ಪುತ್ತೂರು

ಡಾ. ನಝೀರ್‍ಸ್ ಡಯಾಬೆಟ್ಸ್ ಸೆಂಟರ್ 10ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಫಲಾನುಭವಿಗಳಿಗೆ ವಿವಿಧ ಉಚಿತ ಆರೋಗ್ಯ ತಪಾಸಣೆ

ಪುತ್ತೂರು: ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಹಾಗೂ ಮಧುಮೇಹ ತಜ್ಞ ಡಾ.ನಝೀರ್ ಅಹಮದ್ ಕೆ.ರವರ ಡಾ.ನಝೀರ್‍ಸ್ ಡಯಾಬೆಟ್ಸ್ ಸೆಂಟರ್ ಎ.10 ರಂದು 10ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಡಾ.ನಝೀರ್‍ಸ್ ಡಯಾಬೆಟ್ಸ್ ಸೆಂಟರ್ ತನ್ನ ಪಾದಾರ್ಪಣೆ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್‍ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಸೋಮವಾರದಂದು ಫಲಾನುಭವಿಗಳಿಗೆ ವಿವಿಧ ಉಚಿತ ಆರೋಗ್ಯ ತಪಾಸಣೆಯನ್ನು ಕೈಗೊಂಡಿತ್ತು. ಥೈರಾಯ್ಡ್ ಗ್ರಂಥಿಯ ತಪಾಸಣೆ, ಮಧುಮೇಹ ಪಾದ […]

ಡಾ. ನಝೀರ್‍ಸ್ ಡಯಾಬೆಟ್ಸ್ ಸೆಂಟರ್ 10ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಫಲಾನುಭವಿಗಳಿಗೆ ವಿವಿಧ ಉಚಿತ ಆರೋಗ್ಯ ತಪಾಸಣೆ Read More »

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ

ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ಹಣವನ್ನು ಎ. 10 ರಂದು ರಾತ್ರಿ 10 ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ Read More »

ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ

ಪುತ್ತೂರು: ಅನಾರೋಗ್ಯದ ವೇಳೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರನ್ನು ಗುರುತಿಸಿದ ಬಸವ, ಕೃತಜ್ಞತೆ ತೋರಿದ ಭಾವುಕ ಘಟನೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸೋಮವಾರ ರಾತ್ರಿ ನಡೆಯಿತು. ಸೋಮವಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಆರಂಭವಾಗಿದೆ. ದೇವರ ಉತ್ಸವ, ಸವಾರಿ ಸಂದರ್ಭ ಮುಂಭಾಗದಿಂದ ದೇವರ ಬಸವ ಸಾಗುತ್ತದೆ. ಹೀಗೆ ಸಾಗುವಾಗ ದಾರಿ ಮಧ್ಯೆ ಎದುರಾದ ಪುತ್ತೂರು ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಹೆಬ್ಬಾರ್ ಅವರನ್ನು ಗುರುತಿಸಿ, ಕೃತಜ್ಞತಾ ಭಾವದಿಂದ ಪ್ರೀತಿ ತೋರಿಸಿತು.

ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ Read More »

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ

ಸುಳ್ಯ : ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ಏ. 11 ರಂದು ನಿರ್ಧರಿಸಿದ್ದಾರೆ.ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಅಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಹೊಳೆ

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ Read More »

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಕ್ಷೇತ್ರದಲ್ಲಿ ಶಾಸಕರಾಗಿರುವ ಸಂಜೀವ ಮಠಂದೂರು ಅವರು ಸಮರ್ಥ ನಾಯಕರು. ಆದರೆ ಅವರಿಗೆ ಟಿಕೇಟ್ ನಿರಾಕರಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಟಿಕೇಟ್ ನಿರಾಕರಿಸಲು ಕಾರಣವೇನು? ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ Read More »

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ನೆಕ್ಕಿಲಾಡಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಹಸಂಚಾಲಕ ಕೆ.ವಿ. ಪ್ರಸಾದ್, ಮಂಡಲ ಓಬಿಸಿ ಮೋರ್ಚಾದ ಅಧ್ಯಕ್ಷ ಸುನಿಲ್ ದಡ್ಡು, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಶಕ್ತಿ ಕೇಂದ್ರ ಸಂಚಾಲಕ ಸದಾನಂದ, ಗ್ರಾಮ ಪಂಚಾಯತ್ ಅಧ್ಯಕ್ಷ

