ನಾಳೆ (ಏ.20) ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ | ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ಚಿತ್ರನಟಿ ಶೃತಿ ಪಾಲ್ಗೊಳ್ಳುವಿಕೆ
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು. […]










