ಪುತ್ತೂರು

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ  ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯ್ಕ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ಪುತ್ತೂರು-ಸುಳ್ಯ ಮುಖ್ಯರಸ್ತೆಯ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಜಯರಾಮ್ ರೈ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಂಬಂಧಿಸಿ ಸಾಲ ಸೌಲಸೌಲಭ್ಯದ ಸಂಪೂರ್ಣ ಮಾಹಿತಿ ನೀಡಿದರು. ಕೆರಿಯರ್ ಕೌನ್ಸಿಲರ್ ಮಹಮ್ಮದ್ ರಫೀಕ್ ಮಾತನಾಡಿ, ವಿದ್ಯಾರ್ಥಿಗಳು ಕೋರ್ಸ್ ಆಯ್ಕೆ ಮಾಡುವಾಗ ಇತರರಿಂದ ಪ್ರೇರಿತರಾಗಬಾರದು. ಬದಲಾಗಿ ತನ್ನ ಸಾಮರ್ಥ್ಯವನ್ನು ಅರಿತುಕೊಂಡು ಕೋರ್ಸ್ ಆಯ್ಕೆ

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ Read More »

ಪುತ್ತೂರು ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ | ಜೆಡಿಎಸ್ ಸೇರ್ಪಡೆಗೊಂಡ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ

ಪುತ್ತೂರು: ಕಾಂಗ್ರೆಸ್ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಅವರು ಇಂದು ಜೆಡಿಎಸ್ ಸೇರ್ಪಡೆಗೊಳ್ಳಲಿದ್ದು, ಕರಾವಳಿ ಭಾಗದಲ್ಲಿ ನೆಲೆ ಕಂಡುಕೊಳ್ಳಲು ಶ್ರಮಿಸುತ್ತಿದ್ದ ಜೆಡಿಎಸಿಗೆ ಹೊಸ ಭರವಸೆ ಸಿಕ್ಕಂತಾಗಿದೆ. ಸೂಕ್ತ ನಾಯಕತ್ವವನ್ನು ಎದುರು ನೋಡುತ್ತಿದ್ದ ಪುತ್ತೂರು ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಅವರು, “ಕಾಂಗ್ರೆಸಿನಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ.

ಪುತ್ತೂರು ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ | ಜೆಡಿಎಸ್ ಸೇರ್ಪಡೆಗೊಂಡ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ Read More »

ಪುತ್ತಿಲರೊಂದಿಗಿನ ಸಂಘ ಪರಿವಾರದ ಮುಖಂಡರ ಮಾತುಕತೆ ವಿಫಲ  | ಇಂದು ಪ್ರಕಟಗೊಳ್ಳಲಿದೆ ಪಕ್ಷೇತರರಾಗಿ ಸ್ಪರ್ಧಿಸುವ ನಿರ್ಧಾರ

ಪುತ್ತೂರು: ಈ ಬಾರಿಯ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳ್ಳುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಭ್ಯರ್ಥಿ ಆಯ್ಕೆಯಲ್ಲಿ ಅಸಮಾಧಾನ ಉಂಟಾಗಿರುವುದರ ಪರಿಣಾಮ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದಂತೆ ಸಂಘ ಪರಿವಾರದ ಜಿಲ್ಲೆಯ ಹಿರಿಯ ಮುಖಂಡರು ಅರುಣ್ ಕುಮಾರ್ ಪುತ್ತಿಲ ಹಾಗೂ ಅವರ ಬೆಂಬಲಿಗರ ಜತೆ ಬುಧವಾರ ರಾತ್ರಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಮಟ್ಟದ

ಪುತ್ತಿಲರೊಂದಿಗಿನ ಸಂಘ ಪರಿವಾರದ ಮುಖಂಡರ ಮಾತುಕತೆ ವಿಫಲ  | ಇಂದು ಪ್ರಕಟಗೊಳ್ಳಲಿದೆ ಪಕ್ಷೇತರರಾಗಿ ಸ್ಪರ್ಧಿಸುವ ನಿರ್ಧಾರ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ  ಸ್ಮಾರ್ಟ್ ಬೋರ್ಡ್ ಬಳಕೆ ತರಬೇತಿ

