ಪುತ್ತೂರು

ಕ್ಷೇತ್ರದ ಅಭಿವೃದ್ಧಿಯೇ  ಮಠಂದೂರು ಗೆಲುವಿಗೆ ಶ್ರೀ ರಕ್ಷೆ.

ಪುತ್ತೂರು: ಸಾವಿರಾರು ಕೋಟಿ ರೂಪಾಯಿಗಳ ಅನುದಾನದ ಮೂಲಕ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗಾಗಿ ಸಾಕಷ್ಟು ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಶಾಸಕ ಸಂಜೀವ ಮಠಂದೂರುರವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುವುದು ನಿಚ್ಚಳವಾಗಿದೆ.ಪುತ್ತೂರು ಕ್ಷೇತ್ರ ಬಿಜೆಪಿ ಸೇರಿದಂತೆ ಜಿಲ್ಲಾ ಬಿಜೆಪಿಯಲ್ಲಿ ಸುದೀರ್ಘ ಕಾಲ ಪಕ್ಷ ಸಂಘಟನೆಗಾಗಿ  ದುಡಿದಿರುವ ಹಾಲಿ ಶಾಸಕ ಮಠಂದೂರು ಪಕ್ಷದ ಶಿಸ್ತಿನ ಸಿಪಾಯಿಯೂ ಹೌದು. ತನ್ನ ಜೀವನದುದ್ದಕ್ಕೂ ಪಕ್ಷ ಸಂಘಟನೆಗಾಗಿ ಸಾಕಷ್ಟು ಸಮಯಗಳನ್ನು ಮೀಸಲಿರಿಸಿ ನಿರಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು.ತಾನು ಶಾಸಕನಾಗುವುದಕ್ಕಿಂತಲೂ ಮುಂಚೆಯೇ ಪಕ್ಷದಲ್ಲಿ ಬೇರೆ ಶಾಸಕರಾಗಿದ್ದಾಗಲೂ ಕ್ಷೇತ್ರದ […]

ಕ್ಷೇತ್ರದ ಅಭಿವೃದ್ಧಿಯೇ  ಮಠಂದೂರು ಗೆಲುವಿಗೆ ಶ್ರೀ ರಕ್ಷೆ. Read More »

ನಳ್ಳಿ ನೀರಿನ ದುರುಪಯೋಗ ಮಾಡಿದರೆ ಯಾವುದೇ ಮುನ್ಸೂಚನೆಯಿಲ್ಲದೆ ಜೋಡಣೆ ಕಟ್ – ನಗರಸಭೆ ಎಚ್ಚರಿಕೆ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜು ಬಳಕೆದಾರರು ತಮ್ಮ ಮನೆಗಳಿಗೆ ಪಡೆದುಕೊಂಡಿರುವ ನಳ್ಳಿ ನೀರಿನ ಜೋಡಣೆ ಮೂಲಕ ಕೃಷಿ, ಗಿಡ, ಕಟ್ಟಡ ಕಾಮಗಾರಿಗೆ ನೀರು ಬಳಸುತ್ತಿರುವ ಕುರಿತು ನಗರಸಭೆಗೆ ಈಗಾಗಲೇ ದೂರುಗಳು ಬಂದಿ್‍ದ್ದು, ಸಮಸ್ಯೆ ಉಂಟಾಗಿದೆ. ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿರುವ ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರು ಮಿತವಾಗಿ ನೀರನ್ನು ಬಳಕೆ ಮಾಡಬೇಕಾಗಿದ್ದು, ಈ ರೀತಿ ನೀರಿನ ದುಪಯೋಗ ಮಾಡದಂತೆ ಎಚ್ಚರಿಕೆ ನೀಡಿದೆ. ಈ ರೀತಿ ಕಂಡು ಬಂದಲ್ಲಿ ನಗರಸಭೆ ವತಿಯಿಂದ ಯಾವುದೇ ಮುನ್ಸೂಚನೆ

ನಳ್ಳಿ ನೀರಿನ ದುರುಪಯೋಗ ಮಾಡಿದರೆ ಯಾವುದೇ ಮುನ್ಸೂಚನೆಯಿಲ್ಲದೆ ಜೋಡಣೆ ಕಟ್ – ನಗರಸಭೆ ಎಚ್ಚರಿಕೆ Read More »

