ಪುತ್ತೂರು

ಸಿಇಟಿ, ನೀಟ್ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳ ಜೊತೆಗೆ ಸಂವಾದ

ಪುತ್ತೂರು: ಯಾವುದೇ ಪರೀಕ್ಷೆಎದುರಿಸುವಲ್ಲಿ ಆಸಕ್ತಿಯ ಜೊತೆ ನಿರಂತರ ಅಭ್ಯಾಸ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ಪುಸ್ತಕಗಳನ್ನು ಸಂಗ್ರಹಿಸಿ ಓದಬೇಕು. ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಅರಿತುಕೊಂಡ ವಿಷಯಗಳ ಬಗ್ಗೆ ಪುನರ್ ಮನನ ಮಾಡಿಕೊಳ್ಳುವ ಅಭ್ಯಾಸ ಹೆಚ್ಚಿಸಿಕೊಂಡರೆ ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬಹುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ವಾಮನ್ ಪೈ ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ಸಿಇಟಿ, ನೀಟ್‌ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಜೊತೆ ನಡೆದ ಸಂವಾದ […]

ಸಿಇಟಿ, ನೀಟ್ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳ ಜೊತೆಗೆ ಸಂವಾದ Read More »

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧರ್ಮಸ್ಥಳ ಭೇಟಿ | ವಿಶೇಷ ಪೂಜೆ

ಧರ್ಮಸ್ಥಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಬೀಡಿನಲ್ಲಿ(ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸ್ವಾಗತಿಸಿದರು. ಬಳಿಕ ಧರ್ಮಸ್ಥಳದ ಶ್ರೀ ಮಂಜುನಾಥ ಸ್ಚಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಸಾಂಪ್ರಾದಾಯಿಕವಾಗಿ ಕ್ಷೇತ್ರದಿಂದ  ದೇವಳದ ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್, ದೇವಳ ಪಾರುಪಾತ್ಯಗಾರ ಲಕ್ಷ್ಮೀನಾರಾಯಣ ರಾವ್, ಮಹಾವೀರ ಅಜ್ರಿ, ದೀಕ್ಷಿತ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧರ್ಮಸ್ಥಳ ಭೇಟಿ | ವಿಶೇಷ ಪೂಜೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ | ಕುಕ್ಕೆಯಲ್ಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಸುಳ್ಯ ವಿಧಾನಸಭಾ ಅಭ್ಯರ್ಥಿ ಭಾಗೀರಥಿ ಮುರುಳ್ಯ

ಪುತ್ತೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಈ ಬಾರಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿಯನ್ನು ಭೇಟಿ ಮಾಡಿದರು. ಸುಳ್ಯ ಬಿಜೆಪಿ ಮುಖಂಡರ ಜತೆ ಸಿಎಂ.ಅವರನ್ನು ಭೇಟಿ ಮಾಡಿ ಸ್ವಾಗತಿಸಿದರು. ಸಚಿವ ಅಂಗಾರರ ಬದಲಿಗೆ ಸುಳ್ಯ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಅವರನ್ನು ಮಂಗಳವಾರ ರಾತ್ರಿ ಘೋಷಣೆ ಮಾಡಲಾಗಿತ್ತು. ಅದರ ಬೆನ್ನಲ್ಲೆ ಸಿಎಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ

ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ | ಕುಕ್ಕೆಯಲ್ಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಸುಳ್ಯ ವಿಧಾನಸಭಾ ಅಭ್ಯರ್ಥಿ ಭಾಗೀರಥಿ ಮುರುಳ್ಯ Read More »

ಹಿಂದೂ ಕಾರ್ಯಕರ್ತರ ಧ್ವನಿಯ ವಿರುದ್ಧವಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿರುವುದು ವಿಷಾಧನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚುನಾವಣೆ ಜ್ವರ ಶುರುವಾಗಿದ್ದು, ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಯೋಚನೆಯಡಿ ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯ ಆಯ್ಕೆ ನಡೆಯಬೇಕಿತ್ತು. ಆದರೆ ಕಾರ್ಯಕರ್ತರ ಧ್ವನಿಯ ವಿರುದ್ಧವಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿರುವುದು ವಿಷಾಧನೀಯ ಎಂದು ಹಿಂದೂ ಮುಖಂಡ, ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಟಿಕೇಟ್ ವಂಚಿತರಾದ ಹಿನ್ನಲೆಯಲ್ಲಿ ಬುಧವಾರ ಸಂಜೆ ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಸಭೆಯಲ್ಲಿ ಅವರು

ಹಿಂದೂ ಕಾರ್ಯಕರ್ತರ ಧ್ವನಿಯ ವಿರುದ್ಧವಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿರುವುದು ವಿಷಾಧನೀಯ : ಅರುಣ್ ಕುಮಾರ್ ಪುತ್ತಿಲ Read More »

ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು | ಯಾವ ಭರವಸೆ ಮೇಲೆ ಬಿಜೆಪಿಯಲ್ಲಿ ಕೆಲಸ ಮಾಡಲಿ? | ಮಂಡಲ, ಜಿಲ್ಲೆಯ ಮುಖಂಡರಿಗೆ ಅಧಿಕಾರವೇ ಇಲ್ಲವೇ? ಹಾಗಿದ್ದರೆ ನೀವು ಇರುವುದಾದರೂ ಯಾಕೆ? | ಪ್ರಾಮಾಣಿಕ ಕೆಲಸಗಾರರಿಗೆ ಬೆಲೆ ಇಲ್ಲ ಏಕೆ?

