ಪುತ್ತೂರು

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

ಪುತ್ತೂರು : ವಿಧಾನ ಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಬಹಳ ಕುತೂಹಲಕಾರಿಯಾಗಿತ್ತು. ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸದ ಕೈ ಪಾಳಯ ಮೂರನೇ ಪಟ್ಟಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಅಶೋಕ್ ಕುಮಾರ್ ರೈ ಯವರ ಹೆಸರು ಪ್ರಕಟಗೊಂಡಿದೆ. ಹಲವು ವರ್ಷಗಳಿಂದ ತನ್ನ ರೈ ಎಸ್ಟೇಟ್ […]

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ Read More »

ಮರೀಲ್ ಅಟೋ ರಿಕ್ಷಾ ತಂಗುದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅನಾವರಣ

ಪುತ್ತೂರು: ರಿಕ್ಷಾ ಚಾಲಕರು ಹಾಗೂ ದಾನಿಗಳ ಸಹಾಯದಿಂದ ಮರೀಲ್ ಆಟೋರಿಕ್ಷಾ ತಂಗುದಾಣ ದಲ್ಲಿ ಶುದ್ಧ,ತಂಪಾದ ಕುಡಿಯುವ ನೀರಿನ ಘಟಕ ವನ್ನು ನಿರ್ಮಿಸಲಾಯಿತು. ಶನಿವಾರ ಸೌರಮಾನ ಯುಗಾದಿಯಂದು ಈ ನೀರಿನ ಘಟಕವನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಗೌರವಾಧ್ಯಕ್ಷ ದೇವಪ್ಪ ಗೌಡ , ಅಧ್ಯಕ್ಷ ರಾಜೇಶ್.ಕೆ ಪಾರ್ಕಿನ ಪ್ರಮುಖರಾದ ದಿನೇಶ್ ಕುಮಾರ್. ನಜೀರ್ . ಉದಯ್ ಕುಮಾರ್, ಅಸ್ಪಕ್, ಬ್ರಿಯನ್ ರಾಮಕೃಷ್ಣ ಹಾಗೂ ಪಾರ್ಕಿನ ಎಲ್ಲಾ ಚಾಲಕರು ಉಪಸ್ಥಿತರಿದ್ದರು

ಮರೀಲ್ ಅಟೋ ರಿಕ್ಷಾ ತಂಗುದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅನಾವರಣ Read More »

ಪ್ರಜಾಪ್ರಭುತ್ವದ ಹಬ್ಬ ಒಗ್ಗಟ್ಟಾಗಿ ಆಚರಣೆ | ಅಭಿವೃದ್ಧಿ ಕೆಲಸ, ಕಾರ್ಯಕರ್ತರ ಶ್ರಮ, ಮುಖಂಡರ ಬೆಂಬಲ ಮತವಾಗಿ ಪರಿವರ್ತನೆ |ಆಶಾ ತಿಮ್ಮಪ್ಪ ಜೊತೆ ಮಠಂದೂರು ಪತ್ರಿಕಾಗೋಷ್ಠಿ

ಪುತ್ತೂರು: ಪ್ರಜಾಪ್ರಭುತ್ವದ ಹಬ್ಬವನ್ನು ಒಗ್ಗಟ್ಟಾಗಿ ಆಚರಿಸಲು ನಾವು ಸಿದ್ಧರಾಗಿದ್ದೇವೆ. ಅಭಿವೃದ್ಧಿ ಕೆಲಸ, ಕಾರ್ಯಕರ್ತರ ಶ್ರಮ, ನಾಯಕರ ಪ್ರೋತ್ಸಾಹ ಮತವಾಗಿ ಪರಿವರ್ತನೆ ಆಗಲಿದೆ ಎಂದು ಆಶಾ ತಿಮ್ಮಪ್ಪ ಅವರ ಜೊತೆ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಂಜೀವ ಮಠಂದೂರು ಹೇಳಿದರು. ಜನರ‌ಧ್ವನಿಯಾಗಿ, ಮಹಿಳಾ ಮತದಾರರ ಪ್ರಾತಿನಿಧ್ಯವೆಂಬಂತೆ, ಪುತ್ತೂರು ತಾಲೂಕಿನ ಸೊಸೆ ಆಶಾ ತಿಮ್ಮಪ್ಪ ಅವರನ್ನು ಪಕ್ಷ ಆರಿಸಿದೆ. ಅವರನ್ನು 20000 ಮತಗಳ ಅಂತರದಿಂದ ಗೆಲುವು ಪಡೆದುಕೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಠಂದೂರು, ಆಶಾ ತಿಮ್ಮಪ್ಪ ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದರು. ಬಿಜೆಪಿ

