ಪುತ್ತೂರು

ಆಖಾಡದಲ್ಲಿ ಅರುಣ್ ಕುಮಾರ್ ಪುತ್ತಿಲ v/s ಅಶೋಕ್ ಕುಮಾರ್ ರೈ | ಹೇಗಿರಬಹುದು ಗೆಳೆಯರಿಬ್ಬರ ಚುನಾವಣಾ ಪೂರ್ವ ಜುಗಲ್ಬಂದಿ!?

ಪುತ್ತೂರು: ಖಾಸಾ ದೋಸ್ತುಗಳಾದ ಅಶೋಕ್ ಕುಮಾರ್ ರೈ ಹಾಗೂ ಅರುಣ್ ಕುಮಾರ್ ಪುತ್ತಿಲ ಆಖಾಡದಲ್ಲಿ ಎದುರು ಬದುರಾಗುತ್ತಾರೆಯೇ? ಅಥವಾ ಅರುಣ್ ಕುಮಾರ್ ಪುತ್ತಿಲ ಹೋರಾಟ, ದೋಸ್ತ್ ಅಶೋಕ್ ಕುಮಾರ್ ರೈ ಅವರಿಗೆ ಜೀವ ತುಂಬಲಿದೆಯೇ? ಹೌದು! ಇದು ಮತದಾರರ ತಲೆಯಲ್ಲಿ ಸುಳಿಯುತ್ತಿರುವ ಯಕ್ಷಪ್ರಶ್ನೆ. ಉತ್ತರ ಸಿಗಬೇಕೆಂದರೆ ಫಲಿತಾಂಶದವರೆಗೂ ಕಾಯಬೇಕಷ್ಟೇ. ಆದರೆ, ಅಲ್ಲಿವರೆಗೂ ಸಾಕಷ್ಟು ಲೆಕ್ಕಾಚಾರಗಳು ಓಡಾಡುತ್ತಿರುತ್ತವೆ. ಸದ್ಯ ಓಡಾಡುತ್ತಿರುವ ಕೆಲ ಲೆಕ್ಕಾಚಾರಗಳ ವರದಿ ಇಲ್ಲಿವೆ ನೋಡಿ. ಅರುಣ್ ಕುಮಾರ್ ಹಾಗೂ ಅಶೋಕ್ ಕುಮಾರ್ ಕಾಲೇಜು ದಿನಗಳಿಂದಲೇ ಗೆಳೆಯರು. […]

ಆಖಾಡದಲ್ಲಿ ಅರುಣ್ ಕುಮಾರ್ ಪುತ್ತಿಲ v/s ಅಶೋಕ್ ಕುಮಾರ್ ರೈ | ಹೇಗಿರಬಹುದು ಗೆಳೆಯರಿಬ್ಬರ ಚುನಾವಣಾ ಪೂರ್ವ ಜುಗಲ್ಬಂದಿ!? Read More »

ಆಲ್ಟೋ ಕಾರು-ತೂಫಾನ್ ನಡುವೆ ಭೀಕರ ಅಪಘಾತ | ನಾಲ್ವರು ಮೃತ್ಯು

ಸುಬ್ರಹ್ಮಣ್ಯ : ಆಲ್ಟೋ ಕಾರು ಹಾಗೂ ತೂಫಾನ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಅಪಘಾತದಲ್ಲಿಗಾಯಗೊಂಡವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಪರಿಚಯ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಆಲ್ಟೋ ಕಾರು-ತೂಫಾನ್ ನಡುವೆ ಭೀಕರ ಅಪಘಾತ | ನಾಲ್ವರು ಮೃತ್ಯು Read More »

ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ನಾಮಪತ್ರ ಸಲ್ಲಿಕೆ

ಪುತ್ತೂರು: ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ನೀಡದ ಹಿನ್ನಲೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳವಾರ ತನ್ನ ಬೆಂಬಲಿಗರೊಂದಿಗೆ ತೆರಳಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ನಾಮಪತ್ರ ಸಲ್ಲಿಕೆ Read More »

ಪುತ್ತಿಲಗೋಸ್ಕರ ಮೋದಿಗೂ ಸವಾಲೆಸೆದರೇ!?

ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಪರ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಪ್ರಚಾರದ ಭರದಲ್ಲಿ ತಮ್ಮ ಆರಾಧಕ ನರೇಂದ್ರ ಮೋದಿಯನ್ನೇ ನಿರ್ಲಕ್ಷಿಸಿದರೇ ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಇದೀಗ ಕೇಳಿಬರುತ್ತಿದೆ. “ಈ ಬಾರಿ ಮೋದಿ ಬಂದು ಮತ ಕೇಳಿದರೂ, ನನ್ನ ಮನೆಯವರ ಮತ ಅರುಣ್ಣನಿಗೇ” ಹೀಗೆಂಬ ಒಕ್ಕಣೆಯ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನರೇಂದ್ರ ಮೋದಿ ದೇಶದ ಪಥವನ್ನೇ ಬದಲಿಸಿ, ಭಾರತವನ್ನು ವಿಶ್ವಗುರುವಾಗುವತ್ತ ಕೊಂಡೊಯ್ಯುವಲ್ಲಿ ಯಶ ಕಂಡವರು. ತನ್ನ ದೇಶಕ್ಕೆ ಬಾರದಂತೆ ತಡೆ ಹಾಕಿದ್ದ ಅಮೆರಿಕ,

ಪುತ್ತಿಲಗೋಸ್ಕರ ಮೋದಿಗೂ ಸವಾಲೆಸೆದರೇ!? Read More »

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ವಿಧಾನಸಭಾ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಂಗಳವಾರ ನಾಮಪತ್ರ ಸಲ್ಲಿಸಿದರು. ಸುಳ್ಯದ ಶ್ರೀರಾಮ ಪೇಟೆಯಲ್ಲಿ ಮಾಜಿ ಸಚಿವ ಡಿ.ವಿದಾನಂದ ಗೌಡ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಸುಳ್ಯ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಅಂಗಾರ, ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಕೆ Read More »

ಆಶಾ ತಿಮ್ಮಪ್ಪ ಆಶಾದಾಯಕ ಮಾತು | ಅಭಿವೃದ್ಧಿ ಕೆಲಸ, ಹಿಂದುತ್ವಕ್ಕಾಗಿ ಕೆಲಸ ಮಾಡಿದ ಅನುಭವ | ಜನಸಂಘದ ಕಾಲದಿಂದಲೂ ಜನರ ಒಡನಾಡಿ

ಪುತ್ತೂರು ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕೀಯ ತಿರುಗಿ ನೋಡುವಂತೆ ಮಾಡಿದೆ. ರಾಷ್ಟ್ರ ನಾಯಕರು ಪುತ್ತೂರಿಗೆ ಬರುವ ಸೂಚನೆಗಳು ಇವೆ. ಈ ಎಲ್ಲಾದರ ನಡುವೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಕೆಲಸ, ಆಲೋಚನೆ, ಭವಿಷ್ಯದ ಯೋಜನೆಗಳು ಬಹಳ ಪ್ರಾಮುಖ್ಯತೆ ಪಡೆದುಕೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಅವರೊಂದಿಗೆ ಮಾತುಕತೆ ನಡೆಸಿದ್ದು, ಅದರ ವಿವರ ಇಲ್ಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿರೀಕ್ಷಿತವೇ? ಆಶ್ಚರ್ಯ. ನಿರೀಕ್ಷೆಯೇ ಮಾಡಿರಲಿಲ್ಲ ಹಾಗೂ ಇರಲಿಲ್ಲ. ಬೆಳ್ತಂಗಡಿಯಲ್ಲಿ ಚುನಾವಣಾ ಪ್ರಭಾರಿಯ ಜವಾಬ್ದಾರಿ

ಆಶಾ ತಿಮ್ಮಪ್ಪ ಆಶಾದಾಯಕ ಮಾತು | ಅಭಿವೃದ್ಧಿ ಕೆಲಸ, ಹಿಂದುತ್ವಕ್ಕಾಗಿ ಕೆಲಸ ಮಾಡಿದ ಅನುಭವ | ಜನಸಂಘದ ಕಾಲದಿಂದಲೂ ಜನರ ಒಡನಾಡಿ Read More »

ನಾಳೆ (ಏ.19) ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ನಾಮಪತ್ರ ಸಲ್ಲಿಕೆ.

ಪುತ್ತೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಏ.19 ಬುಧವಾರ  ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ದರ್ಬೆ ವೃತ್ತದಿಂದ ಮೆರವಣಿಗೆಯಲ್ಲಿ ಸಾಗಿ ಮುಖ್ಯರಸ್ತೆಯಲ್ಲಿ ಆಗಮಿಸಿ ಪುತ್ತೂರು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಪಕ್ಷದ ಕಾರ್ತಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು  ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಏ.19) ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ನಾಮಪತ್ರ ಸಲ್ಲಿಕೆ. Read More »

ನಾಳೆ ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ದಿವ್ಯಾಪ್ರಭಾ ಚಿಲ್ತಡ್ಕ ಅವರು ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿಕೇಟ್ ಸಿಗದ ಹಿನ್ನಲೆಯಲ್ಲಿ  ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‍ ಪಕ್ಷಕ್ಕೆ ಸೇರಿದ್ದು, ಪುತ್ತೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೇಟ್ ಪಡೆದಿದ್ದರು.

