜೀವ ಮಠಂದೂರು ಅವರ ಹಿಂದಿನ ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪರಿಗೆ ಶ್ರೀರಕ್ಷೆಯಾಗಲಿದೆಯೇ ? | ಅಭ್ಯರ್ಥಿ ಆಶಾ ತಿಮ್ಮಪ್ಪರೊಂದಿಗೆ ಫೀಲ್ಡಿಗಿಳಿದ ಸಂಜೀವ ಮಠಂದೂರು Read More »

error: Content is protected !!
Scroll to Top