ಪುತ್ತೂರು

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ದೊರಕಿದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದಭ‍್ದಲ್ಲಿ ಬಲ್ನಾಡು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ Read More »

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಹಿಂದುತ್ವದ ಆಧಾರದಲ್ಲಿ ಭಾರತೀಯ ಜನತಾ ಪಾರ್ಟಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದೇನೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಸಭಾಭವನದಲ್ಲಿ ಶನಿವಾರ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಕಾರ್ಯಕರ್ತರ ನೋವಿನ ಹಿಂದೆ ಇರಬೇಕು. ಅವರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತುವುದರ ಜತೆಗೆ ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬ ನಿಟ್ಟಿನಲ್ಲಿ

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ Read More »

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಗುರುವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

ಪುತ್ತೂರು : ವಿಧಾನ ಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಬಹಳ ಕುತೂಹಲಕಾರಿಯಾಗಿತ್ತು. ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸದ ಕೈ ಪಾಳಯ ಮೂರನೇ ಪಟ್ಟಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಅಶೋಕ್ ಕುಮಾರ್ ರೈ ಯವರ ಹೆಸರು ಪ್ರಕಟಗೊಂಡಿದೆ. ಹಲವು ವರ್ಷಗಳಿಂದ ತನ್ನ ರೈ ಎಸ್ಟೇಟ್

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ Read More »

ಮರೀಲ್ ಅಟೋ ರಿಕ್ಷಾ ತಂಗುದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅನಾವರಣ

ಪುತ್ತೂರು: ರಿಕ್ಷಾ ಚಾಲಕರು ಹಾಗೂ ದಾನಿಗಳ ಸಹಾಯದಿಂದ ಮರೀಲ್ ಆಟೋರಿಕ್ಷಾ ತಂಗುದಾಣ ದಲ್ಲಿ ಶುದ್ಧ,ತಂಪಾದ ಕುಡಿಯುವ ನೀರಿನ ಘಟಕ ವನ್ನು ನಿರ್ಮಿಸಲಾಯಿತು. ಶನಿವಾರ ಸೌರಮಾನ ಯುಗಾದಿಯಂದು ಈ ನೀರಿನ ಘಟಕವನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಗೌರವಾಧ್ಯಕ್ಷ ದೇವಪ್ಪ ಗೌಡ , ಅಧ್ಯಕ್ಷ ರಾಜೇಶ್.ಕೆ ಪಾರ್ಕಿನ ಪ್ರಮುಖರಾದ ದಿನೇಶ್ ಕುಮಾರ್. ನಜೀರ್ . ಉದಯ್ ಕುಮಾರ್, ಅಸ್ಪಕ್, ಬ್ರಿಯನ್ ರಾಮಕೃಷ್ಣ ಹಾಗೂ ಪಾರ್ಕಿನ ಎಲ್ಲಾ ಚಾಲಕರು ಉಪಸ್ಥಿತರಿದ್ದರು

ಮರೀಲ್ ಅಟೋ ರಿಕ್ಷಾ ತಂಗುದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅನಾವರಣ Read More »

ಪ್ರಜಾಪ್ರಭುತ್ವದ ಹಬ್ಬ ಒಗ್ಗಟ್ಟಾಗಿ ಆಚರಣೆ | ಅಭಿವೃದ್ಧಿ ಕೆಲಸ, ಕಾರ್ಯಕರ್ತರ ಶ್ರಮ, ಮುಖಂಡರ ಬೆಂಬಲ ಮತವಾಗಿ ಪರಿವರ್ತನೆ |ಆಶಾ ತಿಮ್ಮಪ್ಪ ಜೊತೆ ಮಠಂದೂರು ಪತ್ರಿಕಾಗೋಷ್ಠಿ

ಪುತ್ತೂರು: ಪ್ರಜಾಪ್ರಭುತ್ವದ ಹಬ್ಬವನ್ನು ಒಗ್ಗಟ್ಟಾಗಿ ಆಚರಿಸಲು ನಾವು ಸಿದ್ಧರಾಗಿದ್ದೇವೆ. ಅಭಿವೃದ್ಧಿ ಕೆಲಸ, ಕಾರ್ಯಕರ್ತರ ಶ್ರಮ, ನಾಯಕರ ಪ್ರೋತ್ಸಾಹ ಮತವಾಗಿ ಪರಿವರ್ತನೆ ಆಗಲಿದೆ ಎಂದು ಆಶಾ ತಿಮ್ಮಪ್ಪ ಅವರ ಜೊತೆ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಂಜೀವ ಮಠಂದೂರು ಹೇಳಿದರು. ಜನರ‌ಧ್ವನಿಯಾಗಿ, ಮಹಿಳಾ ಮತದಾರರ ಪ್ರಾತಿನಿಧ್ಯವೆಂಬಂತೆ, ಪುತ್ತೂರು ತಾಲೂಕಿನ ಸೊಸೆ ಆಶಾ ತಿಮ್ಮಪ್ಪ ಅವರನ್ನು ಪಕ್ಷ ಆರಿಸಿದೆ. ಅವರನ್ನು 20000 ಮತಗಳ ಅಂತರದಿಂದ ಗೆಲುವು ಪಡೆದುಕೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಠಂದೂರು, ಆಶಾ ತಿಮ್ಮಪ್ಪ ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದರು. ಬಿಜೆಪಿ