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್

ಪುತ್ತೂರು: ಮಹಿಳೆಯೊಂದಿಗಿನ ಜನಪ್ರತಿನಿಧಿಯ ಫೊಟೋ ವೈರಲ್ ಮಾಡಿರುವುದು ಯಾವ ಸಂದರ್ಭದಲ್ಲಿ ಎನ್ನುವುದು ಮುಖ್ಯವಾಗುತ್ತದೆ. ಚುನಾವಣೆ ಸಂದರ್ಭದಲ್ಲಿ, ಅದೂ ಅಭ್ಯರ್ಥಿ ಆಯ್ಕೆಗೆ ಮೊದಲೇ ಮಹಿಳೆಯೊಂದಿಗಿನ ಫೊಟೋವನ್ನು ವೈರಲ್ ಮಾಡಿರುವುದು ದ್ರೋಹಕ್ಕೆ ಸಮನಾದ ಕೃತ್ಯ. ಆದ್ದರಿಂದ ಮಹಿಳೆಗೆ ಅಗೌರವ ತೋರಿಸಿದ ಈ ಘಟನೆಯ ಕುರಿತು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಸತ್ಯವನ್ನು ಸಮಾಜಕ್ಕೆ ಬಹಿರಂಗಪಡಿಸುವಂತೆ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಂತಹ ಘಟನೆಗಳೇನು ಹೊಸತಲ್ಲ. ರೇಣುಕಾಚಾರ್ಯರಿಂದ ಹಿಡಿದು ಇಂದಿನವರೆಗೆ ಹಲವು ಘಟನೆಗಳಿಗೆ

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ Read More »

ಇಂದಿನಿಂದ ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ | ಪೇಟೆ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ದೇವರು ಪೇಟೆ ಸವಾರಿಗೆ ತೆರಳುವ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇಂದಿನಿಂದ ಸಂಜೆ ವೇಳೆಗೆ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಉತ್ಸವ ನಡೆದು, ದೇವಸ್ಥಾನದ ಕಟ್ಟೆಯಲ್ಲಿ ಕಟ್ಟೆಪೂಜೆ ನಡೆದು ಬಳಿಕ ಶ್ರೀ ದೇವರು ನಿಗದಿತ ಕಟ್ಟೆ ಪೂಜೆಗಾಗಿ ಪೇಟೆ ಸವಾರಿಗೆ ತೆರಳುವರು. ಈ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ನಗರಸಭೆ ವತಿಯಿಂದ ಈ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ದೇವರು ಯಾವೆಲ್ಲಾ ಪ್ರದೇಶಕ್ಕೆ ಕಟ್ಟೆಪೂಜೆಗೆ

ಇಂದಿನಿಂದ ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ | ಪೇಟೆ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸೋಮವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಂಟೆ 9.25 ರ ನಂತರದ ವೃಷಭ ಲಗ್ನ ಸುಮುಹೂರ್ತದಲ್ಲಿ ಭಕ್ತಾದಿಗಳ ಜಯ ಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ವಿವಿಧ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಸೋಮವಾರ ಮುಂಜಾನೆಯಿಂದಲೇ ಸೀಮೆಯ ಭಕ್ತಾದಿಗಳು ಫಲಪುಷ್ಪ, ಸೀಯಾಳ, ವಿವಿಧ ಹಸಿರುವಾಣಿಯನ್ನು ಶ್ರೀ ದೇವಸ್ಥಾನಕ್ಕೆ ಒತ್ತಾಯಿಸಿದರು. ಬಳಿಕ ಧ್ವಜಸ್ತಂಭದ ಕಟ್ಟೆಗೆ ಹಸಿರುವಾಣಿಯನ್ನು ಕಟ್ಟಿ ಶೃಂಗರಿಸಲಾಯಿತು. ಮಧ್ಯಾಹ್ನ ಮಹಾಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ Read More »

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಪರ ಕಾರ್ಯಕರ್ತರ ಒಲವು ಮತ್ತೆ ಹೆಚ್ಚಾಗಿದೆ. ಪಕ್ಷ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದರೆ, ಗೆಲುವಿಗಾಗಿ ಶ್ರಮ ಹಾಕುತ್ತೇವೆ ಎಂದು ಉಪ್ಪಿನಂಗಡಿ ಭಾಗದ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಿಸಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಲ್ಲಸಲ್ಲದ ಅಪವಾದಗಳನ್ನು ಹಾಕಿ, ಮತದಾರರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಸಂಜೀವ ಮಠಂದೂರು ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ, ಈ ರೀತಿಯಲ್ಲಿ ತೇಜೊವಧೆ ಮಾಡುವುದು ತರವಲ್ಲ. ಓರ್ವ ಶಾಸಕನಾಗಿ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದಾರೆ.

