ಪುತ್ತೂರು

ಮೂರು ದಿನಗಳ ಯೋಗ ಪ್ರಶಿಕ್ಷಣ ಶಿಬಿರ ಯೋಗ-ಜೀವನ-ದರ್ಶನ-2023 ಸಮಾರೋಪ | ಮೂರು ವಿಭಾಗಗಳಲ್ಲಿ ನಡೆದ ಯೋಗ ಪ್ರಶಿಕ್ಷಣ ಶಿಬಿರ

ಪುತ್ತೂರು : ಶ್ರೀ ಪತಂಜಲಿ  ಯೋಗ ಶಿಕ್ಷಣ ಸಮಿತಿ ಕರ್ನಾಟಕ. ನೇತ್ರಾವತಿ ವಲಯ, ಪುತ್ತೂರು, ದ.ಕ.ಜಿಲ್ಲೆ. ಹಾಗೂ ಶ್ರೀ ಪತಂಜಲಿ  ಯೋಗ ಶಿಕ್ಷಣ ಪೌಂಡೇಶನ್ ಆಶ್ರಯದಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುರುವಾರ ಮೂರು ವಿಭಾಗಗಳಲ್ಲಿ ಉದ್ಘಾಟನೆಗೊಂಡಿದ್ದ ಯೋಗ-ಜೀವನ-ದರ್ಶನ-2023 ಯೋಗ ಪ್ರಶಿಕ್ಷಣ ಶಿಬಿರವು ಭಾನುವಾರ ಸಮಾರೋಪಗೊಂಡಿತು. ಸಾಮಾನ್ಯ ಯೋಗ ಪ್ರಶಿಕ್ಷಣ ಶಿಬಿರವನ್ನು ಪುತ್ತೂರು ನಗರ ಸಭೆ ಪೌರಾಯುಕ್ತ ಮಧು ಎಸ್. ಮನೋಹರ ಉದ್ಘಾಟಿಸಿದರು. ಉಪ್ಪಿನಂಗಡಿ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಪ್ರಧಾನ ಅರ್ಚಕ  ರವೀಂದ್ರ ಭಟ್  […]

ಮೂರು ದಿನಗಳ ಯೋಗ ಪ್ರಶಿಕ್ಷಣ ಶಿಬಿರ ಯೋಗ-ಜೀವನ-ದರ್ಶನ-2023 ಸಮಾರೋಪ | ಮೂರು ವಿಭಾಗಗಳಲ್ಲಿ ನಡೆದ ಯೋಗ ಪ್ರಶಿಕ್ಷಣ ಶಿಬಿರ Read More »

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ

ಪುತ್ತೂರು: 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆ ಭೇಟಿ ಮಾಡಿ ಮತದಾನ ಮಾಡಿಸುವ ಕಾರ್ಯ ಏ.29 ರಿಂದ ಮೇ 6 ರ ತನಕ ನಡೆಯಲಿದ್ದು, ಈ ನಿಟ್ಟಿನಲ್ಲಿ  ನಿಯೋಜಿತ ಮತದಾನ ಅಧಿಕಾರಿ ಮತ್ತು ಸಿಬಂದಿ ವರ್ಗದವರಿಗೆ ತರಬೇತಿ ಕಾರ್ಯಕ್ರಮ ಭಾನುವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. 104 ಪೋಲಿಂಗ್ ಆಫೀಸರ್,  41 ಮಂದಿ ಮೈಕ್ರೋ ಅಬ್ಸರ್‌ವರ್ ಮತ್ತು 20 ಮಂದಿ ಸೆಕ್ಟರ್ ಆಫೀಸರ್ ಗಳಿಗೆ 3 ಕೊಠಡಿಗಳಲ್ಲಿ ಪ್ರತ್ತೇಕವಾಗಿ

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವೇಶ್ವರ ಜಯಂತಿ

ಪುತ್ತೂರು: ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಶರಣ ಬಸವೇಶ್ವರ ಜಯಂತಿ ಆಚರಣೆ ಭಾನುವಾರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ದೀಪ ಬೆಳಗಿಸಿ ಉದ್ಘಾಟಿಸಿ, ಶರಣ ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದವರು. ಈ ನಿಟ್ಟಿನಲ್ಲಿ ಅವರ ಜಯಂತಿ ಆಚರಣೆ ಮಾಡುವುದು ಅರ್ಥಪೂರ್ಣ ಎಂದರು. ವೇದಿಕೆಯಲ್ಲಿ  ತಹಶೀಲ್ದಾರ್ ಶಿವಶಂಕರೇ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಉಪತಹಶೀಲ್ದಾರ್

ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವೇಶ್ವರ ಜಯಂತಿ Read More »