ಪ್ರಜಾಪ್ರಭುತ್ವದ ಹಬ್ಬ ಒಗ್ಗಟ್ಟಾಗಿ ಆಚರಣೆ | ಅಭಿವೃದ್ಧಿ ಕೆಲಸ, ಕಾರ್ಯಕರ್ತರ ಶ್ರಮ, ಮುಖಂಡರ ಬೆಂಬಲ ಮತವಾಗಿ ಪರಿವರ್ತನೆ |ಆಶಾ ತಿಮ್ಮಪ್ಪ ಜೊತೆ ಮಠಂದೂರು ಪತ್ರಿಕಾಗೋಷ್ಠಿ Read More »

ಹಿಂದೂ ಫೈರ್ ಬ್ರಾಂಡ್ ಪುತ್ತಿಲ ಪಕ್ಷೇತರ ಅಭ್ಯರ್ಥಿ | ಏ. 17ರಂದು ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಏ. 17ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು, ಕಾರ್ಯಕರ್ತರ ಆಕಾಂಕ್ಷೆಯಂತೆ ಹಿಂದುತ್ವದ ಧ್ವನಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ಎಂದು ಘೋಷಿಸಿದರು. ಏ. 17ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬೆಳಿಗ್ಗೆ 10 ಗಂಟೆಯಿಂದ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯಲ್ಲಿ ತೆರಳಲಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು

ಹಿಂದೂ ಫೈರ್ ಬ್ರಾಂಡ್ ಪುತ್ತಿಲ ಪಕ್ಷೇತರ ಅಭ್ಯರ್ಥಿ | ಏ. 17ರಂದು ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಏ.16 ಹಾಗೂ 17 ರಂದು ವಾಹನದಟ್ಟಣಿ ಜಾಸ್ತಿಯಾಗುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಹಾಗೂ ವಾಹನ ಪಾರ್ಕಿಂಗ್‍ ಗೆ ಸ್ಥಳ ಗುರುತಿಸಲಾಗಿದೆ ಎಂದು ಪುತ್ತೂರು ಸಂಚಾರ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ. ಏ.16 ಭಾನುವಾರ ಬಲ್ನಾಡಿನಿಂಡ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ ಹಾಗೂ ಏ.17 ರ ಬ್ರಹ್ಮರಥೋತ್ಸವ ಇರುವುದರಿಂದ ಜನದಟ್ಟಣಿ ಜತೆಗೆ ವಾಹನದಟ್ಟಣಿ ಜಾಸ್ತಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಪುತ್ತೂರು:  ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಹಿರಿಯ ಶಿಕ್ಷಕ  ರಾಧಾಕೃಷ್ಣ ರೈ ಅಂಬೇಡ್ಕರ್ ಕುರಿತು ಮಾತನಾಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ರನ್ನು ನಾವು ದೇವತಾ  ಮನುಷ್ಯರಂತೆ ಕಾಣಬೇಕು. ಅವರು ಸಂವಿಧಾನದ ರಚನೆಯ ಮೂಲಕ ದೇಶದ ಸಮಸ್ತ ಪ್ರಜೆಗಳ ಏಳಿಗೆಗಾಗಿ ಶ್ರಮಿಸಿದ ಭಾರತ ಕಂಡ  ಮಹಾನ್ ಚೇತನ” ಎಂದು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ ಅಂಬೇಡ್ಕರ್  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.  ಹಿರಿಯ  ದೈಹಿಕ  ಶಿಕ್ಷಣ  ಶಿಕ್ಷಕ  ಭಾಸ್ಕರ್  ಗೌಡ  ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್ಟೇಟ್ ಮ್ಯಾನೇಜರ್ ಚರಣರಾಜ್,  ಶಿಕ್ಷಕ- ಕ್ಷಕೇತರ  ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್  ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ Read More »

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ

ಪುತ್ತೂರು: ತುಳುವರ ಅತ್ಯಂತ ಮಹತ್ವದ ಹಬ್ಬ ಬಿಸು ಹಬ್ಬ ತುಳುವರ ಹೊಸ ವರ್ಷ ಎಂದೇ  ಪ್ರಚಲಿತದಲ್ಲಿದ್ದು, ಏ.15 ರಂದು ತುಳುನಾಡಿನಲ್ಲಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದ ಹಲವು ಕಡೆಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ, ಕರಾವಳಿ ಭಾಗದಲ್ಲಿ ಸೌರಮಾನ ಯುಗಾದಿಯನ್ನು ಅಚರಿಸಲಾಗುತ್ತದೆ. ಈ ದಿನ ಕುಟುಂಬದ ಸದಸ್ಯರೆಲ್ಲರೂ ಬೇವು – ಬೆಲ್ಲ ಸವಿದು ಹಿರಿಯರ ಆಶೀರ್ವಾದವನ್ನು ಪಡೆದು ನಂತರ ತಮ್ಮ ದಿನವನ್ನು ನಡೆಸುತ್ತಾರೆ. ಕೇರಳದಲ್ಲಿ ವಿಷು ಕಣಿ ಇಡುವ ಸಂಪ್ರದಾಯವಿದೆ. ಈ ದಿನ ವಿಷು ಕಣಿಗೆ ಇಟ್ಟ ವಸ್ತುಗಳನ್ನು ಮೊದಲು ನೋಡುವುದರಿಂದ

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ Read More »

error: Content is protected !!
Scroll to Top