ಪುತ್ತೂರು: ಆಧುನಿಕ ಕಾಲಘಟ್ಟದ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾಗಿದೆ. ಇಂಟರ್‍ಯಾಕ್ಟಿವ್ ಸ್ಮಾರ್ಟ್ ಬೋರ್ಡ್ ಈಗ ಪ್ರಚಲಿತಕ್ಕೆ ಬರುತ್ತಿದೆ. ಹಾಗಾಗಿ ಪಾರಂಪರಿಕವಾಗಿದ್ದ ಸುಣ್ಣದ ಕಡ್ಡಿ, ಕರಿಹಲಗೆಯ ಬದಲಾಗಿ ಸ್ಮಾಟ್ ಬೋರ್ಡ್‌ಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ಕರಿಹಲಗೆಯನ್ನಷ್ಟೇ ಅಲ್ಲದೆ ತಮಗೆ ಬೇಕಾದ ಬಣ್ಣದ ಹಿನ್ನೆಲೆ ಹಾಗೂ ಅಕ್ಷರಗಳನ್ನು ರೂಪಿಸಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಸುಮಾರು 1.75 ಲಕ್ಷ ರೂ.

ಅಂಬಿಕಾ ಮಹಾವಿದ್ಯಾಲಯದಲ್ಲಿ  ಸ್ಮಾರ್ಟ್ ಬೋರ್ಡ್ ಬಳಕೆ ತರಬೇತಿ Read More »

ಕೆಎಸ್.ಆರ್.ಟಿ.ಸಿ. ಬಸ್ ದ್ವಿಚಕ್ರ ವಾಹಕ್ಕೆ ಡಿಕ್ಕಿ : ದ್ವಿಚಕ್ರ ಸವಾರ ಬಲಿ

ಬಂಟ್ವಾಳ :  ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ  ಸೇಸಪ್ಪ ಯಾನೆ ಶ್ರೇಯಸ್ (30) ಎಂದು ಗುರುತಿಸಲಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಈತ ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ದ್ವಿಚಕ್ರದಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿಯಲ್ಲಿರುವ ತನ್ನ ಮನೆಗೆ ದ್ವಿಚಕ್ರದಲ್ಲಿ

ಕೆಎಸ್.ಆರ್.ಟಿ.ಸಿ. ಬಸ್ ದ್ವಿಚಕ್ರ ವಾಹಕ್ಕೆ ಡಿಕ್ಕಿ : ದ್ವಿಚಕ್ರ ಸವಾರ ಬಲಿ Read More »

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ನಾಲ್ಕು ಆನೆಗಳ ಹಿಂಡು

ಸುಳ್ಯ: ಕಾಡಾನೆಗಳ ಹಿಂಡೊಂದು ನಾಡಿಗೆ ಬಂದು ತೋಟವೊಂದರ ಕೆರೆಗೆ ಬಿದ್ದು ಮೇಲೆ ಬರಲಾಗದೆ ಸಿಕ್ಕಿ ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಗುರುವಾರ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಮಧ್ಯೆ ಕೆರೆಗೆ ಎರಡು ದೊಡ್ಡ ಆನೆ, ಎರಡು ಮರಿ ಆನೆ ಸಹಿತ ನಾಲ್ಕು ಆನೆಗಳು ಕೆರೆಗಿಳಿದಿದ್ದು, ಮೇಲೆ ಬರಲಾಗದೇ ಕೆರೆಯಲ್ಲೇ ಸಿ್ಕ್ಕಿ ಹಾಕಿಕೊಂಡಿದೆ. ಕೆರೆಯಲ್ಲಿ ತುಂಬಾ ನೀರಿದ್ದ ಪರಿಣಾಮ ಮೇಲೆ ಬರಲಾಗಲಿಲ್ಲ. ಕೆರೆಯಲ್ಲೇ ಆಚೀಚೆ ಓಡಾಡುತ್ತಿದ್ದು, ಆನೆಗಳಿಗೆ ಮೇಲೆ ಬರಲು ಇನ್ನೂ ಸಾಧ್ಯವಾಗಿಲ್ಲ. ಸುಳ್ಯ

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ನಾಲ್ಕು ಆನೆಗಳ ಹಿಂಡು Read More »