ಪ್ರಜಾಪ್ರಭುತ್ವದ ಹಬ್ಬ ಒಗ್ಗಟ್ಟಾಗಿ ಆಚರಣೆ | ಅಭಿವೃದ್ಧಿ ಕೆಲಸ, ಕಾರ್ಯಕರ್ತರ ಶ್ರಮ, ಮುಖಂಡರ ಬೆಂಬಲ ಮತವಾಗಿ ಪರಿವರ್ತನೆ |ಆಶಾ ತಿಮ್ಮಪ್ಪ ಜೊತೆ ಮಠಂದೂರು ಪತ್ರಿಕಾಗೋಷ್ಠಿ Read More »

ಹಿಂದೂ ಫೈರ್ ಬ್ರಾಂಡ್ ಪುತ್ತಿಲ ಪಕ್ಷೇತರ ಅಭ್ಯರ್ಥಿ | ಏ. 17ರಂದು ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಏ. 17ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು, ಕಾರ್ಯಕರ್ತರ ಆಕಾಂಕ್ಷೆಯಂತೆ ಹಿಂದುತ್ವದ ಧ್ವನಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ಎಂದು ಘೋಷಿಸಿದರು. ಏ. 17ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬೆಳಿಗ್ಗೆ 10 ಗಂಟೆಯಿಂದ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯಲ್ಲಿ ತೆರಳಲಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು

ಹಿಂದೂ ಫೈರ್ ಬ್ರಾಂಡ್ ಪುತ್ತಿಲ ಪಕ್ಷೇತರ ಅಭ್ಯರ್ಥಿ | ಏ. 17ರಂದು ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಏ.16 ಹಾಗೂ 17 ರಂದು ವಾಹನದಟ್ಟಣಿ ಜಾಸ್ತಿಯಾಗುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಹಾಗೂ ವಾಹನ ಪಾರ್ಕಿಂಗ್‍ ಗೆ ಸ್ಥಳ ಗುರುತಿಸಲಾಗಿದೆ ಎಂದು ಪುತ್ತೂರು ಸಂಚಾರ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ. ಏ.16 ಭಾನುವಾರ ಬಲ್ನಾಡಿನಿಂಡ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ ಹಾಗೂ ಏ.17 ರ ಬ್ರಹ್ಮರಥೋತ್ಸವ ಇರುವುದರಿಂದ ಜನದಟ್ಟಣಿ ಜತೆಗೆ ವಾಹನದಟ್ಟಣಿ ಜಾಸ್ತಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಪುತ್ತೂರು:  ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಹಿರಿಯ ಶಿಕ್ಷಕ  ರಾಧಾಕೃಷ್ಣ ರೈ ಅಂಬೇಡ್ಕರ್ ಕುರಿತು ಮಾತನಾಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ರನ್ನು ನಾವು ದೇವತಾ  ಮನುಷ್ಯರಂತೆ ಕಾಣಬೇಕು. ಅವರು ಸಂವಿಧಾನದ ರಚನೆಯ ಮೂಲಕ ದೇಶದ ಸಮಸ್ತ ಪ್ರಜೆಗಳ ಏಳಿಗೆಗಾಗಿ ಶ್ರಮಿಸಿದ ಭಾರತ ಕಂಡ  ಮಹಾನ್ ಚೇತನ” ಎಂದು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ ಅಂಬೇಡ್ಕರ್  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.  ಹಿರಿಯ  ದೈಹಿಕ  ಶಿಕ್ಷಣ  ಶಿಕ್ಷಕ  ಭಾಸ್ಕರ್  ಗೌಡ  ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್ಟೇಟ್ ಮ್ಯಾನೇಜರ್ ಚರಣರಾಜ್,  ಶಿಕ್ಷಕ- ಕ್ಷಕೇತರ  ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್  ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ Read More »

