ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ
ಸುಳ್ಯ: ನಾನು ಶಾಸಕಿಯಾಗಿ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸ ಕಾರ್ಯಗಳು ನಡೆಯುವಂತೆ ಮಾಡುತ್ತೇನೆ ಎಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಅವರು ಶುಕ್ರವಾರ ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನಗೆ ಪಕ್ಷ ಮತ್ತು ಸಂಘಟನೆ ಈ ಅವಕಾಶ ನೀಡಿದೆ. ಎಲ್ಲರ ಆಶೀರ್ವಾದದಿಂದ ಸುಳ್ಯದಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಹೇಳಿದ ಅವರು, ನಾನು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಮೊದಲ ಆದ್ಯತೆ ನೀಡುವೆ ಎಂದು […]









