ಪುತ್ತೂರು

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಶನಿವಾರ ಹೊರೆಕಾಣಿಕೆ ಸಮರ್ಪಣೆಯಾಯಿತು. ಅಪರಾಹ್ನ 3.30ಕ್ಕೆ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ‌ ಶ್ರಿ ವಜ್ರದೇಹಿ ಮಠದ‌ ಶ್ರೀ ರಾಜಶೇಖರಾನಂದ‌ ಸ್ವಾಮಿಜಿ ತೆಂಗಿನಕಾಯಿ‌ ಒಡೆಯುವ ಮೂಲಕ‌ ಉದ್ಘಾಟಿಸಿದರು. ಬಳಿಕ ಹೊರೆಕಾಣಿಕೆ ಮೆರವಣಿಗೆ ಕೊಂಬು, ಕಹಳೆ, […]

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ Read More »

ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪುತ್ತೂರು: ಆಮ್‍ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಪ್ರಕಟಗೊಳಿಸಲಾಗಿದೆ ಎಂದು ಆಮ್‍ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್‍ ಎಡಮಲೆ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ ಮೇಲ್ದರ್ಜೆ ಸಹಿತ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬೆಂಬಲ ನೀಡುವ ಮೂಲಕ ಗುಣಮಟ್ಟದ ಆರೋಗ್ಯ ಹಾಗೂ ಶಿಕ್ಷಣ ಒದಗಿಸುವ

ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ Read More »

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

ಪುತ್ತೂರು:  ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್‌ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್ಗಳಲ್ಲಿಯೂ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು. ಕಲ್ವಾರಿ ಬೆಟ್ಟದ ಮೇಲೆ ಪ್ರಭು ಕ್ರಿಸ್ತರು ಮನುಕುಲದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ದಿನವನ್ನು ಶುಭ ಶುಕ್ರವಾರವನ್ನಾಗಿ ಆಚರಿಸಲಾಗುತ್ತದೆ. ಆ ದಿನದಂದು ಜಗತ್ತಿನಾದ್ಯಂತ ಕ್ರೈಸ್ತ ದೇವಾಲಯಗಳಲ್ಲಿ ಬಲಿಪೂಜೆಗಳು ಇರುವುದಿಲ್ಲ. ಆದರೆ ಅರ್ಥವತ್ತಾದ ಆರಾಧನೆ ಮತ್ತು ಪ್ರಾರ್ಥನೆಗಳು ಶುಕ್ರವಾರ ಬೆಳಿಗ್ಗೆಯಿಂದಲೇ ಆಯಾ ಚರ್ಚ್ ಗಳಲ್ಲಿ ನಡೆಯುತ್ತದೆ.

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ Read More »

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಯೋಜನೆ, ಗೌರವಾರ್ಪಣೆ

ಪುತ್ತೂರು: ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟಿನ ಸಮಾಜಮುಖಿ ಕೆಲಸ ಗಳನ್ನು ಗುರುತಿಸಿ ರಾಮನಗರ ಫ್ರೆಂಡ್ಸ್ ಕಾಪು ಪಡು ಇದರ 20 ನೇ ವರ್ಷದ ವಾರ್ಷಿಕೋತ್ಸವದಲ್ಲಿ ಟ್ರಸ್ಟಿನ ಗೌರವಾದ್ಯಕ್ಸ ಉದಯ ಅರ್ಜುನಗುಳಿ ಹಾಗೂ ಕಾರ್ಯದರ್ಶಿ ಮನೋಹರ್ ಪಲಯಮಜಲು ಅವರನ್ನು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಟ್ರಸ್ಟಿನ ಪೋಷಕರು ಹಾಗೂ ಆಪತ್ ಭಾಂದವ ಈಶ್ವರ್ ಮಲ್ಪೆಯವರನ್ನು ಗೌರವಿಸಲಾಯಿತು. ಕಾಪು ಶ್ರೀ ಮಾರಿಯಮ್ಮ ಅಮ್ಮನವರ ಮಾರಿ ಉತ್ಸವದ ಸಂದರ್ಭದಲ್ಲಿ ಹೃದಯ ಸಮಸ್ಯೆಯಿಂದ ಬಲಳುತ್ತಿರುವ ಧರ್ಮಪಾಲ ಇವರ ಚಿಕಿತ್ಸೆಗೆ ನೆರವಾಗಲು ರಾಮನಗರ ಫ್ರೆಂಡ್ಸ್

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಯೋಜನೆ, ಗೌರವಾರ್ಪಣೆ Read More »

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ದರ್ಶನ ಬಲಿ, ಬಟ್ಟಲು ಕಾಣಿಕೆ

ಪುತ್ತೂರು :ಕೋಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಉತ್ಸವದ ಅಂಗವಾಗಿ ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ ನಡೆದು ಬಳಿಕ ಮಹಾಅನ್ನಸಂತರ್ಪಣೆ ಜರಗಿತು. ಬಳಿಕ ಪುತ್ತೂರು ಯಕ್ಷಸಾರಥಿ ಅವರಿಂದ ಶ್ರೀ ದೇವಿ ಲೀಲೆ ಯಕ್ಷಗಾನ ಬಯಲಾಟ ನಡೆಯಿತು.