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿ ಏಕಕಾಲದಲ್ಲಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಡಬಲ್ ಇಂಜಿನ್ ಸರಕಾರದ ಸಾಧನೆ ಕುರಿತು ಮನೆ ಮನೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೊಳುವಾರಿನಲ್ಲಿ ಡಾ.ಎಂ.ಕೆ.ಪ್ರಸಾದ್  ಅಭ್ಯರ್ಥಿ ಆಶಾ ತಿಮ್ಮಪ್ಪ ಪರಿಚಯ ಪತ್ರವನ್ನು ಮನೆ, ಅಂಗಡಿಗಳಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಪುತ್ತೂರು ಜಿಲ್ಲೆಯಾಗಿ ಪರಿವರ್ತಿಸಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪು್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಅವರು ವಿಟ್ಲದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪುತ್ತೂರು ಕೇಂದ್ರೀಕೃತವಾಗಿ ನೂತನ ಜಿಲ್ಲೆಯ ಕನಸು ಈ ಭಾಗದಲ್ಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದ ಅವರು, ಕಳೆದ ಐದು ವರ್ಷಗಳಲ್ಲಿ ರಾಜ್ಯದ ಡಬಲ್ ಇಂಜಿನ್ ಸರಕಾರದ ಸಾಧನೆಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದ್ದು, ಶಾಸಕ ಸಂಜೀವ ಮಠಂದೂರು ಅವರು ಒಂದೂವರೆ ಸಾವಿರ ಕೋಟಿ ಅನುದಾನ

ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ

ಸುಳ್ಯ: 2022-23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿ ಭಾರತ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ ಹಾಗೂ ಸಂಧ್ಯಾ ಕೆದಂಬಾಡಿ ದಂಪತಿ ಪುತ್ರಿ. ಕೆದಂಬಾಡಿ ರಾಮಯ್ಯ ಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯ ಗೌಡರು ಬ್ರಿಟಿಷರ ವಿರುದ್ಧ ನಾನಾ ತಂತ್ರಗಾರಿಕೆಯಿಂದ ಹೋರಾಡಿದ್ದರು. ಮಂಜುಶ್ರೀ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‍

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ Read More »

ದ್ವಿತೀಯ ಪಿಯುಸಿ : ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ

ಪುತ್ತೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಪಲ್ಲವಿ 593 (98.83 ಶೇ.) ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಪಲ್ಲವಿ ಅವರು ಲೆಕ್ಕಶಾಸ್ತ್ರ-100, ಅರ್ಥಶಾಸ್ತ್ರ 100, ಸಂಸ್ಕೃತ 100, ಸಂಖ್ಯಾಶಾಸ್ತ್ರ-99, ವ್ಯವಹಾರ ಅಧ್ಯಯನ-99, ಇಂಗ್ಲಿಷ್-95 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆ ಮಾಡುವ ಜೊತೆಗೆ ರಾಜ್ಯಕ್ಕೆ ಐದನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಪರ್ಲಡ್ಕ ನಿವಾಸಿಯಾದ ದೇವದಾಸ ಕಿಣಿ ಮತ್ತು ಗೀತಾ ಕಿಣಿ ದಂಪತಿ ಪುತ್ರಿ. ಅವರನ್ನು

ದ್ವಿತೀಯ ಪಿಯುಸಿ : ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ Read More »

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

ಪುತ್ತೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.100 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಾಝ್ (560), ಅಮನ್ ಅಡ್ಯಂತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಏಜೆಂಟರಾಗಿ ವಕೀಲ ಭಾಸ್ಕರ ಗೌಡ ಕೋಡಿಂಬಾಳ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಚುನಾವಣಾ ಏಜೆಂಟರಾಗಿ ಪುತ್ತೂರು ವಕೀಲರ ಸಂಘದ ನಿಟಕಪೂರ್ವ ಅಧ್ಯಕ್ಷ , ಸಿವಿಲ್ ವಕೀಲ ಭಾಸ್ಕರ ಗೌಡ ಕೋಡಿಂಬಾಳ ಅವರನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಯ ಪರವಾಗಿ ಚುನಾವಣಾ ಆಯೋಗದ ನಿಯಮದ ಪ್ರಕಾರ ಪ್ರತಿನಿಧಿಯನ್ನು ನಿಯೋಜಿಸಲು ಅವಕಾಶವಿದ್ದು ಈ ನೇಮಕ ಮಾಡಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಸಂಚಾಲಕರೂ ಆಗಿರುವ ಭಾಸ್ಕರ ಗೌಡರು ಇತ್ತೀಚೆಗೆ “ಬುತ್ತಿ ಊಟ” ಎಂಬ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಏಜೆಂಟರಾಗಿ ವಕೀಲ ಭಾಸ್ಕರ ಗೌಡ ಕೋಡಿಂಬಾಳ Read More »

error: Content is protected !!
Scroll to Top