ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ದೊರಕಿದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದಭ್ದಲ್ಲಿ ಬಲ್ನಾಡು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.