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ, ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದ ಕಾರ್ಯಕರ್ತ ಬಂಧುಗಳಿಗೆ ಅಭಿನಂದನಾ ಸಭೆ ನಡೆಯಿತು. ಕೋಶಾಧಿಕಾರಿ ನವೀನ್ ರೈ ಶಿಬಿರ ಬ್ರಹ್ಮಕಲಶೋತ್ಸವದ ಲೆಕ್ಕ ಪತ್ರ ಮಂಡಿಸಿದರು. ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಸದಸ್ಯ ಸುಜಯ ತಂತ್ರಿ ಅಭಿನಂದನಾ ಮಾತುಗಳನ್ನಾಡಿ, ಕಾರ್ಯಕರ್ತರ ಉತ್ತಮ ಸಂಘಟನೆ, ನಿಷ್ಠೆಯ ಶ್ರಮ, ಉತ್ತಮ ಬಾಂಧವ್ಯತೆಯಿಂದಾಗಿ ಕ್ಷೇತ್ರದಲ್ಲಿ ಏಳು ದಿನಗಳ ಕಾಲ ನಡೆದ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರುವಲ್ಲಿ

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ ಹಾಗೂ ವರ್ಷಾವಧಿ ನೇಮ ನಡಾವಳಿ ಕುರಿತು ಪೂರ್ವಭಾವಿ ಸಭೆ ದೈವಸ್ಥಾನದ ಸಭಾಭವನದಲ್ಲಿ ನಡೆಯಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಅಧ್ಯಕ್ಷತೆ ವಹಿಸಿ, ಏ.16 ರಂದು ಸಲು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮಿಸಲಿದ್ದು,ಈ ನಿಟ್ಟಿನಲ್ಲಿ ಈ ಬಾರಿ ಬೆಳಗ್ಗೆಯಿಂದಲೇ ಹೂ ಅರ್ಪಿಸಿ ಪ್ರಸಾದ ಪಡೆದುಕೊಳ್ಳಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಭಂಡಾರ ಸಂಜೆ ಆಗಮಿಸಿದ ಬಳಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಂಡಿದ್ದು, ಉತ್ಸವದ ಅಂಗವಾಗಿ ಸೋಮವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆಯಿತು. ಬಳಿಕ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆ ನಡೆಯಿತು. ಭಕ್ತಾದಿಗಳು ಸೇವಾ ಪೂಜೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರು ಬೊಳುವಾರು, ಶ್ರೀರಾಮ ಪೇಟೆ, ಕಾರ್ಜಾಲು, ರಕ್ತೇಶ್ವರ ನಗರ, ಕಲ್ಲೇಗ ಪೇಟೆ ಸವಾರಿಗೆ ತೆರಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ Read More »

ಅಮ್ಚಿನಡ್ಕದಲ್ಲಿ ಗುಡ್ಡವೊಂದಕ್ಕೆ ಬೆಂಕಿ | ಆತಂಕಗೊಂಡ ಸ್ಥಳೀಯರು | ತಪ್ಪಿದ ಭಾರೀ ಅನಾಹುತ

ಪುತ್ತೂರು: ಅಮ್ಚಿನಡ್ಕದಲ್ಲಿ ರಬ್ಬರ್ ಗುಡ್ಡೆ ಬಳಿ ಸೋಮವಾರ ಸಂಜೆ ಬೆಂಕಿ ಹತ್ತಿಕೊಂಡ ಪರಿಣಾಮ ಸಮೀಪದ ನಿವಾಸಿಗಳು ಆತಂಕಗೊಂಡಿದ್ದಾರೆ. ಸಂಜೆ 6:30 ರ ವೇಳೆಗೆ ಅಮ್ಚಿನಡ್ಕ ಎಂಬಲ್ಲಿ ಎನ್ ಎಸ್ ಯು ಐ ಮುಖಂಡ ಎಡ್ವರ್ಡ್ ಡಿಸೋಜ ರವರ ಮನೆಯ ಸಮೀಪ ರಬ್ಬರ್ ಗುಡ್ಡೆ ಬಳಿ ಬೆಂಕಿಯು ಹೊತ್ತಿ ಉರಿದಿದೆ. ಬೆಂಕಿಯನ್ನು ಗಮನಿಸಿದ ಹತ್ತಿರದ ನಿವಾಸಿಯೊಬ್ಬರು ಬೊಬ್ಬೆ ಹೊಡೆದಾಗ ತಕ್ಷಣವೇ ವಿಷಯ ತಿಳಿದ ಎನ್ ಎಸ್ ಯು ಐ ವಿದ್ಯಾರ್ಥಿ ಸಂಘಟನೆಯ ನಾಯಕ ಎಡ್ವರ್ಡ್ ಡಿಸೋಜ ರವರು ಬೆಂಕಿ

ಅಮ್ಚಿನಡ್ಕದಲ್ಲಿ ಗುಡ್ಡವೊಂದಕ್ಕೆ ಬೆಂಕಿ | ಆತಂಕಗೊಂಡ ಸ್ಥಳೀಯರು | ತಪ್ಪಿದ ಭಾರೀ ಅನಾಹುತ Read More »

error: Content is protected !!
Scroll to Top