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ Read More »

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ

ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರಯಾಣಿಸುತ್ತಿದ್ದ ಕಾರು ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಕಾರು ಕಂದಕಕ್ಕೆ ಉರುಳಿ ಬಿದ್ದು ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆಯ ಸಂಬಂಧಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪುಷ್ಪಾವತಿ ಆರ್‌.ಶೆಟ್ಟಿಯವರು ಕುಟುಂಬದ ಜತೆ ಕೊಪ್ಪದಲ್ಲಿ ಅಂತ್ಯಕ್ರಿಯೆಯೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಚಾರ್ಮಾಡಿಯ ಎರಡನೇ ತಿರುವಿನಲ್ಲಿ ಕಾರು ಬ್ರೇಕ್‌ ಫೈಲ್‌ ಆಗಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ಪುಷ್ಪಾವತಿ ಆರ್‌.

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ Read More »

ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌.ಎಸ್‌.ಎಸ್‌. ಶಿಬಿರ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ. 9ರಂದು ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಉದ್ಘಾಟನೆಗೊಂಡಿತು. ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ಪಿ. ನಾರಾಯಣ ಭಟ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ಸಮಾಜ ಹಾಗೂ ವಿದ್ಯಾರ್ಥಿಗಳನ್ನು ಬೆಸೆಯುವ ಕೊಂಡಿಗಳು. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪರಿಪಾಲನೆ ಹಾಗೂ ಜವಾಬ್ದಾರಿಗಳನ್ನು ಬೆಳೆಸುವಲ್ಲಿ ಎನ್.ಎಸ್.ಎಸ್. ಶಿಬಿರ ಸಹಕಾರಿ. ನದಿಗಳು ಸಮುದ್ರವನ್ನು ಹೋಗಿ

ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌.ಎಸ್‌.ಎಸ್‌. ಶಿಬಿರ ಉದ್ಘಾಟನೆ Read More »

ಜಿಲ್ಲಾ ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನೆ, ಸಂಘದ ಉದ್ಘಾಟನೆ

ಪುತ್ತೂರು: ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನಾ ಸಭೆ ಮತ್ತು ಉದ್ಘಾಟನಾ ಕಾರ್ಯಕ್ರಮ ಶ್ರೀ ರಾಮ ಭಜನಾ ಮಂದಿರ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಂಘದ ನೂತನ ಸಮಿತಿಯನ್ನು ನ್ಯಾಯವಾದಿ ಹರೀಶ್ ಬೂಡುಪನ್ನೆ, ದೀಪ ಬೆಳಗಿಸಿ ಉದ್ಗಾಟಿಸಿದರು. ವೇದಿಕೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಸತೀಶ್ ಆಚಾರ್ಯ ಚೊಕ್ಕಾಡಿ, ತಾಲೂಕು ಅಧ್ಯಕ್ಷ ವಾಸುದೇವ ಆಚಾರ್ಯ ಮರ್ಕಂಜ, ಕಾನೂನು ಸಲಹೆಗಾರ ಹರೀಶ್ ಬೂಡುಪನ್ನೆ, ಸಂಘದ ತಾಲೂಕು ಕಾರ್ಯದರ್ಶಿ ಜನಾರ್ದನ ಆಚಾರ್ಯ ಪಂಜ, ಕರ್ನಾಟಕ ರಾಜ್ಯ ರೈತಸಂಘ ಹಸಿರು

ಜಿಲ್ಲಾ ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನೆ, ಸಂಘದ ಉದ್ಘಾಟನೆ Read More »

ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವವನೇ ನಿಜವಾದ ಶಿಕ್ಷಕ : ಸುಬ್ಬಪ್ಪ ಕೈಕಂಬ | ಪುಣ್ಚಪ್ಪಾಡಿ ಬಣ್ಣದ ಬಣ್ಣ ಮಕ್ಕಳರಂಗ ಶಿಬಿರ ಸಮಾರೋಪ

ಪುತ್ತೂರು: ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವನೇ ನಿಜವಾದ ಶಿಕ್ಷಕ ಎಂದು ಉಪ್ಪಿನಂಗಡಿ ಸರಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ, ಹಿರಿಯ ರಂಗಲೇಖಕ ಸುಬ್ಬಪ್ಪ ಕೈ ಕಂಬ ಹೇಳಿದರು. ಅವರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪುಣ್ಚಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂರು ದಿನಗಳ “ಬಣ್ಣದ ಬಣ್ಣ” ಎಂಬ ಮಕ್ಕಳ ಕಲಿಕಾ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವವನೇ ನಿಜವಾದ ಶಿಕ್ಷಕ : ಸುಬ್ಬಪ್ಪ ಕೈಕಂಬ | ಪುಣ್ಚಪ್ಪಾಡಿ ಬಣ್ಣದ ಬಣ್ಣ ಮಕ್ಕಳರಂಗ ಶಿಬಿರ ಸಮಾರೋಪ Read More »

error: Content is protected !!
Scroll to Top