ನಾಳೆ ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ Read More »

ಕರಾವಳಿ ಗಡಿಯಲ್ಲಿ ಗೋ ಹತ್ಯೆಗೆ ಕಡಿವಾಣ ಹಾಕಿದ ಬಿಜೆಪಿ ಅಧಿಕಾರಕ್ಕೆ ಬರಲೇಬೇಕು | ಮುರಳೀಕೃಷ್ಣ ಹಸಂತ್ತಡ್ಕ ವೀಡಿಯೋ ವೈರಲ್

ಪುತ್ತೂರು: ಕರಾವಳಿಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲೇಬೇಕು. ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ, ಕರಾವಳಿ ಗಡಿಯಲ್ಲಿ ಹತೋಟಿಗೆ ಬಂದಿರುವ ಗೋ ಹತ್ಯೆ ಪ್ರಕರಣಕ್ಕೆ ಪೂರ್ಣ ವಿರಾಮ ಹಾಕಲು ಸಾಧ್ಯ ಎಂದು ಮುರಳೀಕೃಷ್ಣ ಹಸಂತ್ತಡ್ಕ ಹೇಳಿದರು. ವೀಡಿಯೋ ಹೇಳಿಕೆ ನೀಡಿರುವ ಮುರಳೀಕೃಷ್ಣ ಹಸಂತ್ತಡ್ಕ, ಪುತ್ತೂರು ತಾಲೂಕಿಗೆ ತಾಗಿಕೊಂಡಂತೆ ಕೇರಳ ಗಡಿ ಇದೆ. ಈ ಭಾಗದಲ್ಲಿ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಗೋ ಹತ್ಯೆ ನಡೆಯುತ್ತಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ, ಇದಕ್ಕೆ ಕಡಿವಾಣ ಹಾಕಲಾಗಿದೆ. ಇನ್ನಷ್ಟು ಪರಿಣಾಮಕಾರಿ ಕ್ರಮ

ಕರಾವಳಿ ಗಡಿಯಲ್ಲಿ ಗೋ ಹತ್ಯೆಗೆ ಕಡಿವಾಣ ಹಾಕಿದ ಬಿಜೆಪಿ ಅಧಿಕಾರಕ್ಕೆ ಬರಲೇಬೇಕು | ಮುರಳೀಕೃಷ್ಣ ಹಸಂತ್ತಡ್ಕ ವೀಡಿಯೋ ವೈರಲ್ Read More »

ಇಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ | ವೀರಮಂಗಲದ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಇಂದು ಶ್ರೀ ದೇವರು ದೂರದ ವೀರಮಂಗಲಕ್ಕೆ ಅವಭೃತ ಸ್ನಾನಕ್ಕೆ ತೆರಳಲಿದ್ದಾರೆ. ಸಂಜೆ ಶ್ರೀ ದೇವರ ಬಲಿ ಹೊರಟು ಬಳಿಕ ರಕ್ತೇಶ್ವರ ದೈವದೊಂದಿಗೆ ನುಡಿಗಟ್ಟು ನಡೆಯಲಿದೆ. ಅದಾದ ಬಳಿಕ ಶ್ರೀ ದೇವರು ವೀರಮಂಗಲಕ್ಕೆ ಸಾವಿರಾರು ಭಕ್ತಾದಿಗಳೊಂದಿಗೆ ತೆರಳಲಿದ್ದಾರೆ. ಶ್ರೀ ದೇವರು ಮಂಗಳವಾರ ಸಂಜೆ ಹೊರಟು ಬುಧವಾರ ಪ್ರಾತಃಕಾಲ ವೀರಮಂಗಲ ತಲುಪಿ ಅಲ್ಲಿ ಕುಮಾರಧಾರ ನದಿಕಿನಾರೆಯಲ್ಲಿ ಜಳಕ ಮಾಡಿ, ಬಳಿಕ ಕಟ್ಟೆಯಲ್ಲಿ ಪೂಜೆಗೊಂಡು ಪುನಃ ಹಿಂದಿರುಗಲಿದ್ದಾರೆ. ಸುಮಾರು 15 ಕಿ.ಮೀ.

ಇಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ | ವೀರಮಂಗಲದ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ Read More »

error: Content is protected !!
Scroll to Top