ಪುತ್ತೂರು ಜಾತ್ರೆ : ಸೋಮವಾರ ಕಿಲ್ಲೆ ಮೈದಾನದಲ್ಲಿ ನಡೆಯುವ ಸಂತೆ ರದ್ದು

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.17ರಂದು ಜರುಗುವ ಬ್ರಹ್ಮರಥೋತ್ಸವದಂದು ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎ.17ರ ಸೋಮವಾರ ಕಿಲ್ಲೆ ಮೈದಾನದಲ್ಲಿನ ನಡೆಯುವ ಸಂತೆಯನ್ನು ರದ್ದುಗೊಳಿಸಲಾಗಿದೆ. ಪ್ರತಿ ಬಾರಿ ಬ್ರಹ್ಮರಥೋತ್ಸವದಂದು ಪುತ್ತೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಆ ದಿನ ವಾಹನ ಪಾರ್ಕಿಂಗ್ ಗೆ ಕಿಲ್ಲೆ ಮೈದಾನ ಸಹಿತ ಹಲವಾರು ಮೈದಾನಗಳನ್ನು ಗುರುತಿಸಲಾಗುತಿತ್ತು. ಈ ಬಾರಿ ಎ.17ರಂದು ಸೋಮವಾರ ಆಗಿರುವುದರಿಂದ ಕಿಲ್ಲೆ ಮೈದಾನದಲ್ಲಿ ಸಂತೆ ನಡೆಸಿದರೆ ವಾಹನ ಪಾರ್ಕಿಂಗ್ ಗೆ ತೊಂದರೆ ಆಗುವ

ಪುತ್ತೂರು ಜಾತ್ರೆ : ಸೋಮವಾರ ಕಿಲ್ಲೆ ಮೈದಾನದಲ್ಲಿ ನಡೆಯುವ ಸಂತೆ ರದ್ದು Read More »

ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ | ವಿದ್ಯಾರ್ಥಿಗಳಿಂದ 156 ಯೂನಿಟ್ ರಕ್ತ ಸಂಗ್ರಹ

ಪುತ್ತೂರು: ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯುತ್ತ) ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು. ರೆಡ್ ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೋವರ್‌ ರೇಂಜರ್, ವಿದ್ಯಾರ್ಥಿ ಸಂಘ, ರೋಟರಿ-  ಕ್ಯಾಂಪ್ಕೋ ರಕ್ತ ನಿಧಿ ಕೇಂದ್ರ ಪುತ್ತೂರು, ರೋಟರಿ ರಕ್ತ ನಿಧಿ ಕೇಂದ್ರ, ಮಂಗಳೂರು ವೆನ್‌ಲಾಕ್ ಸರ್ಕಾರಿ ಆಸ್ಪತ್ರೆ, ಪ್ರಾದೇಶಿಕ ರಕ್ತ ನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ರೋಟರಿಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಶೆಣೈ, ವೈದ್ಯಾಧಿಕಾರಿ ಡಾ.ಶರತ್‌ಕುಮಾರ್‌ ರಾವ್, ಕಾಲೇಜಿನ ಐಕ್ಯೂಎಸಿ ಸಂಯೋಜಕ

ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ | ವಿದ್ಯಾರ್ಥಿಗಳಿಂದ 156 ಯೂನಿಟ್ ರಕ್ತ ಸಂಗ್ರಹ Read More »

ಬೇಸರ ಇದೆ. ಆದರೆ ಪಕ್ಷ ತೀರ್ಮಾನಕ್ಕೆ ಬದ್ಧ | ಶಾಸಕ ಸಂಜೀವ ಮಠಂದೂರು

ಪುತ್ತೂರು: ಕಳೆದ 5 ವರ್ಷದಲ್ಲಿ ಅಭಿವೃದ್ಧಿ ಕಾರ್ಯಕ್ಕಾಗಿ ನಿರಂತರ ಶ್ರಮ ವಹಿಸಿದ್ದೇನೆ. ಆದರೂ ಸಿಟ್ಟಿಂಗ್ ಎಂ.ಎಲ್.ಎ. ಆಗಿದ್ದು, ನನಗೆ ಅವಕಾಶ ಸಿಗಲಿಲ್ಲ ಎಂಬ ವಿಚಾರಕ್ಕೆ ಬೇಸರ ಇದೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಕಾರ್ಯಕರ್ತರು, ಮುಖಂಡರು ಬೆಂಬಲ ಸೂಚಿಸಿದ್ದಾರೆ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಸಂಘಟನೆಗೆ ಅವರೆಲ್ಲಾ ನನ್ನ ಜೊತೆ ನಿಂತಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಚಿರಋಣಿಯಾಗಿದ್ದೇನೆ. ಪಕ್ಷದ ತೀರ್ಮಾನ ಬೇಸರ ತಂದಿದೆ

ಬೇಸರ ಇದೆ. ಆದರೆ ಪಕ್ಷ ತೀರ್ಮಾನಕ್ಕೆ ಬದ್ಧ | ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top