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ’ಬಾಲಸ್ತುತಿ – 2023 ಉದ್ಘಾಟನೆ

ಪುತ್ತೂರು: ದೇಶ ತನ್ನ ಅಸ್ಮಿತೆಯನ್ನು ಉಳಿಸಿಕೊಂಡಿರುವುದು ಇಲ್ಲಿನ ಸಂಸ್ಕೃತಿ ಸಂಸ್ಕಾರಗಳಿಂದ. ಆದರೆ ಅಂತಹ ಸಂಸ್ಕೃತಿಯಿಂದ ನಾವು ನಿಧಾನವಾಗಿ ದೂರ ಸರಿಯುತ್ತಿರುವುದು ಆತಂಕಕಾರಿ ವಿಚಾರ. ಮನೆಯಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯಬೇಕಿದೆ. ಹಿಂದೂ ಧಾರ್ಮಿಕ ಶ್ಲೋಕಗಳನ್ನು ಮಕ್ಕಳು ನಿತ್ಯವೂ ಉಚ್ಚರಿಸುವಂತೆ ಮಾಡಬೇಕಿದೆ ಎಂದು ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತದ ಮಾತೃ ಸುರಕ್ಷಾ ಪ್ರಮುಖ್ ಬಡೆಕ್ಕಿಲ ಗಣರಾಜ ಭಟ್ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ ಇ ವಿದ್ಯಾಲಯದ ವತಿಯಿಂದ ಆಯೋಜಿಸಲಾದ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ’ಬಾಲಸ್ತುತಿ – 2023 ಉದ್ಘಾಟನೆ Read More »

ಮಡಿವಂತಿಕೆಯ ರಥಕ್ಕೆ ಆನುವಂಶಿಕ ಸೇವೆ | ಮಹಾಲಿಂಗೇಶ್ವರ ದೇವರ ಹೂತೇರು ಶೃಂಗಾರದ ಚಾಕರಿ | ಸೇರಿಗಾರ ವೃತ್ತಿಯಿಂದ ಚಾಕರಿ ವೃತ್ತಿಗೆ ರಮಾನಾಥ ಕುಟುಂಬ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವಗಳ ಪೈಕಿ ಹೂತೇರು ಅಥವಾ ಪುಷ್ಪ ರಥಕ್ಕೆ ಹೆಚ್ಚಿನ ಮಹತ್ವ. ಬ್ರಹ್ಮರಥ, ಚಂದ್ರಮಂಡಲ ಇದ್ದರೂ, ಪುಷ್ಪರಥ ಅತೀ ಶ್ರದ್ಧೆಯ, ಭಕ್ತಿಯ ರಥ ಎಂದೇ ಜನಜನಿತ. ಹೂತೇರಿಗೆ ಮಡಿವಂತಿಕೆಯ ರಥ ಎಂದೂ ಕರೆಯಲಾಗುತ್ತದೆ. ಈ ರಥದ ಮೇಲ್ಭಾಗಕ್ಕೆ ಯಾರೆಂದರೆ ಯಾರು ಹೋಗುವಂತಿಲ್ಲ. ಅರ್ಚಕರು ರಥ ಏರಬೇಕಾದರೂ, ಮಡಿವಂತಿಕೆಯಲ್ಲಿ ಇರಬೇಕು ಎಂಬ ನಿಯಮವೂ ಇದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಧ್ವಜಾರೋಹಣ ಏರಿದ ತಕ್ಷಣ ನಂದಿ ಮಂಟಪದ ನಂದಿಗೆ ನೈವೇದ್ಯ ಸಮರ್ಪಣೆ ಮಾಡಲಾಗುತ್ತದೆ.

ಮಡಿವಂತಿಕೆಯ ರಥಕ್ಕೆ ಆನುವಂಶಿಕ ಸೇವೆ | ಮಹಾಲಿಂಗೇಶ್ವರ ದೇವರ ಹೂತೇರು ಶೃಂಗಾರದ ಚಾಕರಿ | ಸೇರಿಗಾರ ವೃತ್ತಿಯಿಂದ ಚಾಕರಿ ವೃತ್ತಿಗೆ ರಮಾನಾಥ ಕುಟುಂಬ Read More »

