ಪುತ್ತೂರು

ಇಂದು : ಶ್ರೀ ಮೂಕಾಂಬಿಕಾ ಕಲ್ಚರಲ್ ಅರ್ಪಿಸುವ ನೃತ್ಯಾಂತರಂಗ-97

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ನೃತ್ಯಾಂತರಂಗ-97 ಏ.21 ಶುಕ್ರವಾರ ಸಂಜೆ 5.45 ಕ್ಕೆ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಪಾಲ್ಗೊಳ್ಳಲಿದ್ದಾರೆ. ವಿದ್ವಾನ್ ದೀನಪ್ ಕುಮಾರ್, ವಿದುಷಿ ಪ್ರೀತಿಕಲಾ, ಅಪೂರ್ವಗೌರಿ ದೇವಸ್ಯ, ಶುಭಾ ಅಚಳ್ಳಿ, ವಿಂಧ್ಯಾ ಕಾರಂತ, ವಿಭಾಶ್ರೀ ಗೌಡ, ಪ್ರಣಮ್ಯ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು : ಶ್ರೀ ಮೂಕಾಂಬಿಕಾ ಕಲ್ಚರಲ್ ಅರ್ಪಿಸುವ ನೃತ್ಯಾಂತರಂಗ-97 Read More »

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ 20 ಬಡ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ತಲಾ 5 ರೂ. ಸಾವಿರ ವಿದ್ಯಾರ್ಥಿವೇತನ ವಿತರಿಸಲಾಯಿತು. ಎಂ ಸಿ ಆರ್ ಟಿ ನ ಅಧ್ಯಕ್ಷ ನಿಹಾಲ್ ಶೆಟ್ಟಿ, ಉಪಾಧ್ಯಕ್ಷ ವಿಖ್ಯಾತ್ ಶೆಟ್ಟಿ , ಖಜಾಂಚಿ ಆಶ್ರಯ್ ಭಂಡಾರಿ, ಕಾರ್ಯದರ್ಶಿ ಕಿರಣ್  ಹಾಗೂ ಎಂ ಸಿ ಆರ್ ಟಿ ನ ಟೇಬಲರ್,  ಪುತ್ತೂರಿನ ಸ್ವರ್ಣೋದ್ಯಮಿ ಸುಧನ್ವ ಆಚಾರ್ಯ 1.22 ಲಕ್ಷದ ಚೆಕ್ಕನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ Read More »

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಬ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಗುರುವಾರ ನಾಮಪತ್ರ ಸಲ್ಲಿಸಿದರು. ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು. ಯಾವುದೋ ಕಾರಣಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ.  ಗುರುವಾರ ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಐ.ಸಿ.ಕೈಲಾಸ್, ಮಹಿಳಾ ಪದಾಧಿಕಾರಿಗಳಾದ ಝೊಹರಾ ನಿಸಾರ್, ಪದ್ಮಾಮಣಿ ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ Read More »

ಬಿಜೆಪಿಯನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ | ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ತೇಜಸ್ವಿ ಸೂರ್ಯ ಕರೆ

ಪುತ್ತೂರು: ಈ ಬಾರಿ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರನ್ನು 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕರೆ ನೀಡಿದರು. ಅವರು ಗುರುವಾರ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದರು. ಪುತ್ತೂರು ವಿಧಾನಸಭಾ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಜಿ.ಪಂ. ಸದಸ್ಯರಾಗಿ, ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವ

ಬಿಜೆಪಿಯನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ | ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ತೇಜಸ್ವಿ ಸೂರ್ಯ ಕರೆ Read More »

ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ | ಕಂಬ ಮುರಿತ | ಚಾಲಕನಿಗೆ ಗಾಯ

ಪುತ್ತೂರು: ಟಿಪ್ಪರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆದ್ರಾಳ ರೈಲ್ವೇ ಸೇತುವೆ ಬಳಿ ಗುರುವಾರ ನಡೆದಿದೆ. ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಟಿಪ್ಪರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಉರುಳಿ ಬಿದ್ದಿದ್ದು, ತಂತಿಗಳು ತುಂಡಾಗಿದೆ. ಅಪಘಾತದಿಂದ ಟಿಪ್ಪರ್ ಚಾಲಕನ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ | ಕಂಬ ಮುರಿತ | ಚಾಲಕನಿಗೆ ಗಾಯ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೃಹತ್ ಮೆರವಣಿಗೆಯಲ್ಲಿ ಸಾಗಿ ಅಲ್ಲಿಂದ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಸಹಪ್ರಭಾರಿಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ Read More »

ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ಬೃಹತ್ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬೃಹತ್ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರೊಂದಿಗೆ ದೇವಸ್ಥಾನದ ವಠಾರದಿಂದ ಹೊರಟು ಮುಖ್ಯರಸ್ತೆಯಾಗಿ ಬಸ್ ನಿಲ್ದಾಣದ ತನಕ ಸಾಗಿ ಅಲ್ಲಿಂದ ಕೋರ್ಟ್ ರಸ್ತೆಯಾಗಿ ಕಿಲ್ಲೇ ಮೈದಾನದಲ್ಲಿ ಸಮಾಪನಗೊಂಡಿತು. ಬಳಿಕ ಕಿಲ್ಲೇ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಿತು. ಕೇಸರಿ ರಂಗು : ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರಿಂದ ಹಿಡಿದು

ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ Read More »

ಟಿಕೇಟ್ ಘೋಷಣೆಗೆ ಮೊದಲಿನ ಪುತ್ತಿಲ ಹೇಳಿಕೆ ವೈರಲ್ | ಹೇಳಿಕೆಯಂತೆ ನಡೆಯದ ಪುತ್ತಿಲ ಎಂದು ಕುಟುಕಿದ ನೆಟ್ಟಿಗರು

ಪುತ್ತೂರು: ಬಿಜೆಪಿ ಟಿಕೇಟ್ ಘೋಷಣೆಗೆ ಮೊದಲು ಅರುಣ್ ಕುಮಾರ್ ಪುತ್ತಿಲ ಅವರು ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. “ನಾನು ಸಂಘ ಪರಿವಾರದ ಕಾರ್ಯಕರ್ತ. ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವವರನ್ನು ಗೆಲ್ಲಿಸುವುದು ಜವಾಬ್ದಾರಿ…” ಎಂಬ ಹೇಳಿಕೆ ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇದೇನು ಹೇಳುವುದೊಂದು, ಮಾಡುವುದೊಂದು” ಎಂಬಂತಾಗಿದೆಯಲ್ಲವೇ? ಬಿಜೆಪಿ ಹೈಕಮಾಂಡ್ ಟಿಕೇಟ್ ನೀಡಿರುವ ವ್ಯಕ್ತಿಗೆ ಬೆಂಬಲ ನೀಡದೇ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದು, ಸ್ವತಃ ಬಿಜೆಪಿ ಪಕ್ಷದ ಅಭ್ಯರ್ಥಿ ವಿರುದ್ಧವೇ ಯುದ್ಧಕ್ಕೆ

ಟಿಕೇಟ್ ಘೋಷಣೆಗೆ ಮೊದಲಿನ ಪುತ್ತಿಲ ಹೇಳಿಕೆ ವೈರಲ್ | ಹೇಳಿಕೆಯಂತೆ ನಡೆಯದ ಪುತ್ತಿಲ ಎಂದು ಕುಟುಕಿದ ನೆಟ್ಟಿಗರು Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹುಲಿಭೂತ, ರಕ್ತೇಶ್ವರಿ ನೇಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಶ್ರೀ ದೈವಗಳ ನೇಮೋತ್ಸವ ಬುಧವಾರ ರಾತ್ರಿ ನಡೆಯಿತು. ಬೆಳಿಗ್ಗೆ ವೀರಮಂಗಲದಿಂದ ಶ್ರೀ ದೇವರು ಅವಭೃತ ಸ್ಣಾನದ ಬಳಿಕ ಶ್ರೀ ದೇವಸ್ಥಾನಕ್ಕೆ ಆಗಮಿಸಿ ಧ್ವಜಾವರೋಹಣದ ಮೂಲಕ ಜಾತ್ರೆ ಸಂಪನ್ನಗೊಂಡಿತ್ತು. ರಾತ್ರಿ ಚೂರ್ಣೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಬಳಿಕ ಹುಲಿಭೂತ, ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹುಲಿಭೂತ, ರಕ್ತೇಶ್ವರಿ ನೇಮ Read More »

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್ | ದುಷ್ಕರ್ಮಿ ವಿರುದ್ಧ ಪೊಲೀಸರಿಗೆ ದೂರು

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಏಕವಚನದಲ್ಲಿ ಅವ್ಯಾಚವಾಗಿ ಬೈಯುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸಂದರ್ಭ ಮುಸ್ಲಿಂ ಧರ್ಮಗುರುಗಳು ತಮ್ಮ ಬೆಂಬಲಿಗರೊಂದಿಗೆ ನಳಿನ್ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿ ಫೋಟೊ ತೆಗೆಸಿಕೊಂಡಿದ್ದರು. ಈ ಫೋಟೊವನ್ನು ದುಷ್ಕರ್ಮಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಲ್ಲದೆ ನಳಿನ್ ಕುಮಾರ್ ಕಟೀಲ್ ಅವರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್‍ ಮಾಡಿದ್ದಾನೆ.

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏಕವಚನದಲ್ಲಿ ಬೈಯುವ ಆಡಿಯೋ ವೈರಲ್ | ದುಷ್ಕರ್ಮಿ ವಿರುದ್ಧ ಪೊಲೀಸರಿಗೆ ದೂರು Read More »

error: Content is protected !!
Scroll to Top