ಪುತ್ತೂರು

ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ

ಸುಳ್ಯ: ನಾನು ಶಾಸಕಿಯಾಗಿ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸ ಕಾರ್ಯಗಳು ನಡೆಯುವಂತೆ ಮಾಡುತ್ತೇನೆ ಎಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಅವರು ಶುಕ್ರವಾರ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನಗೆ ಪಕ್ಷ ಮತ್ತು ಸಂಘಟನೆ ಈ ಅವಕಾಶ ನೀಡಿದೆ. ಎಲ್ಲರ ಆಶೀರ್ವಾದದಿಂದ ಸುಳ್ಯದಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಹೇಳಿದ ಅವರು, ನಾನು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಮೊದಲ ಆದ್ಯತೆ ನೀಡುವೆ ಎಂದು […]

ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ Read More »

ಕಾರು-ಸರಕಾರಿ ಬಸ್ ಮುಖಾಮುಖಿ ಡಿಕ್ಕಿ | ಕಾರಿನಲ್ಲಿದ್ದ ಆರು ಮಂದಿ ದುರ್ಮರಣ | ಇಬ್ಬರಿಗೆ ಗಂಭೀರ ಗಾಯ

ಸುಳ್ಯ: ಸರಕಾರಿ ಬಸ್ ಮತ್ತು ಕಾರು ನಡುವೆ  ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ಶುಕ್ರವಾರ ನಡೆದಿದೆ. ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂರು ಮಕ್ಕಳು ಹಾಗೂ ಓರ್ವ ಗಂಡಸು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮಗು ಹಾಗೂ ಗಂಡಸು ಸಹಿತ ಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತದೇಹಗಳನ್ನು  ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯ

ಕಾರು-ಸರಕಾರಿ ಬಸ್ ಮುಖಾಮುಖಿ ಡಿಕ್ಕಿ | ಕಾರಿನಲ್ಲಿದ್ದ ಆರು ಮಂದಿ ದುರ್ಮರಣ | ಇಬ್ಬರಿಗೆ ಗಂಭೀರ ಗಾಯ Read More »

ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ

ಸುಳ್ಯ: ಈ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ವಂಚಿತರಾದ ಸಚಿವ ಎಸ್.ಅಂಗಾರ ಅವರು ಅಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಿಸಿ ಚುನಾವಣಾ ಪ್ರಚಾರ ಕಾರ್ಯದಿಂದ ಹಿಂದೆ ಸರಿದಿದ್ದೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಇದೀಗ ಅವರು ಹಿಂಪಡೆದಿದ್ದಾರೆ. ಸುಳ್ಯದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಅಂಗಾರ ಅವರು, ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ . ಆದರೆ ನಾನು ಮೊದಲಿನಂತೆ ಸಕ್ರೀಯವಾಗಿದ್ದು ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ

ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ  ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯ್ಕ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ಪುತ್ತೂರು-ಸುಳ್ಯ ಮುಖ್ಯರಸ್ತೆಯ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಜಯರಾಮ್ ರೈ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಂಬಂಧಿಸಿ ಸಾಲ ಸೌಲಸೌಲಭ್ಯದ ಸಂಪೂರ್ಣ ಮಾಹಿತಿ ನೀಡಿದರು. ಕೆರಿಯರ್ ಕೌನ್ಸಿಲರ್ ಮಹಮ್ಮದ್ ರಫೀಕ್ ಮಾತನಾಡಿ, ವಿದ್ಯಾರ್ಥಿಗಳು ಕೋರ್ಸ್ ಆಯ್ಕೆ ಮಾಡುವಾಗ ಇತರರಿಂದ ಪ್ರೇರಿತರಾಗಬಾರದು. ಬದಲಾಗಿ ತನ್ನ ಸಾಮರ್ಥ್ಯವನ್ನು ಅರಿತುಕೊಂಡು ಕೋರ್ಸ್ ಆಯ್ಕೆ

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ Read More »

ಪುತ್ತೂರು ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ | ಜೆಡಿಎಸ್ ಸೇರ್ಪಡೆಗೊಂಡ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ

ಪುತ್ತೂರು: ಕಾಂಗ್ರೆಸ್ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಅವರು ಇಂದು ಜೆಡಿಎಸ್ ಸೇರ್ಪಡೆಗೊಳ್ಳಲಿದ್ದು, ಕರಾವಳಿ ಭಾಗದಲ್ಲಿ ನೆಲೆ ಕಂಡುಕೊಳ್ಳಲು ಶ್ರಮಿಸುತ್ತಿದ್ದ ಜೆಡಿಎಸಿಗೆ ಹೊಸ ಭರವಸೆ ಸಿಕ್ಕಂತಾಗಿದೆ. ಸೂಕ್ತ ನಾಯಕತ್ವವನ್ನು ಎದುರು ನೋಡುತ್ತಿದ್ದ ಪುತ್ತೂರು ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಅವರು, “ಕಾಂಗ್ರೆಸಿನಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ.