ಏ. 9: ಪುತ್ತೂರು ಜಾತ್ರೆಗೆ ಕಡೇಶಿವಾಲಯ ಯುವಶಕ್ತಿಯಿಂದ ಶ್ರಮದಾನ

ಪುತ್ತೂರು: ಕಡೇಶಿವಾಲಯ ಯುವಶಕ್ತಿ ನೇತೃತ್ವದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 9ರಂದು ಶ್ರಮದಾನ ಸೇವೆ ನಡೆಯಲಿದೆ. ಯುವಶಕ್ತಿ ಸೇವಾಪಥ ದ.ಕ. ಇದರ ನೇತೃತ್ವದಲ್ಲಿ ಮಿತ್ರಸಂಸ್ಥೆಗಳ ಒಗ್ಗೂಡುವಿಕೆಯೊಂದಿಗೆ ಶ್ರಮದಾನ ಸೇವೆ ಆಯೋಜಿಸಲಾಗಿದೆ. ಹತ್ತೂರು ಸಂಭ್ರಮಿಸುವ ಪುತ್ತೂರ ಒಡೆಯನ ಜಾತ್ರೋತ್ಸವದ ಶುಭಸಮಯದಿ ಶ್ರಮಸೇವೆಗೈಯೋಣ ಬನ್ನಿ ಎಂಬ ಧ್ಯೇಯವಾಕ್ಯದೊಂದಿಗೆ ಶ್ರಮದಾನ ನಡೆಯಲಿದೆ. ಈಗಾಗಲೇ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ಖ್ಯಾತಿ ಗಳಿಸಿರುವ ಕಡೇಶಿವಾಲಯ ಯುವಶಕ್ತಿ ತಂಡ ಏಪ್ರಿಲ್ 9ರಂದು ಜಾತ್ರೋತ್ಸವ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಮುಂದಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಏ. 9: ಪುತ್ತೂರು ಜಾತ್ರೆಗೆ ಕಡೇಶಿವಾಲಯ ಯುವಶಕ್ತಿಯಿಂದ ಶ್ರಮದಾನ Read More »

ಸಂತ ಫಿಲೋಮಿನಾ ಕಾಲೇಜಿಗೆ ಮ್ಯಾನೇಜ್‌ಮೆಂಟ್‌  ಫೆಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

ಪುತ್ತೂರು: ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್ʼ ಸ್ಪಿನೌಟ್-2023ʼ ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ತೃತೀಯ ಬಿಬಿಎಯ ಕೃಪಾಲಿ ರೈ ಹಾಗೂ ದ್ವಿತೀಯ ಬಿಬಿಎ ಯ ಭವಿಷ್ಯ ರೈ ಮಾರ್ಕೆಟಿಂಗ್‌ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ತೃತೀಯ ಬಿಬಿಎಯ ಆದಿತ್ಯ ಡೋಂಗ್ರೆ ಸ್ಪರ್ಧೆಯ ಬೆಸ್ಟ್‌ ಮ್ಯಾನೇಜರ್‌ ಆಗಿ ಹೊರಹೊಮ್ಮಿದ್ದಾರೆ.  ಇದರೊಂದಿಗೆ ತಂಡವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿದೆ. ಪ್ರಶಸ್ತಿ ವಿಜೇತ ತಂಡದಲ್ಲಿ ತೃತೀಯ ಬಿಬಿಎಯ ಲೋಕೇಂದರ್‌

ಸಂತ ಫಿಲೋಮಿನಾ ಕಾಲೇಜಿಗೆ ಮ್ಯಾನೇಜ್‌ಮೆಂಟ್‌  ಫೆಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ Read More »

ಮಂಗಳೂರು ವಿಶ್ವವಿದ್ಯಾನಿಲಯ ಎಂ.ಎ ಪರೀಕ್ಷೆಯಲ್ಲಿ ಪವನ.ಕೆ ತೃತೀಯ ರ್ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ 2021-22ನೇ ಸಾಲಿನ ಹಿಂದಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೆಳ್ಳಾರೆಯ ಪವನ.ಕೆ 8.25 ಸಿಜಿಪಿಎಯೊಂದಿಗೆ ತೃತೀಯ ರ್ಯಾಂಕ್ ಗಳಿಸಿದ್ದಾರೆ. ಪ್ರಸ್ತುತ ವಿವೇಕಾನಂದ ಪದವಿ (ಸ್ವಾಯುತ್ತ) ಕಾಲೇಜಿನಲ್ಲಿ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಪದ್ಮನಾಭ ನಾಯಕ್ ಮತ್ತು ಶ್ರೀಮತಿಯವರ ಪುತ್ರಿಯಾಗಿದ್ದು, ಗಣೇಶ್ ಪ್ರಸಾದ್ ನಾಯಕ್‌ರವರ ಪತ್ನಿ.

ಮಂಗಳೂರು ವಿಶ್ವವಿದ್ಯಾನಿಲಯ ಎಂ.ಎ ಪರೀಕ್ಷೆಯಲ್ಲಿ ಪವನ.ಕೆ ತೃತೀಯ ರ್ಯಾಂಕ್ Read More »

error: Content is protected !!
Scroll to Top