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ

ಪುತ್ತೂರು: ತುಳುವರ ಅತ್ಯಂತ ಮಹತ್ವದ ಹಬ್ಬ ಬಿಸು ಹಬ್ಬ ತುಳುವರ ಹೊಸ ವರ್ಷ ಎಂದೇ  ಪ್ರಚಲಿತದಲ್ಲಿದ್ದು, ಏ.15 ರಂದು ತುಳುನಾಡಿನಲ್ಲಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದ ಹಲವು ಕಡೆಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ, ಕರಾವಳಿ ಭಾಗದಲ್ಲಿ ಸೌರಮಾನ ಯುಗಾದಿಯನ್ನು ಅಚರಿಸಲಾಗುತ್ತದೆ. ಈ ದಿನ ಕುಟುಂಬದ ಸದಸ್ಯರೆಲ್ಲರೂ ಬೇವು – ಬೆಲ್ಲ ಸವಿದು ಹಿರಿಯರ ಆಶೀರ್ವಾದವನ್ನು ಪಡೆದು ನಂತರ ತಮ್ಮ ದಿನವನ್ನು ನಡೆಸುತ್ತಾರೆ. ಕೇರಳದಲ್ಲಿ ವಿಷು ಕಣಿ ಇಡುವ ಸಂಪ್ರದಾಯವಿದೆ. ಈ ದಿನ ವಿಷು ಕಣಿಗೆ ಇಟ್ಟ ವಸ್ತುಗಳನ್ನು ಮೊದಲು ನೋಡುವುದರಿಂದ

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ Read More »

ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ

ಸುಳ್ಯ: ನಾನು ಶಾಸಕಿಯಾಗಿ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸ ಕಾರ್ಯಗಳು ನಡೆಯುವಂತೆ ಮಾಡುತ್ತೇನೆ ಎಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಅವರು ಶುಕ್ರವಾರ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನಗೆ ಪಕ್ಷ ಮತ್ತು ಸಂಘಟನೆ ಈ ಅವಕಾಶ ನೀಡಿದೆ. ಎಲ್ಲರ ಆಶೀರ್ವಾದದಿಂದ ಸುಳ್ಯದಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಹೇಳಿದ ಅವರು, ನಾನು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಮೊದಲ ಆದ್ಯತೆ ನೀಡುವೆ ಎಂದು

ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ Read More »

ಕಾರು-ಸರಕಾರಿ ಬಸ್ ಮುಖಾಮುಖಿ ಡಿಕ್ಕಿ | ಕಾರಿನಲ್ಲಿದ್ದ ಆರು ಮಂದಿ ದುರ್ಮರಣ | ಇಬ್ಬರಿಗೆ ಗಂಭೀರ ಗಾಯ

ಸುಳ್ಯ: ಸರಕಾರಿ ಬಸ್ ಮತ್ತು ಕಾರು ನಡುವೆ  ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ಶುಕ್ರವಾರ ನಡೆದಿದೆ. ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂರು ಮಕ್ಕಳು ಹಾಗೂ ಓರ್ವ ಗಂಡಸು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮಗು ಹಾಗೂ ಗಂಡಸು ಸಹಿತ ಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತದೇಹಗಳನ್ನು  ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯ

ಕಾರು-ಸರಕಾರಿ ಬಸ್ ಮುಖಾಮುಖಿ ಡಿಕ್ಕಿ | ಕಾರಿನಲ್ಲಿದ್ದ ಆರು ಮಂದಿ ದುರ್ಮರಣ | ಇಬ್ಬರಿಗೆ ಗಂಭೀರ ಗಾಯ Read More »

ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ

ಸುಳ್ಯ: ಈ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ವಂಚಿತರಾದ ಸಚಿವ ಎಸ್.ಅಂಗಾರ ಅವರು ಅಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಿಸಿ ಚುನಾವಣಾ ಪ್ರಚಾರ ಕಾರ್ಯದಿಂದ ಹಿಂದೆ ಸರಿದಿದ್ದೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಇದೀಗ ಅವರು ಹಿಂಪಡೆದಿದ್ದಾರೆ. ಸುಳ್ಯದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಅಂಗಾರ ಅವರು, ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ . ಆದರೆ ನಾನು ಮೊದಲಿನಂತೆ ಸಕ್ರೀಯವಾಗಿದ್ದು ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ

ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ Read More »

error: Content is protected !!
Scroll to Top