ಪುತ್ತೂರು: ಬುಧವಾರ ಸಂಜೆ ಸಂಜೀವ ಮಠಂದೂರು ಅವರ ಮನೆಗಾಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಕಾರ್ಯಕರ್ತರು ತರಾಟೆಗೆತ್ತಿಕೊಂಡ ಘಟನೆ ನಡೆಯಿತು. ಮನೆಗೆ ಆಗಮಿಸುತ್ತಿದ್ದಂತೆ ದಾರಿಮಧ್ಯವೇ ತಡೆದ ಕಾರ್ಯಕರ್ತರು, ತಮ್ಮ ಆಕ್ರೋಶ ಹೊರಗೆಡವಿದರು. ಸಂಜೀವ ಮಠಂದೂರು ಅವರನ್ನು ಕಡೆಗಣಿಸಲು ಕಾರಣವೇನು ಎಂದು ಪ್ರಶ್ನಿಸಿದ ಕಾರ್ಯಕರ್ತರು, ಹಾಗಾದರೆ ಮಂಡಲ, ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ? ಬೆಲೆ ಇಲ್ಲ ಎಂದಾದರೆ ನೀವು ಆ ಹುದ್ದೆಯಲ್ಲಿ ಇರುವುದಾದರೂ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಜೀವ ಮಠಂದೂರು

ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು | ಯಾವ ಭರವಸೆ ಮೇಲೆ ಬಿಜೆಪಿಯಲ್ಲಿ ಕೆಲಸ ಮಾಡಲಿ? | ಮಂಡಲ, ಜಿಲ್ಲೆಯ ಮುಖಂಡರಿಗೆ ಅಧಿಕಾರವೇ ಇಲ್ಲವೇ? ಹಾಗಿದ್ದರೆ ನೀವು ಇರುವುದಾದರೂ ಯಾಕೆ? | ಪ್ರಾಮಾಣಿಕ ಕೆಲಸಗಾರರಿಗೆ ಬೆಲೆ ಇಲ್ಲ ಏಕೆ? Read More »

ಮಠಂದೂರಿಗೆ ಟಿಕೇಟ್ ನಿರಾಕರಣೆ : ಕಾರ್ಯಕರ್ತರ ಅಸಮಾಧಾನ | ಹೈಕಮಾಂಡ್ ಭಿನ್ನ ನಿಲುವೇ ಅಸಮಾಧಾನಕ್ಕೆ ಕಾರಣ | ಕಾರ್ಯಕರ್ತರು, ಮುಖಂಡರು, ರಾಜ್ಯ ನಾಯಕರು ಪರವಾಗಿದ್ದರೂ ಟಿಕೇಟ್ ನಿರಾಕರಣೆ ಏಕೆ?

ಪುತ್ತೂರು: ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಹೊರತಾಗಿಯೂ ಸಂಜೀವ ಮಠಂದೂರು ಅವರಿಗೆ ಟಿಕೇಟ್ ನಿರಾಕರಿಸಿರುವ ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಭಿನ್ನ ನಿಲುವಿನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಮಾತ್ರವಲ್ಲ ಮುಂದಿನ 50 ವರ್ಷಗಳಲ್ಲಿ ಪುತ್ತೂರಿನ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಆದರೆ ಇವ್ಯಾವುದನ್ನು ಲೆಕ್ಕಿಸದೇ, ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಜೆಪಿ ವರಿಷ್ಠರು ನಿರ್ಲಕ್ಷಿಸಿದ್ದಾರೆ. ಕಾರಣವೇ ಇಲ್ಲದೇ, ಹಾಲಿ ಶಾಸಕರಿಗೆ ಟಿಕೇಟ್ ನಿರಾಕರಿಸಿರುವುದು ಸರಿಯಲ್ಲ. ಇದರ ಪರಿಣಾಮವನ್ನು ಚುನಾವಣೆಯಲ್ಲಿ ಎದುರಿಸಬೇಕಾಗುವ

ಮಠಂದೂರಿಗೆ ಟಿಕೇಟ್ ನಿರಾಕರಣೆ : ಕಾರ್ಯಕರ್ತರ ಅಸಮಾಧಾನ | ಹೈಕಮಾಂಡ್ ಭಿನ್ನ ನಿಲುವೇ ಅಸಮಾಧಾನಕ್ಕೆ ಕಾರಣ | ಕಾರ್ಯಕರ್ತರು, ಮುಖಂಡರು, ರಾಜ್ಯ ನಾಯಕರು ಪರವಾಗಿದ್ದರೂ ಟಿಕೇಟ್ ನಿರಾಕರಣೆ ಏಕೆ? Read More »