ಪುತ್ತೂರು ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ | ಜೆಡಿಎಸ್ ಸೇರ್ಪಡೆಗೊಂಡ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ Read More »

ಪುತ್ತಿಲರೊಂದಿಗಿನ ಸಂಘ ಪರಿವಾರದ ಮುಖಂಡರ ಮಾತುಕತೆ ವಿಫಲ  | ಇಂದು ಪ್ರಕಟಗೊಳ್ಳಲಿದೆ ಪಕ್ಷೇತರರಾಗಿ ಸ್ಪರ್ಧಿಸುವ ನಿರ್ಧಾರ

ಪುತ್ತೂರು: ಈ ಬಾರಿಯ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳ್ಳುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಭ್ಯರ್ಥಿ ಆಯ್ಕೆಯಲ್ಲಿ ಅಸಮಾಧಾನ ಉಂಟಾಗಿರುವುದರ ಪರಿಣಾಮ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದಂತೆ ಸಂಘ ಪರಿವಾರದ ಜಿಲ್ಲೆಯ ಹಿರಿಯ ಮುಖಂಡರು ಅರುಣ್ ಕುಮಾರ್ ಪುತ್ತಿಲ ಹಾಗೂ ಅವರ ಬೆಂಬಲಿಗರ ಜತೆ ಬುಧವಾರ ರಾತ್ರಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಮಟ್ಟದ

ಪುತ್ತಿಲರೊಂದಿಗಿನ ಸಂಘ ಪರಿವಾರದ ಮುಖಂಡರ ಮಾತುಕತೆ ವಿಫಲ  | ಇಂದು ಪ್ರಕಟಗೊಳ್ಳಲಿದೆ ಪಕ್ಷೇತರರಾಗಿ ಸ್ಪರ್ಧಿಸುವ ನಿರ್ಧಾರ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ  ಸ್ಮಾರ್ಟ್ ಬೋರ್ಡ್ ಬಳಕೆ ತರಬೇತಿ

ಪುತ್ತೂರು: ಆಧುನಿಕ ಕಾಲಘಟ್ಟದ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾಗಿದೆ. ಇಂಟರ್‍ಯಾಕ್ಟಿವ್ ಸ್ಮಾರ್ಟ್ ಬೋರ್ಡ್ ಈಗ ಪ್ರಚಲಿತಕ್ಕೆ ಬರುತ್ತಿದೆ. ಹಾಗಾಗಿ ಪಾರಂಪರಿಕವಾಗಿದ್ದ ಸುಣ್ಣದ ಕಡ್ಡಿ, ಕರಿಹಲಗೆಯ ಬದಲಾಗಿ ಸ್ಮಾಟ್ ಬೋರ್ಡ್‌ಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ಕರಿಹಲಗೆಯನ್ನಷ್ಟೇ ಅಲ್ಲದೆ ತಮಗೆ ಬೇಕಾದ ಬಣ್ಣದ ಹಿನ್ನೆಲೆ ಹಾಗೂ ಅಕ್ಷರಗಳನ್ನು ರೂಪಿಸಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಸುಮಾರು 1.75 ಲಕ್ಷ ರೂ.

ಅಂಬಿಕಾ ಮಹಾವಿದ್ಯಾಲಯದಲ್ಲಿ  ಸ್ಮಾರ್ಟ್ ಬೋರ್ಡ್ ಬಳಕೆ ತರಬೇತಿ Read More »

ಕೆಎಸ್.ಆರ್.ಟಿ.ಸಿ. ಬಸ್ ದ್ವಿಚಕ್ರ ವಾಹಕ್ಕೆ ಡಿಕ್ಕಿ : ದ್ವಿಚಕ್ರ ಸವಾರ ಬಲಿ

ಬಂಟ್ವಾಳ :  ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ  ಸೇಸಪ್ಪ ಯಾನೆ ಶ್ರೇಯಸ್ (30) ಎಂದು ಗುರುತಿಸಲಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಈತ ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ದ್ವಿಚಕ್ರದಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿಯಲ್ಲಿರುವ ತನ್ನ ಮನೆಗೆ ದ್ವಿಚಕ್ರದಲ್ಲಿ

ಕೆಎಸ್.ಆರ್.ಟಿ.ಸಿ. ಬಸ್ ದ್ವಿಚಕ್ರ ವಾಹಕ್ಕೆ ಡಿಕ್ಕಿ : ದ್ವಿಚಕ್ರ ಸವಾರ ಬಲಿ Read More »

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ನಾಲ್ಕು ಆನೆಗಳ ಹಿಂಡು

ಸುಳ್ಯ: ಕಾಡಾನೆಗಳ ಹಿಂಡೊಂದು ನಾಡಿಗೆ ಬಂದು ತೋಟವೊಂದರ ಕೆರೆಗೆ ಬಿದ್ದು ಮೇಲೆ ಬರಲಾಗದೆ ಸಿಕ್ಕಿ ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಗುರುವಾರ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಮಧ್ಯೆ ಕೆರೆಗೆ ಎರಡು ದೊಡ್ಡ ಆನೆ, ಎರಡು ಮರಿ ಆನೆ ಸಹಿತ ನಾಲ್ಕು ಆನೆಗಳು ಕೆರೆಗಿಳಿದಿದ್ದು, ಮೇಲೆ ಬರಲಾಗದೇ ಕೆರೆಯಲ್ಲೇ ಸಿ್ಕ್ಕಿ ಹಾಕಿಕೊಂಡಿದೆ. ಕೆರೆಯಲ್ಲಿ ತುಂಬಾ ನೀರಿದ್ದ ಪರಿಣಾಮ ಮೇಲೆ ಬರಲಾಗಲಿಲ್ಲ. ಕೆರೆಯಲ್ಲೇ ಆಚೀಚೆ ಓಡಾಡುತ್ತಿದ್ದು, ಆನೆಗಳಿಗೆ ಮೇಲೆ ಬರಲು ಇನ್ನೂ ಸಾಧ್ಯವಾಗಿಲ್ಲ. ಸುಳ್ಯ

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ನಾಲ್ಕು ಆನೆಗಳ ಹಿಂಡು Read More »

error: Content is protected !!
Scroll to Top