ಶ್ವೇತಾಂಬಿಕಾ ಪಿ. ಅವರಿಗೆ ಪಿ.ಎಚ್.ಡಿ 

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ  ಶ್ವೇತಾಂಬಿಕಾ ಪಿ. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿದೆ. ಡಾ.ಎಂ.ಆರ್. ಮದ್ದಾನಿ ಅವರ ಮಾರ್ಗದರ್ಶನದಲ್ಲಿ ‘ಅ ಸ್ಟಡಿ ಒನ್ ದ ಇಫೆಕ್ಟಿವ್ನೆಸ್ ಓಫ್ ಪ್ಲಾಂಟ್ ಎಕ್ಸಟ್ರಾಕ್ಟಸ್ ಆಸ್ ಕೊರೋಸಿವ್ ಇನ್ಹಿಬಿಟರ್ಸ್ ಓನ್ ಮೈಲ್ಡ್ ಸ್ಟೀಲ್ ಆಂಡ್ ಅಲುಮಿನಿಯಂ’ ಎಂಬ ಪ್ರಬಂಧಕ್ಕಾಗಿ ರಸಾಯನ ಶಾಸ್ತ್ರದಲ್ಲಿ ಪಿಎಚ್‍ಡಿ ಪದವಿ ಲಭಿಸಿದೆ. ವಿಜಯಲಕ್ಷ್ಮಿ ಆರ್.ಭಟ್ ಹಾಗೂ ರಾಘವೇಂದ್ರ ಭಟ್ ಪೆರ್ನಾಜೆ ಅವರ ಪುತ್ರಿಯಾಗಿದ್ದು, ನವೀನ್ ಕುಮಾರ್ ಕೆ. ಅವರ ಪತ್ನಿ. 

ಶ್ವೇತಾಂಬಿಕಾ ಪಿ. ಅವರಿಗೆ ಪಿ.ಎಚ್.ಡಿ  Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿ ಎ. 11 ರಂದು ಸಂಭವಿಸಿದೆ. ಹರೀಶ್ ಜಿ ಎಂಬವರೇ ಮೃತಪಟ್ಟ ವ್ಯಕ್ತಿ. ಇವರು ನೆಮ್ಮೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿಗೆ ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋಗಿದ್ದು, ತೆಂಗಿನಕಾಯಿ ಕೊಯ್ದು ಮರದಿಂದ ಇಳಿಯುತ್ತಿದ್ದಂತೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದು ಸ್ಮೃತಿ ಕಳೆದುಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಹರೀಶ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ | ಅಷ್ಟಾವಧಾನ ಸೇವೆ | ಪೇಟೆ ಸವಾರಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಕೆಎಸ್‍ಆರ್‍ ಟಿಸಿ ಪುತ್ತೂರು ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಗಳ ವತಿಯಿಂದ ಅನ್ನಸಂತರ್ಪಣೆ ಜರಗಿತು. ಅಷ್ಟಾವಧಾನ ಸೇವೆ : ಜಾತ್ರೋತ್ಸವದ ಅಂಗವಾಗಿ ಶಿವನಿಗೆ ಇಷ್ಟವಾದ ಅಷ್ಟಾವಧಾನ ಸೇವೆ ಮಂಗಳವಾರ ರಾತ್ರಿ ನಡೆಯಿತು. ಋಗ್ವೇದ, ಯಜುರ್ವೇದ, ಸಾಮದೇದ, ಅಥರ್ವವೇದ, ಶಾಸ್ತ್ರಾ, ಪುರಾಣ, ಶಂಖನಾದ, ಪಂಚಾಂಗ, ಅಷ್ಟಕ, ಸಂಗೀತ, ವೀಣೆ, ನೃತ್ಯ, ಯಕ್ಷಗಾನ, ಗಾಯನ, ರುದ್ರವಾದ್ಯ, ವೀಣೆ, ಸ್ಯಾಕ್ಸೋಫೋನ್ ಮುಂತಾದ ಸರ್ವ ವಾದ್ಯಗಳ ಮೇಳೈಸುವಿಕೆಯೊಂದಿಗೆ ಅಷ್ಟಾವಧಾನ ಸೇವೆ ಜರಗಿತು. ಬಳಿಕ  ದೇವರ ಬಲಿ ಹೊರಟು ಉತ್ಸವ, ದೇವಸ್ಥಾನದ ವಠಾರದ ಕಟ್ಟೆಯಲ್ಲಿ ಪೂಜೆಗೊಂಡು ಬಳಿಕ ಶ್ರೀ ದೇವರು ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟು ಸವಾರಿ ಮಾಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ | ಅಷ್ಟಾವಧಾನ ಸೇವೆ | ಪೇಟೆ ಸವಾರಿ Read More »

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ

ಪುತ್ತೂರು : ಬಿಜೆಪಿ ನಿನ್ನೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಪುತ್ತೂರಿನ ಬಿಜೆಪಿ ಟಿಕೆಟ್ ನೀಡಿದೆ. ಇದರ ಬೆನ್ನಲ್ಲೇ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ. ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರಿಗೆ

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ Read More »

error: Content is protected !!
Scroll to Top